AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾರ್ಥಕ್ಕಾಗಿ ನನ್ನನ್ನು ಇಷ್ಟು ದಿನ ಉಪಯೋಗಿಸಿಕೊಂಡೆ: ಭವ್ಯಾಗೆ ತ್ರಿವಿಕ್ರಮ್ ನೇರಮಾತು

ಭವ್ಯಾ ಗೌಡ ಅವರು ತ್ರಿವಿಕ್ರಮ್ ಜೊತೆ ಎಷ್ಟು ಕ್ಲೋಸ್ ಆಗಿದ್ದಾರೆ ಎಂಬುದು ವೀಕ್ಷಕರಿಗೆ ಚೆನ್ನಾಗಿ ಗೊತ್ತಿದೆ. ಎಷ್ಟೋ ಬಾರಿ ಅವರು ಸ್ನೇಹ ಮುರಿದುಕೊಳ್ಳಲು ಪ್ರಯತ್ನಿಸಿದರೂ ಸಹ ಅದು ಸಾಧ್ಯವಾಗಿಲ್ಲ. ಬಿಗ್ ಬಾಸ್ ಮನೆಯಲ್ಲಿ ಅವರಿಬ್ಬರು ಒಬ್ಬರಿಗೊಬ್ಬರು ಬೆಂಬಲವಾಗಿ ನಿಂತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಅವರು ಜಗಳ ಮಾಡಲು ಆರಂಭಿಸಿದರು.

ಸ್ವಾರ್ಥಕ್ಕಾಗಿ ನನ್ನನ್ನು ಇಷ್ಟು ದಿನ ಉಪಯೋಗಿಸಿಕೊಂಡೆ: ಭವ್ಯಾಗೆ ತ್ರಿವಿಕ್ರಮ್ ನೇರಮಾತು
Trivikram
ಮದನ್​ ಕುಮಾರ್​
|

Updated on: Jan 14, 2025 | 10:06 PM

Share

‘ಬಿಗ್ ಬಾಸ್ ಕನ್ನಡ ಸೀಸನ್​ 11’ ಆಟದಲ್ಲಿ ಸ್ನೇಹ ಹೆಚ್ಚು ದಿನ ನಡೆಯುವುದಿಲ್ಲ. ಆದರೂ ಕೂಡ ಕೆಲವರು ಸ್ನೇಹದ ಬಲೆಗೆ ಬೀಳುತ್ತಾರೆ. ಭವ್ಯಾ ಗೌಡ ಹಾಗೂ ತ್ರಿವಿಕ್ರಮ್ ಅವರು ಬಹಳ ಆಪ್ತವಾಗಿ ಕಾಲ ಕಳೆದಿದ್ದಾರೆ. ಆದರೆ ಆಟದ ರೋಚಕತೆ ಜಾಸ್ತಿ ಆದಂತೆಲ್ಲ ಫ್ರೆಂಡ್​ಶಿಪ್ ನಿಭಾಯಿಸುವುದು ಕಷ್ಟ ಆಗುತ್ತಿದೆ. ಇಷ್ಟು ದಿನ ಹಾಕಿಕೊಂಡಿದ್ದ ಮುಖವಾಡ ಈಗ ಕಳಚಿ ಬೀಳುತ್ತಿದೆ. ತ್ರಿವಿಕ್ರಮ್ ಅವರು ನೇರವಾಗಿ ಭವ್ಯಾಗೆ ಕೆಲವು ಖಾರದ ಮಾತುಗಳನ್ನು ಹೇಳಿದ್ದಾರೆ.

ಮಿಡ್ ಮೀಕ್ ಎಲಿಮಿನೇಷನ್ ನಡೆಯುವುದು ಖಚಿತ ಎಂಬ ಕಾರಣದಿಂದ ಈ ವಾರ ಎಲ್ಲ ಸ್ಪರ್ಧಿಗಳಿಗೆ ಟೆನ್ಷನ್ ಹೆಚ್ಚಾಗಿದೆ. ಕ್ಯಾಪ್ಟನ್ ಹನುಮಂತ ಮಾತ್ರ ಕೂಲ್ ಆಗಿ ಇದ್ದಾರೆ. ಭವ್ಯಾ ಗೌಡ, ಮೋಕ್ಷಿತಾ, ಧನರಾಜ್, ಗೌತಮಿ ಜಾದವ್, ರಜತ್, ಉಗ್ರಂ ಮಂಜು, ತ್ರಿವಿಕ್ರಮ್ ಅವರು ಮಿಡ್ ಮೀಕ್ ಎಲಿಮಿನೇಷನ್​ನಿಂದ ಪಾರಾಗಲು ಹಣಾಹಣಿ ನಡೆಸುತ್ತಿದ್ದಾರೆ.

ಬಹುತೇಕ ಟಾಸ್ಕ್​ಗಳಲ್ಲಿ ಭವ್ಯಾ ಗೌಡ ಅವರು ಮುನ್ನಡೆ ಸಾಧಿಸಿದ್ದಾರೆ. ಇಷ್ಟು ದಿನಗಳ ಕಾಲ ಭವ್ಯಾಗೆ ಸಲಗೆ ನೀಡಿ, ಧೈರ್ಯ ತುಂಬುತ್ತಿದ್ದ ತ್ರಿವಿಕ್ರಮ್ ಅವರು ಹಿಂದೆ ಉಳಿದುಕೊಂಡಿದ್ದಾರೆ. ಟಾಸ್ಕ್​ನಲ್ಲಿ ತ್ರಿವಿಕ್ರಮ್​ಗೆ ಹಿನ್ನಡೆ ಆದಾಗ ಭವ್ಯಾ ಖುಷಿಪಟ್ಟರು ಎಂಬುದು ತ್ರಿವಿಕ್ರಮ್ ಅಭಿಪ್ರಾಯ. ಇದೇ ವಿಚಾರವನ್ನು ಇಟ್ಟುಕೊಂಡು ಭವ್ಯಾ ಎದುರು ಅವರು ನಿಷ್ಟುರವಾಗಿ ಮಾತನಾಡಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಬಿಟ್ಟರೂ ಸುದೀಪ್ ಬಿಡಲಿಲ್ಲ; ಭವ್ಯಾಗೆ ಸೂಕ್ತ ಶಿಕ್ಷೆ ಕೊಟ್ಟ ಕಿಚ್ಚ

‘ಇಷ್ಟು ದಿನ ನನ್ನನ್ನು ನೀನು ನಿನ್ನ ಸ್ವಾರ್ಥಕ್ಕಾಗಿ ಉಪಯೋಗಿಸಿಕೊಂಡೆ’ ಎಂದು ಭವ್ಯಾಗೆ ತ್ರಿವಿಕ್ರಮ್ ಹೇಳಿದ್ದಾರೆ. ಈ ಮಾತು ಕೇಳಿಸಿಕೊಂಡು ಭವ್ಯಾಗೆ ಬಹಳ ಬೇಸರ ಆಗಿದೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ಈ ವಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ವಾರದ ಮಧ್ಯದಲ್ಲಿ ಒಬ್ಬರು ಹಾಗೂ ವಾರಾಂತ್ಯದಲ್ಲಿ ಇನ್ನೊಬ್ಬರು ಔಟ್ ಆಗಲಿದ್ದಾರೆ. ಹನುಮಂತ ಅವರು ಫಿನಾಲೆ ಟಿಕೆಟ್ ಪಡೆದು ಮುನ್ನಡೆ ಸಾಧಿಸಿದ್ದಾರೆ. ಅವರ ಚಾಲಾಕಿತನಕ್ಕೆ ಎಲ್ಲರೂ ಬೆರಗಾಗಿದ್ದಾರೆ. ಸುದೀಪ್ ಕೂಡ ಹನುಮಂತನ ಆಟಕ್ಕೆ ಭೇಷ್ ಎಂದಿದ್ದಾರೆ. ಕಳೆದ ವಾರ ಚೈತ್ರಾ ಕುಂದಾಪುರ ಎಮಿಲಿನೇಟ್ ಆದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್