AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ದೊಡ್ಮನೆಗೆ 5ನೇ ಸ್ಪರ್ಧಿಯಾಗಿ ತುಕಾಲಿ ಸಂತೋಷ್​ ಎಂಟ್ರಿ; ಇಂಥ ಹೆಸರು ಬಂದಿದ್ದು ಯಾಕೆ?

Tukali Santhosh: ಈವರೆಗೂ ಕನ್ನಡದಲ್ಲಿ ‘ಬಿಗ್ ಬಾಸ್​’ ರಿಯಾಲಿಟಿ ಶೋನ 9 ಸೀಸನ್​ಗಳನ್ನು ಪೂರೈಸಲಾಗಿದೆ. ಈ ಎಲ್ಲ ಸೀಸನ್​ಗಳನ್ನು ಕಿಚ್ಚ ಸುದೀಪ್​ ಅವರು ನಡೆಸಿಕೊಟ್ಟಿದ್ದಾರೆ. ಈಗ 10ನೇ ಸೀಸನ್​ಗೂ ಅವರೇ ಸಾರಥ್ಯ ವಹಿಸಿದ್ದಾರೆ. ಈ ಸೀಸನ್​ನ ಸ್ಪರ್ಧಿಗಳನ್ನು ದೊಡ್ಮನೆಗೆ ವೆಲ್​ಕಮ್​ ಮಾಡಲಾಗಿದೆ. 5ನೇ ಸ್ಪರ್ಧಿಯಾಗಿ ತುಕಾಲಿ ಸಂತೋಷ್​ ಪ್ರವೇಶ ಪಡೆದಿದ್ದಾರೆ.

Bigg Boss Kannada: ದೊಡ್ಮನೆಗೆ 5ನೇ ಸ್ಪರ್ಧಿಯಾಗಿ ತುಕಾಲಿ ಸಂತೋಷ್​ ಎಂಟ್ರಿ; ಇಂಥ ಹೆಸರು ಬಂದಿದ್ದು ಯಾಕೆ?
ತುಕಾಲಿ ಸಂತೋಷ್​
ಮದನ್​ ಕುಮಾರ್​
| Edited By: |

Updated on:Oct 09, 2023 | 9:02 AM

Share

‘ಬಿಗ್​ ಬಾಸ್​ ಕನ್ನಡ ಸೀಸನ್​ 10’ (Bigg Boss Kannada Season 10) ಆರಂಭ ಆಗಿದೆ. ಕಿಚ್ಚ ಸುದೀಪ್​ ಅವರ ನಿರೂಪಣೆಯಲ್ಲಿ ಅದ್ದೂರಿಯಾಗಿ ಈ ರಿಯಾಲಿಟಿ ಶೋಗೆ ಚಾಲನೆ ಸಿಕ್ಕಿದೆ. ಈಗಾಗಲೇ ನಮ್ರತಾ ಗೌಡ, ಸ್ನೇಹಿತ್​ ಗೌಡ, ಈಶಾನಿ, ವಿನಯ್​ ಅವರು ಬಿಗ್​ ಬಾಸ್ (Bigg Boss Kannada)​ ಮನೆಗೆ ಕಾಲಿಟ್ಟಿದ್ದಾರೆ. ಪ್ರತಿಯೊಬ್ಬರು ಕೂಡ ಅಗತ್ಯ ಮಟ್ಟದ ಓಟಿಂಗ್​ ಪಡೆದರೆ ಮಾತ್ರ ದೊಡ್ಮನೆ ಪ್ರವೇಶಿಸಲು ಅರ್ಹರಾಗುತ್ತಾರೆ. ಅದೇ ರೀತಿ 5ನೇ ಸ್ಪರ್ಧಿಯಾಗಿ ತುಕಾಲಿ ಸಂತೋಷ್​ (Tukali Santhosh) ಅವರು ದೊಡ್ಮನೆಗೆ ಎಂಟ್ರಿ ನೀಡಿದ್ದಾರೆ. ಎಲ್ಲರೂ ಕೂಡ 100 ದಿನಗಳ ಕಾಲ ದೊಡ್ಮನೆಯೊಳಗೆ ಇರುವ ಆಕ್ಷಾಂಕ್ಷೆ ಇಟ್ಟುಕೊಂಡು ಈ ರಿಯಾಲಿಟಿ ಶೋಗೆ ಬಂದಿದ್ದಾರೆ. ಈ ರಿಯಾಲಿಟಿ ಶೋ ‘ಜಿಯೋ ಸಿನಿಮಾ’ ಒಟಿಟಿಯಲ್ಲಿ 24 ಗಂಟೆಯೂ ಉಚಿತವಾಗಿ ಪ್ರಸಾರ ಆಗಲಿದೆ.

‘ಬಿಗ್ ಬಾಸ್​’ ರಿಯಾಲಿಟಿ ಶೋಗೆ ದೊಡ್ಡ ಪ್ರೇಕ್ಷಕ ವರ್ಗ ಇದೆ. ಈವರೆಗೂ ಕನ್ನಡದಲ್ಲಿ 9 ಸೀಸನ್​ಗಳನ್ನು ಪೂರೈಸಲಾಗಿದೆ. ಈ ಎಲ್ಲ ಸೀಸನ್​ಗಳನ್ನು ಕಿಚ್ಚ ಸುದೀಪ್​ ಅವರು ನಡೆಸಿಕೊಟ್ಟಿದ್ದಾರೆ. ಈಗ 10ನೇ ಸೀಸನ್​ಗೂ ಅವರೇ ಸಾರಥ್ಯ ವಹಿಸಿದ್ದಾರೆ. ಬಿಗ್​ ಬಾಸ್​ಗೆ ಬಂದ ಎಲ್ಲ ಸ್ಪರ್ಧಿಗಳನ್ನು ವೇದಿಕೆ ಮೇಲೆ ಸುದೀಪ್​ ಅವರು ಪರಿಚಯಿಸಿದ್ದಾರೆ. ಇಂದು (ಅಕ್ಟೋಬರ್​ 8) ಮೊದಲ ದಿನ ಆದ್ದರಿಂದ ಮನೆಯ ವಾತಾವರಣ ಕೂಲ್​ ಆಗಿದೆ. ಎರಡನೇ ದಿನದಿಂದ ಪೈಪೋಟಿ ಹೆಚ್ಚಲಿದೆ.

ಇದೆಂಥ ಹೆಸರು?

ಕಾಮಿಡಿ ಶೋಗಳ ಮೂಲಕ ಗುರುತಿಸಿಕೊಂಡಿರುವ ತುಕಾಲಿ ಸಂತೋಷ್​ ಅವರು ಈಗ ಬಿಗ್​ ಬಾಸ್​ ಮನೆ ಒಳಗೆ ಕಾಲಿಡುವ ಅವಕಾಶ ಪಡೆದಿದ್ದಾರೆ. ಒಂದು ಸ್ಕಿಟ್​ನಲ್ಲಿ ತುಕಾಲಿ ಎಂಬ ಹೆಸರು ಇಟ್ಟುಕೊಂಡಿದ್ದರು ಸಂತೋಷ್​. ಆ ಬಳಿಕ ತುಕಾಲಿ ಸಂತು ಎಂದೇ ಅವರು ಫೇಮಸ್​ ಆದರು. ಆ ಬಗ್ಗೆ ಸಂತೋಷ್​ ಅವರಿಗೆ ಖುಷಿ ಇದೆ.

ಇದನ್ನೂ ಓದಿ: Namratha Gowda: ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಮೊದಲ ಸ್ಪರ್ಧಿ ನಮ್ರತಾ ಗೌಡ; ನಟಿಯ ಪರಿಚಯ ಇಲ್ಲಿದೆ..

ಪತ್ನಿ ಸಮೇತರಾಗಿ ಸಂತೋಷ್​ ಅವರು ಬಿಗ್​ ಬಾಸ್​ ವೇದಿಕೆಗೆ ಬಂದಿದ್ದರು. ಹೆಂಡತಿಯ ಜೊತೆಗೇ ನೀವು ದೊಡ್ಮನೆ ಒಳಗೆ ಸ್ಪರ್ಧಿಸುವುದು ಒಳ್ಳೆಯದು ಎಂದು ಸುದೀಪ್​ ಅಭಿಪ್ರಾಯಪಟ್ಟರು. ಆ ಕುರಿತು ವೇದಿಕೆಯಲ್ಲಿ ಸಿಕ್ಕಾಪಟ್ಟೆ ಚರ್ಚೆ ನಡೆಯಿತು. ಕಡೆಗೂ ಪತ್ನಿಯನ್ನು ಬಿಟ್ಟು ಸಂತೋಷ್​ ಒಬ್ಬರೇ ಬಿಗ್​ ಬಾಸ್​ ಮನೆಯನ್ನು ಪ್ರವೇಶಿಸಿದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:31 pm, Sun, 8 October 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ