AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿವಿಕ್ರಮ್​ನ ಹೊರಗೆ ಕಳಿಸಿ ಮತ್ತೆ ವಾಪಸ್ ಕರೆಸಿದ್ದು ಯಾಕೆ? ಕಾರಣ ತಿಳಿಸಿದ ಸುದೀಪ್

ಈ ವಾರ ಬಿಗ್ ಬಾಸ್ ಮನೆಯಿಂದ ತ್ರಿವಿಕ್ರಮ್​ ಅವರು ಎಲಿಮಿನೇಟ್ ಆದರು ಎಂದು ಭಾನುವಾರದ ಎಪಿಸೋಡ್​ನಲ್ಲಿ ತೋರಿಸಲಾಗಿತ್ತು. ಆದರೆ ಅವರು ಎಲಿಮಿನೇಟ್​ ಆಗಿಲ್ಲ. ಸೋಮವಾರದ ಸಂಚಿಕೆಯಲ್ಲಿ ಅವರು ವಾಪಸ್ ಬಿಗ್ ಬಾಸ್ ಮನೆಗೆ ಬಂದಿದ್ದಾರೆ. ಈ ವಿಷಯವನ್ನು ಸ್ವತಃ ಸುದೀಪ್ ಅವರು ಘೋಷಿಸಿದಾಗಲೇ ದೊಡ್ಮನೆ ಮಂದಿಗೆ ಅಸಲಿ ವಿಷಯ ಗೊತ್ತಾಯಿತು.

ತ್ರಿವಿಕ್ರಮ್​ನ ಹೊರಗೆ ಕಳಿಸಿ ಮತ್ತೆ ವಾಪಸ್ ಕರೆಸಿದ್ದು ಯಾಕೆ? ಕಾರಣ ತಿಳಿಸಿದ ಸುದೀಪ್
Trivikram, Bhavya Gowda
ಮದನ್​ ಕುಮಾರ್​
|

Updated on: Dec 23, 2024 | 10:12 PM

Share

ತ್ರಿವಿಕ್ರಮ್ ಅವರು ಕಳೆದ ವಾರ ತಮ್ಮನ್ನು ತಾವೇ ನಾಮಿನೇಟ್ ಮಾಡಿಕೊಂಡಿದ್ದರು. ಅವರ ಆ ನಿರ್ಧಾರಕ್ಕೆ ಅನೇಕರು ಅಚ್ಚರಿ ವ್ಯಕ್ತಪಡಿಸಿದ್ದರು. ಅದಕ್ಕಿಂತಲೂ ಹೆಚ್ಚು ಅಚ್ಚರಿಯ ವಿಷಯ ಏನು ಎಂದರೆ, ಭಾನುವಾರ (ಡಿಸೆಂಬರ್​ 22) ತ್ರಿವಿಕ್ರಮ್​ ಎಲಿಮಿನೇಟ್ ಆಗಿದ್ದಾರೆ ಎಂದು ಕಿಚ್ಚ ಸುದೀಪ್ ತಿಳಿಸಿದರು. ಆಗ ಬಹುತೇಕರಿಗೆ ಶಾಕ್ ಆಯಿತು. ಆದರೆ ಸೋಮವಾರ (ಡಿ.23) ತ್ರಿವಿಕ್ರಮ್ ವಾಪಸ್ ಬಂದಿದ್ದಾರೆ. ಅವರನ್ನು ಎಲಿಮಿನೇಟ್​ ಅಂತ ಹೊರಗೆ ಕಳಿಸಿ ಮತ್ತೆ ಒಳಗೆ ಕರೆದುಕೊಂಡಿದ್ದು ಯಾಕೆ ಎಂಬುದನ್ನು ಕೂಡ ಸುದೀಪ್ ವಿವರಿಸಿದರು. ‘ತ್ರಿವಿಕ್ರಮ್​ಗೆ ಸ್ವಲ್ಪ ಬಿಸಿ ಮುಟ್ಟಿಸಬೇಕು ಎಂಬ ಕಾರಣಕ್ಕೆ ಈ ರೀತಿ ಮಾಡಿದ್ವಿ. ಈ ವಾರ ಓಟಿಂಗ್ ಲೈನ್ಸ್ ಓಪನ್ ಆಗಿರಲಿಲ್ಲ’ ಎಂದು ಸುದೀಪ್ ಹೇಳಿದರು.

ದೊಡ್ಮನೆಯಲ್ಲಿ ತ್ರಿವಿಕ್ರಮ್ ಅವರು ಸ್ಟ್ರಾಂಗ್ ಸ್ಪರ್ಧಿ ಎಂಬುದು ನಿಜ. ಆದರೆ ಅವರಿಗೆ ಓವರ್​ ಕಾನ್ಫಿಡೆನ್ಸ್ ಕೂಡ ಇದೆ. ಅದೇ ಕಾರಣಕ್ಕೆ ಅವರು ತಮ್ಮನ್ನು ತಾವು ನಾಮಿನೇಟ್ ಮಾಡಿಕೊಂಡಿದ್ದರು. ‘ಸೇವ್ ಆಗುತ್ತೇನೆ ಎಂಬ ಕಾನ್ಫಿಡೆನ್ಸ್ ನಿಮಗೆ ಇದೆಯಾ’ ಎಂದು ಸುದೀಪ್ ಅವರು ಪ್ರಶ್ನೆ ಮಾಡಿದ್ದರು. ಈಗ ಅವರು ಮತ್ತೆ ವಾಪಸ್ ಬಂದಿದ್ದಾರೆ. ಅವರ ಆಟ ಹೇಗಿರಲಿದೆ ಎಂಬುದನ್ನು ನೋಡಬೇಕಿದೆ.

ತ್ರಿವಿಕ್ರಮ್ ಮತ್ತು ಭವ್ಯಾ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಕ್ಲೋಸ್ ಆಗಿದ್ದಾರೆ. ತ್ರಿವಿಕ್ರಮ್ ಎಲಿಮಿನೇಟ್ ಆಗುತ್ತಿದ್ದಾರೆ ಎಂದು ಸುದೀಪ್ ಘೋಷಿಸಿದ್ದಾಗ ಭವ್ಯಾ ಸಿಕ್ಕಾಪಟ್ಟೆ ಅತ್ತಿದ್ದರು. ಈಗ ತ್ರಿವಿಕ್ರಮ್ ವಾಪಸ್ ಬಂದಿರುವುದು ಭವ್ಯಾ ಅವರಿಗೆ ಖುಷಿ ಆಗಿದೆ. ಇನ್ನು, ಬಿಗ್ ಬಾಸ್ ಆಟದಲ್ಲಿ ಉಳಿದಿರುವುದು ಕೆಲವೇ ದಿನಗಳು ಮಾತ್ರ. ಹಾಗಾಗಿ ಎಲ್ಲರೂ ವೈಯಕ್ತಿಕ ಆಟದ ಕಡೆಗೆ ಹೆಚ್ಚು ಗಮನ ನೀಡಬೇಕಿದೆ.

ಇದನ್ನೂ ಓದಿ: ಮ್ಯಾಕ್ಸ್ ಟ್ರೇಲರ್: ರಗಡ್ ಲುಕ್​ನಲ್ಲಿ ಮಾಸ್ ಆಗಿ ಕಾಣಿಸಿಕೊಂಡ ಕಿಚ್ಚ ಸುದೀಪ್

ಭವ್ಯಾ ಗೌಡ ಅವರು ಈ ವಾರ ಕ್ಯಾಪ್ಟನ್ ಆಗಿದ್ದಾರೆ. ಹಾಗಾಗಿ ಅವರು ಮುಂದಿನ ವಾರಕ್ಕೆ ಬರುವುದು ಖಚಿತ. ತ್ರಿವಿಕ್ರಮ್ ಜೊತೆ ಹೆಚ್ಚು ಕಾಲ ಕಳೆದರೆ ಭವ್ಯಾ ಗೌಡ ಆಟಕ್ಕೆ ನಂತರದಲ್ಲಿ ತೊಂದರೆ ಆಗಬಹುದು. ತ್ರಿವಿಕ್ರಮ್ ಅವರು ಕೂಡ ತಮ್ಮ ವೈಯಕ್ತಿಕ ಆಟದ ಕಡೆಗೆ ಹೆಚ್ಚು ಗಮನ ನೀಡಬೇಕಿದೆ. ಉಗ್ರಂ ಮಂಜು ಮತ್ತು ಗೌತಮಿ ಜಾದವ್ ಅವರಿಗೂ ಇದೇ ಮಾತು ಅನ್ವಯ ಆಗಲಿದೆ. ಬಿಗ್ ಬಾಸ್ ಮನೆಯಲ್ಲಿ 85 ದಿನಗಳು ಕಳೆದಿವೆ. 12 ವಾರಗಳ ಕಳೆದಿದ್ದು, ಈಗ ಆಟದ ತೀವ್ರತೆ ಹೆಚ್ಚುತ್ತಿದೆ. ಮುಂದಿನ ವಾರ ಖಂಡಿತವಾಗಿ ಎಲಿಮಿನೇಷನ್ ಇರಲಿದೆ. ಡಬಲ್ ಎಲಿಮಿನೇಷನ್​ ಮತ್ತು ಮಿಡ್​ ವೀಕ್ ಎಲಿಮಿನೇಷನ್​ನ ಶಾಕ್ ಕೂಡ ಎದುರಾಗಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ