AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Roopesh Shetty: ರೂಪೇಶ್​ ಶೆಟ್ಟಿಗೆ ಬೆದರಿಕೆ, ಅವಾಚ್ಯ ಪದಗಳಿಂದ ನಿಂದನೆ; ಪೊಲೀಸ್​ ಠಾಣೆಗೆ ದೂರು ನೀಡಿದ ಕುಟುಂಬದವರು

Bigg Boss Kannada: ರೂಪೇಶ್​ ಶೆಟ್ಟಿ ಕುಟುಂಬದ ಸದಸ್ಯರು ದೂರು ನೀಡಿದ್ದಾರೆ. ಈ ವಿಚಾರವನ್ನು ಮಂಗಳೂರು ನಗರ ಪೊಲೀಸ್​ ಆಯುಕ್ತ ಎನ್​. ಶಶಿಕುಮಾರ್​ ಅವರು ವಿಡಿಯೋ ಮೂಲಕ ಖಚಿತಪಡಿಸಿದ್ದಾರೆ.

Roopesh Shetty: ರೂಪೇಶ್​ ಶೆಟ್ಟಿಗೆ ಬೆದರಿಕೆ, ಅವಾಚ್ಯ ಪದಗಳಿಂದ ನಿಂದನೆ; ಪೊಲೀಸ್​ ಠಾಣೆಗೆ ದೂರು ನೀಡಿದ ಕುಟುಂಬದವರು
ರೂಪೇಶ್ ಶೆಟ್ಟಿ
TV9 Web
| Updated By: ಮದನ್​ ಕುಮಾರ್​|

Updated on: Nov 08, 2022 | 11:49 AM

Share

ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ (Bigg Boss Kannada Season 9) ಸಾಕಷ್ಟು ಕಾರಣಗಳಿಂದ ಸುದ್ದಿ ಆಗುತ್ತಿದೆ. ಈ ಕಾರ್ಯಕ್ರಮದಲ್ಲಿ ಮಂಗಳೂರು ಮೂಲದ ನಟ ರೂಪೇಶ್​ ಶೆಟ್ಟಿ (Roopesh Shetty) ಅವರು ಸ್ಪರ್ಧಿಸುತ್ತಿದ್ದಾರೆ. ಅವರ ಜೊತೆ ಆಪ್ತವಾಗಿದ್ದ ನಟಿ ಸಾನ್ಯಾ ಐಯ್ಯರ್​ ಅವರು 6ನೇ ವಾರದಲ್ಲಿ ಎಲಿಮಿನೇಟ್​ ಆದರು. ಬಿಗ್​ ಬಾಸ್​ (BBK9) ಒಳಗಿನ ವಿಚಾರಗಳು ದೊಡ್ಮನೆ ಆಚೆಗೂ ವಿವಾದ ಹುಟ್ಟುಹಾಕುತ್ತಿವೆ. ಈ ಶೋನಲ್ಲಿ ರೂಪೇಶ್​ ಶೆಟ್ಟಿ ಅವರು ನೀಡಿದ ಕೆಲವು ಹೇಳಿಕೆಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ವಿರೋಧಿಸುವ ಭರದಲ್ಲಿ ಕೆಲವರು ಬೆದರಿಕೆ ಹಾಕಿದ್ದಾರೆ ಮತ್ತು ಅವಾಚ್ಯ ಪದಗಳಿಂದ ನಿಂದನೆ ಮಾಡಿದ್ದಾರೆ. ಈ ಸಂಬಂಧವಾಗಿ ಮಂಗಳೂರಿನಲ್ಲಿ ರೂಪೇಶ್​ ಶೆಟ್ಟಿ ಕುಟುಂಬದವರು ದೂರು ನೀಡಿದ್ದಾರೆ.

ರೂಪೇಶ್​ ಶೆಟ್ಟಿ ಕುಟುಂಬದ ಸದಸ್ಯರು ದೂರು ನೀಡಿರುವುದನ್ನು ಮಂಗಳೂರು ನಗರ ಪೊಲೀಸ್​ ಆಯುಕ್ತ ಎನ್​. ಶಶಿಕುಮಾರ್​ ಅವರು ವಿಡಿಯೋ ಮೂಲಕ ಖಚಿತಪಡಿಸಿದ್ದಾರೆ. ‘ಬಿಗ್​ ಬಾಸ್​ ಸ್ಪರ್ಧಿಯಾಗಿರುವ ರೂಪೇಶ್​ ಶೆಟ್ಟಿ ಅವರು ಆ ಶೋನಲ್ಲಿ ನೀಡಿದ ಕೆಲವು ಹೇಳಿಕೆಗಳನ್ನು ಇಟ್ಟುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಹಾಕಲಾಗಿದ್ದು ಮತ್ತು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಲಾಗಿದ್ದು, ಅವರ ಕುಟುಂಬದ ಸದಸ್ಯರು ದೂರು ನೀಡಿದ್ದಾರೆ. ನ್ಯಾಯಾಲಯದ ಅನುಮತಿ ಪಡೆದು, ಎಫ್​ಐಆರ್​ ಮಾಡಿ, ತನಿಖೆ ಮುಂದುವರಿಸುತ್ತೇವೆ’ ಎಂದು ಶಶಿಕುಮಾರ್​ ಹೇಳಿದ್ದಾರೆ.

ಬಿಗ್​ ಬಾಸ್​ ಕಾರ್ಯಕ್ರಮದಲ್ಲಿ ವಿವಾದಗಳು ಸಹಜ. ಸ್ಪರ್ಧಿಗಳು ಪರಸ್ಪರ ಕಿತ್ತಾಡಿಕೊಂಡ ಘಟನೆಗಳಿಗೆ ಲೆಕ್ಕವೇ ಇಲ್ಲ. ಆದರೆ ಮನೆ ಹೊರಗಿನ ವಿಚಾರಗಳನ್ನು ಈ ಶೋನಲ್ಲಿ ಚರ್ಚೆ ಮಾಡಿದಾಗ ಹೊರಗಿನ ಜಗತ್ತಿನಲ್ಲಿ ವಿವಾದ ಹುಟ್ಟಿಕೊಳ್ಳುತ್ತದೆ. ಹಾಗಾಗಿ ಸ್ಪರ್ಧಿಗಳು ಹೆಚ್ಚು ಎಚ್ಚರಿಕೆ ವಹಿಸಬೇಕಾದ್ದು ಅಗತ್ಯ.

ಇದನ್ನೂ ಓದಿ
Image
Bigg Boss Elimination: ಬಿಗ್​ ಬಾಸ್​ನಲ್ಲಿ ದರ್ಶ್​ ಆಟ ಅಂತ್ಯ; 3ನೇ ವಾರದ ಎಲಿಮಿನೇಷನ್​ನಲ್ಲಿ ಮಯೂರಿ ಸೇಫ್​
Image
BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​
Image
BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
Image
BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ

ರೂಪೇಶ್​ ಶೆಟ್ಟಿ ಅವರು ‘ಬಿಗ್​ ಬಾಸ್​ ಒಟಿಟಿ’ ಮೊದಲ ಸೀಸನ್​ನಲ್ಲಿ ಸ್ಪರ್ಧಿಸಿದ್ದರು. ಅಲ್ಲಿ ಫಿನಾಲೆ ತಲುಪಿದ ಅವರಿಗೆ ಟಿವಿ ಸೀಸನ್​ಗೆ ಎಂಟ್ರಿ ಸಿಕ್ಕಿತು. ತಮ್ಮದೇ ಶೈಲಿಯಲ್ಲಿ ಅವರು ಆಟ ಆಡುತ್ತಿದ್ದಾರೆ. ಆಪ್ತ ಗೆಳತಿ ಸಾನ್ಯಾ ಐಯ್ಯರ್​ ಎಲಿಮಿನೇಟ್​ ಆದ ಬಳಿಕ ರೂಪೇಶ್​ ಶೆಟ್ಟಿ ಅವರು ಸಖತ್​ ಎಮೋಷನಲ್​ ಆಗಿದ್ದಾರೆ.

ಪ್ರಶಾಂತ್​ ಸಂಬರ್ಗಿ ವಿರುದ್ಧವೂ ಅಸಮಾಧಾನ:

ಇತ್ತೀಚೆಗೆ ಪ್ರಶಾಂತ್​ ಸಂಬರ್ಗಿ ಕೂಡ ವಿವಾದದ ಕೇಂದ್ರ ಬಿಂದು ಆಗಿದ್ದರು. ಕನ್ನಡಪರ ಹೋರಾಟಗಾರರ ಕುರಿತು ಅವರು ಬಿಗ್​ ಬಾಸ್​ ಕಾರ್ಯಕ್ರಮದಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪ ವ್ಯಕ್ತವಾಗಿತ್ತು. ಕನ್ನಡಪರ ಸಂಘಟನೆಗಳಿಂದ ತೀವ್ರ ವಿರೋಧ ಎದುರಾದ ಹಿನ್ನೆಲೆಯಲ್ಲಿ ಅವರು ಕನ್ಫೆಷನ್​ ರೂಮ್​ಗೆ ಬಂದು ಕ್ಷಮೆ ಕೇಳಿದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ