AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ತುಕಾಲಿ ಸಂತೋಷ್​ಗೆ ವಾರದ ಆರಂಭದಲ್ಲೇ ಜೈಲು ಶಿಕ್ಷೆ; ಯಾಕೀ ನಿರ್ಧಾರ?

ಬಿಗ್ ಬಾಸ್​ನಲ್ಲಿ ತುಕಾಲಿ ಸಂತೋಷ್ ಅವರಿಗೆ ಶಿಕ್ಷೆ ಆಗಿದೆ. ವಾರದ ಆರಂಭದಲ್ಲೇ ಒಂದು ದಿನ ಶಿಕ್ಷೆ ನೀಡುವ ನಿರ್ಧಾರಕ್ಕೆ ಮನೆ ಮಂದಿ ಬಂದಿದ್ದಾರೆ. ವರ್ತೂರು ಸಂತೋಷ್ ಅವರಿಗೂ ಪರೋಕ್ಷವಾಗಿ ಶಿಕ್ಷೆ ಸಿಕ್ಕಿದೆ.

ಬಿಗ್ ಬಾಸ್ ಮನೆಯಲ್ಲಿ ತುಕಾಲಿ ಸಂತೋಷ್​ಗೆ ವಾರದ ಆರಂಭದಲ್ಲೇ ಜೈಲು ಶಿಕ್ಷೆ; ಯಾಕೀ ನಿರ್ಧಾರ?
ಸಂತೋಷ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 28, 2023 | 2:07 PM

Share

ಬಿಗ್ ಬಾಸ್ (Bigg Boss) ಮನೆಯಲ್ಲಿ ವಾರಾಂತ್ಯದ ವೇಳೆ ಕಳಪೆ ಹಾಗೂ ಉತ್ತಮ ಎನ್ನುವ ಹಣೆಪಟ್ಟಿ ನೀಡಲಾಗುತ್ತದೆ. ಉತ್ತಮ ಪಡೆದವರಿಗೆ ಮೆಡಲ್ ಸಿಕ್ಕರೆ, ಕಳಪೆ ಪಡೆದವರಿಗೆ ಜೈಲು ಶಿಕ್ಷೆ ಆಗುತ್ತದೆ. ಕಳೆದ ವಾರ ತುಕಾಲಿ ಸಂತೋಷ್ ಅವರಿಗೆ ಕಳಪೆ ಸಿಕ್ಕಿತ್ತು. ಟಾಸ್ಕ್ ಉತ್ತಮವಾಗಿ ಆಡಿಲ್ಲ ಎನ್ನುವ ಕಾರಣಕ್ಕೆ ಅವರು ಜೈಲು ವಾಸ ಅನುಭವಿಸಬೇಕಾಯಿತು. ಆದರೆ, ಅಲ್ಲಿ ನಡೆದಿದ್ದೇ ಬೇರೆ. ಸಂತೋಷ್ ನಿಯಮ ಮೀರಿದ್ದರು. ಇದಕ್ಕೆ ಸುದೀಪ್ ಅವರು ಸಂತೋಷ್​ಗೆ ಯಾವ ಶಿಕ್ಷೆ ನೀಡಬೇಕು ಎಂಬುದನ್ನು ನಿರ್ಧರಿಸಲು ಮನೆಯವರಿಗೆ ಅಧಿಕಾರ ನೀಡಿದ್ದರು. ಇದರ ಪ್ರಕಾರ ಮನೆಯ ಸದಸ್ಯರು ಶಿಕ್ಷೆ ನಿರ್ಧರಿಸಿದ್ದಾರೆ.

ವರ್ತೂರು ಸಂತೋಷ್ ಅವರು ಜೈಲು ಸೇರಿದ್ದರು. ಮಧ್ಯರಾತ್ರಿ ಅವರು ಜೈಲಿನಿಂದ ಹೊರ ಬಂದಿದ್ದರು. ಕಂಬಿಯಿಂದ ನುಸುಳಿ ಅವರು ತಪ್ಪಿಸಿಕೊಂಡು ಬಂದಿದ್ದರು. ಇದನ್ನು ಹಾಸ್ಯಕ್ಕಾಗಿ ಅವರು ಮಾಡಿದ್ದರು. ಆದರೆ, ಇದು ಗಂಭೀರ ತಪ್ಪು. ಹೀಗಾಗಿ, ಶಿಕ್ಷೆ ಆಗಲೇಬೇಕಿತ್ತು. ಈ ಅಧಿಕಾರವನ್ನು ಮನೆ ಮಂದಿಗೆ ನೀಡಲಾಯಿತು. ಮನೆ ಮಂದಿ ಶಿಕ್ಷೆ ನೀಡುವ ನಿರ್ಧಾರಕ್ಕೆ ಬಂದರು.

ವರ್ತೂರು ಸಂತೋಷ್ ಜೈಲಿನಿಂದ ಹೊರ ಬರಲು ತುಕಾಲಿ ಸಂತೋಷ್ ಕೂಡ ಕಾರಣ. ಅವರು ಸಾಕಷ್ಟು ಸ್ಫೂರ್ತಿದಾಯಕ ಮಾತುಗಳನ್ನು ಆಡಿದ್ದರು. ಒಂದೊಮ್ಮೆ ಜೈಲಿನಿಂದ ಹೊರಬರುವಾಗ ಇದು ತಪ್ಪು ಎನ್ನುವ ಮಾತನ್ನು ಹೇಳಿದ್ದರೆ ಬಹುಶಃ ವರ್ತೂರು ಸಂತೋಷ್ ಅವರು ಈ ಕೆಲಸ ಮಾಡುತ್ತಿರಲಿಲ್ಲವೇನೋ. ಈ ಕಾರಣದಿಂದ ತುಕಾಲಿ ಸಂತೋಷ್​ಗೆ ಜೈಲು ಶಿಕ್ಷೆ ನೀಡಲು ಮನೆ ಮಂದಿ ನಿರ್ಧರಿಸಿದರು.

ಆರಂಭದಲ್ಲಿ ಇಡೀ ದಿನ ಮನೆಯ ಎಲ್ಲಾ ಕೆಲಸವನ್ನು ಸಂತೋಷ್ ಮಾಡಬೇಕು ಎನ್ನುವ ಶಿಕ್ಷೆ ನೀಡಲು ಆಲೋಚಿಸಲಾಯಿತು. ಆದರೆ ಇದಕ್ಕೆ ಒಮ್ಮತ ಸಿಗಲಿಲ್ಲ. ಆ ಬಳಿಕ ತುಕಾಲಿ ಸಂತೋಷ್ ಅವರನ್ನು ಒಂದು ದಿನ ಜೈಲಿನಲ್ಲಿ ಇರಿಸಿ ವರ್ತೂರು ಅವರು ತುಕಾಲಿಯನ್ನು ಭೇಟಿ ಮಾಡಬಾರದು ಎನ್ನುವ ಷರತ್ತನ್ನು ಹಾಕಲಾಯಿತು. ಮನೆಯ ಆ್ಯಕ್ಟಿಂಗ್ ಕ್ಯಾಪ್ಟನ್ ಮೈಕಲ್ ಅವರು ಬಿಗ್ ಬಾಸ್ ಬಳಿ ಹೋಗಿ ತಾವು ಈ ಶಿಕ್ಷೆ ನಿರ್ಧರಿಸಿದ್ದೇವೆ, ದಯವಿಟ್ಟು ಕೀ ಕಳುಹಿಸಿಕೊಡಿ ಎಂದಿದ್ದಾರೆ.

ಇದನ್ನೂ ಓದಿ: Bigg Boss Kannada: ವೈಲ್ಡ್ ಕಾರ್ಡ್ ಎಂಟ್ರಿ ಬಳಿಕ ಬಿಗ್ ಬಾಸ್​ನಲ್ಲಿ ಸ್ಟಾರ್ಟ್ ಆಯ್ತು ಫೈಟ್; ನೆಲಕ್ಕೆ ಬಿದ್ದ ಸಂತೋಷ್

ಆದರೆ, ಬಿಗ್ ಬಾಸ್ ಕಡೆಯಿಂದ ಕೀ ಬಂದಿಲ್ಲ. ಹೀಗಾಗಿ, ಶಿಕ್ಷೆ ಮುಂದಕ್ಕೆ ಹೋಗುವ ಸಾಧ್ಯತೆ ಇದೆ. ಈ ವಾರ ವರ್ತೂರು ಸಂತೋಷ್ ಅವರು ನಾಮಿನೇಟ್ ಆಗಿದ್ದಾರೆ. ಅವರಿಗೆ ತಮ್ಮನ್ನು ತಾವು ಸಾಬೀತು ಮಾಡಿಕೊಳ್ಳಬೇಕಿದೆ. ತುಕಾಲಿ ಸಂತೋಷ್ ಅವರು ನಾಮಿನೇಷನ್​ನಿಂದ ಬಚಾವ್ ಆಗಿದ್ದಾರೆ. ಹೀಗಾಗಿ, ಅವರು ಒಂದು ದಿನ ಜೈಲಿನಲ್ಲಿ ಇದ್ದರೂ ಅಂಥ ಬದಲಾವಣೆ ಏನು ಆಗುವುದಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ