AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ ಮನೆಯಿಂದ ಮಾನಸಾ ಔಟ್; ಎಲ್ಲರ ಕ್ಷಮೆ ಕೇಳಿದ ತುಕಾಲಿ ಸಂತು

‘ಬಿಗ್ ಬಾಸ್ ಕನ್ನಡ ಸೀಸನ್​ 11’ ರಿಯಾಲಿಟಿ ಶೋನಿಂದ ಈ ವಾರ ಮಾನಸಾ ಅವರು ಎಲಿಮಿನೇಟ್ ಆಗಿದ್ದಾರೆ. ​5 ವಾರಗಳ ಕಾಲ ಎಲ್ಲರನ್ನೂ ನಗಿಸಲು ಪ್ರಯತ್ನಿಸಿದ್ದ ಅವರು ದೊಡ್ಮನೆಯಿಂದ ಹೊರಗೆ ಬಂದಿದ್ದಾರೆ. ಅನುಷಾ ಮತ್ತು ಮಾನಸಾ ಅವರು ಈ ವಾರದ ಡೇಂಜರ್​ ಝೋನ್​ನಲ್ಲಿ ಇದ್ದರು. ಅಂತಿಮವಾಗಿ ಮಾನಸಾ ಎಲಿಮಿನೇಟ್​ ಆದರು.

ಬಿಗ್ ಬಾಸ್​ ಮನೆಯಿಂದ ಮಾನಸಾ ಔಟ್; ಎಲ್ಲರ ಕ್ಷಮೆ ಕೇಳಿದ ತುಕಾಲಿ ಸಂತು
ಮಾನಸಾ, ತುಕಾಲಿ ಸಂತೋಷ್
ಮದನ್​ ಕುಮಾರ್​
|

Updated on: Nov 03, 2024 | 11:00 PM

Share

ಹಾಸ್ಯ ನಟ ತುಕಾಲಿ ಸಂತೋಷ್ ಅವರ ಪತ್ನಿ ಮಾನಸಾ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 11’ ಶೋನಿಂದ ಹೊರಬಿದ್ದಿದ್ದಾರೆ. 5ನೇ ವಾರದ ಎಲಿಮಿನೇಷನ್​ನಲ್ಲಿ ಅನುಷಾ ರೈ ಮತ್ತು ಮಾನಸಾ ಅವರ ಹೆಸರು ಕೊನೆಯ ಹಂತಕ್ಕೆ ಬಂತು. ಕಡಿಮೆ ವೋಟ್ ಪಡೆದ ಕಾರಣದಿಂದ ಮಾನಸಾ ಅವರು ಎಲಿಮಿನೇಟ್​ ಆದರು. ಈ ವಾರ ಸುದೀಪ್​ ಅವರು ಎಲಿಮಿನೇಷನ್​ ಘೋಷಿಸಿದಾಗ ಒಂದು ಟ್ವಿಸ್ಟ್​ ನೀಡಿದರು. ಮಾನಸಾ ಹೊರಗೆ ಹೋಗುವಾಗ ಯಾರೂ ಪ್ರತಿಕ್ರಿಯಿಸುವಂತಿಲ್ಲ ಎಂದರು. ಹಾಗಾಗಿ ಮಾನಸಾ ಅವರಿಗೆ ಸರಿಯಾದ ರೀತಿಯಲ್ಲಿ ವಿದಾಯ ಹೇಳಲು ಕೂಡ ಸದಸ್ಯರಿಗೆ ಸಾಧ್ಯವಾಗಲಿಲ್ಲ.

ಏನಾದರೂ ಸಾಧಿಸಬೇಕು ಎಂಬ ಗುರಿ ಇಟ್ಟುಕೊಂಡು ಮಾನಸಾ ಅವರು ‘ಬಿಗ್ ಬಾಸ್​ ಕನ್ನಡ 11’ ಕಾರ್ಯಕ್ರಮಕ್ಕೆ ಬಂದಿದ್ದರು. ‘ಹೇಗಿರಬೇಕು ಅಂತ ಗೊತ್ತಾಗಲಿಲ್ಲ. ಹೊಸದಾಗಿ ಬಂದಿದ್ದೆ. ಹಾಗಾಗಿ ಎಲ್ಲೋ ಎಡವಿದೆ ಎನಿಸಿತು. ನನ್ನ ಮೇಲೆ ನಿರೀಕ್ಷೆ ಇಟ್ಟು ಕರೆಸಿದ್ದರು. ಆದರೆ ನಾನು ಆ ನಿರೀಕ್ಷೆಯನ್ನು ತಲುಪಲಿಲ್ಲ ಎನಿಸುತ್ತದೆ. ಎಲಿಮಿನೇಟ್​ ಆಗಿದ್ದಕ್ಕೆ ತುಂಬ ಬೇಸರ ಇದೆ’ ಎಂದು ಮಾನಸಾ ಅವರು ಹೇಳಿದ್ದಾರೆ.

ಪ್ರತಿ ವಾರ ಕೂಡ ಮಾನಸಾ ಅವರು ನಾಮಿನೇಟ್ ಆಗುತ್ತಿದ್ದರು. ಟಾಸ್ಕ್​ನಲ್ಲಿ ಶ್ರಮವಹಿಸಿ ಆಡುತ್ತಿದ್ದ ಅವರು ಎಲ್ಲರನ್ನೂ ನಗಿಸಲು ಕೂಡ ಪ್ರಯತ್ನಿಸುತ್ತಿದ್ದರು. ಆದರೆ ಜಗಳಕ್ಕೆ ನಿಂತರೆ ಎಲ್ಲರಿಗೂ ಕಿರಿಕಿರಿ ಆಗುವ ಮಟ್ಟಕ್ಕೆ ಜಗಳ ಮಾಡುತ್ತಿದ್ದರು. ಇನ್ನು, ಸೋಶಿಯಲ್ ಮೀಡಿಯಾದಲ್ಲಿ ಮಾನಸಾ ಅವರನ್ನು ಕೆಲವರು ಟ್ರೋಲ್ ಮಾಡುತ್ತಿದ್ದರು. ಅದಕ್ಕೆ ಪತ್ರದ ಮೂಲಕ ತುಕಾಲಿ ಸಂತೋಷ್ ಅವರು ತಿರುಗೇಟು ನೀಡಿದ್ದರು.

ಮಾನಸಾ ಅವರು ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗುವುದಕ್ಕೂ ಮುನ್ನ ಒಂದು ವಿಶೇಷ ಅಧಿಕಾರ ಪಡೆದರು. ‘ನೀವು ಒಬ್ಬರನ್ನು ಜೈಲಿಗೆ ಕಳಿಸಬಹುದು’ ಎಂದು ಬಿಗ್ ಬಾಸ್ ಹೇಳಿದರು. ಆಗ ಮಾನಸಾ ಅವರು ಉಗ್ರಂ ಮಂಜು ಹೆಸರನ್ನು ಸೂಚಿಸಿದರು. ಮಾನಸಾ ಅವರು ಎಲಿಮಿನೇಟ್​ ಆಗಿದ್ದಕ್ಕೆ ತುಕಾಲಿ ಸಂತೋಷ್​ ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ: ಮನದಲ್ಲಿ ಬೆಟ್ಟದಷ್ಟು ನೋವು ಇದ್ದರೂ ನಗುತ್ತಾ ಬಿಗ್ ಬಾಸ್ ಶೋ ನಡೆಸಿಕೊಟ್ಟ ಸುದೀಪ್

‘ಎಲಿಮಿನೇಟ್​ ಆಗಿದ್ದಕ್ಕೆ ಬೇಸರ ಇದೆ. ಖುಷಿ ಕೂಡ ಇದೆ. ಹಳ್ಳಿಯಲ್ಲಿ ಹುಟ್ಟಿ, ಕಡು ಬಡತನದಲ್ಲಿ ಕುಟುಂಬ ಸಾಗಿಸುತ್ತಿದ್ದಳು. ಅವಳ ಬದುಕಿಗೆ ನಾನು ಬಂದೆ. ಅವಳು ಇಷ್ಟು ದೊಡ್ಡ ರಿಯಾಲಿಟಿ ಶೋಗೆ ಬಂದಿದ್ದಾಳೆ ಎಂದರೆ ಅದೇ ಅವಳ ದೊಡ್ಡ ಗೆಲುವು. ಆಕೆಯ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ನಾನು ಅವಳ ಪರವಾಗಿ ಕ್ಷಮೆ ಕೇಳುತ್ತೇನೆ’ ಎಂದು ತುಕಾಲಿ ಸಂತೋಷ್ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಅಪ್ಪನಿಗೆ ಚಿನ್ನದ ಉಂಗುರ ಉಡುಗೊರೆ ನೀಡಿದ ಪುಟ್ಟ ಬಾಲಕಿ
ಅಪ್ಪನಿಗೆ ಚಿನ್ನದ ಉಂಗುರ ಉಡುಗೊರೆ ನೀಡಿದ ಪುಟ್ಟ ಬಾಲಕಿ
ರಾಜೀನಾಮೆ ಬಳಿಕವೂ ಸಿದ್ದರಾಮಯ್ಯ-ಡಿಕೆಶಿ ನಡುವೆ ಅನ್ಯೂನ್ಯತೆ ಹೇಗಿದೆ ನೋಡಿ
ರಾಜೀನಾಮೆ ಬಳಿಕವೂ ಸಿದ್ದರಾಮಯ್ಯ-ಡಿಕೆಶಿ ನಡುವೆ ಅನ್ಯೂನ್ಯತೆ ಹೇಗಿದೆ ನೋಡಿ
ಎಸ್ಟೇಟ್​​​ನಲ್ಲಿ ಬೀಡುಬಿಟ್ಟ ಕಾಡಾನೆಗಳು: ಗಜಪಡೆ ಕಂಡು ಸ್ಥಳೀಯರು ಕಂಗಾಲು
ಎಸ್ಟೇಟ್​​​ನಲ್ಲಿ ಬೀಡುಬಿಟ್ಟ ಕಾಡಾನೆಗಳು: ಗಜಪಡೆ ಕಂಡು ಸ್ಥಳೀಯರು ಕಂಗಾಲು
ಕೊನೆಗೂ ಮೌನ ಮುರಿದ ಡಿಕೆಶಿ, ಪ್ರಮಾಣವಚನದ ಬಗ್ಗೆ ಹೇಳಿದ್ದಿಷ್ಟು
ಕೊನೆಗೂ ಮೌನ ಮುರಿದ ಡಿಕೆಶಿ, ಪ್ರಮಾಣವಚನದ ಬಗ್ಗೆ ಹೇಳಿದ್ದಿಷ್ಟು
ಯುವತಿ ದೇಹ ಸುಟ್ಟು ಹೋಗಿದ್ದರೂ ಆಕೆಯನ್ನೇ ಮದುವೆಯಾದ ವರ
ಯುವತಿ ದೇಹ ಸುಟ್ಟು ಹೋಗಿದ್ದರೂ ಆಕೆಯನ್ನೇ ಮದುವೆಯಾದ ವರ
ಸಿದ್ದರಾಮಯ್ಯ ಆಪ್ತರೇ ಸಹಿ ಸಂಗ್ರಹಿಸಿ ಬೆನ್ನಿಗೆ ಚೂರಿ ಹಾಕಿದ್ರಾ?
ಸಿದ್ದರಾಮಯ್ಯ ಆಪ್ತರೇ ಸಹಿ ಸಂಗ್ರಹಿಸಿ ಬೆನ್ನಿಗೆ ಚೂರಿ ಹಾಕಿದ್ರಾ?
ಸಿದ್ದರಾಮಯ್ಯ ಟೀಮ್​​​ಗೆ ಢವಢವ: ಈ 13 ಜನರಿಗೆ ಸಚಿವ ಸ್ಥಾನ ಫಿಕ್ಸ್​​?
ಸಿದ್ದರಾಮಯ್ಯ ಟೀಮ್​​​ಗೆ ಢವಢವ: ಈ 13 ಜನರಿಗೆ ಸಚಿವ ಸ್ಥಾನ ಫಿಕ್ಸ್​​?
ರಾಯಚೂರು ಡೀಸೆಲ್ ಕೊರತೆ: ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ
ರಾಯಚೂರು ಡೀಸೆಲ್ ಕೊರತೆ: ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ
ಕನ್ನಡ ಚಿತ್ರರಂಗಕ್ಕೆ ಗಟ್ಟಿ ನಾಯಕತ್ವದ ಅವಶ್ಯಕತೆ ಇದೆ: ಸುಮಲತಾ
ಕನ್ನಡ ಚಿತ್ರರಂಗಕ್ಕೆ ಗಟ್ಟಿ ನಾಯಕತ್ವದ ಅವಶ್ಯಕತೆ ಇದೆ: ಸುಮಲತಾ