AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇವರಿಗೆ ಮನುಷ್ಯತ್ವ ಇಲ್ವ?’; ಅಮಾನವೀಯ ಚಾಲೆಂಜ್ ನೀಡಿದ ವಿನಯ್-ಸಂಗೀತಾ ಟೀಂಗೆ ಛೀಮಾರಿ

ಸಂಗೀತಾ ತಂಡದವರು ಮೊದಲು ‘ತುಕಾಲಿ ಸಂತೋಷ್ ಹಾಗೂ ಕಾರ್ತಿಕ್ ಅವರು ತಲೆ ಬೋಳಿಸಿಕೊಳ್ಳಬೇಕು’ ಎನ್ನುವ ಚಾಲೆಂಜ್ ಕೊಟ್ಟರು. ಇದನ್ನು ಸಂತೋಷ್ ಹಾಗೂ ಕಾರ್ತಿಕ್ ಸ್ವೀಕರಿಸಿದರು. ಈ ಮೂಲಕ ಇವರ ತಲೆ ಬೋಳಿಸಲಾಯಿತು.

‘ಇವರಿಗೆ ಮನುಷ್ಯತ್ವ ಇಲ್ವ?’; ಅಮಾನವೀಯ ಚಾಲೆಂಜ್ ನೀಡಿದ ವಿನಯ್-ಸಂಗೀತಾ ಟೀಂಗೆ ಛೀಮಾರಿ
ಕಾರ್ತಿಕ್-ಸಂತೋಷ್
ರಾಜೇಶ್ ದುಗ್ಗುಮನೆ
|

Updated on:Nov 21, 2023 | 10:50 PM

Share

ಬಿಗ್ ಬಾಸ್ (Bigg Boss) ಮನೆಯಲ್ಲಿ ಎರಡು ತಂಡ ಮಾಡಲಾಗಿದೆ. ಎರಡೂ ತಂಡಕ್ಕೆ ‘ಉಗ್ರಂ ವೀರಂ’ ಹೆಸರಿನ ಟಾಸ್ಕ್​ ನೀಡಲಾಗಿತ್ತು. ಒಂದು ಟೀಂಗೆ ಸಂಗೀತಾ ಲೀಡರ್ ಆದರೆ, ಮತ್ತೊಂದು ಟೀಂಗೆ ಮೈಕೆಲ್ ಲೀಡರ್​. ಸಂಗೀತಾ ತಂಡದಲ್ಲಿ ವಿನಯ್, ಸಿರಿ, ನಮ್ರತಾ, ಸ್ನೇಹಿತ್ ಮೊದಲಾದವರು ಇದ್ದಾರೆ. ಒಂದು ತಂಡದವರು ಎದುರಾಳಿ ತಂಡಕ್ಕೆ ಚಾಲೆಂಜ್ ನೀಡಬೇಕು. ಈ ಚಾಲೆಂಜ್ ಸ್ವೀಕರಿಸಿ, ಅದನ್ನು ಪೂರ್ಣಗೊಳಿಸಿದರೆ ತಂಡ ಗೆದ್ದಂತೆ. ಒಂದೊಮ್ಮೆ ಆಗದೇ ಇದ್ದರೆ ತಂಡ ಪಾಯಿಂಟ್ ಕಳೆದುಕೊಳ್ಳುತ್ತದೆ. ಈಗ ಸಂಗೀತಾ ಟೀಂ ಛೀಮಾರಿ ಹಾಕಿಸಿಕೊಳ್ಳುತ್ತಿದೆ. ಅವರು ಕೊಟ್ಟ ಅಮಾನವೀಯ ಟಾಸ್ಕ್ ಬಗ್ಗೆ ಪ್ರಶ್ನೆಗಳು ಎದ್ದಿವೆ.

ಸಂಗೀತಾ ತಂಡದವರು ಮೊದಲು ‘ತುಕಾಲಿ ಸಂತೋಷ್ ಹಾಗೂ ಕಾರ್ತಿಕ್ ಅವರು ತಲೆ ಬೋಳಿಸಿಕೊಳ್ಳಬೇಕು’ ಎನ್ನುವ ಚಾಲೆಂಜ್ ಕೊಟ್ಟರು. ಇದನ್ನು ಸಂತೋಷ್ ಹಾಗೂ ಕಾರ್ತಿಕ್ ಸ್ವೀಕರಿಸಿದರು. ಈ ಮೂಲಕ ಇವರ ತಲೆ ಬೋಳಿಸಲಾಯಿತು. ತಲೆ ಬೋಳಿಸುವಾಗ ಸಂಗೀತಾ, ಸಿರಿ ಮೊದಲಾದವರು ಬೇಸರ ಮಾಡಿಕೊಂಡರು.

ಮತ್ತೊಂದು ಟಾಸ್ಕ್​ನಲ್ಲಿ ತನಿಷಾ ಹಾಗೂ ವರ್ತೂರು ಸಂತೋಷ್ ಅವರು ತಲಾ 20 ಹಸಿರು ಮೆಣಸು ತಿನ್ನಬೇಕು ಎನ್ನುವ ಚಾಲೆಂಜ್ ನೀಡಿದರು. ಇದನ್ನೂ ತಂಡ ಸ್ವೀಕರಿಸಿತು. ಹಸಿರು ಮೆಣಸು ತಿಂದು ಟಾಸ್ಕ್ ಪೂರ್ಣ ಮಾಡಿದರು. ಈ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾದರು. ಈ ರೀತಿಯ ಚಾಲೆಂಜ್ ನೀಡಿದ ತಂಡದವರ ಬಗ್ಗೆ ಅಪಸ್ವರ ಕೇಳಿ ಬಂದಿದೆ.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿರುವ ಗುಂಪುಗಾರಿಕೆ ವಿರುದ್ಧ ಮತ್ತೆ ಸಿಡಿದೆದ್ದ ಕಿಚ್ಚ ಸುದೀಪ್; ಖಡಕ್ ಎಚ್ಚರಿಕೆ

‘ಈ ರೀತಿಯ ಅಮಾನವೀಯ ಚಾಲೆಂಜ್​ನ ಸಂಗೀತಾ ಆ್ಯಂಡ್ ಟೀಂ ಏಕೆ ನೀಡಬೇಕಿತ್ತು’ ಎಂದು ಅನೇಕರು ಹೇಳಿದ್ದಾರೆ. ‘ಒಬ್ಬರ ತಲೆ ಬೋಳಿಸುವುದು ಎಂದರೆ ಅದು ಸಹಜ ವಿಚಾರ ಅಲ್ಲ’ ಎಂದು ಅನೇಕರು ಅಭಿಪ್ರಾಯ ಹೊರಹಾಕಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ಕೂಡ ವಿಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:48 pm, Tue, 21 November 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ