ಸೆಪ್ಟೆಂಬರ್​ನಿಂದ ಬಿಗ್​ ಬಾಸ್ ಹೊಸ ಸೀಸನ್?​; ಪ್ರೋಮೋ ರಿಲೀಸ್​ ಮಾಡಿದ ವಾಹಿನಿ

Bigg Boss Telugu: ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಜೂನ್​ ತಿಂಗಳಲ್ಲೇ ಬಿಗ್​ ಬಾಸ್​ ಆರಂಭಗೊಳ್ಳಬೇಕಿತ್ತು. ಆದರೆ,  ಕೊವಿಡ್​ ಎರಡನೇ ಅಲೆ ಇದಕ್ಕೆ ಆಸ್ಪದ ನೀಡಿಲ್ಲ.

ಸೆಪ್ಟೆಂಬರ್​ನಿಂದ ಬಿಗ್​ ಬಾಸ್ ಹೊಸ ಸೀಸನ್?​; ಪ್ರೋಮೋ ರಿಲೀಸ್​ ಮಾಡಿದ ವಾಹಿನಿ
ಬಿಗ್​ ಬಾಸ್​
Follow us
| Updated By: Digi Tech Desk

Updated on:Aug 02, 2021 | 9:57 AM

Bigg Boss Telugu: ತೆಲುಗು ಬಿಗ್​ ಬಾಸ್​ ನಾಲ್ಕು ಸೀಸನ್​ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ​ಈಗ ಐದನೇ ಸೀಸನ್​ಗೆ ಸಿದ್ಧತೆಗಳು ನಡೆಯುತ್ತಿವೆ. ಆರಂಭದಲ್ಲಿ ಜೂನ್​ ತಿಂಗಳಲ್ಲೇ ಬಿಗ್​ ಬಾಸ್​ ಶುರು ಮಾಡುವ ಆಲೋಚನೆ ವಾಹಿನಿಯದ್ದಾಗಿತ್ತು. ಆದರೆ, ಕೊವಿಡ್​ ಎರಡನೇ ಅಲೆಯಿಂದ ಇದು ತಡವಾಗಿತ್ತು. ಈಗ ಈ ಕುರಿತು ಪ್ರೋಮೋ ರಿಲೀಸ್​ ಮಾಡಲಾಗಿದೆ. ಸೆಪ್ಟೆಂಬರ್​ನಿಂದ ಹೊಸ ಸೀಸನ್​ ಆರಂಭಗೊಳ್ಳುತ್ತಿದೆ ಎನ್ನಲಾಗಿದೆ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಜೂನ್​ ತಿಂಗಳಲ್ಲೇ ಬಿಗ್​ ಬಾಸ್​ ಆರಂಭಗೊಳ್ಳಬೇಕಿತ್ತು. ಆದರೆ,  ಕೊವಿಡ್​ ಎರಡನೇ ಅಲೆ ಇದಕ್ಕೆ ಆಸ್ಪದ ನೀಡಿಲ್ಲ. ಹೀಗಾಗಿ ಸೆಪ್ಟೆಂಬರ್​ ವೇಳೆಗೆ ಹೊಸ ಶೋ ಆರಂಭಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಸದ್ಯ, ರಿಲೀಸ್​ ಆದ ಪ್ರೋಮೋದಲ್ಲಿ ‘ನಾವು ಅತಿ ಶೀಘ್ರದಲ್ಲಿ ಬರುತ್ತೇವೆ’ ಎಂದು ಮಾತ್ರ ಇದೆ. ಸ್ಟಾರ್​ ಮಾ ವಾಹಿನಿಯಲ್ಲಿ ತೆಲುಗು ಬಿಗ್​ ಬಾಸ್​ ಪ್ರಸಾರವಾಗಲಿದೆ.

ಬಿಗ್​ ಬಾಸ್ ಆರಂಭಕ್ಕೂ ಮುನ್ನ ಸಂಭಾವ್ಯ ಸ್ಪರ್ಧಿಗಳ ಪಟ್ಟಿ ವೈರಲ್ ಆಗೋದು ಸಾಮಾನ್ಯ. ಈ ಬಾರಿಯೂ ಅದೇ ರೀತಿ ಆಗಿದೆ. ತೆಲುಗಿನಲ್ಲಿ ‘ರಾಬರ್ಟ್’​ ಸಿನಿಮಾದ ಹಾಡನ್ನು ಹಾಡಿದ ಗಾಯಕಿ ಮಂಗ್ಲಿ, ಆ್ಯಂಕರ್​ ರವಿ, ಶರಣ್​ ನಟನೆಯ ‘ಅಧ್ಯಕ್ಷ’ ಸಿನಿಮಾದ ನಾಯಕಿ ಹೆಬ್ಬಾ ಪಟೇಲ್​ ಸೇರಿ ಅನೇಕರು ಬಿಗ್​ ಬಾಸ್​ ಮನೆ ಸೇರುತ್ತಿದ್ದಾರೆ ಎನ್ನಲಾಗುತ್ತಿದೆ.

ಅಕ್ಕಿನೇನಿ ನಾಗಾರ್ಜುನ ಅವರು ಸೀಸನ್​ 5ಅನ್ನು ನಿರೂಪಣೆ ಮಾಡುವ ಸಾಧ್ಯತೆ ಇದೆ. ಮೊದಲ ಸೀಸನ್​​ಗೆ ಜ್ಯೂ. ಎನ್​ಟಿಆರ್​ ನಿರೂಪಣೆ ಇತ್ತು. ನಂತರ ನಟ ನಾನಿ ಎರಡನೇ ಸೀಸನ್​ ನಿರೂಪಣೆ ಮಾಡಿದ್ದರು. ಈ ಬಾರಿ ನಾಗಾರ್ಜುನ​ ಅವರು ನಿರೂಪಣೆಯ ಜವಾಬ್ದಾರಿ ತೆಗೆದುಕೊಳ್ಳುವ ಸಾಧ್ಯತೆ ಇದೆ. ಈ ಬಗ್ಗೆ ಅಧಿಕೃತ ಘೋಷಣೆ ಬಾಕಿ ಇದೆ.

ಕನ್ನಡ ಬಿಗ್​ ಬಾಸ್​ ಸೀಸನ್​ 8 ಫಿನಾಲೆ ಹಂತ ತಲುಪಿದೆ. ಸದ್ಯ, ಮನೆಯಲ್ಲಿ ಏಳು ಸ್ಪರ್ಧಿಗಳಿದ್ದಾರೆ. ಫಿನಾಲೆಗೆ ಐದು ಸ್ಪರ್ಧಿಗಳು ಮಾತ್ರ ಅರ್ಹತೆ ಪಡೆದುಕೊಳ್ಳಲಿದ್ದಾರೆ. ಫಿನಾಲೆಯಲ್ಲಿ ಗೆಲ್ಲೋದು ಯಾರು ಎಂಬುದು ಆಗಸ್ಟ್​ 8ರಂದು ತಿಳಿಯಲಿದೆ.

ಇದನ್ನೂ ಓದಿ:

ದೊಡ್ಮನೆಯಲ್ಲಿ ಅರವಿಂದ್ ಮಧ್ಯ ಬೆರಳು ತೋರಿಸಿದ ವಿಡಿಯೋ ವೈರಲ್​; ಬಿಗ್​ ಬಾಸ್ ತಂಡದಿಂದ ಸ್ಪಷ್ಟನೆ

Published On - 7:30 am, Mon, 2 August 21

ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ