AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾಹೇತರ ಸಂಬಂಧ: ಗೆಳತಿಯ ಮಾಜಿ ಪತಿಗೆ ಗುಂಡು ಹಾರಿಸಿದ ನಟ

Tv Actor: ಧಾರಾವಾಹಿ ನಟನೊಬ್ಬ ತಾನು ಸಂಬಂಧದ ಹೊಂದಿದ್ದ ವಿವಾಹಿತ ಮಹಿಳೆಯ ಮಾಜಿ ಪತಿಯ ಮೇಲೆ ಗುಂಡು ಹಾರಿಸಿದ್ದಾನೆ.

ವಿವಾಹೇತರ ಸಂಬಂಧ: ಗೆಳತಿಯ ಮಾಜಿ ಪತಿಗೆ ಗುಂಡು ಹಾರಿಸಿದ ನಟ
ಮನೋಜ್ ಕುಮಾರ್
ಮಂಜುನಾಥ ಸಿ.
|

Updated on: Jul 15, 2023 | 6:15 PM

Share

ತೆಲುಗು ಧಾರಾವಾಹಿ (Telugu Serial) ರಂಗದಲ್ಲಿ ಜನಪ್ರಿಯವಾಗಿರುವ ಯುವನಟ ಮನೋಜ್ ಕುಮಾರ್ (Manoj Kumar) ತನ್ನ ಗೆಳತಿಯ ಮಾಜಿ ಪತಿಯ ಮೇಲೆ ಗುಂಡು ಹಾರಿಸಿದ್ದಾನೆ. ಗುಂಡು ತಗುಲಿದ ವ್ಯಕ್ತಿಗೆ ತೀವ್ರ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೈದರಾಬಾದ್ (Hyderabad) ಪೊಲೀಸರು ಪ್ರಸ್ತುತ ಮನೋಜ್ ಕುಮಾರ್​ಗಾಗಿ ಹುಡುಕಾಟ ನಡೆಸಿದ್ದು ಆತ ತಲೆ ಮರೆಸಿಕೊಂಡಿದ್ದಾನೆ ಎನ್ನಲಾಗುತ್ತಿದೆ.

ಹೈದರಾಬಾದ್​ನ ಶಮೀರ್​ಪೇಟ್​ನಲ್ಲಿ ಈ ಘಟನೆ ನಡೆದಿದೆ. ಸಿದ್ಧಾರ್ಥ್ ದಾಸ್ ಎಂಬಾತ, ಸೆಲೆಬ್ರಿಟಿ ಕ್ಲಬ್ ವಿಲ್ಲಾಗೆ ತನ್ನ ಮಾಜಿ ಪತ್ನಿ ಹಾಗೂ ಮಕ್ಕಳನ್ನು ನೋಡಲು ಬಂದಿದ್ದಾನೆ. ಆ ಸಮಯದಲ್ಲಿ ಆಕೆಯೊಟ್ಟಿಗೆ ಮನೋಜ್ ಕುಮಾರ್ ಇದ್ದುದ್ದನ್ನು ಕಂಡಿದ್ದಾನೆ. ಇಬ್ಬರಿಗೂ ಜಗಳವಾಗಿದೆ. ಜಗಳ ತಾರಕಕ್ಕೆ ಹೋಗಿ ನಟ ಮನೋಜ್ ಕುಮಾರ್ ತನ್ನ ಏರ್​ಗನ್​ನಿಂದ ಸಿದ್ಧಾರ್ಥ್ ದಾಸ್​ಗೆ ಗುಂಡಿಟ್ಟಿದ್ದಾನೆ. ಗಾಯಗೊಂಡ ಸಿದ್ಧಾರ್ಥ್ ದಾಸ್ ಹೇಗೋ ತಪ್ಪಿಸಿಕೊಂಡು ಹೋಗಿ ಆಸ್ಪತ್ರೆಗೆ ದಾಖಲಾಗಿ, ಪೊಲೀಸರಿಗೆ ವಿಷಯ ತಲುಪಿಸಿದ್ದಾನೆ.

ಘಟನೆ ಬಗ್ಗೆ ಮಾಹಿತಿ ನೀಡಿರುವ ಡಿಸಿಪಿ ಸಂದೀಪ್ ಕುಮಾರ್, ”2019 ರಲ್ಲಿ ಸಿದ್ಧಾರ್ಥ್ ದಾಸ್ ತಮ್ಮ ಪತ್ನಿ ಸುಶ್ಮಿತಾ ಇಂದ ದೂರಾಗಿದ್ದರು. ಅವರಿಗೆ ಒಂದು ಹೆಣ್ಣು ಒಂದು ಗಂಡು ಮಗುವಿತ್ತು. ಸಿದ್ಧಾರ್ಥ್ ದಾಸ್ ಮಾಜಿ ಪತ್ನಿ ಶಮೀರ್​ಪೇಟ್​ನ ಸೆಲೆಬ್ರಿಟಿ ಕ್ಲಬ್ ಹೌಸ್​ನ ವಿಲ್ಲಾ ನಂಬರ್ 21ರಲ್ಲಿ ವಾಸವಿದ್ದರು. ಸಿದ್ಧಾರ್ಥ್ ತಮ್ಮ ಮಕ್ಕಳನ್ನು ನೋಡಲು ಬಂದಾಗ ಅಲ್ಲಿಯೇ ಒಟ್ಟಿಗಿದ್ದ ಮನೋಜ್ ಹಾಗೂ ಸುಶ್ಮಿತಾ ಜೊತೆ ಜಗಳವಾಡಿದರು. ಆಗ ಮನೋಜ್, ತಮ್ಮ ಏರ್​ಗನ್​ನಿಂದ ಸಿದ್ಧಾರ್ಥ್ ಮೇಲೆ ಗುಂಡು ಹಾರಿಸಿದರು. ಹೇಗೋ ತಪ್ಪಿಸಿಕೊಂಡ ಸಿದ್ಧಾರ್ಥ್ ಕೂಡಲೇ ಬಂದು ಪೊಲೀಸರಿಗೆ ದೂರು ನೀಡಿದರು. ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ” ಎಂದಿದ್ದಾರೆ.

ಇದನ್ನೂ ಓದಿ:‘ಆಕಾಶ ದೀಪ’ ಧಾರಾವಾಹಿ ನಟಿ ದಿವ್ಯಾ ಹೊರಿಸಿದ ಆರೋಪಕ್ಕೆ ಸ್ಪಷ್ಟನೆ ನೀಡಿದ ಪತಿ ಅಮ್ಜದ್​ ಖಾನ್​

ಸಿದ್ಧಾರ್ಥ್​ರ ಮಕ್ಕಳು ಸಹ ನಟ ಮನೋಜ್ ಕುಮಾರ್ ವಿರುದ್ಧ ಮಕ್ಕಳ ಕಲ್ಯಾಣ ಇಲಾಖೆಗೆ ಮೌಖಿಕ ದೂರು ನೀಡಿದ್ದು, ಮನೋಜ್ ಕುಮಾರ್ ತಮ್ಮನ್ನು ಹೊಡೆಯುತ್ತಿದ್ದನೆಂದು, ಬೈಯುತ್ತಿದ್ದನೆಂದು ಹೇಳಿದ್ದಾರೆ. ತಾವು, ತಾಯಿಯೊಂದಿಗೆ ಅಥವಾ ತಾಯಿಯ ಸಂಬಂಧಿಗಳೊಂದಿಗೆ ಇರಲು ಇಚ್ಛಿಸುವುದಿಲ್ಲ” ಎಂದಿದ್ದಾರೆ. ಮಕ್ಕಳ ಕಲ್ಯಾಣ ಇಲಾಖೆಯು ಇಬ್ಬರು ಮಕ್ಕಳನ್ನು ವಶಕ್ಕೆ ಪಡೆದಿದ್ದು ಅವರ ತಂದೆಯಾದ ಸಿದ್ಧಾರ್ಥ್ ದಾಸ್ ವಶಕ್ಕೆ ನೀಡುವ ಬಗ್ಗೆ ಚಿಂತಿಸುತ್ತಿದೆ.

ತೆಲುಗು ಟಿವಿಯ ಜನಪ್ರಿಯ ಧಾರಾವಾಹಿಯಾದ ‘ಕಾರ್ತಿಕ ದೀಪಂ’ ನಲ್ಲಿ ಮನೋಜ್ ಕುಮಾರ್ ನಟಿಸಿದ್ದಾರೆ. ಕೆಲವು ರಿಯಾಲಿಟಿ ಶೋಗಳಲ್ಲಿಯೂ ಮನೋಜ್ ಕುಮಾರ್ ಕಾಣಿಸಿಕೊಂಡಿದ್ದಾರೆ. ಮನೋಜ್ ಕುಮಾರ್ ಪ್ರಸ್ತುತ ತಲೆಮರೆಸಿಕೊಂಡಿದ್ದು ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ