AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ರೀತಿ ಮನಸ್ಸು ಕದಿಯೋಕೆ ಅವರಿಗೆ ಮಾತ್ರ ಸಾಧ್ಯ’; ರವಿಚಂದ್ರನ್​ ಹೃದಯ ದೋಚುವ ಕಳ್ಳ

Ravichandran: ರವಿಚಂದ್ರನ್ ಅವರ ಸಿನಿಮಾಗಳಲ್ಲಿ ನಾಯಕಿಯರಿಗೆ ನೀಡುವ ಪ್ರಾಮುಖ್ಯತೆ ಹಾಗೂ ಅವರ ಚಿತ್ರ ನಿರ್ಮಾಣ ಶೈಲಿಯ ಬಗ್ಗೆ ಚರ್ಚೆ ನಡೆದಿದೆ. ಸುಧಾರಾಣಿ ಮತ್ತು ಶ್ರುತಿ ಅವರ ಅನುಭವಗಳನ್ನು ಹಂಚಿಕೊಳ್ಳುವುದು ಹಾಗೂ ರವಿಚಂದ್ರನ್ ಅವರ ಸಿನಿಮಾಗಳಲ್ಲಿ ನಟಿಸುವ ಅನುಭವದ ಬಗ್ಗೆ ಮಾಹಿತಿ ನೀಡಿದ್ದಾರೆ.

‘ಆ ರೀತಿ ಮನಸ್ಸು ಕದಿಯೋಕೆ ಅವರಿಗೆ ಮಾತ್ರ ಸಾಧ್ಯ’; ರವಿಚಂದ್ರನ್​ ಹೃದಯ ದೋಚುವ ಕಳ್ಳ
Ravichandran (2)
 ಶ್ರೀಲಕ್ಷ್ಮೀ ಎಚ್
| Edited By: |

Updated on:Mar 10, 2025 | 10:54 AM

Share

ರವಿಚಂದ್ರನ್ ಸಿನಿಮಾಗಳು ಸದಾ ಭಿನ್ನ ಎನಿಸಿಕೊಳ್ಳುತ್ತವೆ. ಅವರು ಸಿನಿಮಾ ನಿರ್ಮಾಣ, ನಿರ್ದೇಶನ ಎಲ್ಲವನ್ನೂ ಮಾಡಿದ್ದಾರೆ. ರವಿಚಂದ್ರನ್ ಸಿನಿಮಾಗಳಲ್ಲಿ ಹೀರೋಯಿನ್​ಗಳಿಗೆ ವಿಶೇಷ ಸ್ಥಾನ ನೀಡಲಾಗುತ್ತದೆ. ಈ ಬಗ್ಗೆ ಅನೇಕರು ಹೇಳಿಕೊಂಡಿದ್ದರು. ಇತ್ತೀಚೆ ಜೀ ಕನ್ನಡದ ರಿಯಾಲಿಟಿ ಶೋಗೆ ಆಗಮಿಸಿದ್ದ ಸುಧಾರಾಣಿ, ಶ್ರುತಿ ಮೊದಲಾದವರು ಈ ಬಗ್ಗೆ ಹೇಳಿಕೊಂಡಿದ್ದರು. ರವಿಚಂದ್ರನ್ (Ravichandran) ಸಿನಿಮಾಗಳಲ್ಲಿ ನಟಿಸುವಾಗ ಯಾವ ರೀತಿಯ ಅನುಭವ ಆಗಿದೆ ಎಂಬುದನ್ನು ಅವರು ವಿವರಿಸಿದ್ದರು. ಆ ಬಗ್ಗೆ ಇಲ್ಲಿದೆ ಮಾಹಿತಿ.

ಜೀ ಕನ್ನಡ ವೇದಿಕೆ ಏರಿದ್ದ ಸುಧಾರಾಣಿ ಅವರು ರವಿಚಂದ್ರನ್ ಅವರನ್ನು ಹಾಡಿ ಹೊಗಳಿದ್ದರು. ‘ರವಿಚಂದ್ರನ್ ಸಿನಿಮಾದಲ್ಲಿ ಹೀರೋಯಿನ್​ಗೆ ಜಾಸ್ತಿ ಬೆಲೆ ಕೊಡುತ್ತಾರೆ. ಪರ್ಫಾರ್ಮೆನ್ಸ್ ಇರಬಹುದು, ಕಾಸ್ಟ್ಯೂಮ್ ಇರಬಹುದು ಎಲ್ಲದರಲ್ಲೂ ಅವರಿಗೆ ಹೆಚ್ಚಿನ ಆದ್ಯತೆ ಇರುತ್ತದೆ’ ಎಂದು ರವಿಚಂದ್ರನ್ ಸಿನಿಮಾನ ಬಾಯ್ತುಂಬ ಹೊಗಳಿದರು.

ಇದನ್ನೂ ಓದಿ
Image
ರವಿಚಂದ್ರನ್ ತಂದೆಗೆ 14 ಮಕ್ಕಳು; ಕ್ರೇಜಿಸ್ಟಾರ್ ಹುಟ್ಟಿದ್ದೂ ಪವಾಡವೇ

‘ನಾನು ಮೊದಲ ಬಾರಿ ರವಿಚಂದ್ರನ್​ ಜೊತೆ ಡ್ಯುಯೆಟ್ ಸಾಂಗ್ ಹಾಡುವಾಗ ನನಗೆ ಸಾಮಾನ್ಯ ಸೀರೆ ಉಡಿಸಲಾಗಿತ್ತು. ಮೊದಲ ಶಾಟ್​​ನಲ್ಲಿ ನಿಂತಿದ್ದೆ. 150 ಸಿನಿಮಾಗಳಲ್ಲಿ ಕಾಟನ್ ಸೀರೆ ಉಟ್ಟುಕೊಂಡು ಬಂದಿದ್ದಾರೆ. ಇಲ್ಲಿಯೂ ಹಾಗೆ ಕರೆದುಕೊಂಡು ಬರ್ತೀರಲ್ರಿ ಎಂದು ರವಿಚಂದ್ರನ್ ಸಿಟ್ಟಾದರು. ಏನು ಮಾಡ್ತಿರೋ ಗೊತ್ತಿಲ್ಲ ರಾಣಿ ತರ ಕರೆದುಕೊಂಡು ಬರಬೇಕು ಎಂದರು. ಬೆಳಿಗ್ಗೆ ಶೂಟಿಂಗ್ ಇತ್ತು. ಆದರೆ, ಬಟ್ಟೆಯ ಕಾರಣಕ್ಕೆ ಮಧ್ಯಾಹ್ನ ಶೂಟಿಂಗ್ ಆಯ್ತು. ಅದು ನನಗೆ ಮೊದಲ ಅನುಭವ. ರಾಣಿ ತರ ತೋರಿಸಿದ್ರು. ಆ ತರ ಮನಸ್ಸು ಕದಿಯೋಕೆ ಅವರಿಗೆ ಮಾತ್ರ ಸಾಧ್ಯ’ ಎಂದರು ಶ್ರುತಿ.

‘ಕನ್ನಡಿಗರ ಮನಸ್ಸು ಕದ್ದ ಕಳ್ಳ ಅವರು. ಅದರಲ್ಲೂ ಸಂಗೀತದಲ್ಲಿ ದೊಡ್ಡ ಅಲೆ ಸೃಷ್ಟಿ ಮಾಡಿದ ಮಾಂತ್ರಿಕ. ಕನ್ನಡ ಚಿತ್ರರಂಗ ಶ್ರೀಮಂತ ಗೊಳಿಸಿದ ಧೀಮಂತ. ಕಳ್ಳ ಕೃಷ್ಣ’ ಎಂದರು ತಾರಾ.

ಇದನ್ನೂ ಓದಿ: ರವಿಚಂದ್ರನ್ ತಂದೆಗೆ 14 ಮಕ್ಕಳಿದ್ದರು, ಬದುಕಿದ್ದು 5; ಕ್ರೇಜಿಸ್ಟಾರ್ ಹುಟ್ಟಿದ್ದೂ ಪವಾಡವೇ

ರವಿಚಂದ್ರನ್ ಅವರು ಆಗಿನ ಕಾಲದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಎಲ್ಲಾ ಸಿನಿಮಾಗಳು ಒಂದಕ್ಕಿಂತ ಒಂದು ಭಿನ್ನವಾಗಿದ್ದವು. ಅವರು ‘ಪ್ರೇಮಲೋಕ 2’ ಚಿತ್ರ ಮಾಡೋದಾಗಿ ಘೋಷಣೆ ಮಾಡಿದ್ದಾರೆ. ಆದರೆ, ಅಧಿಕೃತವಾಗಿ ಸಿನಿಮಾ ಇನ್ನೂ ಸೆಟ್ಟೇರಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:52 am, Mon, 10 March 25

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?