AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಞಾನೋದಯವೋ ಅಥವಾ ನಾಟಕವೋ? ಸಂಗೀತಾನ ಹಾಡಿ ಹೊಗಳಿದ ತುಕಾಲಿ ಸಂತೋಷ್

ಸಂತೋಷ್ ಅವರ ಬಗ್ಗೆ ಪಾಸಿಟಿವ್ ಹಾಗೂ ನೆಗೆಟಿವ್ ಟಾಕ್ ಎರಡೂ ಇದೆ. ಅವರನ್ನು ಅನೇಕರು ಶಕುನಿ ಎಂದು ಕರೆದಿದ್ದಾರೆ. ಅವರಿಗೆ ಈಗ ಜ್ಞಾನೋದಯ ಆದಂತೆ ಕಾಣುತ್ತಿದೆ. ಕೆಲವರು ಇದನ್ನು ನಾಟಕ ಎಂದಿದ್ದಾರೆ.

ಜ್ಞಾನೋದಯವೋ ಅಥವಾ ನಾಟಕವೋ? ಸಂಗೀತಾನ ಹಾಡಿ ಹೊಗಳಿದ ತುಕಾಲಿ ಸಂತೋಷ್
ಸಂಗೀತಾ-ಸಂತೋಷ್
ರಾಜೇಶ್ ದುಗ್ಗುಮನೆ
|

Updated on: Nov 09, 2023 | 10:47 AM

Share

ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಪ್ರಸಾರ ಆಗುತ್ತಿರುವ ಬಿಗ್ ಬಾಸ್ (Bigg Boss) ಕನ್ನಡ ಸೀಸನ್ 10ರ ರಂಗು ದಿನ ಕಳೆದಂತೆ ಹೆಚ್ಚುತ್ತಿದೆ. ಪ್ರತಿ ವರ್ಷದಂತೆ ಈ ವರ್ಷವೂ ಹಲವು ಮನಸ್ಥಿತಿಯುಳ್ಳ ಸ್ಪರ್ಧಿಗಳು ದೊಡ್ಮನೆಗೆ ಬಂದಿದ್ದಾರೆ. ಈ ಪೈಕಿ ತುಕಾಲಿ ಸಂತೋಷ್ ಅವರು ಹೆಚ್ಚು ಗಮನ ಸೆಳೆಯುತ್ತಿದ್ದಾರೆ. ಅವರ ಬಗ್ಗೆ ಪಾಸಿಟಿವ್ ಹಾಗೂ ನೆಗೆಟಿವ್ ಟಾಕ್ ಎರಡೂ ಇದೆ. ಅವರನ್ನು ಅನೇಕರು ಶಕುನಿ ಎಂದು ಕರೆದಿದ್ದಾರೆ. ಅವರಿಗೆ ಈಗ ಜ್ಞಾನೋದಯ ಆದಂತೆ ಕಾಣುತ್ತಿದೆ. ಕೆಲವರು ಇದನ್ನು ನಾಟಕ ಎಂದಿದ್ದಾರೆ.

ಹುಲಿ ಉಗುರು ಪ್ರಕರಣದಲ್ಲಿ ವರ್ತೂರು ಸಂತೋಷ್ ಅವರು ದೊಡ್ಮನೆಯಿಂದ ಹೊರಗೆ ಬಂದರು. ಒಂದು ವಾರ ಬಿಟ್ಟು ಅವರು ಮತ್ತೆ ಬಿಗ್ ಬಾಸ್ ಮನೆ ಒಳಗೆ ಹೋಗಿದ್ದಾರೆ. ಸ್ಪರ್ಧಿಗಳ ಬಗ್ಗೆ ಹೊರ ಜಗತ್ತಿನಲ್ಲಿ ಯಾವ ರೀತಿಯ ಅಭಿಪ್ರಾಯ ಇದೆ ಎಂಬುದು ಅವರಿಗೆ ಅರ್ಥವಾದಂತೆ ಇದೆ. ಈ ಕಾರಣದಿಂದಲೇ ಅವರು ಪ್ರತಾಪ್ ಜೊತೆ ಫ್ರೆಂಡ್​ಶಿಪ್ ಬೆಳೆಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಅಷ್ಟೇ ಅಲ್ಲ ತುಕಾಲಿ ಸಂತೋಷ್​ಗೆ ಇದನ್ನು ತಿಳಿ ಹೇಳಲು ಪ್ರಯತ್ನಿಸಿದ್ದಾರೆ.

‘ನಿಮ್ಮ ಗುಂಪು ಸರಿ ಇಲ್ಲ. ಅಲ್ಲಿ ಒಬ್ಬರನ್ನು ಕಂಡರೆ ಒಬ್ಬರಿಗೆ ಆಗಲ್ಲ. ಟಾಸ್ಕ್ ಮುಗಿದ ಬಳಿಕವೂ ಆ ಬಗ್ಗೆ ಚರ್ಚೆ ಮಾಡುತ್ತಾರೆ. ನಮ್ಮ ಟೀಂನಲ್ಲಿ ಹಾಗಿಲ್ಲ. ಟಾಸ್ಕ್ ಮುಗಿದ ಬಳಿಕ ನಾವು ಆ ಬಗ್ಗೆ ಮಾತೇ ಆಡಲ್ಲ’ ಎಂದು ತುಕಾಲಿ ಸಂತೋಷ್ ಬಳಿ ವರ್ತೂರು ಸಂತೋಷ್ ಹೇಳಿದರು. ಇದು ತುಕಾಲಿ ಸಂತೋಷ್​ಗೆ ಹೌದೆನ್ನಿಸಿದೆ.

‘ಹೌದು ಅಣ್ಣಾ. ನನಗೆ ಈಗ ಎಲ್ಲವೂ ಗೊತ್ತಾಗ್ತಾ ಇದೆ. ನಮ್ಮ ಟೀಂನ ಕಚ್ಚಾಡ್ಕೊಂಡು ಇರ್ತಾರೆ. ಸಂಗೀತಾ ಕೆಟ್ಟವರು ಎಂದುಕೊಂಡಿದ್ದೆ. ಅವರು ನಿಜಕ್ಕೂ ಒಳ್ಳೆಯವರು’ ಎಂದರು ತುಕಾಲಿ ಸಂತೋಷ್. ಅವರ ಈ ಮಾತು ಅನೇಕರಿಗೆ ಅಚ್ಚರಿ ಮೂಡಿಸಿದೆ. ಇದು ಜ್ಞಾನೋದಯವೋ ಅಥವಾ ನಾಟಕವೋ ಎನ್ನುವ ಪ್ರಶ್ನೆ ಕಾಡಿದೆ.

ಇದನ್ನೂ ಓದಿ: ‘ಕಾರ್ತಿಕ್​ನ ಸಂಗೀತಾ ಟಿಶ್ಯೂ ರೀತಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ’; ಬಿಗ್ ಬಾಸ್​ನಲ್ಲಿ ಕೇಳಿತು ಹೊಸ ಆರೋಪ

ಬಿಗ್ ಬಾಸ್ ಮನೆಯಲ್ಲಿ ತಂಡದ ನಾಯಕನಾಗಿ ಡ್ರೋನ್ ಪ್ರತಾಪ್ ಅವರು ಒಳ್ಳೆಯ ಪರ್ಫಾರ್ಮೆನ್ಸ್ ನೀಡುತ್ತಿದ್ದಾರೆ. ಹೀಗಾಗಿ ಸಾಲು ಸಾಲು ಮ್ಯಾಚ್​ಗಳನ್ನು ಅವರು ಗೆಲ್ಲುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು