AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿ ಜೊತೆ ಫುಟ್​ಪಾತ್​ನಲ್ಲಿ ಮಲಗಿದ್ದ ತುಕಾಲಿ ಸಂತು; ಹಾಸ್ಯ ನಟನ ಬಾಳಲ್ಲಿ ಕಣ್ಣೀರ ಕಥೆ

‘ನಾನು ಬರುವವರೆಗೂ ನಮ್ಮ ಅಮ್ಮ ಜೀವ ಬಿಟ್ಟಿರಲಿಲ್ಲ. ಓಡಿ ಬಂದು ನೋಡಿದೆ. ಅಮ್ಮನ ಕಣ್ಣಲ್ಲಿ ನೀರು ಹರಿದುಹೋಯ್ತು’ ಎಂದು ತಮ್ಮ ನೋವಿನ ದಿನಗಳನ್ನು ತುಕಾಲಿ ಸಂತೋಷ್​ ಅವರು ನೆನಪು ಮಾಡಿಕೊಂಡಿದ್ದಾರೆ. ಅವರು ಹೇಳಿದ್ದನ್ನೆಲ್ಲ ಕೇಳಿ ಬಿಗ್​ ಬಾಸ್​ ಮನೆಯಲ್ಲಿರುವ ಇನ್ನುಳಿದ ಸದಸ್ಯರು ಕಂಬನಿ ಸುರಿಸಿದ್ದಾರೆ.

ತಾಯಿ ಜೊತೆ ಫುಟ್​ಪಾತ್​ನಲ್ಲಿ ಮಲಗಿದ್ದ ತುಕಾಲಿ ಸಂತು; ಹಾಸ್ಯ ನಟನ ಬಾಳಲ್ಲಿ ಕಣ್ಣೀರ ಕಥೆ
ತುಕಾಲಿ ಸಂತೋಷ್​, ನಮ್ರತಾ ಗೌಡ
ಮದನ್​ ಕುಮಾರ್​
|

Updated on: Oct 23, 2023 | 6:34 PM

Share

ಹಲವು ಬಗೆಯ ವ್ಯಕ್ತಿತ್ವ ಇರುವ ಸ್ಪರ್ಧಿಗಳು ಬಿಗ್​ ಬಾಸ್ (Bigg Boss Kannada Season 10)​ ಮನೆಗೆ ಎಂಟ್ರಿ ನೀಡಿದ್ದಾರೆ. ಎಲ್ಲ ಸ್ಪರ್ಧಿಗಳಿಗೂ ಒಂದೊಂದು ಹಿನ್ನೆಲೆ ಇರುತ್ತದೆ. ಕೆಲವರ ಬದುಕಿನ ಕಹಾನಿ ತುಂಬ ಕರುಣಾಜನಕ ಆಗಿರುತ್ತದೆ. ಈಗ ಹಾಸ್ಯ ನಟ ತುಕಾಲಿ ಸಂತೋಷ್​ (Tukali Santosh) ಅವರು ತಮ್ಮ ಜೀವನದ ಕಷ್ಟದ ದಿನಗಳ ನೆನಪನ್ನು ಬಿಗ್​ ಬಾಸ್​ ಮನೆಯಲ್ಲಿ ಮೆಲುಕು ಹಾಕಿದ್ದಾರೆ. ತಾವು ಅನುಭವಿಸಿದ ಬಡತನವನ್ನು ಎಲ್ಲರ ಎದುರು ವಿವರಿಸಿದ್ದಾರೆ. ಸಂತೋಷ್​ ಅವರ ತಾಯಿಗೆ ಅನಾರೋಗ್ಯ ಕಾಡುತ್ತಿತ್ತು. ಅದರಿಂದಾಗಿ ಅವರು ಮೃತಪಟ್ಟರು. ತಾಯಿಯನ್ನು ನೆನೆದು ತುಕಾಲಿ ಸಂತು ಕಣ್ಣೀರು ಹಾಕಿದ್ದಾರೆ. ಅವರ ಜೀವನದ ಕಥೆ ಹೇಳಿ ಇನ್ನುಳಿದ ಸ್ಪರ್ಧಿಗಳು ಕೂಡ ಅತ್ತಿದ್ದಾರೆ. ಇಂಥ ಒಂದು ಎಮೋಷನಲ್​ ಘಟನೆಗೆ ಬಿಗ್ ಬಾಸ್​ (Bigg Boss Kannada) ಮನೆ ಸಾಕ್ಷಿ ಆಗಿದೆ. ಪ್ರತಿ ರಾತ್ರಿ 9.30ಕ್ಕೆ ‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ಈ ಶೋ ಪ್ರಸಾರ ಆಗುತ್ತಿದೆ. ‘ಜಿಯೋ ಸಿನಿಮಾ’ ಒಟಿಟಿ ಮೂಲಕ ದಿನದ 24 ಗಂಟೆಯೂ ಉಚಿತವಾಗಿ ನೋಡುವ ಅವಕಾಶ ಇದೆ.

ಪ್ರತಿ ಸೀಸನ್​ನಲ್ಲಿ ಇಂಥ ಸನ್ನಿವೇಶ ಎದುರಾಗುತ್ತದೆ. ನಗುನಗುತ್ತಾ, ಎಲ್ಲರೊಂದಿಗೆ ಬೆರೆಯುತ್ತಾ, ಟಾಸ್ಕ್​ಗಾಗಿ ಗುದ್ದಾಡುತ್ತಾ ಕಾಲ ಕಳೆಯುವ ಸ್ಪರ್ಧಿಗಳು ಒಮ್ಮೊಮ್ಮೆ ತಮ್ಮ ರಿಯಲ್​ ಕೈಫ್​ ಘಟನೆಗಳನ್ನು ನೆನಪಿಸಿಕೊಂಡು ಎಮೋಷನಲ್ ಆಗುತ್ತಾರೆ. ಈ ಸೀಸನ್​ನಲ್ಲೂ ಅದು ಮರುಕಳಿಸಿದೆ. ಎಲ್ಲರನ್ನೂ ತಮ್ಮ ಕಾಮಿಡಿ ಮೂಲಕ ನಗಿಸುವ ತುಕಾಲಿ ಸಂತೋಷ್​ ಅವರ ಬದುಕಿನಲ್ಲಿ ಟ್ರ್ಯಾಜಿಡಿ ನಡೆದಿತ್ತು. ಇಂದು ಸಂತು ಖ್ಯಾತಿ ಮತ್ತು ಹಣ ಗಳಿಸುತ್ತಿದ್ದಾರೆ. ಆದರೆ ಅದನ್ನು ನೋಡಿ ಖುಷಿಪಡಲು ತಾಯಿ ಇಲ್ಲ ಎಂಬ ಕೊರಗು ಅವರನ್ನು ಕಾಡುತ್ತಿದೆ.

ಇದನ್ನೂ ಓದಿ: ನನ್ನ ಗಂಡನ್ನ ಟಾರ್ಗೆಟ್ ಮಾಡ್ತಿದ್ದಾರೆ: ತುಕಾಲಿ ಸಂತು ಪತ್ನಿ ಚಿನ್ನಿ ಮಾತು

‘ನಮ್ಮ ಅಮ್ಮ ಮತ್ತು ನಾನು ಒಟ್ಟಿಗೆ ಫುಟ್​ಪಾತ್​ನಲ್ಲಿ ಮಲಗುತ್ತಿದ್ದೆವು. ತುಂಬ ಕಷ್ಟ ಇತ್ತು. ತಾಯಿಗೆ ಹುಷಾರಿರಲಿಲ್ಲ. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಬೇಕು ಅಂತ ನಾನು ಕಾರು ತೆಗೆದುಕೊಂಡು. ಅಮ್ಮ ಆ ಕಾರನ್ನು ಮುಟ್ಟಿ ‘ಕಾರು ತೆಗೆದುಕೊಳ್ಳುವ ಮಟ್ಟಕ್ಕೆ ಬೆಳೆದುಬಿಟ್ಟೆಯಲ್ಲ. ನನ್ನನ್ನು ಉಳಿಸಿಕೊಳ್ಳುತ್ತೀಯ ಅಲ್ವಾ’ ಅಂತ ಕೇಳಿದ್ದರು. ಆದರೆ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲೇ ಇಲ್ಲ’ ಎಂದಿದ್ದಾರೆ ತುಕಾಲಿ ಸಂತೋಷ್​.

‘ನಾನು ಬರುವವರೆಗೂ ನಮ್ಮ ಅಮ್ಮ ಜೀವ ಬಿಟ್ಟಿರಲಿಲ್ಲ. ಓಡಿ ಬಂದು ನೋಡಿದೆ. ಅಮ್ಮನ ಕಣ್ಣಲ್ಲಿ ನೀರು ಹರಿದುಹೋಯ್ತು’ ಎಂದು ತಮ್ಮ ನೋವಿನ ದಿನಗಳನ್ನು ತುಕಾಲಿ ಸಂತೋಷ್​ ಅವರು ನೆನಪು ಮಾಡಿಕೊಂಡಿದ್ದಾರೆ. ಅವರು ಹೇಳಿದ್ದನ್ನೆಲ್ಲ ಕೇಳಿ ಮನೆಯ ಇತರೆ ಸದಸ್ಯರು ಕಂಬನಿ ಸುರಿಸಿದ್ದಾರೆ. ಇತ್ತೀಚೆಗೆ ಸಂತೋಷ್​ ಅವರ ಪತ್ನಿ ಮಾನಸಾ ಕೂಡ ಇದೇ ಘಟನೆಯ ಕುರಿತು ‘ಟಿವಿ9 ಕನ್ನಡ’ ಜೊತೆ ಮಾತನಾಡಿದ್ದರು. ‘ಸಂತೋಷ್​ ಮೊದಲೇ ಎಚ್ಚೆತ್ತುಕೊಂಡಿದ್ದರೆ ಅಮ್ಮನನ್ನು ಬದುಕಿಸಿಕೊಳ್ಳಬಹುದಿತ್ತು ಎನಿಸುತ್ತೆ. ನೋಡಿಕೊಳ್ಳುವವರು ಯಾರೂ ಇಲ್ಲದೇ ಆಸ್ಪತ್ರೆಗೆ ಸರಿಯಾಗಿ ತೋರಿಸುವುದಕ್ಕೆ ಆಗಲಿಲ್ಲ. ಸಂತು ಕಡೆಯಿಂದ ತಪ್ಪಾಗಿಹೋಯ್ತು. ಆ ಬಗ್ಗೆ ಈಗಲೂ ಕೊರಗು ಇದೆ’ ಎಂದು ಮಾನಸಾ ಹೇಳಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು