AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಬಿಗ್​ಬಾಸ್​ಗೆ ನಾಗಾರ್ಜುನ ಗುಡ್​ಬೈ, ಹೊಸ ನಿರೂಪಕನಿಗೆ ಭಾರಿ ಸಂಭಾವನೆ

Telugu Bigg Boss: ತಮಿಳು ಬಿಗ್​ಬಾಸ್ ನಿರೂಪಕರು ಈಗಾಗಲೇ ಬದಲಾಗಿದ್ದಾರೆ. ಕನ್ನಡ ಬಿಗ್​ಬಾಸ್ ನಿರೂಪಣೆಗೆ ಸುದೀಪ್ ಸಹ ಗುಡ್​ ಬೈ ಹೇಳಿದ್ದು, ಹೊಸ ನಿರೂಪಕರ ಹುಡುಕಾಟ ಚಾಲ್ತಿಯಲ್ಲಿದೆ. ಇದರ ನಡುವೆ ತೆಲುಗು ಬಿಗ್​ಬಾಸ್​ ನಿರೂಪಕನ ಸ್ಥಾನಕ್ಕೆ ನಟ ಅಕ್ಕಿನೇನಿ ನಾಗಾರ್ಜುನ ಸಹ ವಿದಾಯ ಹೇಳಿದ್ದಾರೆ. ಆದರೆ ಹೊಸ ನಿರೂಪಕ ಭಾರಿ ಸಂಭಾವನೆ ಕೇಳಿದ್ದಾರೆ. ಯಾರಾತ?

ತೆಲುಗು ಬಿಗ್​ಬಾಸ್​ಗೆ ನಾಗಾರ್ಜುನ ಗುಡ್​ಬೈ, ಹೊಸ ನಿರೂಪಕನಿಗೆ ಭಾರಿ ಸಂಭಾವನೆ
Akkineni Nagarjuna
ಮಂಜುನಾಥ ಸಿ.
|

Updated on:Mar 13, 2025 | 11:48 AM

Share

ಕನ್ನಡ ಬಿಗ್​ಬಾಸ್ ಸೀಸನ್ 11 ಮುಗಿದು ಕೆಲ ತಿಂಗಳುಗಳಾಗಿವೆ. ನಟ ಸುದೀಪ್ ಅವರು ಇದೇ ನನ್ನ ಕೊನೆಯ ಸೀಸನ್ ಆಗಿರಲಿದೆ ಎಂದು ಈಗಾಗಲೇ ಘೋಷಣೆ ಮಾಡಿದ್ದಾರೆ. ಕನ್ನಡದಲ್ಲಿ ಬಿಗ್​ಬಾಸ್ ಪ್ರಾರಂಭ ಆದಾಗಿನಿಂದಲೂ ಸುದೀಪ್ ಅವರೇ ಈ ಶೋ ನಡೆಸಿಕೊಂಡು ಬರುತ್ತಿದ್ದಾರೆ. ಇದೀಗ ಸುದೀಪ್​ ಬದಲಿಗೆ ಯಾರು ನಿರೂಪಣೆ ಮಾಡಲಿದ್ದಾರೆ ಎಂಬ ಕುತೂಹಲ ಶುರುವಾಗಿದೆ. ತಮಿಳಿನಲ್ಲಿ ಕಳೆದ ಸೀಸನ್​ನಲ್ಲಿ ನಿರೂಪಕರ ಬದಲಾವಣೆ ಆಗಿದೆ. ಕನ್ನಡದಂತೆ ತೆಲುಗಿನಲ್ಲೂ ಸಹ ಬಿಗ್​ಬಾಸ್ ನಿರೂಪಕರ ಬದಲಾವಣೆ ಆಗುತ್ತಿದೆ. ನಾಗಾರ್ಜುನ ಬದಲು ಹೊಸ ನಾಯಕ ಬಿಗ್​ಬಾಸ್ ನಿರೂಪಕರಾಗಲಿದ್ದಾರೆ.

ನಟ ನಾಗಾರ್ಜುನ ಈ ವರೆಗೆ ಬಿಗ್​ಬಾಸ್ ತೆಲುಗಿನ ಏಳು ಸೀಸನ್​ಗಳನ್ನು ನಿರೂಪಣೆ ಮಾಡಿದ್ದಾರೆ. ಕಳೆದ ಮೂರು ವರ್ಷದಿಂದ ತೆಲುಗು ಬಿಗ್​ಬಾಸ್ ಟಿಆರ್​ಪಿ ಬಹಳ ಚೆನ್ನಾಗಿಯೇ ಬರುತ್ತಿದೆ. ಹಾಗಿದ್ದರೂ ಸಹ ನಾಗಾರ್ಜುನ ಅವರು ಬಿಗ್​ಬಾಸ್ ನಿರೂಪಣೆಯನ್ನು ತ್ಯಜಿಸಿದ್ದಾರೆ. ನಟನೆ, ಉದ್ಯಮ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ನಾಗಾರ್ಜುನ ಎಲ್ಲವನ್ನೂ ಒಟ್ಟೊಟ್ಟಿಗೆ ನಿಭಾಯಿಸಲು ಕಷ್ಟವಾಗುತ್ತಿರುವ ಕಾರಣದಿಂದ ಈ ನಿರ್ಣಯ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.

ಬಿಗ್​ಬಾಸ್ ಮುಂದಿನ ಸೀಸನ್ ಅನ್ನು ನಟ ನಾಗಾರ್ಜುನ ಬದಲಿಗೆ ನಟ ವಿಜಯ್ ದೇವರಕೊಂಡ ನಿರೂಪಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. ವಿಜಯ್ ದೇವರಕೊಂಡ, ಫ್ಯಾಮಿಲಿ ನಟರಾಗಿಯೂ ಗುರುತಿಸಿಕೊಂಡಿದ್ದು, ಯುವಕರಿಗೂ ಬಹಳ ಇಷ್ಟವಾಗುತ್ತಾರೆ. ಅಲ್ಲದೆ ವಿಜಯ್ ದೇವರಕೊಂಡಗೆ ಉತ್ತಮ ಸಂವಹನ ಪ್ರತಿಭೆ ಇದೆ. ಹಾಗಾಗಿ ವಿಜಯ್ ದೇವರಕೊಂಡ ಅವರನ್ನು ಬಿಗ್​ಬಾಸ್​ನ ಒಂಬತ್ತನೇ ಸೀಸನ್ ಅನ್ನು ನಿರೂಪಣೆ ಮಾಡಲು ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ:ವಿಜಯ್ ದೇವರಕೊಂಡ ಸಿನಿಮಾದಿಂದ ಹೊರಬಂದಿದ್ದೇಕೆ ನಟಿ ರುಕ್ಮಿಣಿ ವಸಂತ್

ಆದರೆ ವಿಜಯ್ ದೇವರಕೊಂಡ, ಬಿಗ್​ಬಾಸ್ ನಿರೂಪಣೆಗೆ ಭಾರಿ ದೊಡ್ಡ ಸಂಭಾವನೆ ಕೇಳುತ್ತಿದ್ದಾರೆ. ವಿಜಯ್ ದೇವರಕೊಂಡ ಪ್ರತಿ ಸೀಸನ್ ನಿರೂಪಣೆ ಮಾಡಲು 15 ಕೋಟಿ ಸಂಭಾವನೆ ಕೇಳುತ್ತಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೆ ಸೀಸನ್​ನಿಂದ ಸೀಸನ್​ಗೆ 20% ಸಂಭಾವನೆ ಹೆಚ್ಚು ಮಾಡುವ ಷರತ್ತನ್ನು ಸಹ ಇಟ್ಟಿದ್ದಾರೆ ಎನ್ನಲಾಗುತ್ತಿದೆ. ಬಿಗ್​ಬಾಸ್ ಆಯೋಜಕರು, ವಿಜಯ್ ದೇವರಕೊಂಡ ಷರತ್ತುಗಳಿಗೆ ಒಪ್ಪಿದ್ದು, ಮುಂದಿನ ಸೀಸನ್​ಗೆ ವಿಜಯ್ ನಿರೂಪಣೆ ಪಕ್ಕಾ ಎನ್ನಲಾಗುತ್ತಿದೆ.

ವಿಜಯ್ ದೇವರಕೊಂಡ ಅವರನ್ನು ಅಂತಿಮಗೊಳಿಸುವ ಮುಂಚೆ ನಂದಮೂರಿ ಬಾಲಕೃಷ್ಣ, ಮೆಗಾಸ್ಟಾರ್ ಚಿರಂಜೀವಿ ಹಾಗೂ ರಾಣಾ ದಗ್ಗುಬಾಟಿ ಅವರುಗಳನ್ನು ಬಿಗ್​ಬಾಸ್ ಆಯೋಜಕರು ಭೇಟಿ ಮಾಡಿ ನಿರೂಪಣೆ ಆಫರ್ ನೀಡಿದ್ದರು. ಆದರೆ ಈ ನಟರುಗಳು ಆಫರ್ ನಿರಾಕರಿಸಿದ ಕಾರಣಕ್ಕೆ ಅಂತಿಮವಾಗಿ ವಿಜಯ್ ದೇವರಕೊಂಡ ಅವರನ್ನು ಫೈನಲ್ ಮಾಡಲಾಗಿದೆ. ನಟ ನಾನಿ ಮತ್ತು ಜೂ ಎನ್​ಟಿಆರ್ ಅವರುಗಳು ಸಹ ಆಫರ್ ಅನ್ನು ತಿರಸ್ಕರಿಸಿದ್ದರು ಎನ್ನಲಾಗಿದೆ. ಇನ್ನು ತಮಿಳು ಬಿಗ್​ಬಾಸ್ ಅನ್ನು ನಿರೂಪಣೆ ಮಾಡುತ್ತಿದ್ದ ಕಮಲ್ ಹಾಸನ್ ಕಳೆದ ಸೀಸನ್​ಗೆ ನಿವೃತ್ತಿ ತೆಗೆದುಕೊಂಡಿದ್ದು, ನಟ ವಿಜಯ್ ಸೇತುಪತಿ ಕಳೆದ ಸೀಸನ್ ಅನ್ನು ನಿರೂಪಣೆ ಮಾಡಿದ್ದಾರೆ. ಕನ್ನಡದ ಮುಂದಿನ ಸೀಸನ್ ಯಾರು ನಿರೂಪಣೆ ಮಾಡಲಿದ್ದಾರೆ ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:46 am, Thu, 13 March 25

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ