AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾವು ಬಿಗ್ ಬಾಸ್ ಮನೆಯಲ್ಲಿ ಮಾತ್ರ ಒಟ್ಟಾಗಿ ಮಲಗಿಲ್ಲ’; ತುಕಾಲಿ ಸಂತೋಷ್

‘ಬಿಗ್ ಬಾಸ್ ಕನ್ನಡ ಸೀಸನ್ 11’ ಎಂದಮೇಲೆ ಎಂಟರ್​ಟೇನ್​ಮೆಂಟ್ ಬೇಕೆ ಬೇಕು. ಕಳೆದ ಸೀಸನ್​ನಲ್ಲಿ ತುಕಾಲಿ ಸಂತೋಷ್ ಅವರನ್ನು ಕಳುಹಿಸಿಕೊಡೋಕೆ ಅವರ ಪತ್ನಿ ಮಾನಸಾ ಬಂದಿದ್ದರು. ಈ ಬಾರಿ ಪತ್ನಿನ ಕಳುಹಿಸಿಕೊಡೋಕೆ ತುಕಾಲಿ ಸಂತೋಷ್ ಬಂದಿದ್ದಾರೆ.

‘ನಾವು ಬಿಗ್ ಬಾಸ್ ಮನೆಯಲ್ಲಿ ಮಾತ್ರ ಒಟ್ಟಾಗಿ ಮಲಗಿಲ್ಲ’; ತುಕಾಲಿ ಸಂತೋಷ್
ಮಾನಸಾ-ಸಂತೋಷ್
ರಾಜೇಶ್ ದುಗ್ಗುಮನೆ
|

Updated on:Sep 29, 2024 | 10:09 PM

Share

ತುಕಾಲಿ ಸಂತೋಷ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಆಗಮಿಸಿದ್ದರು. ಅವರು ಕೊನೆಯವರೆಗೂ ಇದ್ದರು. ಅವರು ದೊಡ್ಮನೆಯಲ್ಲಿ ಇದ್ದಾಗ ಮನೆಯಿಂದ ಒಬ್ಬರಿಗೆ ಬರೋಕೆ ಅವಕಾಶ ಇತ್ತು. ಆಗ ಬಂದಿದ್ದು ಅವರ ಪತ್ನಿ ಮಾನಸ. ಅವರು ಬಿಗ್​ ಬಾಸ್​ನಲ್ಲಿ ಇದ್ದ ಕೆಲವೇ ನಿಮಿಷಗಳಲ್ಲಿ ಸಖತ್ ಮನರಂಜನೆ ನೀಡಿದ್ದರು. ಈಗ ಅವರು ‘ಬಿಗ್ ಬಾಸ್ ಸೀಸನ್​ 11’ರ ಸ್ಪರ್ಧಿ ಆಗಿದ್ದಾರೆ. ಈ ಮೂಲಕ ಅಪರೂದ ದಾಖಲೆ ಬರೆದಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ ಎಂದಮೇಲೆ ಎಂಟರ್​ಟೇನ್​ಮೆಂಟ್ ಬೇಕೆ ಬೇಕು. ದೊಡ್ಮನೆಗೆ ಬಂದಿರೋ ಮಾನಸಾ ಕಾಮಿಡಿ ಮಾಡೋದು ಪಕ್ಕಾ. ಕಳೆದ ಸೀಸನ್​ನಲ್ಲಿ ತುಕಾಲಿ ಸಂತೋಷ್ ಅವರನ್ನು ಕಳುಹಿಸಿಕೊಡೋಕೆ ಮಾನಸಾ ಬಂದಿದ್ದರು. ಈ ಬಾರಿ ಪತ್ನಿನ ಕಳುಹಿಸಿಕೊಡೋಕೆ ತುಕಾಲಿ ಸಂತೋಷ್ ಬಂದಿದ್ದಾರೆ.  ಕನ್ನಡ ಬಿಗ್ ಬಾಸ್​ ಇತಿಹಾಸದಲ್ಲಿ ನಡೆದಿದ್ದು ಇದೇ ಮೊದಲು ಎನ್ನಬಹುದು.

ತುಕಾಲಿ ಸಂತೋಷ್ ಅವರು ಅಲ್ಲಿ ಆಗಮಿಸಿದ್ದರು. ಈ ವೇಳೆ, ‘ನಾನು ಹಾಗೂ ನನ್ನ ಪತ್ನಿ ಬಿಗ್ ಬಾಸ್ ಮನೆಯಲ್ಲಿ ಮಾತ್ರ ಒಟ್ಟಾಗಿ ಮಲಗಿಲ್ಲ’ ಎಂದರು ಸಂತೋಷ್. ಈ ಮಾತಿಗೆ ಸುದೀಪ್ ನಕ್ಕರು.

ಇದನ್ನೂ ಓದಿ: ‘ಬಿಗ್ ಬಾಸ್​ ಬಗ್ಗೆ ಗೌರವ ಇಲ್ಲದ ವ್ಯಕ್ತಿನ ಏಕೆ ಕರೆಸಿದ್ರಿ?’; ಸ್ಪರ್ಧಿ ವಿರುದ್ಧ ವೇದಿಕೆ ಮೆಲೆ ಸಿಟ್ಟಾದ ಸುದೀಪ್

ಪತಿ ಹಾಗೂ ಪತ್ನಿ ಬಿಗ್ ಬಾಸ್ ಮನೆಗೆ ಒಟ್ಟಿಗೆ ಹೋಗಿದ್ದು ಈವರೆಗೆ ನಡೆದಿಲ್ಲ. ಆದರೆ, ಒಂದು ವರ್ಷ ಪತಿ ಮತ್ತೊಂದು ವರ್ಷ ಪತ್ನಿ ಬಿಗ್ ಬಾಸ್​ ಮನೆಗೆ ಎಂಟ್ರಿ ಕೊಟ್ಟಿದ್ದು ಇದೇ ಮೊದಲು. ಈ ಮೂಲಕ ಇವರು ದಾಖಲೆ ಬರೆದಿದ್ದಾರೆ ಎನ್ನಬಹುದು.

ಮಾನಸಾ ಅವರು ‘ಗಿಚ್ಚಿ ಗಿಲಿಗಿಲಿ 3’ನಲ್ಲಿ ಕಾಣಿಸಿಕೊಂಡಿದ್ದರು. ತುಕಾಲಿ ಸಂತೋಷ್ ಕೂಡ ಈ ಶೋನಲ್ಲಿ ಇದ್ದರು. ಈಗ ಅವರು ದೊಡ್ಮನೆಗೆ ಕಾಲಿಟ್ಟಿದ್ದಾರೆ. ಅವರು ಎಲ್ಲರ ಗಮನ ಸೆಳೆದಿದ್ದಾರೆ. ಅವರಿಗೆ ನರಕ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:22 pm, Sun, 29 September 24

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ