AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ಅಂದುಕೊಂಡಂತೆ ನಡೆಯಲ್ಲ ದೊಡ್ಮನೆ ಆಟ; ಎಚ್ಚೆತ್ತುಕೊಳ್ಳದಿದ್ದರೆ ಇಲ್ಲ ಉಳಿಗಾಲ

ದೊಡ್ಮನೆಯಲ್ಲಿ ಈ ಬಾರಿಯೂ ಅನೇಕ ಗುಂಪುಗಳು ಆಗಿವೆ. ಇದು ವೈಯಕ್ತಿಕ ಆಟದ ಮೇಲೆ ಎಷ್ಟು ಪ್ರಭಾವ ಬೀರುತ್ತದೆ ಎಂಬುದು ಸ್ಪರ್ಧಿಗಳಿಗೆ ಅರಿವಾದಂತೆ ಇಲ್ಲ. ಈ ಕಾರಣದಿಂದಲೇ ಸುದೀಪ್ ಅವರು ಎಚ್ಚರಿಕೆ ನೀಡಿದ್ದಾರೆ.

ಇನ್ಮುಂದೆ ಅಂದುಕೊಂಡಂತೆ ನಡೆಯಲ್ಲ ದೊಡ್ಮನೆ ಆಟ; ಎಚ್ಚೆತ್ತುಕೊಳ್ಳದಿದ್ದರೆ ಇಲ್ಲ ಉಳಿಗಾಲ
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Nov 19, 2023 | 6:57 PM

Share

ಬಿಗ್ ಬಾಸ್​ನಲ್ಲಿ (Bigg Boss) ಈಗಾಗಲೇ ಆರು ವಾರ ಪೂರ್ಣಗೊಂಡಿದೆ. ಈಗಾಗಲೇ ದೊಡ್ಮನೆಯಲ್ಲಿ ಹಲವು ಹೈಡ್ರಾಮಾಗಾಳು ನಡೆದಿವೆ. ಸುದೀಪ್ ಅವರು ಎಂದಿನ ಗತ್ತಿನಲ್ಲಿ ನಿರೂಪಣೆ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ದೊಡ್ಮನೆ ಆಟ ಮತ್ತಷ್ಟು ಟಫ್ ಆಗಲಿದೆ. ಒಂದೊಮ್ಮೆ ಸ್ಪರ್ಧಿಗಳು ಎಚ್ಚೆತ್ತುಗೊಳ್ಳದೇ ಇದ್ದರೆ ಉಳಿಗಾಲ ಇಲ್ಲ ಎಂಬುದು ಅನೇಕರ ಅಭಿಪ್ರಾಯ. ಗುಂಪುಗಾರಿಕೆ ಬಿಟ್ಟು ಸ್ವಂತವಾಗಿ ಆಟಆಡಬೇಕಾದ ಅನಿವಾರ್ಯತೆ ಸ್ಪರ್ಧಿಗಳಿಗೆ ಇದೆ. ಇದನ್ನು ಯಾರೆಲ್ಲ ಅರ್ಥ ಮಾಡಿಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಬಿಗ್ ಬಾಸ್​ಗೆ ಬಂದಮೇಲೆ ಯಾರ ಆಟ ಹೇಗೆ ಆಗುತ್ತದೆ ಎಂಬುದನ್ನು ಹೇಳೋಕೆ ಸಾಧ್ಯವಿಲ್ಲ. ಕೆಲವರು ಗುಂಪು ಮಾಡಿಕೊಂಡು ಆಟ ಆಡಬಹುದು. ಕೆಲವರು ಸ್ವಂತ ಬಲದ ಮೇಲೆ ಮುನ್ನುಗ್ಗಬಹುದು. ದೊಡ್ಮನೆಯಲ್ಲಿ ಈ ಬಾರಿಯೂ ಅನೇಕ ಗುಂಪುಗಳು ಆಗಿವೆ. ಇದು ವೈಯಕ್ತಿಕ ಆಟದ ಮೇಲೆ ಎಷ್ಟು ಪ್ರಭಾವ ಬೀರುತ್ತದೆ ಎಂಬುದು ಸ್ಪರ್ಧಿಗಳಿಗೆ ಅರಿವಾದಂತೆ ಇಲ್ಲ. ಈ ಕಾರಣದಿಂದಲೇ ಸುದೀಪ್ ಅವರು ಎಚ್ಚರಿಕೆ ನೀಡಿದ್ದಾರೆ. ಈ ಎಚ್ಚರಿಕೆಯನ್ನು ಸ್ಪರ್ಧಿಗಳು ಗಂಭೀರವಾಗಿ ಸ್ವೀಕರಿಸಬೇಕಿದೆ.

ಈಗಾಗಲೇ ಬಿಗ್ ಬಾಸ್ ಮನೆಯಿಂದ ಸ್ನೇಕ್​ ಶ್ಯಾಮ್, ರಕ್ಷಕ್, ಗೌರೀಶ್ ಅಕ್ಕಿ, ಈಶಾನಿ ಔಟ್ ಆಗಿದ್ದಾರೆ. ಸದ್ಯ ದೊಡ್ಮನೆಯಲ್ಲಿ ಉಳಿದುಕೊಂಡಿದ್ದು ಕೇವಲ 13 ಮಂದಿ ಮಾತ್ರ. ಆ ಪೈಕಿ ಇಂದು ಒಬ್ಬರು ಔಟ್ ಆಗಲಿದ್ದಾರೆ. ಈ ಮೂಲಕ ದೊಡ್ಮನೆ ಸದಸ್ಯರ ಸಂಖ್ಯೆ 12ಕ್ಕೆ ಇಳಿಕೆ ಆಗಲಿದೆ. ಈ ಕಾರಣದಿಂದ ಸ್ಪರ್ಧೆ ಹೆಚ್ಚಲಿದೆ.

ವಿನಯ್ ಗೌಡ ಅವರು ಸಾಕಷ್ಟು ಸ್ಟ್ರಾಂಗ್ ಎಂದು ಭಾವಿಸಿದ್ದಾರೆ. ಅವರು ಗುಂಪುಗಾರಿಕೆ ಮಾಡುತ್ತಿದ್ದಾರೆ. ಅವರ ಜೊತೆ ಸ್ನೇಹಿತ್, ನಮ್ರತಾ ಸೇರಿಕೊಂಡಿದ್ದಾರೆ. ತುಕಾಲಿ ಸಂತೋಷ್, ವರ್ತೂರು ಸಂತೋಷ್ ಬದಲಾಗುವ

ಸೂಚನೆ ನೀಡಿದ್ದಾರೆ. ಡ್ರೋನ್ ಪ್ರತಾಪ್ ಎಂದಿನಂತೆ ಸ್ಟ್ರಾಂಗ್ ಎನಿಸಿಕೊಂಡಿದ್ದಾರೆ. ಕಾರ್ತಿಕ್, ಸಂಗೀತಾ, ತನಿಷಾ ತಮ್ಮದೇ ಗುಂಪು ಮಾಡಿಕೊಂಡಿದ್ದಾರೆ. ಇವರ ಮಧ್ಯೆಯೇ ಕಿತ್ತಾಟ ಶುರುವಾಗಿದೆ.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿರುವ ಗುಂಪುಗಾರಿಕೆ ವಿರುದ್ಧ ಮತ್ತೆ ಸಿಡಿದೆದ್ದ ಕಿಚ್ಚ ಸುದೀಪ್; ಖಡಕ್ ಎಚ್ಚರಿಕೆ

ಸಿರಿ ಹಾಗೂ ಭಾಗ್ಯಶ್ರೀ ಅವರು ಸೈಲೆಂಟ್ ಆಗಿದ್ದಾರೆ. ನೀತು ಅವರು ಈ ವಾರವೇ ಔಟ್ ಆದರೂ ಅಚ್ಚರಿ ಏನಿಲ್ಲ ಅನ್ನೋದು ವೀಕ್ಷಕರ ಅಭಿಪ್ರಾಯ. ಹೀಗಾಗಿ, ಎಲ್ಲಾ ಸ್ಪರ್ಧಿಗಳು ವೈಯಕ್ತಿಕ ಆಟವನ್ನು ತೋರಿಸಬೇಕಿದೆ. ಎಚ್ಚೆತ್ತುಕೊಳ್ಳದಿದ್ದರೆ ಉಳಿಗಾಲ ಇಲ್ಲ ಅನ್ನೋದು ಅನೇಕರ ಅಭಿಪ್ರಾಯ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​