AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟೆಂಬರ್​ನಿಂದ ಬಿಗ್​ ಬಾಸ್ ಹೊಸ ಸೀಸನ್?​; ಪ್ರೋಮೋ ರಿಲೀಸ್​ ಮಾಡಿದ ವಾಹಿನಿ

Bigg Boss Telugu: ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಜೂನ್​ ತಿಂಗಳಲ್ಲೇ ಬಿಗ್​ ಬಾಸ್​ ಆರಂಭಗೊಳ್ಳಬೇಕಿತ್ತು. ಆದರೆ,  ಕೊವಿಡ್​ ಎರಡನೇ ಅಲೆ ಇದಕ್ಕೆ ಆಸ್ಪದ ನೀಡಿಲ್ಲ.

ಸೆಪ್ಟೆಂಬರ್​ನಿಂದ ಬಿಗ್​ ಬಾಸ್ ಹೊಸ ಸೀಸನ್?​; ಪ್ರೋಮೋ ರಿಲೀಸ್​ ಮಾಡಿದ ವಾಹಿನಿ
ಬಿಗ್​ ಬಾಸ್​
TV9 Web
| Edited By: |

Updated on:Aug 02, 2021 | 9:57 AM

Share

Bigg Boss Telugu: ತೆಲುಗು ಬಿಗ್​ ಬಾಸ್​ ನಾಲ್ಕು ಸೀಸನ್​ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ​ಈಗ ಐದನೇ ಸೀಸನ್​ಗೆ ಸಿದ್ಧತೆಗಳು ನಡೆಯುತ್ತಿವೆ. ಆರಂಭದಲ್ಲಿ ಜೂನ್​ ತಿಂಗಳಲ್ಲೇ ಬಿಗ್​ ಬಾಸ್​ ಶುರು ಮಾಡುವ ಆಲೋಚನೆ ವಾಹಿನಿಯದ್ದಾಗಿತ್ತು. ಆದರೆ, ಕೊವಿಡ್​ ಎರಡನೇ ಅಲೆಯಿಂದ ಇದು ತಡವಾಗಿತ್ತು. ಈಗ ಈ ಕುರಿತು ಪ್ರೋಮೋ ರಿಲೀಸ್​ ಮಾಡಲಾಗಿದೆ. ಸೆಪ್ಟೆಂಬರ್​ನಿಂದ ಹೊಸ ಸೀಸನ್​ ಆರಂಭಗೊಳ್ಳುತ್ತಿದೆ ಎನ್ನಲಾಗಿದೆ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಜೂನ್​ ತಿಂಗಳಲ್ಲೇ ಬಿಗ್​ ಬಾಸ್​ ಆರಂಭಗೊಳ್ಳಬೇಕಿತ್ತು. ಆದರೆ,  ಕೊವಿಡ್​ ಎರಡನೇ ಅಲೆ ಇದಕ್ಕೆ ಆಸ್ಪದ ನೀಡಿಲ್ಲ. ಹೀಗಾಗಿ ಸೆಪ್ಟೆಂಬರ್​ ವೇಳೆಗೆ ಹೊಸ ಶೋ ಆರಂಭಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಸದ್ಯ, ರಿಲೀಸ್​ ಆದ ಪ್ರೋಮೋದಲ್ಲಿ ‘ನಾವು ಅತಿ ಶೀಘ್ರದಲ್ಲಿ ಬರುತ್ತೇವೆ’ ಎಂದು ಮಾತ್ರ ಇದೆ. ಸ್ಟಾರ್​ ಮಾ ವಾಹಿನಿಯಲ್ಲಿ ತೆಲುಗು ಬಿಗ್​ ಬಾಸ್​ ಪ್ರಸಾರವಾಗಲಿದೆ.

ಬಿಗ್​ ಬಾಸ್ ಆರಂಭಕ್ಕೂ ಮುನ್ನ ಸಂಭಾವ್ಯ ಸ್ಪರ್ಧಿಗಳ ಪಟ್ಟಿ ವೈರಲ್ ಆಗೋದು ಸಾಮಾನ್ಯ. ಈ ಬಾರಿಯೂ ಅದೇ ರೀತಿ ಆಗಿದೆ. ತೆಲುಗಿನಲ್ಲಿ ‘ರಾಬರ್ಟ್’​ ಸಿನಿಮಾದ ಹಾಡನ್ನು ಹಾಡಿದ ಗಾಯಕಿ ಮಂಗ್ಲಿ, ಆ್ಯಂಕರ್​ ರವಿ, ಶರಣ್​ ನಟನೆಯ ‘ಅಧ್ಯಕ್ಷ’ ಸಿನಿಮಾದ ನಾಯಕಿ ಹೆಬ್ಬಾ ಪಟೇಲ್​ ಸೇರಿ ಅನೇಕರು ಬಿಗ್​ ಬಾಸ್​ ಮನೆ ಸೇರುತ್ತಿದ್ದಾರೆ ಎನ್ನಲಾಗುತ್ತಿದೆ.

ಅಕ್ಕಿನೇನಿ ನಾಗಾರ್ಜುನ ಅವರು ಸೀಸನ್​ 5ಅನ್ನು ನಿರೂಪಣೆ ಮಾಡುವ ಸಾಧ್ಯತೆ ಇದೆ. ಮೊದಲ ಸೀಸನ್​​ಗೆ ಜ್ಯೂ. ಎನ್​ಟಿಆರ್​ ನಿರೂಪಣೆ ಇತ್ತು. ನಂತರ ನಟ ನಾನಿ ಎರಡನೇ ಸೀಸನ್​ ನಿರೂಪಣೆ ಮಾಡಿದ್ದರು. ಈ ಬಾರಿ ನಾಗಾರ್ಜುನ​ ಅವರು ನಿರೂಪಣೆಯ ಜವಾಬ್ದಾರಿ ತೆಗೆದುಕೊಳ್ಳುವ ಸಾಧ್ಯತೆ ಇದೆ. ಈ ಬಗ್ಗೆ ಅಧಿಕೃತ ಘೋಷಣೆ ಬಾಕಿ ಇದೆ.

ಕನ್ನಡ ಬಿಗ್​ ಬಾಸ್​ ಸೀಸನ್​ 8 ಫಿನಾಲೆ ಹಂತ ತಲುಪಿದೆ. ಸದ್ಯ, ಮನೆಯಲ್ಲಿ ಏಳು ಸ್ಪರ್ಧಿಗಳಿದ್ದಾರೆ. ಫಿನಾಲೆಗೆ ಐದು ಸ್ಪರ್ಧಿಗಳು ಮಾತ್ರ ಅರ್ಹತೆ ಪಡೆದುಕೊಳ್ಳಲಿದ್ದಾರೆ. ಫಿನಾಲೆಯಲ್ಲಿ ಗೆಲ್ಲೋದು ಯಾರು ಎಂಬುದು ಆಗಸ್ಟ್​ 8ರಂದು ತಿಳಿಯಲಿದೆ.

ಇದನ್ನೂ ಓದಿ:

ದೊಡ್ಮನೆಯಲ್ಲಿ ಅರವಿಂದ್ ಮಧ್ಯ ಬೆರಳು ತೋರಿಸಿದ ವಿಡಿಯೋ ವೈರಲ್​; ಬಿಗ್​ ಬಾಸ್ ತಂಡದಿಂದ ಸ್ಪಷ್ಟನೆ

Published On - 7:30 am, Mon, 2 August 21

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!