AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬ್ಯಾಂಕ್ ಬ್ಯಾಲೆನ್ಸ್ ನೋಡಿದ್ರೆ..’; ಸುದ್ದಿಗೋಷ್ಠಿಯಲ್ಲಿ ತ್ರಿವಿಕ್ರಂ ಬೇಸರ

ಬಿಗ್ ಬಾಸ್ ರನ್ನರ್ ಅಪ್ ತ್ರಿವಿಕ್ರಂ ಅವರು ತಮ್ಮ ಆರ್ಥಿಕ ಸಂಕಷ್ಟ ಮತ್ತು ಕುಟುಂಬದ ಜವಾಬ್ದಾರಿಗಳ ಬಗ್ಗೆ ತೆರೆದಿಟ್ಟು ಮಾತನಾಡಿದ್ದಾರೆ. ಕೋವಿಡ್ ಸಮಯದಲ್ಲಿ ಎದುರಿಸಿದ ಸವಾಲುಗಳು ಮತ್ತು ತಂದೆಯನ್ನು ಕಳೆದುಕೊಂಡ ನೋವು ಹಂಚಿಕೊಂಡಿದ್ದಾರೆ. ಬಿಗ್ ಬಾಸ್ ಗೆದ್ದಿದ್ದರೆ ಸಿಗುತ್ತಿದ್ದ ಹಣದಿಂದ ಸ್ಥಿರವಾಗಬಹುದಿತ್ತು ಎಂದು ಅವರು ಹೇಳಿದ್ದಾರೆ.

‘ಬ್ಯಾಂಕ್ ಬ್ಯಾಲೆನ್ಸ್ ನೋಡಿದ್ರೆ..’; ಸುದ್ದಿಗೋಷ್ಠಿಯಲ್ಲಿ ತ್ರಿವಿಕ್ರಂ ಬೇಸರ
ತ್ರಿವಿಕ್ರಂ
ರಾಜೇಶ್ ದುಗ್ಗುಮನೆ
|

Updated on: Jan 28, 2025 | 10:48 AM

Share

ಎಲ್ಲಾ ಕಲಾವಿದರ ಬದುಕು ಕಲರ್​​ಫುಲ್ ಆಗಿರುವುದಿಲ್ಲ. ಯಾವ ರೀತಿಯಲ್ಲಿ ಬಣ್ಣ ಬಣ್ಣದ ಫೋಟೋಗಳನ್ನು ಹಾಕಿಕೊಳ್ಳುತ್ತಾರೋ ಆ ರೀತಿಯಲ್ಲಿ ಅವರ ಬದುಕು ಇರುವುದಿಲ್ಲ. ಇದನ್ನು ಕೆಲವರು ಹೇಳಿಕೊಂಡರೆ, ಇನ್ನೂ ಕೆಲವರು ಅದನ್ನು ತೋರಿಸುವ ಕೆಲಸ ಮಾಡುವುದಿಲ್ಲ. ಬಿಗ್ ಬಾಸ್ ರನ್ನರ್​ ಅಪ್ ತ್ರಿವಿಕ್ರಂ ಅವರು ಈ ಬಗ್ಗೆ ಮಾತನಾಡಿದ್ದಾರೆ. ಬಿಗ್ ಬಾಸ್ ವಿನ್ ಆಗಿದ್ದರೆ ಎಷ್ಟು ಸಹಾಯ ಆಗುತ್ತಿತ್ತು ಎಂಬ ಬಗ್ಗೆ ಹೇಳಿಕೊಂಡಿದ್ದಾರೆ.

ತ್ರಿವಿಕ್ರಂ ಅವರು ಕಿರುತೆರೆಯಲ್ಲಿ ನಟಿಸಿದವರು. ಕೊವಿಡ್ ಸಮಯದಲ್ಲಿ ಎಲ್ಲವೂ ಬದಲಾಯಿತು. ಅವರಿಗೆ ಸಿನಿಮಾ ಇರಲಿಲ್ಲ. ಇದರ ಜೊತೆಗೆ ತಂದೆಯನ್ನು ಕೂಡ ಕಳೆದುಕೊಂಡರು. ಅವರು ತಮ್ಮ ಕಷ್ಟದ ಜೀವನದ ಬಗ್ಗೆ ಅವರು ಹೇಳಿಕೊಂಡಿದ್ದಾರೆ. ಬ್ಯಾಂಕ್ ಬ್ಯಾಲೆನ್ಸ್ ಬಗ್ಗೆಯೂ ಬೇಸರ ಹೊರಹಾಕಿದ್ದಾರೆ.

‘ತಂದೆ ಹೋದಾಗ ಮಕ್ಕಳ ಮೇಲೆ ಜವಾಬ್ದಾರಿ ಬರುತ್ತದೆ. ನನ್ನ ಮೇಲೂ ಅದೇ ಜವಾಬ್ದಾರಿ ಬಂತು. ನಮ್ಮ ಕಷ್ಟಗಳು ಏನು ಅಂತ ತಾಯಿಗೆ ಮಾತ್ರ ಗೊತ್ತಿದೆ. ಇರೋ ರೀತಿ ನೋಡಿದರೆ ಕಷ್ಟನೇ ಇಲ್ಲ ಎಂಬ ರೀತಿ ಕಾಣುತ್ತದೆ. ಬ್ಯಾಂಕ್ ಬ್ಯಾಲೆನ್ಸ್ ನೋಡಿದ್ರೆ ಇಲ್ಲಿ ಇರೋಕೆ ಆಗಲ್ಲ. ಎಲ್ಲಾ ಸ್ಟ್ರಗಲಿಂಗ್ ಆ್ಯಕ್ಟರ್​ಗಳದ್ದು ಇದೇ ತರ ಜೀವನ ಇರುತ್ತದೆ’ ಎಂದು ತ್ರಿವಿಕ್ರಂ ಅವರು ಬೇಸರ ಹೊರಹಾಕಿದರು.

‘ನಾನು ಗೆದ್ದಿದ್ದರೆ ಆ ಹಣದಿಂದ ಸೆಟಲ್ ಆಗುತ್ತೇನೆ ಎಂಬ ಆಲೋಚನೆ ಅಮ್ಮ ಅವರದ್ದು. ನನಗೆ ಈಗ ಎಷ್ಟು ಸಿಕ್ಕಿದೆಯೋ ಆ ಬಗ್ಗೆ ಅಮ್ಮನಿಗೆ ಖುಷಿ ಇದೆ’ ಎಂದು ತ್ರಿವಿಕ್ರಂ ಅವರು ಹೇಳಿದ್ದಾರೆ. ತ್ರಿವಿಕ್ರಂ ಅವರಿಗೆ ಬಹುಮಾನ ಮೊತ್ತವಾಗಿ 15 ಲಕ್ಷ ರೂಪಾಯಿ ಸಿಕ್ಕಿದೆ. ಇದರ ಜೊತೆಗೆ 119 ದಿನ ಇದ್ದಿಕ್ಕೆ ಸಂಭಾವನೆ ಕೂಡ ಸಿಕ್ಕಿದೆ.

ಇದನ್ನೂ ಓದಿ: ಹನುಮಂತನ ಬಗ್ಗೆ ಮಾತಾಡಿ ಟ್ರೋಲ್ ಆದ ತ್ರಿವಿಕ್ರಂ ತಾಯಿ; ಅಂಥದ್ದೇನ್ ಹೇಳಿದ್ರು?

ಇತ್ತೀಚೆಗೆ ಮಾತನಾಡಿದ್ದ ತ್ರಿವಿಕ್ರಂ ಅವರ ತಾಯಿ, ‘ನನಗೆ ಹನುಮಂತ ಗೆದ್ದ ಬಗ್ಗೆ ಬೇಸರ ಇದೆ. ನನ್ನ ಮಗನೇ ಗೆಲ್ಲಬೇಕು ಎಂದು ನಾನು ಹೇಳುತ್ತಿಲ್ಲ. ಆದರೆ, ಹನುಮಂತ ಗೆಲ್ಲಬಾರದಿತ್ತು. ಅವನು ಏನೂ ಮಾಡಿಲ್ಲ’ ಎಂದು ಹೇಳಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ