AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನ ಪಡೆದ ‘ಅಣ್ಣಯ್ಯ’; ಟಾಪ್ 5 ಸೀರಿಯಲ್​ಗಳಿವು

2025ನೇ ವರ್ಷದ 21ನೇ ವಾರದ ಕನ್ನಡ ಧಾರಾವಾಹಿಗಳ TRP ವರದಿ ಹೊರಬಿದ್ದಿದೆ. ಜೀ ಕನ್ನಡದ ‘ಅಣ್ಣಯ್ಯ’ ಧಾರಾವಾಹಿ ಮೊದಲ ಸ್ಥಾನದಲ್ಲಿದೆ. ‘ಸೀತಾ ರಾಮ’ ವಿದಾಯದ ಸಂಚಿಕೆ ಉತ್ತಮ ಟಿಆರ್​ಪಿ ಪಡೆದುಕೊಂಡಿದೆ. ನಗರ ಭಾಗದಲ್ಲಿ ಈ ಧಾರಾವಾಹಿಗೆ 3.2 ಟಿಆರ್​ಪಿ ಸಿಕ್ಕಿದೆ. ಈ ಧಾರಾವಾಹಿಯು ಇತ್ತೀಚೆಗೆ ಪೂರ್ಣಗೊಂಡಿದೆ.

ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನ ಪಡೆದ ‘ಅಣ್ಣಯ್ಯ’; ಟಾಪ್ 5 ಸೀರಿಯಲ್​ಗಳಿವು
ಅಣ್ಣಯ್ಯ ಧಾರಾವಾಹಿ
ರಾಜೇಶ್ ದುಗ್ಗುಮನೆ
|

Updated on: Jun 05, 2025 | 2:59 PM

Share

ಧಾರಾವಾಹಿ ಟಿಆರ್​ಪಿ (Serial TRP) ವಾರದಿಂದ ವಾರ ಬದಲಾವಣೆ ಕಾಣುತ್ತಾ ಇರುತ್ತದೆ. ಯಾವ ಧಾರಾವಾಹಿ ಯಾವ ಸ್ಥಾನ ಪಡೆದುಕೊಂಡಿದೆ ಎಂಬ ಕುತೂಹಲ ವೀಕ್ಷಕರಲ್ಲಿ ಇರುತ್ತದೆ. ಅಂತೆಯೇ 2025ನೇ ವರ್ಷದ 21ನೇ ವಾರದ ಟಿಆರ್​ಪಿ ಹೊರ ಬಿದ್ದಿದೆ. ಈ ಪೈಕಿ ಜೀ ಕನ್ನಡದ ‘ಅಣ್ಣಯ್ಯ’ ಧಾರಾವಾಹಿಯು ಟಿಆರ್​ಪಿಯಲ್ಲಿ ಮೊದಲ ಸ್ಥಾನವನ್ನು ಅಲಂಕರಿಸಿದೆ. ಉಳಿದಂತೆ ಟಾಪ್ ಐದು ಧಾರಾವಾಹಿಗಳ ವಿವರ ಇಲ್ಲಿದೆ.

ಇಷ್ಟು ವಾರಗಳ ಕಾಲ ಐಪಿಎಲ್ ಪಂದ್ಯಗಳು ಇದ್ದ ಕಾರಣ ಎಲ್ಲಾ ಧಾರಾವಾಹಿಗಳ ಟಿಆರ್​ಪಿಯಲ್ಲಿ ಕುಸಿತ ಕಂಡಿತ್ತು. ಆದರೆ, ಮುಂಬರುವ ದಿನಗಳಲ್ಲಿ ಎಲ್ಲಾ ಧಾರಾವಾಹಿಗಳು ಮೊದಲಿನ ಸಂಖ್ಯೆಗೆ ತಲುಪೋ ಸಾಧ್ಯತೆ ಇದೆ. ಹಾಗಾದರೆ 21ನೇ ವಾರದಲ್ಲಿ ಯಾವ ಧಾರಾವಾಹಿ ಯಾವ ಸ್ಥಾನದಲ್ಲಿ ಇತ್ತು ಎಂಬುದರ ವಿವರ ಇಲ್ಲಿದೆ.

‘ಅಣ್ಣಯ್ಯ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇದೆ. ನಿಶಾ ರವಿಕೃಷ್ಣನ್ ಅಭಿನಯದ ಈ ಧಾರಾವಾಹಿ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆದಿದೆ. ಕಥಾ ನಾಯಕಿ ಹಾಗೂ ನಾಯಕಿ ನಡುವಿನ ಮುದ್ದಾದ ರೊಮ್ಯಾನ್ಸ್, ಪೆದ್ದು ಪೆದ್ದಾಗಿ ನಡೆದುಕೊಳ್ಳೋದು ಪ್ರೇಕ್ಷಕರಿಗೆ ಇಷ್ಟ ಆಗುತ್ತಿದೆ. ಎರಡನೇ ಸ್ಥಾನದಲ್ಲಿ ಈ ಬಾರಿ ಎರಡು ಧಾರಾವಾಹಿಗಳು ಸ್ಥಾನ ಪಡೆದಿವೆ ಅನ್ನೋದು ವಿಶೇಷ. ಹೌದು, ಈ ಬಾರಿ ಎರಡನೇ ಸ್ಥಾನದಲ್ಲಿ ‘ನಾನಿನ್ನ ಬಿಡಲಾರೆ’ ಹಾಗೂ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ.

ಇದನ್ನೂ ಓದಿ
Image
ಸೋಶಿಯಲ್ ಮೀಡಿಯಾಗೆ ಶೋಭಾ ಶೆಟ್ಟಿ ಗುಡ್​ ಬೈ; ಖಿನ್ನತೆಗೊಳಗಾದ್ರಾ ನಟಿ?
Image
‘ಅಭಿಮಾನ, ಪ್ರೀತಿ ಕುಟುಂಬದ ನೋವಿಗೆ ಕಾರಣವಾಗಬಾರದು’; ಶಿವಣ್ಣ ಭಾವುಕ ಪೋಸ್ಟ್
Image
‘ಥಗ್ ಲೈಫ್’ ಸಿನಿಮಾ ರಿಲೀಸ್ ವೇಳೆ ಬೆಂಗಳೂರಿಗರ ನೆನೆದು ಮರುಗಿದ ಕಮಲ್ ಹಾಸನ್
Image
ತಮಿಳಿಗರಿಗೆ ಕಮಲ್ ಅಭಿಮಾನಿಗಳಿಂದ ಓಪನ್ ಪತ್ರ; ಎಚ್ಚರಿಕೆಯ ಸಂದೇಶ ರವಾನೆ

ಇದನ್ನೂ ಓದಿ: ‘ಕರ್ಣ’ ಧಾರಾವಾಹಿ ಆರಂಭಕ್ಕೆ ದಿನಾಂಕ ನಿಗದಿ; ಇಲ್ಲಿದೆ ಮಾಹಿತಿ

ಮೂರನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ. ಈ ಧಾರಾವಾಹಿ ಕಳೆದ ಹಲವು ತಿಂಗಳಿಂದ ಟಾಪ್ ಐದರಲ್ಲಿ ಸ್ಥಾನ ಪಡೆದುಕೊಳ್ಳುತ್ತಾ ಬರುತ್ತಿದ್ದು, ಸ್ಥಿರತೆ ಕಾಯ್ದುಕೊಂಡಿದೆ. ನಾಲ್ಕನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಹಾಗೂ ಐದನೇ ಸ್ಥಾನದಲ್ಲಿ ‘ಬ್ರಹ್ಮಗಂಟು’ ಧಾರಾವಾಹಿ ಇದೆ. ‘ಸೀತಾ ರಾಮ’ ವಿದಾಯದ ಸಂಚಿಕೆ ಉತ್ತಮ ಟಿಆರ್​ಪಿ ಪಡೆದುಕೊಂಡಿದೆ. ನಗರ ಭಾಗದಲ್ಲಿ ಈ ಧಾರಾವಾಹಿಗೆ 3.2 ಟಿಆರ್​ಪಿ ಸಿಕ್ಕಿದೆ. ಈ ಧಾರಾವಾಹಿಯು ಇತ್ತೀಚೆಗೆ ಪೂರ್ಣಗೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?