AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್​ 15ಕ್ಕೆ ಜೀ ಕನ್ನಡದಲ್ಲಿ ‘ದಿ ಕಾಶ್ಮೀರ್ ಫೈಲ್ಸ್​’; ಸ್ವಾತಂತ್ರೋತ್ಸವಕ್ಕೆ ಸೆನ್ಸೇಷನಲ್​ ಸಿನಿಮಾ

The Kashmir Files | Zee Kannada: ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಆಧರಿಸಿ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ತಯಾರಾಗಿದೆ. ‘ಜೀ ಕನ್ನಡ’ ವಾಹಿನಿ ಮೂಲಕ ಆಗಸ್ಟ್​ 15ರಂದು ಈ ಚಿತ್ರದ ಟಿಲಿವಿಷನ್​ ಪ್ರೀಮಿಯರ್​ ಆಗಲಿದೆ.

ಆಗಸ್ಟ್​ 15ಕ್ಕೆ ಜೀ ಕನ್ನಡದಲ್ಲಿ ‘ದಿ ಕಾಶ್ಮೀರ್ ಫೈಲ್ಸ್​’; ಸ್ವಾತಂತ್ರೋತ್ಸವಕ್ಕೆ ಸೆನ್ಸೇಷನಲ್​ ಸಿನಿಮಾ
‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದ ಟಿಲಿವಿಷನ್ ಪ್ರೀಮಿಯರ್
TV9 Web
| Updated By: ಮದನ್​ ಕುಮಾರ್​|

Updated on:Aug 04, 2022 | 10:41 AM

Share

ಈ ವರ್ಷ ಅತಿ ಹೆಚ್ಚು ಸೆನ್ಸೇಷನ್​ ಸೃಷ್ಟಿ ಮಾಡಿದ ಸಿನಿಮಾಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿರುವುದು ‘ದಿ ಕಾಶ್ಮೀರ್​ ಫೈಲ್ಸ್​’ (The Kashmir Files) ಸಿನಿಮಾ ಎಂದರೆ ತಪ್ಪಾಗಲ್ಲ. ವಿವೇಕ್​ ಅಗ್ನಿಹೋತ್ರಿ ನಿರ್ದೇಶನದ ಈ ಚಿತ್ರದಲ್ಲಿ ಅನೇಕ ವಿಚಾರಗಳನ್ನು ಚರ್ಚೆ ಮಾಡಲಾಗಿದೆ. ಹಿಂದಿಯಲ್ಲಿ ತಯಾರಾದ ಈ ಸಿನಿಮಾ ನಂತರ ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿ ಒಟಿಟಿ ಮೂಲಕ ವೀಕ್ಷಣೆಗೆ ಲಭ್ಯವಾಗಿತ್ತು. ಈಗ ಇದೇ ಮೊದಲ ಬಾರಿಗೆ ಕನ್ನಡ ಕಿರುತೆರೆಯಲ್ಲಿ ಈ ಸಿನಿಮಾ ಪ್ರಸಾರಕ್ಕೆ ಸಕಲ ಸಿದ್ಧತೆ ನಡೆದಿದೆ. ಜೀ ಕನ್ನಡ (Zee Kannada) ವಾಹಿನಿಯಲ್ಲಿ ಆಗಸ್ಟ್​ 15ರಂದು ಸ್ವಾತಂತ್ರೋತ್ಸವದ (Independence Day) ಪ್ರಯುಕ್ತ ಮಧ್ಯಾಹ್ನ 3 ಗಂಟೆಗೆ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಪ್ರಸಾರ ಆಗಲಿದೆ. ಚಿತ್ರಮಂದಿರದಲ್ಲಿ ಮತ್ತು ಒಟಿಟಿಯಲ್ಲಿ ಈ ಚಿತ್ರವನ್ನು ಮಿಸ್​ ಮಾಡಿಕೊಂಡವರಿಗೆ ಈಗ ಕಿರುತೆರೆಯಲ್ಲಿ ವೀಕ್ಷಿಸಲು ಅವಕಾಶ ಸಿಗುತ್ತಿದೆ.

ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಆಧರಿಸಿ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ತಯಾರಾಗಿದೆ. ಅನುಪಮ್​ ಖೇರ್​, ದರ್ಶನ್​ ಕಮಾರ್​, ಪಲ್ಲವಿ ಜೋಶಿ, ಮಿಥುನ್​ ಚಕ್ರವರ್ತಿ, ಪ್ರಕಾಶ್ ಬೆಳವಾಡಿ, ಪುನೀತ್​ ಇಸಾರ್​ ಮುಂತಾದವರು ಇದರಲ್ಲಿ ನಟಿಸಿದ್ದಾರೆ. ನೈಜ ಘಟನೆಗಳನ್ನು ಆಧಾರವಾಗಿ ಇಟ್ಟುಕೊಂಡು ನಿರ್ಮಾಣವಾದ ಈ ಸಿನಿಮಾವನ್ನು ಅನೇಕ ರಾಜಕಾರಣಿಗಳು ನೋಡಿ ಮೆಚ್ಚಿಕೊಂಡಿದ್ದರು. ನರೇಂದ್ರ ಮೋದಿ, ಬಸವರಾಜ ಬೊಮ್ಮಾಯಿ ಮುಂತಾದವರು ಮೆಚ್ಚುಗೆ ಮಾತುಗಳನ್ನು ಆಡಿದ್ದರು.

ಇದನ್ನೂ ಓದಿ
Image
ಸೀಕ್ರೇಟ್​ ಆಗಿ ಮತ್ತೊಂದು ಸಿನಿಮಾ ಶೂಟಿಂಗ್ ಮುಗಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ
Image
‘ದಿ ಕಾಶ್ಮೀರ್​ ಫೈಲ್ಸ್​​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಪತ್ನಿ ಪಲ್ಲವಿ ಜೋಶಿ ಹಿನ್ನೆಲೆ ಏನು? ಇಲ್ಲಿದೆ ಅವರ ಲವ್​ಸ್ಟೋರಿ
Image
‘ದಿ ಕಾಶ್ಮೀರ್​ ಫೈಲ್ಸ್​’ ಮಾತ್ರವಲ್ಲ, ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರ ಇತರೆ ಚಿತ್ರಗಳ ಬಗ್ಗೆ ನಿಮಗೆ ಗೊತ್ತಾ?
Image
ವಿವೇಕ್​ ಅಗ್ನಿಹೋತ್ರಿ ಹಿನ್ನೆಲೆ ಏನು? ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ನಿರ್ದೇಶಕರ ಬಗ್ಗೆ ಇಲ್ಲಿದೆ ಮಾಹಿತಿ..

‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರ ತಯಾರಾಗಿದ್ದು 15ರಿಂದ 20 ಕೋಟಿ ರೂಪಾಯಿ ಬಜೆಟ್​ನಲ್ಲಿ. ಆದರೆ ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಗಳಿಸಿದ್ದು ಬರೋಬ್ಬರಿ 252 ಕೋಟಿ ರೂಪಾಯಿ ಎಂಬುದು ಅಚ್ಚರಿಯ ಸಂಗತಿ. ಈ ಬೆಳವಣಿಗೆಯನ್ನು ಕಂಡು ಎಲ್ಲರೂ ಬೆರಗಾದರು. ಇತ್ತೀಚಿನ ವರ್ಷಗಳಲ್ಲಿ ಯಾವುದೇ ಸಿನಿಮಾ ಕೂಡ ಗಲ್ಲಾಪೆಟ್ಟಿಗೆಯಲ್ಲಿ ಈ ರೀತಿಯ ಮ್ಯಾಜಿಕ್​ ಮಾಡಿರಲಿಲ್ಲ.

View this post on Instagram

A post shared by Zee Kannada (@zeekannada)

ಈ ಸಿನಿಮಾ ಕೋಮುದ್ವೇಷವನ್ನು ಬಿತ್ತುತ್ತದೆ ಎಂಬ ಆರೋಪ ಕೂಡ ಹಲವರಿಂದ ಕೇಳಿಬಂತು. ಆ ಕಾರಣದಿಂದಲೂ ಇದು ದೊಡ್ಡ ಮಟ್ಟದ ಚರ್ಚೆ ಹುಟ್ಟುಹಾಕಿತ್ತು. ಈ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಿದ ಅನೇಕರು ಎಮೋಷನಲ್​ ಆಗಿದ್ದುಂಟು. ಪ್ರೇಕ್ಷಕರು ಕಣ್ಣೀರು ಹಾಕುತ್ತ ಥಿಯೇಟರ್​ನಿಂದ ಹೊರಬರುತ್ತಿರುವ ಅನೇಕ ವಿಡಿಯೋಗಳು ವೈರಲ್​ ಆಗಿದ್ದವು. ಒಟ್ಟಿನಲ್ಲಿ ಭಾರಿ ಸೆನ್ಸೇಷನ್​ ಸೃಷ್ಟಿಸುವಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಯಶಸ್ವಿ ಆಯಿತು. ಈ ಸಿನಿಮಾದ ಯಶಸ್ಸಿನ ನಂತರ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರ ಬೇಡಿಕೆ ಹೆಚ್ಚಿತು. ಹಲವು ಸೆಲೆಬ್ರಿಟಿಗಳು ಕೂಡ ಈ ಚಿತ್ರದ ಗೆಲುವನ್ನು ಶ್ಲಾಘಿಸಿದ್ದಾರೆ.

Published On - 10:24 am, Thu, 4 August 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ