‘ಕಂಡ ಕನಸು ನನಸಾಗಿದೆ’: ಹೊಸ ಕಾರು ಖರೀದಿಸಿದ ವಿಡಿಯೋ ಹಂಚಿಕೊಂಡ ತುಕಾಲಿ ಸಂತೋಷ್

Tukali Santhu: ಹಾಸ್ಯನಟ, ಬಿಗ್​ಬಾಸ್ ಕನ್ನಡ ಮಾಜಿ ಸ್ಪರ್ಧಿ ತುಕಾಲಿ ಸಂತೋಷ್, ತಮ್ಮ ಕನಸೊಂದನ್ನು ನನಸು ಮಾಡಿಕೊಂಡಿದ್ದಾರೆ.

‘ಕಂಡ ಕನಸು ನನಸಾಗಿದೆ’: ಹೊಸ ಕಾರು ಖರೀದಿಸಿದ ವಿಡಿಯೋ ಹಂಚಿಕೊಂಡ ತುಕಾಲಿ ಸಂತೋಷ್
Follow us
| Updated By: ಮಂಜುನಾಥ ಸಿ.

Updated on:Mar 03, 2024 | 12:08 PM

ತುಕಾಲಿ ಸಂತೋಷ್ (Tukali Santhosh) ಅವರು ಹಲವು ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿ ಜನಪ್ರಿಯರಾಗಿದ್ದಾರೆ. ಅವರಿಗೆ ‘ಬಿಗ್ ಬಾಸ್ ಕನ್ನಡ ಸೀಸನ್ 10’ ದೊಡ್ಡ ಮಟ್ಟದ ಜನಪ್ರಿಯತೆ ನೀಡಿತು. ತಮ್ಮ ಹಾಸ್ಯದ ಮೂಲಕ, ಕ್ರಿಮಿನಲ್ ಐಡಿಯಾಗಳ ಮೂಲಕ ಎಲ್ಲರ ಗಮನ ಸೆಳೆದರು. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ವಿಶೇಷ ಎಂದರೆ ಅವರು ಈಗ ಹೊಸ ಕಾರು ಖರೀದಿ ಮಾಡಿದ್ದಾರೆ. ಈ ವಿಡಿಯೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಅವರಿಗೆ ಎಲ್ಲರೂ ಶುಭಾಶಯ ಹೇಳಿದ್ದಾರೆ.

‘ಗಿಚ್ಚಿ ಗಿಲಿ ಗಿಲಿ ಸೀಸನ್ 3’, ‘ಕಾಮಿಡಿ ಕಿಲಾಡಿಗಳು 3’, ‘ಜೋಡಿ ನಂಬರ್ 1’ ಅಂಥ ರಿಯಾಲಿಟಿ ಶೋಗಳ ಮೂಲಕ ಫೇಮಸ್ ಆಗಿದ್ದರು ತುಕಾಲಿ ಸಂತೋಷ್. ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿತ್ತು. ಇದಾದ ಬಳಿಕ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ಗೆ ಕಾಲಿಟ್ಟರು. ಈ ರಿಯಾಲಿಟಿ ಶೋನಿಂದ ಅವರಿಗೆ ಇದ್ದ ಖ್ಯಾತಿ ಹೆಚ್ಚಿತು. ಆರಂಭದಲ್ಲಿ ಎಲ್ಲರಿಗೂ ನೋವು ಮಾಡುತ್ತಿದ್ದ ಅವರು ನಂತರದ ದಿನಗಳಲ್ಲಿ ತಮ್ಮನ್ನು ತಾವು ಬದಲಾಯಿಸಿಕೊಂಡರು. ವರ್ತೂರು ಸಂತೋಷ್ ಜೊತೆಗಿನ ಫ್ರೆಂಡ್ಶಿಪ್ ಕಾರಣದಿಂದಲೂ ಅವರು ಸುದ್ದಿ ಆದರು. ಈಗ ಕಾರು ಖರೀದಿಸಿ ಸುದ್ದಿ ಆಗಿದ್ದಾರೆ.

ಇದನ್ನೂ ಓದಿ:ಬಿಗ್ ಬಾಸ್ ಕನ್ನಡ: ಹೆಂಡತಿಯನ್ನು ‘ಅಣ್ಣ’ ಅಂದ್ರಂತೆ ತುಕಾಲಿ ಸಂತು: ಯಾಕೆ?

‘ಬಿಗ್ ಬಾಸ್’ ಹಲವರ ಜೀವನ ಬದಲಾಯಿಸಿದೆ. ಅದೇ ರೀತಿ ತುಕಾಲಿ ಸಂತೋಷ್ ಅವರ ಜೀವನ ಕೂಡ ಚೇಂಜ್ ಆಗಿದೆ. ‘ಬಿಗ್ ಬಾಸ್’ ಫಿನಾಲೆವರೆಗೆ ಇದ್ದ ಅವರು ನಾಲ್ಕನೇ ರನ್ನರ್ಅಪ್ ಆಗಿ ಹೊರ ಹೊಮ್ಮಿದರು. ಬಿಗ್ ಬಾಸ್ನಿಂದ ಬಂದ ಸಂಭಾವನೆಯಿಂದ ಅವರು ಕಾರು ಖರೀದಿ ಮಾಡಿದ್ದಾರೆ. ಕಿಯಾ ಕಂಪನಿಯ ಕಾರನ್ನು ಅವರು ಖರೀದಿ ಮಾಡಿದ್ದಾರೆ. ಅವರ ಪತ್ನಿ ಮಾನಸಾ ಕೂಡ ಪೋಸ್ ನೀಡಿದ್ದಾರೆ.

ತುಕಾಲಿ ಸಂತೋಷ್ ರೀತಿ ಅವರ ಪತ್ನಿ ಮಾನಸಾ ಕೂಡ ಅನೇಕರಿಗೆ ಇಷ್ಟ ಆಗಿದ್ದಾರೆ. ಫ್ಯಾಮಿಲಿ ವೀಕ್ನಲ್ಲಿ ಅವರು ಕೂಡ ಆಗಮಿಸಿದ್ದರು. ಈ ವೇಳೆ ಇಬ್ಬರ ಮಧ್ಯೆ ನಡೆದ ಫನ್ ಸಂಭಾಷಣೆ ಅನೇಕರಿಗೆ ಇಷ್ಟ ಆಗಿತ್ತು. ಈ ಮೂಲಕ ಅವರು ಎಲ್ಲರ ಮೆಚ್ಚುಗೆ ಪಡೆದರು. ಈಗ ಇಬ್ಬರೂ ಸೇರಿ ಬಿಳಿ ಬಣ್ಣದ ಕಿಯಾ ಕಾರನ್ನು ಖರೀದಿ ಮಾಡಿದ್ದಾರೆ.

ರಕ್ಷಕ್ ಕಾರು

ಬುಲೆಟ್ ಪ್ರಕಾಶ ಮಗ ರಕ್ಷಕ್ ಅವರು ಬಿಗ್ ಬಾಸ್ ಮನೆಗೆ ಬಂದಿದ್ದರು. ಕೇವಲ ಒಂದೇ ತಿಂಗಳಿಗೆ ಅವರು ಔಟ್ ಆದರು. ಅವರು ಕೂಡ ಹೊಸ ಕಾರು ಖರೀದಿ ಮಾಡಿದ್ದಾರೆ. ಬಿಎಂಡಬ್ಲ್ಯೂ ಕಾರನ್ನು ಅವರು ತಂದಿದ್ದಾರೆ. ಈ ಮೊದಲು ಥಾರ್ನಲ್ಲಿ ಓಡಾಡುತ್ತಿದ್ದರು. ‘ಕುಟುಂಬಕ್ಕೆ ಹೊಸ ಸದಸ್ಯ’ ಎಂದು ಅವರು ಪೋಸ್ಟ್ ಮಾಡಿದ್ದರು. ಈ ಫೋಟೋ ವೈರಲ್ ಆಗಿತ್ತು. ಈ ವಿಚಾರದಲ್ಲೂ ಅವರನ್ನು ಅನೇಕರು ಟ್ರೋಲ್ ಮಾಡಿದ್ದರು. ‘ಇಷ್ಟೊಂದು ಹಣ ಬಂದಿದ್ದು ಎಲ್ಲಿಂದ’ ಎಂದು ಕೇಳಿದ್ದರು. ಆದರೆ, ಇದಕ್ಕೆಲ್ಲ ಅವರು ತೆಲೆಕೆಡಿಸಿಕೊಂಡಿರಲಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:02 pm, Sun, 3 March 24

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು