Roopesh Shetty: ‘ಬಿಗ್​ ಬಾಸ್​ನಿಂದ ಹೊರಬಂದು ಸಾನ್ಯಾನ ತಬ್ಬಿಕೊಂಡು ಈ ವಿಚಾರ ಫಸ್ಟ್​ ಕೇಳ್ತೀನಿ’: ರೂಪೇಶ್​ ಶೆಟ್ಟಿ ಮನದ ಮಾತು

BBK 9 Finale: ಬಹು ದಿನಗಳ ಬಳಿಕ ಸಾನ್ಯಾ ಐಯ್ಯರ್​ ಮತ್ತು ರೂಪೇಶ್​ ಶೆಟ್ಟಿ ಭೇಟಿ ಆಗುವ ಸಮಯ ಹತ್ತಿರ ಆಗಿದೆ. ಈ ಭೇಟಿಯಲ್ಲಿ ತಮ್ಮ ಮೊದಲು ಮಾತು ಏನಾಗಿರಲಿದೆ ಎಂಬುದನ್ನು ರೂಪೇಶ್​ ತಿಳಿಸಿದ್ದಾರೆ.

Roopesh Shetty: ‘ಬಿಗ್​ ಬಾಸ್​ನಿಂದ ಹೊರಬಂದು ಸಾನ್ಯಾನ ತಬ್ಬಿಕೊಂಡು ಈ ವಿಚಾರ ಫಸ್ಟ್​ ಕೇಳ್ತೀನಿ’: ರೂಪೇಶ್​ ಶೆಟ್ಟಿ ಮನದ ಮಾತು
ರೂಪೇಶ್ ಶೆಟ್ಟಿ ಸಾನ್ಯಾ ಐಯ್ಯರ್
Follow us
| Updated By: ಮದನ್​ ಕುಮಾರ್​

Updated on: Dec 31, 2022 | 7:30 AM

ಬಿಗ್​ ಬಾಸ್​ ಎಂದರೆ ಬರೀ ಕಾಂಟ್ರವರ್ಸಿ ಅಲ್ಲ. ಆ ಮನೆಯೊಳಗೆ ಸ್ನೇಹ ಮತ್ತು ಪ್ರೀತಿ ಚಿಗುರಿದ್ದಕ್ಕೆ ಅನೇಕ ಉದಾಹರಣೆಗಳು ಇವೆ. ‘ಬಿಗ್​ ಬಾಸ್ ಕನ್ನಡ ಸೀಸನ್​ 9’ ಕೂಡ ಹಲವರ ಪಾಲಿಗೆ ಒಳ್ಳೆಯ ಸ್ನೇಹಿತರನ್ನು ನೀಡಿದೆ. ಆ ಪೈಕಿ ಹೆಚ್ಚು ಹೈಲೈಟ್​ ಆಗಿದ್ದು ರೂಪೇಶ್​ ಶೆಟ್ಟಿ (Roopesh Shetty) ಮತ್ತು ಸಾನ್ಯಾ ಐಯ್ಯರ್​. ಇವರಿಬ್ಬರು ಬಿಗ್​ ಬಾಸ್​ ಒಟಿಟಿ ಶೋನಲ್ಲಿ ಮೊದಲ ಬಾರಿಗೆ ಪರಿಚಿತರಾದರು. ಬಳಿಕ ಟಿವಿ ಸೀಸನ್​ಗೂ ಜೊತೆಯಾಗಿ ಕಾಲಿಟ್ಟರು. ಅಲ್ಲಿಯೂ ಕೂಡ ತುಂಬ ಅನ್ಯೋನ್ಯವಾಗಿ ಇದ್ದರು. ಸಾನ್ಯಾ ಐಯ್ಯರ್​ (Sanya Iyer) ಜೊತೆ ರೂಪೇಶ್​ ಶೆಟ್ಟಿ ಹೆಚ್ಚು ಕಾಲ ಕಳೆದರು. ಆದರೆ ಸಾನ್ಯಾ ಫಿನಾಲೆಗೆ ಬರಲಿಲ್ಲ. ಈಗ ಬಿಗ್​ ಬಾಸ್​ ಕನ್ನಡ 9ನೇ ಸೀಸನ್​ (Bigg Boss Kannada Season 9) ಮುಗಿಯಲು ಕ್ಷಣಗಣನೆ ಶುರುವಾಗಿದ್ದು, ಈ ಸಂದರ್ಭದಲ್ಲಿ ಸಾನ್ಯಾ ಅಯ್ಯರ್​ ಅವರನ್ನು ರೂಪೇಶ್​ ಶೆಟ್ಟಿ ನೆನಪಿಸಿಕೊಂಡಿದ್ದಾರೆ.

‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರಲ್ಲಿ ಸಾನ್ಯಾ ಐಯ್ಯರ್​ ಅವರು ಎಲಿಮಿನೇಟ್​ ಆದಾಗ ರೂಪೇಶ್​ ಶೆಟ್ಟಿ ಅವರು ಬಿಕ್ಕಿ ಬಿಕ್ಕಿ ಅತ್ತಿದ್ದರು. ‘ದಯವಿಟ್ಟು ಬದಲಾಗಬೇಡ. ನನಗಾಗಿ ಕಾದಿರು’ ಎಂದು ಸಾನ್ಯಾ ಬಳಿ ರೂಪೇಶ್​ ಮನವಿ ಮಾಡಿಕೊಂಡಿದ್ದರು. ಈಗ ದೊಡ್ಮನೆಯ ಹೊರಗೆ ಸಾನ್ಯಾರನ್ನು ಭೇಟಿ ಮಾಡುವ ಸಮಯ ಹತ್ತಿರ ಆಗಿದೆ. ಭೇಟಿ ಆದಾಗ ತಮ್ಮ ಮೊದಲು ಮಾತು ಏನಾಗಿರಲಿದೆ ಎಂಬುದನ್ನು ಅವರು ದೊಡ್ಮನೆ ಒಳಗೆ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Bigg Boss Finale: ಬಿಗ್​ ಬಾಸ್​ ಫಿನಾಲೆಗಾಗಿ ವಿಶೇಷ ಗೆಟಪ್​ನೊಂದಿಗೆ ಕ್ಯಾಮೆರಾ ಮುಂದೆ ಬಂದ ರಾಕೇಶ್​ ಅಡಿಗ

ಇದನ್ನೂ ಓದಿ
Image
Bigg Boss Elimination: ಬಿಗ್​ ಬಾಸ್​ನಲ್ಲಿ ದರ್ಶ್​ ಆಟ ಅಂತ್ಯ; 3ನೇ ವಾರದ ಎಲಿಮಿನೇಷನ್​ನಲ್ಲಿ ಮಯೂರಿ ಸೇಫ್​
Image
BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​
Image
BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
Image
BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ

‘ಮೊದಲಿಗೆ ಹೋಗಿ ತಬ್ಬಿಕೊಳ್ತೀನಿ. ಹೇಗಿದ್ದೀಯಾ ಅಂತ ಕೇಳುತ್ತೇನೆ. ಪ್ರೀತಿ ಮತ್ತು ಸ್ನೇಹಕ್ಕಿಂತಲೂ ಮುಖ್ಯವಾಗಿ ಮೊದಲಿದ್ದ ಕಾಳಜಿ ಈಗಲೂ ಇದೆಯಾ ಅಂತ ಕೇಳ್ತೀನಿ. ಯಾಕೆಂದರೆ ಈ ಮನೆಯಲ್ಲಿ ಅವರ ಜೊತೆ ಇದ್ದ ಅನುಭವ ನನಗಿದೆ. ಆದರೆ ಮನೆಯ ಹೊರಗಿನ ಅನುಭವ ಇಲ್ಲ. ಮನೆಯಲ್ಲಿ ಇದ್ದ ಭಾವನೆ ಈಗಲೂ ಹಾಗೆಯೇ ಇದೆಯಾ? ಲೈಫ್​ ಹೇಗೆಲ್ಲ ಬದಲಾಗಿದೆ? ನಾನು ನಿಮಗೆ ಈ ಮನೆಯಲ್ಲಿ ಇದ್ದಷ್ಟೇ ಮುಖ್ಯವಾ ಅಂತ ಕೇಳ್ತೀನಿ’ ಎಂದು ರೂಪೇಶ್​ ಶೆಟ್ಟಿ ಹೇಳಿದ್ದಾರೆ.

ಇದನ್ನೂ ಓದಿ: BBK 9 Finale: ಬಿಗ್​ ಬಾಸ್​ ಫಿನಾಲೆ ನಡೆಸಿಕೊಡಲು ಝಗಮಗಿಸುವ ಡ್ರೆಸ್​ ಧರಿಸಿ ವೇದಿಕೆಗೆ ಬಂದ ಕಿಚ್ಚ ಸುದೀಪ್​

ಯಾರನ್ನಾದರೂ ಹಚ್ಚಿಕೊಂಡರೆ ಅವರ ಬಗ್ಗೆ ತೀವ್ರ ಕಾಳಜಿ ತೋರುವುದು ರೂಪೇಶ್ ಶೆಟ್ಟಿ ಗುಣ. ಸಾನ್ಯಾ ಐಯ್ಯರ್​ ಬಗ್ಗೆ ಅವರು ಆ ರೀತಿಯ ಭಾವನೆ ಇಟ್ಟುಕೊಂಡಿದ್ದಾರೆ ಎಂಬುದಕ್ಕೆ ಬಿಗ್​ ಬಾಸ್​ ಮನೆಯಲ್ಲಿ ಸಾಕಷ್ಟು ಘಟನೆಗಳು ಸಾಕ್ಷಿ ಆಗಿದ್ದವು. ಇಬ್ಬರ ಜೋಡಿ ಚೆನ್ನಾಗಿದೆ ಎಂದು ವೀಕ್ಷಕರು ಕೂಡ ಕಮೆಂಟ್​ಗಳ ಮೂಲಕ ಅಭಿಪ್ರಾಯ ತಿಳಿಸಿದ್ದುಂಟು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ