AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಂಡ ಕನಸು ನನಸಾಗಿದೆ’: ಹೊಸ ಕಾರು ಖರೀದಿಸಿದ ವಿಡಿಯೋ ಹಂಚಿಕೊಂಡ ತುಕಾಲಿ ಸಂತೋಷ್

Tukali Santhu: ಹಾಸ್ಯನಟ, ಬಿಗ್​ಬಾಸ್ ಕನ್ನಡ ಮಾಜಿ ಸ್ಪರ್ಧಿ ತುಕಾಲಿ ಸಂತೋಷ್, ತಮ್ಮ ಕನಸೊಂದನ್ನು ನನಸು ಮಾಡಿಕೊಂಡಿದ್ದಾರೆ.

‘ಕಂಡ ಕನಸು ನನಸಾಗಿದೆ’: ಹೊಸ ಕಾರು ಖರೀದಿಸಿದ ವಿಡಿಯೋ ಹಂಚಿಕೊಂಡ ತುಕಾಲಿ ಸಂತೋಷ್
Follow us
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.

Updated on:Mar 03, 2024 | 12:08 PM

ತುಕಾಲಿ ಸಂತೋಷ್ (Tukali Santhosh) ಅವರು ಹಲವು ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿ ಜನಪ್ರಿಯರಾಗಿದ್ದಾರೆ. ಅವರಿಗೆ ‘ಬಿಗ್ ಬಾಸ್ ಕನ್ನಡ ಸೀಸನ್ 10’ ದೊಡ್ಡ ಮಟ್ಟದ ಜನಪ್ರಿಯತೆ ನೀಡಿತು. ತಮ್ಮ ಹಾಸ್ಯದ ಮೂಲಕ, ಕ್ರಿಮಿನಲ್ ಐಡಿಯಾಗಳ ಮೂಲಕ ಎಲ್ಲರ ಗಮನ ಸೆಳೆದರು. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ವಿಶೇಷ ಎಂದರೆ ಅವರು ಈಗ ಹೊಸ ಕಾರು ಖರೀದಿ ಮಾಡಿದ್ದಾರೆ. ಈ ವಿಡಿಯೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಅವರಿಗೆ ಎಲ್ಲರೂ ಶುಭಾಶಯ ಹೇಳಿದ್ದಾರೆ.

‘ಗಿಚ್ಚಿ ಗಿಲಿ ಗಿಲಿ ಸೀಸನ್ 3’, ‘ಕಾಮಿಡಿ ಕಿಲಾಡಿಗಳು 3’, ‘ಜೋಡಿ ನಂಬರ್ 1’ ಅಂಥ ರಿಯಾಲಿಟಿ ಶೋಗಳ ಮೂಲಕ ಫೇಮಸ್ ಆಗಿದ್ದರು ತುಕಾಲಿ ಸಂತೋಷ್. ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿತ್ತು. ಇದಾದ ಬಳಿಕ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ಗೆ ಕಾಲಿಟ್ಟರು. ಈ ರಿಯಾಲಿಟಿ ಶೋನಿಂದ ಅವರಿಗೆ ಇದ್ದ ಖ್ಯಾತಿ ಹೆಚ್ಚಿತು. ಆರಂಭದಲ್ಲಿ ಎಲ್ಲರಿಗೂ ನೋವು ಮಾಡುತ್ತಿದ್ದ ಅವರು ನಂತರದ ದಿನಗಳಲ್ಲಿ ತಮ್ಮನ್ನು ತಾವು ಬದಲಾಯಿಸಿಕೊಂಡರು. ವರ್ತೂರು ಸಂತೋಷ್ ಜೊತೆಗಿನ ಫ್ರೆಂಡ್ಶಿಪ್ ಕಾರಣದಿಂದಲೂ ಅವರು ಸುದ್ದಿ ಆದರು. ಈಗ ಕಾರು ಖರೀದಿಸಿ ಸುದ್ದಿ ಆಗಿದ್ದಾರೆ.

ಇದನ್ನೂ ಓದಿ:ಬಿಗ್ ಬಾಸ್ ಕನ್ನಡ: ಹೆಂಡತಿಯನ್ನು ‘ಅಣ್ಣ’ ಅಂದ್ರಂತೆ ತುಕಾಲಿ ಸಂತು: ಯಾಕೆ?

‘ಬಿಗ್ ಬಾಸ್’ ಹಲವರ ಜೀವನ ಬದಲಾಯಿಸಿದೆ. ಅದೇ ರೀತಿ ತುಕಾಲಿ ಸಂತೋಷ್ ಅವರ ಜೀವನ ಕೂಡ ಚೇಂಜ್ ಆಗಿದೆ. ‘ಬಿಗ್ ಬಾಸ್’ ಫಿನಾಲೆವರೆಗೆ ಇದ್ದ ಅವರು ನಾಲ್ಕನೇ ರನ್ನರ್ಅಪ್ ಆಗಿ ಹೊರ ಹೊಮ್ಮಿದರು. ಬಿಗ್ ಬಾಸ್ನಿಂದ ಬಂದ ಸಂಭಾವನೆಯಿಂದ ಅವರು ಕಾರು ಖರೀದಿ ಮಾಡಿದ್ದಾರೆ. ಕಿಯಾ ಕಂಪನಿಯ ಕಾರನ್ನು ಅವರು ಖರೀದಿ ಮಾಡಿದ್ದಾರೆ. ಅವರ ಪತ್ನಿ ಮಾನಸಾ ಕೂಡ ಪೋಸ್ ನೀಡಿದ್ದಾರೆ.

ತುಕಾಲಿ ಸಂತೋಷ್ ರೀತಿ ಅವರ ಪತ್ನಿ ಮಾನಸಾ ಕೂಡ ಅನೇಕರಿಗೆ ಇಷ್ಟ ಆಗಿದ್ದಾರೆ. ಫ್ಯಾಮಿಲಿ ವೀಕ್ನಲ್ಲಿ ಅವರು ಕೂಡ ಆಗಮಿಸಿದ್ದರು. ಈ ವೇಳೆ ಇಬ್ಬರ ಮಧ್ಯೆ ನಡೆದ ಫನ್ ಸಂಭಾಷಣೆ ಅನೇಕರಿಗೆ ಇಷ್ಟ ಆಗಿತ್ತು. ಈ ಮೂಲಕ ಅವರು ಎಲ್ಲರ ಮೆಚ್ಚುಗೆ ಪಡೆದರು. ಈಗ ಇಬ್ಬರೂ ಸೇರಿ ಬಿಳಿ ಬಣ್ಣದ ಕಿಯಾ ಕಾರನ್ನು ಖರೀದಿ ಮಾಡಿದ್ದಾರೆ.

ರಕ್ಷಕ್ ಕಾರು

ಬುಲೆಟ್ ಪ್ರಕಾಶ ಮಗ ರಕ್ಷಕ್ ಅವರು ಬಿಗ್ ಬಾಸ್ ಮನೆಗೆ ಬಂದಿದ್ದರು. ಕೇವಲ ಒಂದೇ ತಿಂಗಳಿಗೆ ಅವರು ಔಟ್ ಆದರು. ಅವರು ಕೂಡ ಹೊಸ ಕಾರು ಖರೀದಿ ಮಾಡಿದ್ದಾರೆ. ಬಿಎಂಡಬ್ಲ್ಯೂ ಕಾರನ್ನು ಅವರು ತಂದಿದ್ದಾರೆ. ಈ ಮೊದಲು ಥಾರ್ನಲ್ಲಿ ಓಡಾಡುತ್ತಿದ್ದರು. ‘ಕುಟುಂಬಕ್ಕೆ ಹೊಸ ಸದಸ್ಯ’ ಎಂದು ಅವರು ಪೋಸ್ಟ್ ಮಾಡಿದ್ದರು. ಈ ಫೋಟೋ ವೈರಲ್ ಆಗಿತ್ತು. ಈ ವಿಚಾರದಲ್ಲೂ ಅವರನ್ನು ಅನೇಕರು ಟ್ರೋಲ್ ಮಾಡಿದ್ದರು. ‘ಇಷ್ಟೊಂದು ಹಣ ಬಂದಿದ್ದು ಎಲ್ಲಿಂದ’ ಎಂದು ಕೇಳಿದ್ದರು. ಆದರೆ, ಇದಕ್ಕೆಲ್ಲ ಅವರು ತೆಲೆಕೆಡಿಸಿಕೊಂಡಿರಲಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:02 pm, Sun, 3 March 24

ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!