AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ ಮನೆಗೆ ಬಂದು ಎರಡು ಲಕ್ಷ ರೂಪಾಯಿ ಕಳೆದುಕೊಂಡ ತುಕಾಲಿ ಸಂತೋಷ್

‘ಹಬ್ಬನ ಸಖತ್ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಹೊರಗಿದ್ದರೆ ದಾನ-ಧರ್ಮ ಮಾಡುತ್ತಿದ್ದೆ. ಆದರೆ, ಈ ಬಾರಿ ಅದು ಸಾಧ್ಯವಾಗುತ್ತಿಲ್ಲ’ ಎಂದರು ಸಂತೋಷ್. ಇದೇ ವಿಚಾರ ಇಟ್ಟುಕೊಂಡು ಸುದೀಪ್ ಅವರು ಸಂತುನ ಕಾಲೆಳೆದರು.

ಬಿಗ್ ಬಾಸ್​ ಮನೆಗೆ ಬಂದು ಎರಡು ಲಕ್ಷ ರೂಪಾಯಿ ಕಳೆದುಕೊಂಡ ತುಕಾಲಿ ಸಂತೋಷ್
ಸಂತೋಷ್
ರಾಜೇಶ್ ದುಗ್ಗುಮನೆ
|

Updated on:Oct 30, 2023 | 9:35 AM

Share

ತುಕಾಲಿ ಸಂತೋಷ್ (Tukali Santosh) ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಗಮನ ಸೆಳೆಯುತ್ತಿದ್ದಾರೆ. ಆರಂಭದಲ್ಲಿ ಅವರು ಮಾಡಿದ ಕಮೆಂಟ್​ಗಳು ಕೆಲವರಿಗೆ ಬೇಸರ ಮೂಡಿಸಿದ್ದವು. ಡ್ರೋನ್ ಪ್ರತಾಪ್​ನ ಹೀಯಾಳಿಸಿ ಅವರು ಮಾತನಾಡಿದ್ದರು. ಸುದೀಪ್ ಅವರು ಕ್ಲಾಸ್ ತೆಗೆದುಕೊಂಡ ಬಳಿಕವೂ ತಂತೋಷ್ ಅವರು ಅಷ್ಟಾಗಿ ಬದಲಾಗಿಲ್ಲ. ಅವರಿವರ ಬಗ್ಗೆ ಮಾತನಾಡುತ್ತಲೇ ಇರುತ್ತಾರೆ. ಈಗ ಸಂತೋಷ್ ಅವರ 2 ಲಕ್ಷ ರೂಪಾಯಿ ಬೇರೆಯವರ ಖಾತೆಗೆ ಜಮಾ ಆಗಿದೆ. ಈ ಬಗ್ಗೆ ಸುದೀಪ್ ಅವರೇ ಮಾಹಿತಿ ನೀಡಿದ್ದಾರೆ.

ಶನಿವಾರದ (ಅಕ್ಟೋಬರ್ 28) ಎಪಿಸೋಡ್​ನಲ್ಲಿ ನವರಾತ್ರಿ ಹಬ್ಬವನ್ನು ಎಷ್ಟು ಮಿಸ್ ಮಾಡಿಕೊಳ್ಳುತ್ತೀರಿ ಎಂದು ಸುದೀಪ್ ಅವರು ಪ್ರಶ್ನೆ ಮಾಡಿದ್ದರು. ಇದಕ್ಕೆ ತುಕಾಲಿ ಅವರು ಉತ್ತರಿಸಿದ್ದರು. ‘ಹಬ್ಬನ ಸಖತ್ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಹೊರಗಿದ್ದರೆ ದಾನ-ಧರ್ಮ ಮಾಡುತ್ತಿದ್ದೆ. ಆದರೆ, ಈ ಬಾರಿ ಅದು ಸಾಧ್ಯವಾಗುತ್ತಿಲ್ಲ’ ಎಂದರು ಸಂತೋಷ್. ಇದೇ ವಿಚಾರ ಇಟ್ಟುಕೊಂಡು ಸುದೀಪ್ ಅವರು ಸಂತುನ ಕಾಲೆಳೆದರು.

‘ಅಷ್ಟೇನಾ.. ನಿಮ್ಮ ಖಾತೆಯಲ್ಲಿರುವ ಹಣವನ್ನು ನಾವು ಬಳಸಿಕೊಳ್ಳುತ್ತೇವೆ. ಆ ಹಣದಿಂದ ದಾನ ಧರ್ಮ ಮಾಡುತ್ತೇವೆ. ಪ್ರತಿ ವಾರ ನಿಮಗೆ ಕ್ರೆಡಿಟ್ ಆಗುವ ಸಂಭಾವನೆಯನ್ನು ದಾನ ಧರ್ಮಕ್ಕೆ ಬಳಕೆ ಮಾಡಿಕೊಳ್ಳುತ್ತೇವೆ’ ಎಂದು ಹೇಳಿದ್ದರು ಸುದೀಪ್.

ಭಾನುವಾರದ ಎಪಿಸೋಡ್​ನಲ್ಲಿ ಈ ವಿಚಾರ ಚರ್ಚೆಗೆ ಬಂದಿದೆ. ‘ತುಕಾಲಿ ಅವರೇ ನಿಮ್ಮ ಖಾತೆಯಿಂದ ಎರಡು ಲಕ್ಷ ರೂಪಾಯಿ ತೆಗೆದುಕೊಂಡಿದ್ದೇವೆ. ಈ ಹಣವನ್ನು ದಾನ ಧರ್ಮ ಮಾಡಿದ್ದೇವೆ’ ಎಂದರು ಸುದೀಪ್. ಇದನ್ನು ಕೇಳಿ ಸಂತೋಷ್ ಅವರು ಕಂಗಾಲಾದರು. ‘ಅಣ್ಣ ದಯವಿಟ್ಟು ಬೇಡ. ಆ ದುಡ್ಡು ಎಲ್ಲಿ ಹೋಯಿತು ಎಂದು ಹೆಂಡತಿ ಕೇಳ್ತಾಳೆ. ದಯವಿಟ್ಟು ಹಣ ವಾಪಾಸು ಮಾಡಿ’ ಎಂದು ಕೋರಿದರು.

ಇದನ್ನೂ ಓದಿ: ಬಿಗ್ ಬಾಸ್ ಮನೆಗೆ ವರ್ತೂರು ಸಂತೋಷ್ ರೀ-ಎಂಟ್ರಿ; ಬದಲಾಗಲಿದೆ ಲೆಕ್ಕಾಚಾರ?

‘ನೀವು ಮದುವೆ ಆದವರು. ನಿಮ್ಮ ಹೆಂಡತಿ. ನಿಮ್ಮದೇ ಬ್ಯಾಂಕ್ ಖಾತೆ. ನಾವೇಕೆ ಆ ಬಗ್ಗೆ ತಲೆಕೆಡಿಸಿಕೊಳ್ಳಬೇಕು’ ಎಂದು ಸುದೀಪ್ ನಗುತ್ತಲೇ ಉತ್ತರಿಸಿದರು. ಭಾನುವಾರದ ಎಪಿಸೋಡ್ ಸಖತ್ ಫನ್ ಆಗಿತ್ತು. ಎರಡು ಲಕ್ಷ ರೂಪಾಯಿ ವಿಚಾರ ಕೂಡ ಹಾಸ್ಯದ ರೂಪದಲ್ಲೇ ಹೇಳಿದ್ದು. ಮನೆಯವರು ಇದೇ ಅರ್ಥದಲ್ಲಿ ತೆಗೆದುಕೊಂಡರು.

ರಾತ್ರಿ 9:30ಕ್ಕೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಎಪಿಸೋಡ್ ಪ್ರಸಾರ ಕಾಣುತ್ತದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ ಲೈವ್ ಕೂಡ ನೋಡಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:05 am, Mon, 30 October 23

Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?