Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ ಮನೆಯಿಂದ ಮಾನಸಾ ಔಟ್; ಎಲ್ಲರ ಕ್ಷಮೆ ಕೇಳಿದ ತುಕಾಲಿ ಸಂತು

‘ಬಿಗ್ ಬಾಸ್ ಕನ್ನಡ ಸೀಸನ್​ 11’ ರಿಯಾಲಿಟಿ ಶೋನಿಂದ ಈ ವಾರ ಮಾನಸಾ ಅವರು ಎಲಿಮಿನೇಟ್ ಆಗಿದ್ದಾರೆ. ​5 ವಾರಗಳ ಕಾಲ ಎಲ್ಲರನ್ನೂ ನಗಿಸಲು ಪ್ರಯತ್ನಿಸಿದ್ದ ಅವರು ದೊಡ್ಮನೆಯಿಂದ ಹೊರಗೆ ಬಂದಿದ್ದಾರೆ. ಅನುಷಾ ಮತ್ತು ಮಾನಸಾ ಅವರು ಈ ವಾರದ ಡೇಂಜರ್​ ಝೋನ್​ನಲ್ಲಿ ಇದ್ದರು. ಅಂತಿಮವಾಗಿ ಮಾನಸಾ ಎಲಿಮಿನೇಟ್​ ಆದರು.

ಬಿಗ್ ಬಾಸ್​ ಮನೆಯಿಂದ ಮಾನಸಾ ಔಟ್; ಎಲ್ಲರ ಕ್ಷಮೆ ಕೇಳಿದ ತುಕಾಲಿ ಸಂತು
ಮಾನಸಾ, ತುಕಾಲಿ ಸಂತೋಷ್
Follow us
ಮದನ್​ ಕುಮಾರ್​
|

Updated on: Nov 03, 2024 | 11:00 PM

ಹಾಸ್ಯ ನಟ ತುಕಾಲಿ ಸಂತೋಷ್ ಅವರ ಪತ್ನಿ ಮಾನಸಾ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 11’ ಶೋನಿಂದ ಹೊರಬಿದ್ದಿದ್ದಾರೆ. 5ನೇ ವಾರದ ಎಲಿಮಿನೇಷನ್​ನಲ್ಲಿ ಅನುಷಾ ರೈ ಮತ್ತು ಮಾನಸಾ ಅವರ ಹೆಸರು ಕೊನೆಯ ಹಂತಕ್ಕೆ ಬಂತು. ಕಡಿಮೆ ವೋಟ್ ಪಡೆದ ಕಾರಣದಿಂದ ಮಾನಸಾ ಅವರು ಎಲಿಮಿನೇಟ್​ ಆದರು. ಈ ವಾರ ಸುದೀಪ್​ ಅವರು ಎಲಿಮಿನೇಷನ್​ ಘೋಷಿಸಿದಾಗ ಒಂದು ಟ್ವಿಸ್ಟ್​ ನೀಡಿದರು. ಮಾನಸಾ ಹೊರಗೆ ಹೋಗುವಾಗ ಯಾರೂ ಪ್ರತಿಕ್ರಿಯಿಸುವಂತಿಲ್ಲ ಎಂದರು. ಹಾಗಾಗಿ ಮಾನಸಾ ಅವರಿಗೆ ಸರಿಯಾದ ರೀತಿಯಲ್ಲಿ ವಿದಾಯ ಹೇಳಲು ಕೂಡ ಸದಸ್ಯರಿಗೆ ಸಾಧ್ಯವಾಗಲಿಲ್ಲ.

ಏನಾದರೂ ಸಾಧಿಸಬೇಕು ಎಂಬ ಗುರಿ ಇಟ್ಟುಕೊಂಡು ಮಾನಸಾ ಅವರು ‘ಬಿಗ್ ಬಾಸ್​ ಕನ್ನಡ 11’ ಕಾರ್ಯಕ್ರಮಕ್ಕೆ ಬಂದಿದ್ದರು. ‘ಹೇಗಿರಬೇಕು ಅಂತ ಗೊತ್ತಾಗಲಿಲ್ಲ. ಹೊಸದಾಗಿ ಬಂದಿದ್ದೆ. ಹಾಗಾಗಿ ಎಲ್ಲೋ ಎಡವಿದೆ ಎನಿಸಿತು. ನನ್ನ ಮೇಲೆ ನಿರೀಕ್ಷೆ ಇಟ್ಟು ಕರೆಸಿದ್ದರು. ಆದರೆ ನಾನು ಆ ನಿರೀಕ್ಷೆಯನ್ನು ತಲುಪಲಿಲ್ಲ ಎನಿಸುತ್ತದೆ. ಎಲಿಮಿನೇಟ್​ ಆಗಿದ್ದಕ್ಕೆ ತುಂಬ ಬೇಸರ ಇದೆ’ ಎಂದು ಮಾನಸಾ ಅವರು ಹೇಳಿದ್ದಾರೆ.

ಪ್ರತಿ ವಾರ ಕೂಡ ಮಾನಸಾ ಅವರು ನಾಮಿನೇಟ್ ಆಗುತ್ತಿದ್ದರು. ಟಾಸ್ಕ್​ನಲ್ಲಿ ಶ್ರಮವಹಿಸಿ ಆಡುತ್ತಿದ್ದ ಅವರು ಎಲ್ಲರನ್ನೂ ನಗಿಸಲು ಕೂಡ ಪ್ರಯತ್ನಿಸುತ್ತಿದ್ದರು. ಆದರೆ ಜಗಳಕ್ಕೆ ನಿಂತರೆ ಎಲ್ಲರಿಗೂ ಕಿರಿಕಿರಿ ಆಗುವ ಮಟ್ಟಕ್ಕೆ ಜಗಳ ಮಾಡುತ್ತಿದ್ದರು. ಇನ್ನು, ಸೋಶಿಯಲ್ ಮೀಡಿಯಾದಲ್ಲಿ ಮಾನಸಾ ಅವರನ್ನು ಕೆಲವರು ಟ್ರೋಲ್ ಮಾಡುತ್ತಿದ್ದರು. ಅದಕ್ಕೆ ಪತ್ರದ ಮೂಲಕ ತುಕಾಲಿ ಸಂತೋಷ್ ಅವರು ತಿರುಗೇಟು ನೀಡಿದ್ದರು.

ಮಾನಸಾ ಅವರು ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗುವುದಕ್ಕೂ ಮುನ್ನ ಒಂದು ವಿಶೇಷ ಅಧಿಕಾರ ಪಡೆದರು. ‘ನೀವು ಒಬ್ಬರನ್ನು ಜೈಲಿಗೆ ಕಳಿಸಬಹುದು’ ಎಂದು ಬಿಗ್ ಬಾಸ್ ಹೇಳಿದರು. ಆಗ ಮಾನಸಾ ಅವರು ಉಗ್ರಂ ಮಂಜು ಹೆಸರನ್ನು ಸೂಚಿಸಿದರು. ಮಾನಸಾ ಅವರು ಎಲಿಮಿನೇಟ್​ ಆಗಿದ್ದಕ್ಕೆ ತುಕಾಲಿ ಸಂತೋಷ್​ ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ: ಮನದಲ್ಲಿ ಬೆಟ್ಟದಷ್ಟು ನೋವು ಇದ್ದರೂ ನಗುತ್ತಾ ಬಿಗ್ ಬಾಸ್ ಶೋ ನಡೆಸಿಕೊಟ್ಟ ಸುದೀಪ್

‘ಎಲಿಮಿನೇಟ್​ ಆಗಿದ್ದಕ್ಕೆ ಬೇಸರ ಇದೆ. ಖುಷಿ ಕೂಡ ಇದೆ. ಹಳ್ಳಿಯಲ್ಲಿ ಹುಟ್ಟಿ, ಕಡು ಬಡತನದಲ್ಲಿ ಕುಟುಂಬ ಸಾಗಿಸುತ್ತಿದ್ದಳು. ಅವಳ ಬದುಕಿಗೆ ನಾನು ಬಂದೆ. ಅವಳು ಇಷ್ಟು ದೊಡ್ಡ ರಿಯಾಲಿಟಿ ಶೋಗೆ ಬಂದಿದ್ದಾಳೆ ಎಂದರೆ ಅದೇ ಅವಳ ದೊಡ್ಡ ಗೆಲುವು. ಆಕೆಯ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ನಾನು ಅವಳ ಪರವಾಗಿ ಕ್ಷಮೆ ಕೇಳುತ್ತೇನೆ’ ಎಂದು ತುಕಾಲಿ ಸಂತೋಷ್ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ