AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾವು ಬಿಗ್ ಬಾಸ್ ಮನೆಯಲ್ಲಿ ಮಾತ್ರ ಒಟ್ಟಾಗಿ ಮಲಗಿಲ್ಲ’; ತುಕಾಲಿ ಸಂತೋಷ್

‘ಬಿಗ್ ಬಾಸ್ ಕನ್ನಡ ಸೀಸನ್ 11’ ಎಂದಮೇಲೆ ಎಂಟರ್​ಟೇನ್​ಮೆಂಟ್ ಬೇಕೆ ಬೇಕು. ಕಳೆದ ಸೀಸನ್​ನಲ್ಲಿ ತುಕಾಲಿ ಸಂತೋಷ್ ಅವರನ್ನು ಕಳುಹಿಸಿಕೊಡೋಕೆ ಅವರ ಪತ್ನಿ ಮಾನಸಾ ಬಂದಿದ್ದರು. ಈ ಬಾರಿ ಪತ್ನಿನ ಕಳುಹಿಸಿಕೊಡೋಕೆ ತುಕಾಲಿ ಸಂತೋಷ್ ಬಂದಿದ್ದಾರೆ.

‘ನಾವು ಬಿಗ್ ಬಾಸ್ ಮನೆಯಲ್ಲಿ ಮಾತ್ರ ಒಟ್ಟಾಗಿ ಮಲಗಿಲ್ಲ’; ತುಕಾಲಿ ಸಂತೋಷ್
ಮಾನಸಾ-ಸಂತೋಷ್
ರಾಜೇಶ್ ದುಗ್ಗುಮನೆ
|

Updated on:Sep 29, 2024 | 10:09 PM

Share

ತುಕಾಲಿ ಸಂತೋಷ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಆಗಮಿಸಿದ್ದರು. ಅವರು ಕೊನೆಯವರೆಗೂ ಇದ್ದರು. ಅವರು ದೊಡ್ಮನೆಯಲ್ಲಿ ಇದ್ದಾಗ ಮನೆಯಿಂದ ಒಬ್ಬರಿಗೆ ಬರೋಕೆ ಅವಕಾಶ ಇತ್ತು. ಆಗ ಬಂದಿದ್ದು ಅವರ ಪತ್ನಿ ಮಾನಸ. ಅವರು ಬಿಗ್​ ಬಾಸ್​ನಲ್ಲಿ ಇದ್ದ ಕೆಲವೇ ನಿಮಿಷಗಳಲ್ಲಿ ಸಖತ್ ಮನರಂಜನೆ ನೀಡಿದ್ದರು. ಈಗ ಅವರು ‘ಬಿಗ್ ಬಾಸ್ ಸೀಸನ್​ 11’ರ ಸ್ಪರ್ಧಿ ಆಗಿದ್ದಾರೆ. ಈ ಮೂಲಕ ಅಪರೂದ ದಾಖಲೆ ಬರೆದಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ ಎಂದಮೇಲೆ ಎಂಟರ್​ಟೇನ್​ಮೆಂಟ್ ಬೇಕೆ ಬೇಕು. ದೊಡ್ಮನೆಗೆ ಬಂದಿರೋ ಮಾನಸಾ ಕಾಮಿಡಿ ಮಾಡೋದು ಪಕ್ಕಾ. ಕಳೆದ ಸೀಸನ್​ನಲ್ಲಿ ತುಕಾಲಿ ಸಂತೋಷ್ ಅವರನ್ನು ಕಳುಹಿಸಿಕೊಡೋಕೆ ಮಾನಸಾ ಬಂದಿದ್ದರು. ಈ ಬಾರಿ ಪತ್ನಿನ ಕಳುಹಿಸಿಕೊಡೋಕೆ ತುಕಾಲಿ ಸಂತೋಷ್ ಬಂದಿದ್ದಾರೆ.  ಕನ್ನಡ ಬಿಗ್ ಬಾಸ್​ ಇತಿಹಾಸದಲ್ಲಿ ನಡೆದಿದ್ದು ಇದೇ ಮೊದಲು ಎನ್ನಬಹುದು.

ತುಕಾಲಿ ಸಂತೋಷ್ ಅವರು ಅಲ್ಲಿ ಆಗಮಿಸಿದ್ದರು. ಈ ವೇಳೆ, ‘ನಾನು ಹಾಗೂ ನನ್ನ ಪತ್ನಿ ಬಿಗ್ ಬಾಸ್ ಮನೆಯಲ್ಲಿ ಮಾತ್ರ ಒಟ್ಟಾಗಿ ಮಲಗಿಲ್ಲ’ ಎಂದರು ಸಂತೋಷ್. ಈ ಮಾತಿಗೆ ಸುದೀಪ್ ನಕ್ಕರು.

ಇದನ್ನೂ ಓದಿ: ‘ಬಿಗ್ ಬಾಸ್​ ಬಗ್ಗೆ ಗೌರವ ಇಲ್ಲದ ವ್ಯಕ್ತಿನ ಏಕೆ ಕರೆಸಿದ್ರಿ?’; ಸ್ಪರ್ಧಿ ವಿರುದ್ಧ ವೇದಿಕೆ ಮೆಲೆ ಸಿಟ್ಟಾದ ಸುದೀಪ್

ಪತಿ ಹಾಗೂ ಪತ್ನಿ ಬಿಗ್ ಬಾಸ್ ಮನೆಗೆ ಒಟ್ಟಿಗೆ ಹೋಗಿದ್ದು ಈವರೆಗೆ ನಡೆದಿಲ್ಲ. ಆದರೆ, ಒಂದು ವರ್ಷ ಪತಿ ಮತ್ತೊಂದು ವರ್ಷ ಪತ್ನಿ ಬಿಗ್ ಬಾಸ್​ ಮನೆಗೆ ಎಂಟ್ರಿ ಕೊಟ್ಟಿದ್ದು ಇದೇ ಮೊದಲು. ಈ ಮೂಲಕ ಇವರು ದಾಖಲೆ ಬರೆದಿದ್ದಾರೆ ಎನ್ನಬಹುದು.

ಮಾನಸಾ ಅವರು ‘ಗಿಚ್ಚಿ ಗಿಲಿಗಿಲಿ 3’ನಲ್ಲಿ ಕಾಣಿಸಿಕೊಂಡಿದ್ದರು. ತುಕಾಲಿ ಸಂತೋಷ್ ಕೂಡ ಈ ಶೋನಲ್ಲಿ ಇದ್ದರು. ಈಗ ಅವರು ದೊಡ್ಮನೆಗೆ ಕಾಲಿಟ್ಟಿದ್ದಾರೆ. ಅವರು ಎಲ್ಲರ ಗಮನ ಸೆಳೆದಿದ್ದಾರೆ. ಅವರಿಗೆ ನರಕ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:22 pm, Sun, 29 September 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಪಿಎಂ ಮೋದಿ ಬಗ್ಗೆ ಸ್ಮೃತಿ ಇರಾನಿ ಹೇಳಿದ ಆ ಒಂದು ಮಾತು ಸಖತ್​ ವೈರಲ್
ಪಿಎಂ ಮೋದಿ ಬಗ್ಗೆ ಸ್ಮೃತಿ ಇರಾನಿ ಹೇಳಿದ ಆ ಒಂದು ಮಾತು ಸಖತ್​ ವೈರಲ್
ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶವಿಲ್ಲ: ಹಾಕಿಕೊಂಡು ಬಂದ್ರೆ ಕಾನೂನು ಕ್ರಮ
ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶವಿಲ್ಲ: ಹಾಕಿಕೊಂಡು ಬಂದ್ರೆ ಕಾನೂನು ಕ್ರಮ
ಆರತಿ ಎತ್ತಿದ ಮಹಿಳೆಯರಿಗೆ ಗರಿಗರಿ ನೋಟ ನೀಡಿದ ಸಿಎಂ ಸಿದ್ದರಾಮಯ್ಯ
ಆರತಿ ಎತ್ತಿದ ಮಹಿಳೆಯರಿಗೆ ಗರಿಗರಿ ನೋಟ ನೀಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ