AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಞಾನೋದಯವೋ ಅಥವಾ ನಾಟಕವೋ? ಸಂಗೀತಾನ ಹಾಡಿ ಹೊಗಳಿದ ತುಕಾಲಿ ಸಂತೋಷ್

ಸಂತೋಷ್ ಅವರ ಬಗ್ಗೆ ಪಾಸಿಟಿವ್ ಹಾಗೂ ನೆಗೆಟಿವ್ ಟಾಕ್ ಎರಡೂ ಇದೆ. ಅವರನ್ನು ಅನೇಕರು ಶಕುನಿ ಎಂದು ಕರೆದಿದ್ದಾರೆ. ಅವರಿಗೆ ಈಗ ಜ್ಞಾನೋದಯ ಆದಂತೆ ಕಾಣುತ್ತಿದೆ. ಕೆಲವರು ಇದನ್ನು ನಾಟಕ ಎಂದಿದ್ದಾರೆ.

ಜ್ಞಾನೋದಯವೋ ಅಥವಾ ನಾಟಕವೋ? ಸಂಗೀತಾನ ಹಾಡಿ ಹೊಗಳಿದ ತುಕಾಲಿ ಸಂತೋಷ್
ಸಂಗೀತಾ-ಸಂತೋಷ್
ರಾಜೇಶ್ ದುಗ್ಗುಮನೆ
|

Updated on: Nov 09, 2023 | 10:47 AM

Share

ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಪ್ರಸಾರ ಆಗುತ್ತಿರುವ ಬಿಗ್ ಬಾಸ್ (Bigg Boss) ಕನ್ನಡ ಸೀಸನ್ 10ರ ರಂಗು ದಿನ ಕಳೆದಂತೆ ಹೆಚ್ಚುತ್ತಿದೆ. ಪ್ರತಿ ವರ್ಷದಂತೆ ಈ ವರ್ಷವೂ ಹಲವು ಮನಸ್ಥಿತಿಯುಳ್ಳ ಸ್ಪರ್ಧಿಗಳು ದೊಡ್ಮನೆಗೆ ಬಂದಿದ್ದಾರೆ. ಈ ಪೈಕಿ ತುಕಾಲಿ ಸಂತೋಷ್ ಅವರು ಹೆಚ್ಚು ಗಮನ ಸೆಳೆಯುತ್ತಿದ್ದಾರೆ. ಅವರ ಬಗ್ಗೆ ಪಾಸಿಟಿವ್ ಹಾಗೂ ನೆಗೆಟಿವ್ ಟಾಕ್ ಎರಡೂ ಇದೆ. ಅವರನ್ನು ಅನೇಕರು ಶಕುನಿ ಎಂದು ಕರೆದಿದ್ದಾರೆ. ಅವರಿಗೆ ಈಗ ಜ್ಞಾನೋದಯ ಆದಂತೆ ಕಾಣುತ್ತಿದೆ. ಕೆಲವರು ಇದನ್ನು ನಾಟಕ ಎಂದಿದ್ದಾರೆ.

ಹುಲಿ ಉಗುರು ಪ್ರಕರಣದಲ್ಲಿ ವರ್ತೂರು ಸಂತೋಷ್ ಅವರು ದೊಡ್ಮನೆಯಿಂದ ಹೊರಗೆ ಬಂದರು. ಒಂದು ವಾರ ಬಿಟ್ಟು ಅವರು ಮತ್ತೆ ಬಿಗ್ ಬಾಸ್ ಮನೆ ಒಳಗೆ ಹೋಗಿದ್ದಾರೆ. ಸ್ಪರ್ಧಿಗಳ ಬಗ್ಗೆ ಹೊರ ಜಗತ್ತಿನಲ್ಲಿ ಯಾವ ರೀತಿಯ ಅಭಿಪ್ರಾಯ ಇದೆ ಎಂಬುದು ಅವರಿಗೆ ಅರ್ಥವಾದಂತೆ ಇದೆ. ಈ ಕಾರಣದಿಂದಲೇ ಅವರು ಪ್ರತಾಪ್ ಜೊತೆ ಫ್ರೆಂಡ್​ಶಿಪ್ ಬೆಳೆಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಅಷ್ಟೇ ಅಲ್ಲ ತುಕಾಲಿ ಸಂತೋಷ್​ಗೆ ಇದನ್ನು ತಿಳಿ ಹೇಳಲು ಪ್ರಯತ್ನಿಸಿದ್ದಾರೆ.

‘ನಿಮ್ಮ ಗುಂಪು ಸರಿ ಇಲ್ಲ. ಅಲ್ಲಿ ಒಬ್ಬರನ್ನು ಕಂಡರೆ ಒಬ್ಬರಿಗೆ ಆಗಲ್ಲ. ಟಾಸ್ಕ್ ಮುಗಿದ ಬಳಿಕವೂ ಆ ಬಗ್ಗೆ ಚರ್ಚೆ ಮಾಡುತ್ತಾರೆ. ನಮ್ಮ ಟೀಂನಲ್ಲಿ ಹಾಗಿಲ್ಲ. ಟಾಸ್ಕ್ ಮುಗಿದ ಬಳಿಕ ನಾವು ಆ ಬಗ್ಗೆ ಮಾತೇ ಆಡಲ್ಲ’ ಎಂದು ತುಕಾಲಿ ಸಂತೋಷ್ ಬಳಿ ವರ್ತೂರು ಸಂತೋಷ್ ಹೇಳಿದರು. ಇದು ತುಕಾಲಿ ಸಂತೋಷ್​ಗೆ ಹೌದೆನ್ನಿಸಿದೆ.

‘ಹೌದು ಅಣ್ಣಾ. ನನಗೆ ಈಗ ಎಲ್ಲವೂ ಗೊತ್ತಾಗ್ತಾ ಇದೆ. ನಮ್ಮ ಟೀಂನ ಕಚ್ಚಾಡ್ಕೊಂಡು ಇರ್ತಾರೆ. ಸಂಗೀತಾ ಕೆಟ್ಟವರು ಎಂದುಕೊಂಡಿದ್ದೆ. ಅವರು ನಿಜಕ್ಕೂ ಒಳ್ಳೆಯವರು’ ಎಂದರು ತುಕಾಲಿ ಸಂತೋಷ್. ಅವರ ಈ ಮಾತು ಅನೇಕರಿಗೆ ಅಚ್ಚರಿ ಮೂಡಿಸಿದೆ. ಇದು ಜ್ಞಾನೋದಯವೋ ಅಥವಾ ನಾಟಕವೋ ಎನ್ನುವ ಪ್ರಶ್ನೆ ಕಾಡಿದೆ.

ಇದನ್ನೂ ಓದಿ: ‘ಕಾರ್ತಿಕ್​ನ ಸಂಗೀತಾ ಟಿಶ್ಯೂ ರೀತಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ’; ಬಿಗ್ ಬಾಸ್​ನಲ್ಲಿ ಕೇಳಿತು ಹೊಸ ಆರೋಪ

ಬಿಗ್ ಬಾಸ್ ಮನೆಯಲ್ಲಿ ತಂಡದ ನಾಯಕನಾಗಿ ಡ್ರೋನ್ ಪ್ರತಾಪ್ ಅವರು ಒಳ್ಳೆಯ ಪರ್ಫಾರ್ಮೆನ್ಸ್ ನೀಡುತ್ತಿದ್ದಾರೆ. ಹೀಗಾಗಿ ಸಾಲು ಸಾಲು ಮ್ಯಾಚ್​ಗಳನ್ನು ಅವರು ಗೆಲ್ಲುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್