AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಒಪ್ಪಂದದ ಮೇಲೆ ಅನುಮಾನ; ಸ್ಪರ್ಧಿಗಳ ಹೆಸರು ಮೊದಲೇ ಗೊತ್ತಿತ್ತು ಎಂದ ತ್ರಿವಿಕ್ರಮ್

ಬಿಗ್ ಬಾಸ್ ಕಾರ್ಯಕ್ರಮಕ್ಕೆ ಒಂದಷ್ಟು ನಿಯಮಗಳು ಇವೆ. ಹೊಸ ಸೀಸನ್​ ಆರಂಭ ಆಗುವುದಕ್ಕೂ ಮುನ್ನ ಸ್ಪರ್ಧಿಗಳಿಗೆ ಇನ್ನುಳಿದ ಸ್ಪರ್ಧಿಗಳ ಪೂರ್ತಿ ಲಿಸ್ಟ್ ತಿಳಿದಿರಲ್ಲ ಎಂಬುದು ಎಲ್ಲರಿಗೂ ಇರುವ ನಂಬಿಕೆ. ಆದರೆ ಈ ಬಾರಿ ಆ ನಂಬಿಕೆಗೆ ಪೆಟ್ಟು ಬಂದಂತಿದೆ. ತ್ರಿವಿಕ್ರಮ್ ಅವರು ತಮಗೆ ಸ್ಪರ್ಧಿಗಳ ಲಿಸ್ಟ್ ಮೊದಲೇ ಗೊತ್ತಿತ್ತು ಎನ್ನುವ ಮೂಲಕ ವಿವಾದ ಸೃಷ್ಟಿ ಮಾಡಿದ್ದಾರೆ.

ಬಿಗ್ ಬಾಸ್ ಒಪ್ಪಂದದ ಮೇಲೆ ಅನುಮಾನ; ಸ್ಪರ್ಧಿಗಳ ಹೆಸರು ಮೊದಲೇ ಗೊತ್ತಿತ್ತು ಎಂದ ತ್ರಿವಿಕ್ರಮ್
ತ್ರಿವಿಕ್ರಮ್
ಮದನ್​ ಕುಮಾರ್​
|

Updated on: Oct 28, 2024 | 10:25 PM

Share

ಕಿರುತೆರೆ ನಟಿ ಮೋಕ್ಷಿತಾ ಅವರು ಇಷ್ಟು ದಿನ ‘ಬಿಗ್ ಬಾಸ್​ ಕನ್ನಡ 11’ ಶೋನಲ್ಲಿ ಸೈಲೆಂಟ್ ಆಗಿದ್ದರು. ಈ ವಾರ ಅವರು ಎಲಿಮಿನೇಷನ್​ನಿಂದ ಜಸ್ಟ್​ ಪಾರಾಗಿದ್ದಾರೆ. ತಾವು ಸೇಫ್ ಆಗಿರುವುದು ತಿಳಿದ ಬಳಿಕ ಅವರ ಆಟದ ವರಸೆಯೇ ಬದಲಾಗಿದೆ. ಈವರೆಗೆ ತಮ್ಮ ಬಗ್ಗೆ ಕೆಲವರು ಆಡಿದ ಮಾತುಗಳನ್ನು ಅವರು ನಿರ್ಲಕ್ಷಿಸಿದ್ದರು. ಆದರೆ ಈಗ ಆ ಎಲ್ಲ ಮಾತುಗಳಿಗೆ ತಿರುಗೇಟು ನೀಡಲು ಶುರು ಮಾಡಿದ್ದಾರೆ. ‘ಇವರೆಲ್ಲ 10 ವಾರ ಮಾತ್ರ ಇರೋದು’ ಎಂದು ಹೇಳಿದ್ದ ತ್ರಿವಿಕ್ರಮ್​ಗೆ ಮೋಕ್ಷಿತಾ ಕ್ಲಾಸ್ ತೆಗೆದುಕೊಂಡಿದ್ದಾರೆ. ಈ ವೇಳೆ ಬೇರೆ ವಿಷಯಗಳು ಕೂಡ ಬಹಿರಂಗ ಆಗಿವೆ.

ಮೋಕ್ಷಿತಾ ಮುಂತಾದವರು ಕೇವಲ 10 ವಾರ ಇರುತ್ತಾರೆ ಎಂದು ತ್ರಿವಿಕ್ರಮ್ ಅವರು ಉಗ್ರಂ ಮಂಜು ಬಳಿ ಹೇಳಿದ್ದರು. ಆ ವಿಷಯ ಮೋಕ್ಷಿತಾ ಅವರ ಕಿವಿಗೆ ಬಿದ್ದಿತ್ತು. ಇಷ್ಟು ದಿನ ಸುಮ್ಮನಿದ್ದ ಅವರು ಈಗ ಎಲಿಮಿನೇಷನ್​ನಿಂದ ಪಾರಾದ ಬಳಿಕ ಅದೇ ವಿಷಯ ಇಟ್ಟುಕೊಂಡು ಜಗಳ ಆರಂಭಿಸಿದ್ದಾರೆ. ಆಗ ತ್ರಿವಿಕ್ರಮ್ ಅವರ ಇನ್ನೊಂದು ಹೇಳಿಕೆ ಕೂಡ ಹಲ್​ಚಲ್​ ಎಬ್ಬಿಸಿತು.

‘ಈ ಬಾರಿ ಯಾರೆಲ್ಲ ಬಿಗ್ ಬಾಸ್​ಗೆ ಬರುತ್ತಾರೆ ಎಂಬುದು ಗೊತ್ತಾಗ ನಂತರವೇ ನಾನು ಇಲ್ಲಿಗೆ ಬರಲು ಒಪ್ಪಿದ್ದು’ ಎಂಬರ್ಥದಲ್ಲಿ ತ್ರಿವಿಕ್ರಮ್ ಅವರು ಮಾತನಾಡಿದ್ದರು. ಆ ವಿಚಾರ ಅನೇಕರಿಗೆ ಬೇಸರ ಮೂಡಿಸಿದೆ. ‘ಲಿಸ್ಟ್ ನಿಮಗೆ ಮೊದಲೇ ಗೊತ್ತಿತ್ತಾ’ ಎಂದು ಮೋಕ್ಷಿತಾ ಹಾಗೂ ಗೌತಮಿ ಅವರು ಮರುಪ್ರಶ್ನೆ ಮಾಡಿದ್ದರು. ‘ನಾನು ತಿಳಿದುಕೊಂಡೇ ಬಂದಿದ್ದು’ ಎಂದು ತ್ರಿವಿಕ್ರಮ್ ಹೇಳಿದ್ದಾರೆ. ‘ಹಾಗಾದ್ರೆ ಲಿಸ್ಟ್ ಮೊದಲೇ ಕೊಡ್ತೀರಾ ಬಿಗ್ ಬಾಸ್?’ ಎಂದು ಬಿಗ್ ಬಾಸ್​ಗೆ ಇನ್ನುಳಿದವರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಎಲ್ಲರಿಗೂ ಕಣ್ಣೀರು ಹಾಕಿಸಿದ ಬಿಗ್ ಬಾಸ್; ಒಬ್ಬೊಬ್ಬರ ನೋವು ಒಂದೊಂದು ರೀತಿ

ತ್ರಿವಿಕ್ರಮ್ ಹೇಳಿದ ಈ ಮಾತುಗಳಿಂದಾಗಿ ಬಿಗ್ ಬಾಸ್​ ಮೇಲೆಯೇ ಅನುಮಾನ ಮೂಡುವಂತಾಗಿದೆ. ಹಾಗಾಗಿ ಈ ಮಾತನ್ನು ಬಿಗ್ ಬಾಸ್ ಇಷ್ಟಕ್ಕೇ ಬಿಡುವುದಿಲ್ಲ ಎನಿಸುತ್ತದೆ. ಒಂದು ವೇಳೆ ಈ ವಾರಾಂತ್ಯದ ಸಂಚಿಕೆ ನಡೆಸಿಕೊಡಲು ಸುದೀಪ್ ಬಂದರೆ ಅವರು ಕೂಡ ಈ ವಿಚಾರವನ್ನು ಚರ್ಚಿಸುವ ಸಾಧ್ಯತೆ ಇರುತ್ತದೆ. ತ್ರಿವಿಕ್ರಮ್ ಅವರ ನಡೆ-ನುಡಿ ಕೆಲವರಿಗೆ ಹಿಡಿಸುತ್ತಿಲ್ಲ. ಅತಿಯಾದ ಆತ್ಮಿವಿಶ್ವಾಸದಲ್ಲಿ ಅವರು ವರ್ತಿಸುತ್ತಿದ್ದಾರೆ. ಇದರಿಂದ ಬೇರೆ ಸ್ಪರ್ಧಿಗಳಿಗೆ ಕಿರಿಕಿರಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​