AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಂಡ ಕನಸು ನನಸಾಗಿದೆ’: ಹೊಸ ಕಾರು ಖರೀದಿಸಿದ ವಿಡಿಯೋ ಹಂಚಿಕೊಂಡ ತುಕಾಲಿ ಸಂತೋಷ್

Tukali Santhu: ಹಾಸ್ಯನಟ, ಬಿಗ್​ಬಾಸ್ ಕನ್ನಡ ಮಾಜಿ ಸ್ಪರ್ಧಿ ತುಕಾಲಿ ಸಂತೋಷ್, ತಮ್ಮ ಕನಸೊಂದನ್ನು ನನಸು ಮಾಡಿಕೊಂಡಿದ್ದಾರೆ.

‘ಕಂಡ ಕನಸು ನನಸಾಗಿದೆ’: ಹೊಸ ಕಾರು ಖರೀದಿಸಿದ ವಿಡಿಯೋ ಹಂಚಿಕೊಂಡ ತುಕಾಲಿ ಸಂತೋಷ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Mar 03, 2024 | 12:08 PM

Share

ತುಕಾಲಿ ಸಂತೋಷ್ (Tukali Santhosh) ಅವರು ಹಲವು ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿ ಜನಪ್ರಿಯರಾಗಿದ್ದಾರೆ. ಅವರಿಗೆ ‘ಬಿಗ್ ಬಾಸ್ ಕನ್ನಡ ಸೀಸನ್ 10’ ದೊಡ್ಡ ಮಟ್ಟದ ಜನಪ್ರಿಯತೆ ನೀಡಿತು. ತಮ್ಮ ಹಾಸ್ಯದ ಮೂಲಕ, ಕ್ರಿಮಿನಲ್ ಐಡಿಯಾಗಳ ಮೂಲಕ ಎಲ್ಲರ ಗಮನ ಸೆಳೆದರು. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ವಿಶೇಷ ಎಂದರೆ ಅವರು ಈಗ ಹೊಸ ಕಾರು ಖರೀದಿ ಮಾಡಿದ್ದಾರೆ. ಈ ವಿಡಿಯೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಅವರಿಗೆ ಎಲ್ಲರೂ ಶುಭಾಶಯ ಹೇಳಿದ್ದಾರೆ.

‘ಗಿಚ್ಚಿ ಗಿಲಿ ಗಿಲಿ ಸೀಸನ್ 3’, ‘ಕಾಮಿಡಿ ಕಿಲಾಡಿಗಳು 3’, ‘ಜೋಡಿ ನಂಬರ್ 1’ ಅಂಥ ರಿಯಾಲಿಟಿ ಶೋಗಳ ಮೂಲಕ ಫೇಮಸ್ ಆಗಿದ್ದರು ತುಕಾಲಿ ಸಂತೋಷ್. ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿತ್ತು. ಇದಾದ ಬಳಿಕ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ಗೆ ಕಾಲಿಟ್ಟರು. ಈ ರಿಯಾಲಿಟಿ ಶೋನಿಂದ ಅವರಿಗೆ ಇದ್ದ ಖ್ಯಾತಿ ಹೆಚ್ಚಿತು. ಆರಂಭದಲ್ಲಿ ಎಲ್ಲರಿಗೂ ನೋವು ಮಾಡುತ್ತಿದ್ದ ಅವರು ನಂತರದ ದಿನಗಳಲ್ಲಿ ತಮ್ಮನ್ನು ತಾವು ಬದಲಾಯಿಸಿಕೊಂಡರು. ವರ್ತೂರು ಸಂತೋಷ್ ಜೊತೆಗಿನ ಫ್ರೆಂಡ್ಶಿಪ್ ಕಾರಣದಿಂದಲೂ ಅವರು ಸುದ್ದಿ ಆದರು. ಈಗ ಕಾರು ಖರೀದಿಸಿ ಸುದ್ದಿ ಆಗಿದ್ದಾರೆ.

ಇದನ್ನೂ ಓದಿ:ಬಿಗ್ ಬಾಸ್ ಕನ್ನಡ: ಹೆಂಡತಿಯನ್ನು ‘ಅಣ್ಣ’ ಅಂದ್ರಂತೆ ತುಕಾಲಿ ಸಂತು: ಯಾಕೆ?

‘ಬಿಗ್ ಬಾಸ್’ ಹಲವರ ಜೀವನ ಬದಲಾಯಿಸಿದೆ. ಅದೇ ರೀತಿ ತುಕಾಲಿ ಸಂತೋಷ್ ಅವರ ಜೀವನ ಕೂಡ ಚೇಂಜ್ ಆಗಿದೆ. ‘ಬಿಗ್ ಬಾಸ್’ ಫಿನಾಲೆವರೆಗೆ ಇದ್ದ ಅವರು ನಾಲ್ಕನೇ ರನ್ನರ್ಅಪ್ ಆಗಿ ಹೊರ ಹೊಮ್ಮಿದರು. ಬಿಗ್ ಬಾಸ್ನಿಂದ ಬಂದ ಸಂಭಾವನೆಯಿಂದ ಅವರು ಕಾರು ಖರೀದಿ ಮಾಡಿದ್ದಾರೆ. ಕಿಯಾ ಕಂಪನಿಯ ಕಾರನ್ನು ಅವರು ಖರೀದಿ ಮಾಡಿದ್ದಾರೆ. ಅವರ ಪತ್ನಿ ಮಾನಸಾ ಕೂಡ ಪೋಸ್ ನೀಡಿದ್ದಾರೆ.

ತುಕಾಲಿ ಸಂತೋಷ್ ರೀತಿ ಅವರ ಪತ್ನಿ ಮಾನಸಾ ಕೂಡ ಅನೇಕರಿಗೆ ಇಷ್ಟ ಆಗಿದ್ದಾರೆ. ಫ್ಯಾಮಿಲಿ ವೀಕ್ನಲ್ಲಿ ಅವರು ಕೂಡ ಆಗಮಿಸಿದ್ದರು. ಈ ವೇಳೆ ಇಬ್ಬರ ಮಧ್ಯೆ ನಡೆದ ಫನ್ ಸಂಭಾಷಣೆ ಅನೇಕರಿಗೆ ಇಷ್ಟ ಆಗಿತ್ತು. ಈ ಮೂಲಕ ಅವರು ಎಲ್ಲರ ಮೆಚ್ಚುಗೆ ಪಡೆದರು. ಈಗ ಇಬ್ಬರೂ ಸೇರಿ ಬಿಳಿ ಬಣ್ಣದ ಕಿಯಾ ಕಾರನ್ನು ಖರೀದಿ ಮಾಡಿದ್ದಾರೆ.

ರಕ್ಷಕ್ ಕಾರು

ಬುಲೆಟ್ ಪ್ರಕಾಶ ಮಗ ರಕ್ಷಕ್ ಅವರು ಬಿಗ್ ಬಾಸ್ ಮನೆಗೆ ಬಂದಿದ್ದರು. ಕೇವಲ ಒಂದೇ ತಿಂಗಳಿಗೆ ಅವರು ಔಟ್ ಆದರು. ಅವರು ಕೂಡ ಹೊಸ ಕಾರು ಖರೀದಿ ಮಾಡಿದ್ದಾರೆ. ಬಿಎಂಡಬ್ಲ್ಯೂ ಕಾರನ್ನು ಅವರು ತಂದಿದ್ದಾರೆ. ಈ ಮೊದಲು ಥಾರ್ನಲ್ಲಿ ಓಡಾಡುತ್ತಿದ್ದರು. ‘ಕುಟುಂಬಕ್ಕೆ ಹೊಸ ಸದಸ್ಯ’ ಎಂದು ಅವರು ಪೋಸ್ಟ್ ಮಾಡಿದ್ದರು. ಈ ಫೋಟೋ ವೈರಲ್ ಆಗಿತ್ತು. ಈ ವಿಚಾರದಲ್ಲೂ ಅವರನ್ನು ಅನೇಕರು ಟ್ರೋಲ್ ಮಾಡಿದ್ದರು. ‘ಇಷ್ಟೊಂದು ಹಣ ಬಂದಿದ್ದು ಎಲ್ಲಿಂದ’ ಎಂದು ಕೇಳಿದ್ದರು. ಆದರೆ, ಇದಕ್ಕೆಲ್ಲ ಅವರು ತೆಲೆಕೆಡಿಸಿಕೊಂಡಿರಲಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:02 pm, Sun, 3 March 24

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ