AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟೆಂಬರ್​ನಿಂದ ಬಿಗ್​ ಬಾಸ್ ಹೊಸ ಸೀಸನ್?​; ಪ್ರೋಮೋ ರಿಲೀಸ್​ ಮಾಡಿದ ವಾಹಿನಿ

Bigg Boss Telugu: ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಜೂನ್​ ತಿಂಗಳಲ್ಲೇ ಬಿಗ್​ ಬಾಸ್​ ಆರಂಭಗೊಳ್ಳಬೇಕಿತ್ತು. ಆದರೆ,  ಕೊವಿಡ್​ ಎರಡನೇ ಅಲೆ ಇದಕ್ಕೆ ಆಸ್ಪದ ನೀಡಿಲ್ಲ.

ಸೆಪ್ಟೆಂಬರ್​ನಿಂದ ಬಿಗ್​ ಬಾಸ್ ಹೊಸ ಸೀಸನ್?​; ಪ್ರೋಮೋ ರಿಲೀಸ್​ ಮಾಡಿದ ವಾಹಿನಿ
ಬಿಗ್​ ಬಾಸ್​
TV9 Web
| Edited By: |

Updated on:Aug 02, 2021 | 9:57 AM

Share

Bigg Boss Telugu: ತೆಲುಗು ಬಿಗ್​ ಬಾಸ್​ ನಾಲ್ಕು ಸೀಸನ್​ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ​ಈಗ ಐದನೇ ಸೀಸನ್​ಗೆ ಸಿದ್ಧತೆಗಳು ನಡೆಯುತ್ತಿವೆ. ಆರಂಭದಲ್ಲಿ ಜೂನ್​ ತಿಂಗಳಲ್ಲೇ ಬಿಗ್​ ಬಾಸ್​ ಶುರು ಮಾಡುವ ಆಲೋಚನೆ ವಾಹಿನಿಯದ್ದಾಗಿತ್ತು. ಆದರೆ, ಕೊವಿಡ್​ ಎರಡನೇ ಅಲೆಯಿಂದ ಇದು ತಡವಾಗಿತ್ತು. ಈಗ ಈ ಕುರಿತು ಪ್ರೋಮೋ ರಿಲೀಸ್​ ಮಾಡಲಾಗಿದೆ. ಸೆಪ್ಟೆಂಬರ್​ನಿಂದ ಹೊಸ ಸೀಸನ್​ ಆರಂಭಗೊಳ್ಳುತ್ತಿದೆ ಎನ್ನಲಾಗಿದೆ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಜೂನ್​ ತಿಂಗಳಲ್ಲೇ ಬಿಗ್​ ಬಾಸ್​ ಆರಂಭಗೊಳ್ಳಬೇಕಿತ್ತು. ಆದರೆ,  ಕೊವಿಡ್​ ಎರಡನೇ ಅಲೆ ಇದಕ್ಕೆ ಆಸ್ಪದ ನೀಡಿಲ್ಲ. ಹೀಗಾಗಿ ಸೆಪ್ಟೆಂಬರ್​ ವೇಳೆಗೆ ಹೊಸ ಶೋ ಆರಂಭಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಸದ್ಯ, ರಿಲೀಸ್​ ಆದ ಪ್ರೋಮೋದಲ್ಲಿ ‘ನಾವು ಅತಿ ಶೀಘ್ರದಲ್ಲಿ ಬರುತ್ತೇವೆ’ ಎಂದು ಮಾತ್ರ ಇದೆ. ಸ್ಟಾರ್​ ಮಾ ವಾಹಿನಿಯಲ್ಲಿ ತೆಲುಗು ಬಿಗ್​ ಬಾಸ್​ ಪ್ರಸಾರವಾಗಲಿದೆ.

ಬಿಗ್​ ಬಾಸ್ ಆರಂಭಕ್ಕೂ ಮುನ್ನ ಸಂಭಾವ್ಯ ಸ್ಪರ್ಧಿಗಳ ಪಟ್ಟಿ ವೈರಲ್ ಆಗೋದು ಸಾಮಾನ್ಯ. ಈ ಬಾರಿಯೂ ಅದೇ ರೀತಿ ಆಗಿದೆ. ತೆಲುಗಿನಲ್ಲಿ ‘ರಾಬರ್ಟ್’​ ಸಿನಿಮಾದ ಹಾಡನ್ನು ಹಾಡಿದ ಗಾಯಕಿ ಮಂಗ್ಲಿ, ಆ್ಯಂಕರ್​ ರವಿ, ಶರಣ್​ ನಟನೆಯ ‘ಅಧ್ಯಕ್ಷ’ ಸಿನಿಮಾದ ನಾಯಕಿ ಹೆಬ್ಬಾ ಪಟೇಲ್​ ಸೇರಿ ಅನೇಕರು ಬಿಗ್​ ಬಾಸ್​ ಮನೆ ಸೇರುತ್ತಿದ್ದಾರೆ ಎನ್ನಲಾಗುತ್ತಿದೆ.

ಅಕ್ಕಿನೇನಿ ನಾಗಾರ್ಜುನ ಅವರು ಸೀಸನ್​ 5ಅನ್ನು ನಿರೂಪಣೆ ಮಾಡುವ ಸಾಧ್ಯತೆ ಇದೆ. ಮೊದಲ ಸೀಸನ್​​ಗೆ ಜ್ಯೂ. ಎನ್​ಟಿಆರ್​ ನಿರೂಪಣೆ ಇತ್ತು. ನಂತರ ನಟ ನಾನಿ ಎರಡನೇ ಸೀಸನ್​ ನಿರೂಪಣೆ ಮಾಡಿದ್ದರು. ಈ ಬಾರಿ ನಾಗಾರ್ಜುನ​ ಅವರು ನಿರೂಪಣೆಯ ಜವಾಬ್ದಾರಿ ತೆಗೆದುಕೊಳ್ಳುವ ಸಾಧ್ಯತೆ ಇದೆ. ಈ ಬಗ್ಗೆ ಅಧಿಕೃತ ಘೋಷಣೆ ಬಾಕಿ ಇದೆ.

ಕನ್ನಡ ಬಿಗ್​ ಬಾಸ್​ ಸೀಸನ್​ 8 ಫಿನಾಲೆ ಹಂತ ತಲುಪಿದೆ. ಸದ್ಯ, ಮನೆಯಲ್ಲಿ ಏಳು ಸ್ಪರ್ಧಿಗಳಿದ್ದಾರೆ. ಫಿನಾಲೆಗೆ ಐದು ಸ್ಪರ್ಧಿಗಳು ಮಾತ್ರ ಅರ್ಹತೆ ಪಡೆದುಕೊಳ್ಳಲಿದ್ದಾರೆ. ಫಿನಾಲೆಯಲ್ಲಿ ಗೆಲ್ಲೋದು ಯಾರು ಎಂಬುದು ಆಗಸ್ಟ್​ 8ರಂದು ತಿಳಿಯಲಿದೆ.

ಇದನ್ನೂ ಓದಿ:

ದೊಡ್ಮನೆಯಲ್ಲಿ ಅರವಿಂದ್ ಮಧ್ಯ ಬೆರಳು ತೋರಿಸಿದ ವಿಡಿಯೋ ವೈರಲ್​; ಬಿಗ್​ ಬಾಸ್ ತಂಡದಿಂದ ಸ್ಪಷ್ಟನೆ

Published On - 7:30 am, Mon, 2 August 21

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?