AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Roopesh Shetty: ‘ಬಿಗ್​ ಬಾಸ್​ನಿಂದ ಹೊರಬಂದು ಸಾನ್ಯಾನ ತಬ್ಬಿಕೊಂಡು ಈ ವಿಚಾರ ಫಸ್ಟ್​ ಕೇಳ್ತೀನಿ’: ರೂಪೇಶ್​ ಶೆಟ್ಟಿ ಮನದ ಮಾತು

BBK 9 Finale: ಬಹು ದಿನಗಳ ಬಳಿಕ ಸಾನ್ಯಾ ಐಯ್ಯರ್​ ಮತ್ತು ರೂಪೇಶ್​ ಶೆಟ್ಟಿ ಭೇಟಿ ಆಗುವ ಸಮಯ ಹತ್ತಿರ ಆಗಿದೆ. ಈ ಭೇಟಿಯಲ್ಲಿ ತಮ್ಮ ಮೊದಲು ಮಾತು ಏನಾಗಿರಲಿದೆ ಎಂಬುದನ್ನು ರೂಪೇಶ್​ ತಿಳಿಸಿದ್ದಾರೆ.

Roopesh Shetty: ‘ಬಿಗ್​ ಬಾಸ್​ನಿಂದ ಹೊರಬಂದು ಸಾನ್ಯಾನ ತಬ್ಬಿಕೊಂಡು ಈ ವಿಚಾರ ಫಸ್ಟ್​ ಕೇಳ್ತೀನಿ’: ರೂಪೇಶ್​ ಶೆಟ್ಟಿ ಮನದ ಮಾತು
ರೂಪೇಶ್ ಶೆಟ್ಟಿ ಸಾನ್ಯಾ ಐಯ್ಯರ್
TV9 Web
| Edited By: |

Updated on: Dec 31, 2022 | 7:30 AM

Share

ಬಿಗ್​ ಬಾಸ್​ ಎಂದರೆ ಬರೀ ಕಾಂಟ್ರವರ್ಸಿ ಅಲ್ಲ. ಆ ಮನೆಯೊಳಗೆ ಸ್ನೇಹ ಮತ್ತು ಪ್ರೀತಿ ಚಿಗುರಿದ್ದಕ್ಕೆ ಅನೇಕ ಉದಾಹರಣೆಗಳು ಇವೆ. ‘ಬಿಗ್​ ಬಾಸ್ ಕನ್ನಡ ಸೀಸನ್​ 9’ ಕೂಡ ಹಲವರ ಪಾಲಿಗೆ ಒಳ್ಳೆಯ ಸ್ನೇಹಿತರನ್ನು ನೀಡಿದೆ. ಆ ಪೈಕಿ ಹೆಚ್ಚು ಹೈಲೈಟ್​ ಆಗಿದ್ದು ರೂಪೇಶ್​ ಶೆಟ್ಟಿ (Roopesh Shetty) ಮತ್ತು ಸಾನ್ಯಾ ಐಯ್ಯರ್​. ಇವರಿಬ್ಬರು ಬಿಗ್​ ಬಾಸ್​ ಒಟಿಟಿ ಶೋನಲ್ಲಿ ಮೊದಲ ಬಾರಿಗೆ ಪರಿಚಿತರಾದರು. ಬಳಿಕ ಟಿವಿ ಸೀಸನ್​ಗೂ ಜೊತೆಯಾಗಿ ಕಾಲಿಟ್ಟರು. ಅಲ್ಲಿಯೂ ಕೂಡ ತುಂಬ ಅನ್ಯೋನ್ಯವಾಗಿ ಇದ್ದರು. ಸಾನ್ಯಾ ಐಯ್ಯರ್​ (Sanya Iyer) ಜೊತೆ ರೂಪೇಶ್​ ಶೆಟ್ಟಿ ಹೆಚ್ಚು ಕಾಲ ಕಳೆದರು. ಆದರೆ ಸಾನ್ಯಾ ಫಿನಾಲೆಗೆ ಬರಲಿಲ್ಲ. ಈಗ ಬಿಗ್​ ಬಾಸ್​ ಕನ್ನಡ 9ನೇ ಸೀಸನ್​ (Bigg Boss Kannada Season 9) ಮುಗಿಯಲು ಕ್ಷಣಗಣನೆ ಶುರುವಾಗಿದ್ದು, ಈ ಸಂದರ್ಭದಲ್ಲಿ ಸಾನ್ಯಾ ಅಯ್ಯರ್​ ಅವರನ್ನು ರೂಪೇಶ್​ ಶೆಟ್ಟಿ ನೆನಪಿಸಿಕೊಂಡಿದ್ದಾರೆ.

‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರಲ್ಲಿ ಸಾನ್ಯಾ ಐಯ್ಯರ್​ ಅವರು ಎಲಿಮಿನೇಟ್​ ಆದಾಗ ರೂಪೇಶ್​ ಶೆಟ್ಟಿ ಅವರು ಬಿಕ್ಕಿ ಬಿಕ್ಕಿ ಅತ್ತಿದ್ದರು. ‘ದಯವಿಟ್ಟು ಬದಲಾಗಬೇಡ. ನನಗಾಗಿ ಕಾದಿರು’ ಎಂದು ಸಾನ್ಯಾ ಬಳಿ ರೂಪೇಶ್​ ಮನವಿ ಮಾಡಿಕೊಂಡಿದ್ದರು. ಈಗ ದೊಡ್ಮನೆಯ ಹೊರಗೆ ಸಾನ್ಯಾರನ್ನು ಭೇಟಿ ಮಾಡುವ ಸಮಯ ಹತ್ತಿರ ಆಗಿದೆ. ಭೇಟಿ ಆದಾಗ ತಮ್ಮ ಮೊದಲು ಮಾತು ಏನಾಗಿರಲಿದೆ ಎಂಬುದನ್ನು ಅವರು ದೊಡ್ಮನೆ ಒಳಗೆ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Bigg Boss Finale: ಬಿಗ್​ ಬಾಸ್​ ಫಿನಾಲೆಗಾಗಿ ವಿಶೇಷ ಗೆಟಪ್​ನೊಂದಿಗೆ ಕ್ಯಾಮೆರಾ ಮುಂದೆ ಬಂದ ರಾಕೇಶ್​ ಅಡಿಗ

ಇದನ್ನೂ ಓದಿ
Image
Bigg Boss Elimination: ಬಿಗ್​ ಬಾಸ್​ನಲ್ಲಿ ದರ್ಶ್​ ಆಟ ಅಂತ್ಯ; 3ನೇ ವಾರದ ಎಲಿಮಿನೇಷನ್​ನಲ್ಲಿ ಮಯೂರಿ ಸೇಫ್​
Image
BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​
Image
BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
Image
BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ

‘ಮೊದಲಿಗೆ ಹೋಗಿ ತಬ್ಬಿಕೊಳ್ತೀನಿ. ಹೇಗಿದ್ದೀಯಾ ಅಂತ ಕೇಳುತ್ತೇನೆ. ಪ್ರೀತಿ ಮತ್ತು ಸ್ನೇಹಕ್ಕಿಂತಲೂ ಮುಖ್ಯವಾಗಿ ಮೊದಲಿದ್ದ ಕಾಳಜಿ ಈಗಲೂ ಇದೆಯಾ ಅಂತ ಕೇಳ್ತೀನಿ. ಯಾಕೆಂದರೆ ಈ ಮನೆಯಲ್ಲಿ ಅವರ ಜೊತೆ ಇದ್ದ ಅನುಭವ ನನಗಿದೆ. ಆದರೆ ಮನೆಯ ಹೊರಗಿನ ಅನುಭವ ಇಲ್ಲ. ಮನೆಯಲ್ಲಿ ಇದ್ದ ಭಾವನೆ ಈಗಲೂ ಹಾಗೆಯೇ ಇದೆಯಾ? ಲೈಫ್​ ಹೇಗೆಲ್ಲ ಬದಲಾಗಿದೆ? ನಾನು ನಿಮಗೆ ಈ ಮನೆಯಲ್ಲಿ ಇದ್ದಷ್ಟೇ ಮುಖ್ಯವಾ ಅಂತ ಕೇಳ್ತೀನಿ’ ಎಂದು ರೂಪೇಶ್​ ಶೆಟ್ಟಿ ಹೇಳಿದ್ದಾರೆ.

ಇದನ್ನೂ ಓದಿ: BBK 9 Finale: ಬಿಗ್​ ಬಾಸ್​ ಫಿನಾಲೆ ನಡೆಸಿಕೊಡಲು ಝಗಮಗಿಸುವ ಡ್ರೆಸ್​ ಧರಿಸಿ ವೇದಿಕೆಗೆ ಬಂದ ಕಿಚ್ಚ ಸುದೀಪ್​

ಯಾರನ್ನಾದರೂ ಹಚ್ಚಿಕೊಂಡರೆ ಅವರ ಬಗ್ಗೆ ತೀವ್ರ ಕಾಳಜಿ ತೋರುವುದು ರೂಪೇಶ್ ಶೆಟ್ಟಿ ಗುಣ. ಸಾನ್ಯಾ ಐಯ್ಯರ್​ ಬಗ್ಗೆ ಅವರು ಆ ರೀತಿಯ ಭಾವನೆ ಇಟ್ಟುಕೊಂಡಿದ್ದಾರೆ ಎಂಬುದಕ್ಕೆ ಬಿಗ್​ ಬಾಸ್​ ಮನೆಯಲ್ಲಿ ಸಾಕಷ್ಟು ಘಟನೆಗಳು ಸಾಕ್ಷಿ ಆಗಿದ್ದವು. ಇಬ್ಬರ ಜೋಡಿ ಚೆನ್ನಾಗಿದೆ ಎಂದು ವೀಕ್ಷಕರು ಕೂಡ ಕಮೆಂಟ್​ಗಳ ಮೂಲಕ ಅಭಿಪ್ರಾಯ ತಿಳಿಸಿದ್ದುಂಟು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್