AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಬಿಗ್​​ಬಾಸ್​​ನಲ್ಲಿ ಸಾಮಾನ್ಯರೇ ಕಿಂಗ್, ಕನ್ನಡದಲ್ಲಿ ಸಿಗುತ್ತಾ ಅವಕಾಶ?

Bigg Boss Kannada: ಅಕ್ಕಿನೇನಿ ನಾಗಾರ್ಜುನ ನಿರೂಪಣೆ ಮಾಡುತ್ತಿರುವ ಬಿಗ್​​ಬಾಸ್ ತೆಲುಗು ಸೀಸನ್ 9 ಎರಡು ದಿನದ ಹಿಂದಷ್ಟೆ ಆರಂಭವಾಗಿದೆ. ಶೋನಲ್ಲಿ ಸಿನಿಮಾ ಸೆಲೆಬ್ರಿಟಿಗಳು ಜೊತೆಗೆ ಆರು ಮಂದಿ ಸಾಮಾನ್ಯರನ್ನು ಸ್ಪರ್ಧಿಗಳನ್ನಾಗಿ ಆಯ್ಕೆ ಮಾಡಲಾಗಿದೆ. ಕನ್ನಡದಲ್ಲಿಯೂ ಸಾಮಾನ್ಯರನ್ನು ಸ್ಪರ್ಧಿಗಳಾಗಿ ಶೋಗೆ ಸೇರಿಸಿಕೊಳ್ಳಲಾಗುತ್ತದೆಯೇ?

ತೆಲುಗು ಬಿಗ್​​ಬಾಸ್​​ನಲ್ಲಿ ಸಾಮಾನ್ಯರೇ ಕಿಂಗ್, ಕನ್ನಡದಲ್ಲಿ ಸಿಗುತ್ತಾ ಅವಕಾಶ?
Sudeep
ಮಂಜುನಾಥ ಸಿ.
|

Updated on: Sep 09, 2025 | 12:59 PM

Share

ತೆಲುಗು ಬಿಗ್​​ಬಾಸ್ ಸೀಸನ್ 9 ಪ್ರಾರಂಭವಾಗಿದೆ. ಇದೇ ಭಾನುವಾರ ಶೋ ಪ್ರಾರಂಭವಾಗಿದ್ದು 13 ಮಂದಿ ಸ್ಪರ್ಧಿಗಳು ಬಿಗ್​​ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ವಿಶೇಷವೆಂದರೆ ಈ 13 ಮಂದಿಯಲ್ಲಿ 6 ಮಂದಿ ಸಾಮಾನ್ಯರು. ಇನ್ನು ಏಳು ಮಂದಿ ಸಿನಿಮಾ ಹಾಗೂ ಧಾರಾವಾಹಿ ಕ್ಷೆತ್ರದ ಸೆಲೆಬ್ರಿಟಿಗಳಾಗಿದ್ದಾರೆ. ತೆಲುಗು ಬಿಗ್​​ಬಾಸ್​​​ನಲ್ಲಿ ಈ ಬಾರಿ ಎರಡು ಮನೆಗಳಿದ್ದು, ‘ಮನೆ ಮಾಲೀಕರು ಮತ್ತು ಬಾಡಿಗೆದಾರರು’ ಎಂಬ ಕಾನ್ಸೆಪ್ಟ್ ಬಳಸಿ ಮೊದಲ ವಾರ ಆಟ ಆಡಿಸಲಾಗುತ್ತಿದೆ. ತೆಲುಗಿನಲ್ಲಿ ಸಾಮಾನ್ಯರಿಗೆ ಅವಕಾಶ ಸಿಕ್ಕಂತೆ ಕನ್ನಡದಲ್ಲಿಯೂ ಸಿಗುತ್ತದೆಯೇ?

ತೆಲುಗಿನಲ್ಲಿ ಸೈನಿಕ ಕಲ್ಯಾಣ್ ಪಡಲ, ಮಾಸ್ಕ್ ಮ್ಯಾನ್ ಎಂದು ಖ್ಯಾತವಾಗಿರುವ ಯೂಟ್ಯೂಬರ್ ಹರೀಶ್, ಸಾಮಾಜಿಕ ಜಾಲತಾಣದ ಮೂಲಕ ಜನಪ್ರಿಯವಾಗಿರುವ ಡಿಮೋನ್ ಪವನ್, ಯೂಟ್ಯೂಬರ್ ಶ್ರೀಜಾ ದಮ್ಮು, ಯೂಟ್ಯೂಬರ್ ಪ್ರಿಯಾ ಶೆಟ್ಟಿ, ಉದ್ಯಮಿ ಮರ್ಯಾದಾ ಮನೀಷ್ ಅವರುಗಳು ಶ್ರೀಸಾಮಾನ್ಯರ ಕೋಟಾನಲ್ಲಿ ತೆಲುಗು ಬಿಗ್​​ಬಾಸ್ ಪ್ರವೇಶಿಸಿದ್ದಾರೆ. ಇವರಲ್ಲಿ ಹಲವರು ಮನೆ ಮಾಲೀಕರಾಗಿದ್ದು, ಬಿಗ್​​ಬಾಸ್ ಮನೆಯ ಸವಲತ್ತುಗಳನ್ನು ಅನುಭವಿಸುತ್ತಿದ್ದಾರೆ.

ಇನ್ನು ಸೆಲೆಬ್ರಿಟಿಗಳ ಕೋಟಾನಲ್ಲಿ ಕನ್ನಡದ ನಟಿ ಸಂಜನಾ ಗಲ್ರಾನಿ, ಮತ್ತೊಬ್ಬ ಕನ್ನಡದ ನಟಿ ತನುಜಾ ಪುಟ್ಟಸ್ವಾಮಿ, ಕನ್ನಡದ ಸಿನಿಮಾಗಳು ಸೇರಿದಂತೆ ಹಲವು ಭಾಷೆಯ ಸಿನಿಮಾಗಳಲ್ಲಿ ನಟಿಸಿರುವ ಫ್ಲೋರಾ ಸೈನಿ, ಜಬರ್ದಸ್ಥ್ ಕಾಮಿಡಿ ಶೋನಿಂದ ಖ್ಯಾತವಾಗಿರುವ ನಟ ಇಮಾನ್ಯುಯೆಲ್, ಖ್ಯಾತ ಕೊರಿಯೋಗ್ರಾಫರ್ ಶ್ರಷ್ಠಿ ವರ್ಮಾ, ನಟಿ ರಿತು ಚೌಧರಿ, ನಟ ಭರಣಿ ಶಂಕರ್, ಗಾಯಕ, ಸಂಗೀತ ನಿರ್ದೇಶಕ ರಾಮು ರಾಥೋಡ್, ಖ್ಯಾತ ಹಾಸ್ಯನಟ ಸುಮನ್ ಶೆಟ್ಟಿ ಅವರುಗಳು ಎಂಟ್ರಿ ನೀಡಿದ್ದಾರೆ.

ಇದನ್ನೂ ಓದಿ:Bigg Boss Kannada 12: ಮತ್ತೆ ಬಂತು ಬಿಗ್​ಬಾಸ್: ಈ ಸಲ ಕಿಚ್ಚು ಹೆಚ್ಚು

ಕನ್ನಡದಲ್ಲಿ ಇದೇ ತಿಂಗಳು 28ರಿಂದ ಬಿಗ್​​ಬಾಸ್ ಆರಂಭವಾಗುತ್ತಿದ್ದು, ಕನ್ನಡದ ಶೋನಲ್ಲಿ ಸಾಮಾನ್ಯರಿಗೆ ಅವಕಾಶ ನೀಡಲಾಗುತ್ತದೆಯೇ ಎಂಬ ಪ್ರಶ್ನೆ ಎದುರಾಗಿದೆ. ಸಾಮಾನ್ಯರನ್ನು ಅತಿಥಿಗಳಾಗಿ ಆಹ್ವಾನಿಸಲಾಗುತ್ತದೆ ಎಂದು ಈಗಾಗಲೇ ಆಯೋಜಕರು ಘೋಷಣೆ ಮಾಡಿದ್ದಾರೆ. ಆದರೆ ಸಾಮಾನ್ಯರನ್ನು ಸ್ಪರ್ಧಿಗಳಾಗಿ ಆಯ್ಕೆ ಮಾಡಲಾಗುತ್ತದೆಯೇ ಇಲ್ಲವೇ ಎಂಬುದು ಖಾತ್ರಿ ಇಲ್ಲ. ಈ ಹಿಂದೆ ಶೋನಲ್ಲಿ ಕೆಲ ಸಾಮಾನ್ಯರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಯಾರೂ ಸಹ ದೊಡ್ಡ ಮಟ್ಟದಲ್ಲಿ ಗಮನ ಸೆಳೆಯಲು ವಿಫಲರಾದರು. ಹಾಗಾಗಿ ಆ ಸಂಪ್ರದಾಯಕ್ಕೆ ಬ್ರೇಕ್ ಹಾಕಲಾಗಿತ್ತು. ಆದರೆ ತೆಲುಗಿನಲ್ಲಿ ಸಾಮಾನ್ಯರು ಪ್ರತಿ ಬಾರಿಯೂ ಗಮನ ಸೆಳೆಯುತ್ತಿದ್ದಾರೆ.

ಬಿಗ್​​ಬಾಸ್ 12 ಸೆಪ್ಟೆಂಬರ್ 28ರಂದು ಪ್ರಾರಂಭ ಆಗಲಿದೆ. ಈ ಬಾರಿಯ ಶೋ ಭಿನ್ನವಾಗಿರಲಿದೆ ಎಂದು ಆಯೋಜಕರು ಹೇಳಿದ್ದಾರೆ. ಸುದೀಪ್ ಅವರೇ ಈ ಬಾರಿಯೂ ಶೋನ ನಿರೂಪಣೆ ಮಾಡಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ