AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರವೇ ಕೊನೆಯಾಗಲಿದೆ ವರ್ತೂರು ಸಂತೋಷ್-ತುಕಾಲಿ ಫ್ರೆಂಡ್​ಶಿಪ್​; ಸಿಕ್ಕಿದೆ ಸೂಚನೆ

ಇಬ್ಬರೂ ಸಂತೋಷ್ ಎಲ್ಲೇ ಹೋದರೂ ಇಬ್ಬರೂ ಒಟ್ಟಿಗೇ ಇರುತ್ತಾರೆ. ಒಂದೇ ತಂಡದಲ್ಲಿ ಆಡಲು ಬಯಸುತ್ತಾರೆ. ಆದರೆ, ಇವರ ಫ್ರೆಂಡ್​ಶಿಪ್ ಶೀಘ್ರವೇ ಕೊನೆ ಆಗಬಹುದು ಅನ್ನೋದು ಪ್ರತಾಪ್ ಅಭಿಪ್ರಾಯ.

ಶೀಘ್ರವೇ ಕೊನೆಯಾಗಲಿದೆ ವರ್ತೂರು ಸಂತೋಷ್-ತುಕಾಲಿ ಫ್ರೆಂಡ್​ಶಿಪ್​; ಸಿಕ್ಕಿದೆ ಸೂಚನೆ
ವರ್ತೂರು-ತುಕಾಲಿ
ರಾಜೇಶ್ ದುಗ್ಗುಮನೆ
|

Updated on:Dec 14, 2023 | 10:27 AM

Share

ವರ್ತೂರು ಸಂತೋಷ್ ಹಾಗೂ ತುಕಾಲಿ ಸಂತೋಷ್ (Tukali Santosh) ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಒಬ್ಬರ ಮಾತನ್ನು ಒಬ್ಬರು ಕೇಳುತ್ತಿದ್ದಾರೆ. ಇಬ್ಬರ ಫ್ರೆಂಡ್​ಶಿಪ್ ಬ್ರೇಕ್ ಆಗುವ ಸೂಚನೆ ಸಿಕ್ಕಿದೆ. ಇಬ್ಬರ ಜೊತೆಯೂ ಒಳ್ಳೆಯ ಒಡನಾಟ ಹೊಂದಿರುವ ಪ್ರತಾಪ್ ಅವರು ಈ ಬಗ್ಗೆ ಸೂಚನೆ ನೀಡಿದ್ದಾರೆ. ಇವರ ಮಧ್ಯೆ ಯಾವುದೂ ಸರಿ ಇಲ್ಲ ಎಂದು ಅವರು ಹೇಳಿದ್ದಾರೆ. ಹಾಗಾದಲ್ಲಿ ಸ್ಪರ್ಧೆ ಮತ್ತಷ್ಟು ಹೆಚ್ಚಲಿದೆ. ಕಲರ್ಸ್ ಕನ್ನಡ, ಜಿಯೋ ಸಿನಿಮಾದಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತಿದೆ.

ತುಕಾಲಿ ಸಂತೋಷ್ ಹಾಗೂ ವರ್ತೂರು ಸಂತೋಷ್ ಆರಂಭದಲ್ಲಿ ಬೇರೆ ಬೇರೆ ಆಗೇ ಇದ್ದರು. ಯಾವಾಗ ವರ್ತೂರು ಸಂತೋಷ್ ಅವರು ಹೊರಗೆ ಹೋಗಿ ಬಂದರೋ ತುಕಾಲಿ ಜೊತೆ ಫ್ರೆಂಡ್​ಶಿಪ್ ಬೆಳೆಯಿತು. ಈಗ ಎಲ್ಲೇ ಹೋದರೂ ಇಬ್ಬರೂ ಒಟ್ಟಿಗೇ ಇರುತ್ತಾರೆ. ಒಂದೇ ತಂಡದಲ್ಲಿ ಆಡಲು ಬಯಸುತ್ತಾರೆ. ಆದರೆ, ಇವರ ಫ್ರೆಂಡ್​ಶಿಪ್ ಶೀಘ್ರವೇ ಕೊನೆ ಆಗಬಹುದು ಅನ್ನೋದು ಪ್ರತಾಪ್ ಅಭಿಪ್ರಾಯ.

ಇದನ್ನೂ ಓದಿ: ‘ನಾನೇ ಕಾರಣ ಅನಿಸುತ್ತೆ’; ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರು ಸಂತೋಷ್​ಗೆ ಮಾತ್ರ

ಕಾರ್ತಿಕ್ ಹಾಗೂ ಸಂಗೀತಾ ಜೊತೆ ಡ್ರೋನ್ ಪ್ರತಾಪ್ ಕುಳಿತಿದ್ದರು. ಈ ವೇಳೆ ಅವರು ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ. ‘ವರ್ತೂರು ಸಂತೋಷ್​ ಅವರಿಗೆ ಕಾಮಿಡಿ ಸಂತೋಷ್​ ಮೇಲೆ ಅಸಮಧಾನ ಇದೆ. ಮೊದಲಿದ್ದ ಬಾಂಡಿಂಗ್ ಈಗ ಇಲ್ಲ. ಅದನ್ನು ಎಲ್ಲಿಯೂ ತೋರಿಸಿಕೊಳ್ಳುತ್ತಿಲ್ಲ. ಇದು ಸರಿ ಹೋದರೂ ಹೋಗಬಹುದು’ ಎಂದಿದ್ದಾರೆ ಡ್ರೋನ್ ಪ್ರತಾಪ್.

ಇದನ್ನೂ ಓದಿ: ‘ನನಗೆ ಪ್ರತಾಪ್​ ತುಂಬ ಇಷ್ಟ’: ಕನ್ಫೆಷನ್​​ ರೂಮ್​ನಲ್ಲಿ ಕಣ್ಣೀರು ಹಾಕಿಕೊಂಡು ಹೇಳಿದ ಸಂಗೀತಾ

ಪ್ರತಾಪ್ ಅವರು ಬಿಗ್ ಬಾಸ್​ನಲ್ಲಿ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಾ ಇರುತ್ತಾರೆ. ಅವರಿಗೆ ಇಬ್ಬರೂ ಸಂತೋಷ್ ಜೊತೆ ಒಳ್ಳೆಯ ಬಾಂಧವ್ಯ ಇದೆ. ಹೀಗಾಗಿ ಅವರ ಊಹೆ ಸರಿ ಆದರೂ ಅಚ್ಚರಿ ಏನಿಲ್ಲ. ಈ ವಾರ ಫನ್ ಟಾಸ್ಕ್​ ನೀಡಲಾಗುತ್ತಿದೆ. ಹೀಗಾಗಿ, ಹೆಚ್ಚು ಜಗಳ ನಡೆದಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:21 am, Thu, 14 December 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ