AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇವರೆಲ್ಲ ಮನುಷ್ಯರಾ?’; ಮುಖಕ್ಕೆ ಹೊಡೆದಂತೆ ಹೇಳಿದ ವರ್ತೂರು ಸಂತೋಷ್

ಟಾಸ್ಕ್ ಗೆದ್ದವರಿಗೆ ಬಿಗ್ ಬಾಸ್ ಪಾಯಿಂಟ್ಸ್ ನೀಡುತ್ತಿದ್ದರು. ಇದನ್ನು ಬಳಕೆ ಮಾಡಿಕೊಂಡು ಗ್ರೋಸರಿ ಪಡೆಯಲು ಬಿಗ್ ಬಾಸ್ ಅವಕಾಶ ನೀಡಿದರು. ಈ ವೇಳೆ ಎಲ್ಲರೂ ಕಿತ್ತಾಡಿಕೊಂಡಿದ್ದಾರೆ.

‘ಇವರೆಲ್ಲ ಮನುಷ್ಯರಾ?’; ಮುಖಕ್ಕೆ ಹೊಡೆದಂತೆ ಹೇಳಿದ ವರ್ತೂರು ಸಂತೋಷ್
ವರ್ತೂರು ಸಂತೋಷ್
ರಾಜೇಶ್ ದುಗ್ಗುಮನೆ
|

Updated on: Dec 23, 2023 | 7:25 AM

Share

ಬಿಗ್ ಬಾಸ್ ಮನೆಯಲ್ಲಿ ಗೆಳೆತನ, ಪ್ರೀತಿಗೆ ಬೆಲೆ ನೀಡೋಕೆ ಸ್ಪರ್ಧಿಗಳು ಹಿಂದೇಟು ಹಾಕುತ್ತಾರೆ. ಒಳ್ಳೆಯ ರೀತಿಯಲ್ಲಿ ವರ್ತಿಸುವ ಕೆಲವರು ನಂತರ ಉಲ್ಟಾ ಹೊಡೆಯುತ್ತಾರೆ. ಯಾರು ಯಾವಾಗ ಬೇಕಾದರೂ ಬದಾಗುತ್ತಾರೆ. ಈ ವಿಚಾರ ವರ್ತೂರು ಸಂತೋಷ್ (Varthur Santosh) ಅವರಿಗೆ ಸ್ಪಷ್ಟವಾಗಿದೆ. ಅವರು ಈ ವಿಚಾರವಾಗಿ ಮಾತನಾಡಿದ್ದಾರೆ. ‘ಇವರೆಲ್ಲ ಮನುಷ್ಯರಾ’ ಎಂದು ಪ್ರಶ್ನೆ ಮಾಡಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ‘ಬಿಗ್ ಬಾಸ್’ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಉಚಿತವಾಗಿ ಲೈವ್ ವೀಕ್ಷಿಸುವ ಅವಕಾಶ ಇದೆ.

ಬಿಗ್ ಬಾಸ್ ಮನೆಯಲ್ಲಿ ಹಣದ ಮಾತೇ ಬರುವುದಿಲ್ಲ. ಬಿಗ್ ಬಾಸ್ ಏನು ನೀಡುತ್ತಾರೋ ಅದನ್ನೇ ಬಳಕೆ ಮಾಡಿಕೊಳ್ಳಬೇಕು. ಆದರೆ, ಈ ವಾರ ಸ್ಪರ್ಧಿಗಳಿಗೆ ಒಂದು ಅವಕಾಶ ಸಿಕ್ಕಿತ್ತು. ಟಾಸ್ಕ್ ಗೆದ್ದವರಿಗೆ ಬಿಗ್ ಬಾಸ್ ಪಾಯಿಂಟ್ಸ್ ನೀಡುತ್ತಿದ್ದರು. ಇದನ್ನು ಬಳಕೆ ಮಾಡಿಕೊಂಡು ಗ್ರೋಸರಿ ಪಡೆಯಲು ಬಿಗ್ ಬಾಸ್ ಅವಕಾಶ ನೀಡಿದರು. ಈ ವೇಳೆ ಎಲ್ಲರೂ ಕಿತ್ತಾಡಿಕೊಂಡಿದ್ದಾರೆ.

ಯಾವುದೋ ವಿಚಾರ ಮಾತನಾಡುವಾಗ ಮೋಸ ಶಬ್ದವನ್ನು ಬಳಕೆ ಮಾಡಿದರು ತುಕಾಲಿ ಸಂತೋಷ್. ತನಿಷಾಗೆ ಮೋಸ ಆಗುತ್ತಿದೆ ಎಂದರು. ಈ ಮಾತನ್ನು ಕೇಳಿ ವರ್ತೂರು ಸಂತೋಷ್ ಅವರು ತಮ್ಮ ವಾದ ಮುಂದಿಟ್ಟರು. ‘200 ರೂಪಾಯಿ ತಂಡದ ಕಟ್ಟಿದ ತನಿಷಾ ಉತ್ತಮಳಾ ಅಥವಾ 1000 ಪಾಯಿಂಟ್ಸ್ ಕೊಟ್ಟು ತಂಡ ಕಟ್ಟಿದ ಸಂಗೀತ ಉತ್ತಮಳಾ? ಹಾಲು, ಬಾಳೆಹಣ್ಣು, ಮೂರು ಮೊಟ್ಟೆ ಕೊಟ್ಟು ಕ್ಷಮೆ ಕೇಳಿದ ಅವಳು (ತನಿಷಾ) ಇಂದು ಪಾಯಿಂಟ್ಸ್ ನೀಡಿ ದಿನಸಿ ಖರೀದಿ ಮಾಡಬೇಕು ಎಂದು ಹೇಳಿದಾಗ ಸೈಲೆಂಟ್ ಆದಳು. ಅವಳು ಉತ್ತಮಳಾ? ಇವರೆಲ್ಲಾ ಮನುಷ್ಯರಾ?’ ಎಂದು ವರ್ತೂರು ಸಂತೋಷ್ ಕೋಪದಿಂದ ಕೇಳಿದ್ದಾರೆ.

ಇದನ್ನೂ ಓದಿ: ಹಣ ಕೊಟ್ಟು ದಿನಸಿ ಪಡೆಯಲು ಬಿಗ್ ಬಾಸ್ ಅವಕಾಶ; ಮತ್ತೆ ದೊಡ್ಮನೆ ರಣರಂಗ

‘ಕ್ಯಾಪ್ಟನ್ ಆಗಬೇಕು ಎನ್ನುವ ಕಾರಣಕ್ಕೆ ಸ್ವಾರ್ಥ ಮೆರೆಯುತ್ತಿದ್ದಾರೆ. ಬೇಯದೇ ಇರುವ ಚಪಾತಿ ತಿಂದಿದ್ದೇನೆ. ಇವರೆಲ್ಲ ಮನುಷ್ಯರಾ’ ಎಂದು ಪ್ರಶ್ನೆ ಮಾಡಿದ್ದಾರೆ ಸಂತೋಷ್. ಅವರ ಮಾತನ್ನು ಅನೇಕ ವೀಕ್ಷಕರು ಒಪ್ಪಿದ್ದಾರೆ. ಅವರು ನಿಜವಾದ ಮಾತನ್ನು ಹೇಳಿದ್ದಾರೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು