AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿವಿಕ್ರಂ ಹಾಗೂ ಭವ್ಯಾ ಗೌಡ ಸಂಬಂಧ ಈಗ ಹೇಗಿದೆ? ಇಲ್ಲಿದೆ ಉತ್ತರ  

ಬಿಗ್ ಬಾಸ್ ಕನ್ನಡದಲ್ಲಿ ತ್ರಿವಿಕ್ರಂ ಮತ್ತು ಭವ್ಯಾ ಗೌಡರ ನಡುವೆ ಆಪ್ತ ಸಂಬಂಧ ಬೆಳೆಯಿತು. ಬಿಗ್ ಬಾಸ್ ಮನೆಯಿಂದ ಹೊರಬಂದ ನಂತರ ಇಬ್ಬರೂ ತಮ್ಮ ವೃತ್ತಿಪರ ಜೀವನದಲ್ಲಿ ಬ್ಯುಸಿಯಾಗಿದ್ದಾರೆ. ಅವರ ಸಂಬಂಧ ಗೆಳೆತನದ ಮಟ್ಟದಲ್ಲೇ ಮುಂದುವರಿದಿದೆ ಎಂದು ತಿಳಿದುಬಂದಿದೆ. ತ್ರಿವಿಕ್ರಂ 'ಮುದ್ದು ಸೊಸೆ' ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ ಮತ್ತು ಭವ್ಯಾ ಗೌಡ 'ಕರ್ಣ' ಧಾರಾವಾಹಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ತ್ರಿವಿಕ್ರಂ ಹಾಗೂ ಭವ್ಯಾ ಗೌಡ ಸಂಬಂಧ ಈಗ ಹೇಗಿದೆ? ಇಲ್ಲಿದೆ ಉತ್ತರ  
ತ್ರಿವಿಕ್ರಂ-ಭವ್ಯಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Apr 17, 2025 | 7:36 AM

Share

ತ್ರಿವಿಕ್ರಂ ಅವರ ನಟನೆಯ ‘ಮುದ್ದು ಸೊಸೆ’ ಧಾರಾವಾಹಿ (Muddu Sose Serial) ಇತ್ತೀಚೆಗೆ ಪ್ರಸಾರ ಆರಂಭಿಸಿದೆ. ಈ ಧಾರಾವಾಹಿ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆಯುತ್ತಿದೆ. ಪ್ರತಿಮಾ ಠಾಕೂರ್ ಅವರು ಈ ಧಾರಾವಾಹಿಗೆ ನಾಯಕಿ. ‘ಬಿಗ್ ಬಾಸ್’ನಿಂದ ಸಿಕ್ಕ ಖ್ಯಾತಿಯಿಂದ ಅವರಿಗೆ ಈ ಆಫರ್ ದೊರೆತಿದೆ ಎಂದೇ ಹೇಳಬಹುದು. ಇನ್ನು, ಬಿಗ್ ಬಾಸ್​ನಲ್ಲಿ ಅವರ ಆಪ್ತ ಎನಿಸಿಕೊಂಡಿದ್ದ ಭವ್ಯಾ ಗೌಡ ಕೂಡ ಹೊಸ ಧಾರಾವಾಹಿಯಲ್ಲಿ ನಟಿಸಲು ರೆಡಿ ಆಗಿದ್ದಾರೆ. ಹಾಗಾದರೆ, ಭವ್ಯಾ ಗೌಡ ತ್ರಿವಿಕ್ರಂ ಸಂಬಂಧ ಹೇಗಿದೆ? ಆ ಬಗ್ಗೆ ಇಲ್ಲಿದೆ ವಿವರ.

ಬಿಗ್ ಬಾಸ್ ಮನೆಯಲ್ಲಿ ತ್ರಿವಿಕ್ರಂ ಹಾಗೂ ಭವ್ಯಾ ಗೌಡ ಕ್ಲೋಸ್ ಆಗಿದ್ದರು. ಇಬ್ಬರ ಮಧ್ಯೆ ಸಾಕಷ್ಟು ಬಾಂಧವ್ಯ ಬೆಳೆಯಿತು. ತ್ರಿವಿಕ್ರಂ ಅವರು ಪರೋಕ್ಷವಾಗಿ ಪ್ರಪೋಸ್ ಕೂಡ ಮಾಡಿದ್ದರು. ಆದರೆ, ಭವ್ಯಾ ಗೌಡ ಕಡೆಯಿಂದ ಇದಕ್ಕೆ ನೇರವಾಗಿ ಉತ್ತರ ಸಿಕ್ಕಿರಲಿಲ್ಲ. ದೊಡ್ಮನೆಯಿಂದ ಬಂದ ಬಳಿಕ ಇವರ ಸಂಬಂಧ ಹೇಗಿದೆ? ಆ ಬಗ್ಗೆ ತಿಳಿದುಕೊಳ್ಳೋಣ.

ಬಿಗ್ ಬಾಸ್ ಮುಗಿದ ಬಳಿಕ ತ್ರಿವಿಕ್ರಂ ಹಾಗೂ ಭವ್ಯಾ ಗೌಡ ಈವರೆಗೆ ಹೆಚ್ಚು ಎಂದರೆ ಎರಡು ಬಾರಿ ಮಾತ್ರ ಭೇಟಿ ಆಗಿದ್ದಾರಂತೆ. ಇಬ್ಬರ ಮಧ್ಯೆ ಒಳ್ಳೆಯ ಗೆಳೆತನ ಇದೆ. ಆದರೆ, ಇಬ್ಬರೂ ಅವರದ್ದೇ ಆದ ಕೆಲಸಗಳಲ್ಲಿ ತೊಡಗಿಕೊಂಡಿರುವುದರಿಂದ ಭೇಟಿ ಆಗಲು ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ. ಗೆಳೆತನ ಮುಂದುವರಿದರೂ ಅದಕ್ಕೆ ಬೇರೆ ಅರ್ಥ ಇಲ್ಲ.

ಇದನ್ನೂ ಓದಿ
Image
ಪೀರಿಯಡ್ಸ್ ಬಗ್ಗೆ ಓಪನ್​ ಆಗಿ ಮಾತನಾಡೋದು ನಮಗೆ ಈಗಲೂ ನಾಚಿಕೆಯ ವಿಷಯ; ಸಮಂತಾ
Image
ಚಿತ್ರರಂಗದಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ಪವನ್ ಕಲ್ಯಾಣ್
Image
ಮತ್ತೆ ಅರೆಸ್ಟ್ ಆದ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್; ಕಾರಣ ಏನು?
Image
ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಪತ್ನಿ

ಇದನ್ನೂ ಓದಿ: ಬಿಗ್ ಬಾಸ್ ಶೋನಿಂದ ಸಿಕ್ಕ ಸಂಭಾವನೆ ಬಗ್ಗೆ ನನಗೆ ಬೇಸರ ಇಲ್ಲ: ಭವ್ಯಾ ಗೌಡ

ತ್ರಿವಿಕ್ರಂ ಅವರು ಬಿಗ್ ಬಾಸ್ ಮುಗಿದ ಬಳಿಕ ಸಿಸಿಎಲ್​ನಲ್ಲಿ ಬ್ಯುಸಿ ಆದರು. ಆ ಬಳಿಕ ಅವರಿಗೆ ‘ಮುದ್ದು ಸೊಸೆ’ ಧಾರಾವಾಹಿಯಿಂದ ಆಫರ್ ಬಂತು. ಅವರು ಇದರಲ್ಲಿ ಭದ್ರೇ ಗೌಡ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಇನ್ನು, ಭವ್ಯಾ ಗೌಡ ಅವರಿಗೆ ದೊಡ್ಡ ಆಫರ್ ಸಿಕ್ಕಿದೆ. ಜೀ ಕನ್ನಡದ ‘ಕರ್ಣ’ ಹೆಸರಿನ ಧಾರಾವಾಹಿಯಲ್ಲಿ ಅವರು ನಟಿಸುತ್ತಿದ್ದಾರೆ. ಇದರ ಪ್ರೋಮೋ ಇನ್ನಷ್ಟೇ ರಿಲೀಸ್ ಆಗಬೇಕಿದೆ. ಈ ಧಾರಾವಾಹಿಗೆ ಕಿರಣ್ ರಾಜ್ ಹೀರೋ. ನಮ್ರತಾ ಗೌಡ ಅವರು ಕೂಡ ಈ ಧಾರಾವಾಹಿಯಲ್ಲಿ ನಟಿಸುತ್ತಿರುವ ಬಗ್ಗೆ ವರದಿ ಆಗಿದೆ. ಈಗಲೂ ತ್ರಿವಿಕ್ರಂ ಹಾಗೂ ಭವ್ಯಾ ಮದುವೆ ಆಗಬೇಕು ಎಂದು ಬಯಸುವ ಅನೇಕರು ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!