ಬಿಗ್​ ಬಾಸ್ ಆದೇಶ ಮೀರಿ ನಡೆದುಕೊಂಡ ತುಕಾಲಿ ಸಂತೋಷ್​; ಈ ತಪ್ಪಿನಿಂದ ಎಲ್ಲರಿಗೂ ಶಿಕ್ಷೆ

ಬೆಳಗ್ಗೆ ಆರಂಭವಾದ ಟಾಸ್ಕ್​ ಮಧ್ಯಾಹ್ನ 12.40ರ ತನಕ ಮುಂದುವರಿಯಿತು. ಆದರೆ ಇಷ್ಟು ದೀರ್ಘವಾದ ಕಾಲ ಟಾಸ್ಕ್​ನಲ್ಲಿ ಭಾಗಿ ಆಗಲು ತಕಾಲಿ ಸಂತೋಷ್​ ಅವರಿಗೆ ಸಾಧ್ಯವಾಗಲಿಲ್ಲ. ಬಿಗ್​ ಬಾಸ್ ಮನೆಯ ಮೂಲ ನಿಯಮವನ್ನು ಅವರು ಉಲ್ಲಂಘಿಸಿದರು. ಅದರಿಂದಾಗಿ ಕೆಲವು ದಿನಸಿ ವಸ್ತುಗಳನ್ನು ವಾಪಸ್​ ಪಡೆಯಲಾಯಿತು.

ಬಿಗ್​ ಬಾಸ್ ಆದೇಶ ಮೀರಿ ನಡೆದುಕೊಂಡ ತುಕಾಲಿ ಸಂತೋಷ್​; ಈ ತಪ್ಪಿನಿಂದ ಎಲ್ಲರಿಗೂ ಶಿಕ್ಷೆ
ಮೈಕೆಲ್​, ತುಕಾಲಿ ಸಂತೋಷ್​
Follow us
|

Updated on: Nov 06, 2023 | 10:57 PM

‘ಬಿಗ್​ ಬಾಸ್​ ಕನ್ನಡ ಸೀಸನ್​ 10’ (Bigg Boss Kannada) ದಿನದಿಂದ ದಿನಕ್ಕೆ ರೋಚಕತೆ ಪಡೆದುಕೊಳ್ಳುತ್ತಿದೆ. 5ನೇ ವಾರದ ಆಟ ಇನ್ನಷ್ಟು ಕಠಿಣ ಆಗಿದೆ. ಸೋಮವಾರದ (ನವೆಂಬರ್ 06​) ಎಪಿಸೋಡ್​ನ ಆರಂಭದಲ್ಲೇ ಬಿಗ್​ ಬಾಸ್​ (Bigg Boss) ಒಂದು ಟಾಸ್ಕ್​ ನೀಡಿದರು. ಬೆಳಿಗ್ಗೆ ಎದ್ದ ಕೂಡಲೇ ಯಾರೂ ಕೂಡ ಬೆಡ್​ ರೂಂ ಬಿಟ್ಟು ಹೊರಗೆ ಬರಬಾರದು ಎಂದು ಆದೇಶಿಸಿದರು. ಕೆಲವು ನಿಮಿಷಗಳ ಬಳಿಕ ಎಲ್ಲರೂ ಒಂದೇ ಸೋಫಾದ ಮೇಲೆ ಕುಳಿತುಕೊಳ್ಳಬೇಕು. ನೆಲದ ಮೇಲೆ ಯಾರೂ ಕಾಲು ಇಡುವಂತಿಲ್ಲ ಎಂದು ಆದೇಶಿಸಿದರು. ಯಾರಾದರೂ ಕಾಲು ಕೆಳಗೆ ಇಟ್ಟರೆ ಮನೆಯ ದಿನಸಿ ವಸ್ತುಗಳ ಪೈಕಿ ಕೆಲವನ್ನು ವಾಪಸ್​ ಪಡೆಯಲಾಗುವುದು ಎಂದು ನಿಯಮ ಹಾಕಲಾಗಿತ್ತು. ಈ ಟಾಸ್ಕ್​ ವೇಳೆ ತುಕಾಲಿ ಸಂತೋಷ್​ (Tukali Santosh) ಅವರು ಬಿಗ್​ ಬಾಸ್​ ಮನೆಯ ನಿಯಮಕ್ಕೆ ವಿರುದ್ಧವಾಗಿ ನಡೆದುಕೊಂಡರು. ಅದರಿಂದ ಎಲ್ಲರಿಗೂ ಶಿಕ್ಷೆ ಆಗಿದೆ.

ಬಿಗ್​ ಬಾಸ್​ ಮನೆಯಲ್ಲಿ ಯಾರೂ ಕೂಡ ಹಗಲು ಹೊತ್ತಿನಲ್ಲಿ ನಿದ್ರೆ ಮಾಡುವಂತಿಲ್ಲ. ಅದರಲ್ಲೂ ಟಾಸ್ಕ್​ ವೇಳೆ ಮಲಗಿದರೆ ಮೂಲ ನಿಯಮವನ್ನು ಉಲ್ಲಂಘನೆ ಮಾಡಿದಂತೆ ಆಗುತ್ತದೆ. ಬೆಡ್​ ರೂಮ್​ ಒಳಗೆ ಒಂದೇ ಜಾಗದಲ್ಲಿ ಎಲ್ಲರೂ ಇರಬೇಕು ಎಂದು ಬಿಗ್​ ಬಾಸ್​ ಟಾಸ್ಕ್​ ನೀಡಿದ್ದಾಗ ತುಕಾಲಿ ಸಂತೋಷ್​ ಅವರು ಕುಳಿತುಕೊಂಡು ನಿದ್ರೆ ಮಾಡಿದರು. ಇದರಿಂದ ಮನೆಯಲ್ಲಿನ ದಿನಸಿಗಳ ಪೈಕಿ ಹಾಲು ಮತ್ತು ಮೊಟ್ಟೆಯನ್ನು ವಾಪಸ್​ ಪಡೆಯಲಾಯಿತು.

ಇದನ್ನೂ ಓದಿ: BBK 10: ವೀಕೆಂಡ್ ಬಂದರೆ ಸಾಕು ಅಮಾಯಕನಂತೆ ವರ್ತಿಸುತ್ತಾರೆ ತುಕಾಲಿ ಸಂತೋಷ್; ಬಣ್ಣ ಬಯಲು ಮಾಡಿದ ಸುದೀಪ್

ಈ ಘಟನೆ ಆಗುವುದಕ್ಕಿಂತ ಕೆಲವೇ ನಿಮಿಷಗಳ ಮುಂಚೆ ಮೊಟ್ಟೆ ಮತ್ತು ಹಾಲಿನ ಸಲುವಾಗಿ ದೊಡ್ಡ ಮಟ್ಟದ ಚರ್ಚೆ ನಡೆದಿತ್ತು. ಅವರವರ ಪಾಲಿನ ಮೊಟ್ಟೆಯನ್ನು ಮೊದಲೇ ಹಂಚಿಕೆ ಮಾಡಬೇಕು ಎಂದು ಕೆಲವರು ವಾದಿಸಿದ್ದರು. ಹಾಗೆ ಮಾಡಬಾರದು ಎಂದು ಇನ್ನೂ ಕೆಲವರು ಹೇಳಿದ್ದರು. ಇಷ್ಟೆಲ್ಲ ಚರ್ಚೆ ನಡೆದ ಮರುಕ್ಷಣವೇ ತುಕಾಲಿ ಸಂತೋಷ್​ ಅವರು ನಿದ್ರೆ ಮಾಡಿದ್ದರಿಂದ ಇಡೀ ಬಿಗ್​ ಬಾಸ್​ ಮನೆಯ ಸದಸ್ಯರು ಮೊಟ್ಟೆ ಮತ್ತು ಹಾಲನ್ನು ಕಳೆದುಕೊಳ್ಳಬೇಕಾಯಿತು. ಇದರಿಂದ ಇಡೀ ವಾರ ಪೂರ್ತಿ ಮನೆ ಮಂದಿ ಕಷ್ಟಪಡುವಂತಾಗಿದೆ.

ಇದನ್ನೂ ಓದಿ: ‘ಇಬ್ಬರು ಹೆಂಡಿರ ಮುದ್ದಿನ ಪೊಲೀಸ್​’: ತುಕಾಲಿ ಸಂತು ಸಿನಿಮಾಗೆ ಸಿರಿ, ಭಾಗ್ಯಶ್ರೀ ಹೀರೋಯಿನ್​

ಬೆಳಗ್ಗೆ ಆರಂಭವಾದ ಟಾಸ್ಕ್​ ಮಧ್ಯಾಹ್ನ 12.40ರ ತನಕ ಮುಂದುವರಿಯಿತು. ಆದರೆ ಇಷ್ಟು ದೀರ್ಘ ಕಾಲ ಟಾಸ್ಕ್​ನಲ್ಲಿ ಭಾಗಿ ಆಗಲು ತಕಾಲಿ ಸಂತೋಷ್​ ಅವರಿಗೆ ಸಾಧ್ಯವಾಗಲಿಲ್ಲ. ಹಾಗಾಗಿ ಅವರು ಅನಿವಾರ್ಯವಾಗಿ ವಾಶ್​ರೂಮ್​ಗೆ ಹೋಗಲೇಬೇಕು ಎಂಬ ಪರಿಸ್ಥಿತಿ ಬಂತು. ಆ ಕಾರಣದಿಂದಲೂ ಮನೆಯಲ್ಲಿನ ದಿನಸಿಗಳ ಪೈಕಿ ಎರಡು ಬಾಸ್ಕೆಟ್​ಗಳನ್ನು ವಾಪಸ್ ಪಡೆಯಲಾಯಿತು. ಒಟ್ಟಿನಲ್ಲಿ ತುಕಾಲಿ ಸಂತೋಷ್​ ಅವರು ಮಾಡಿದ ಈ ಎರಡು ತಪ್ಪಿನಿಂದಾಗಿ ಬಿಗ್​ ಬಾಸ್​ ಸ್ಪರ್ಧಿಗಳಿಗೆ ಊಟದ ವಿಚಾರದಲ್ಲಿ ಕೊರತೆ ಆಗಲಿದೆ. ಜಿಯೋ ಸಿನಿಮಾದಲ್ಲಿ ಈ ಶೋ ಉಚಿತವಾಗಿ ನೋಡಬಹುದು. ಪ್ರತಿ ರಾತ್ರಿ 9.30ಕ್ಕೆ ಕಲರ್ಸ್​ ಕನ್ನಡದಲ್ಲಿ ಎಪಿಸೋಡ್​ ಪ್ರಸಾರ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್