AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tunisha Sharma: ಶ್ರದ್ಧಾ ವಾಕರ್​ ಕೊಲೆ ಕೇಸ್​ ಪ್ರಭಾವದಿಂದ ತುನಿಶಾ ಶರ್ಮಾ, ಶೀಜಾನ್​ ಖಾನ್​ ನಡುವೆ ನಡೆದಿತ್ತು ಬ್ರೇಕಪ್​

Tunisha Sharma Case: ತುನಿಶಾ ಶರ್ಮಾ ಸಾವಿನ ಕೇಸ್​ನಲ್ಲಿ ಅವರ ಮಾಜಿ ಬಾಯ್​​ಫ್ರೆಂಡ್​ ಶೀಜಾನ್​ ಖಾನ್​ ಅರೆಸ್ಟ್​ ಆಗಿದ್ದಾರೆ. ವಿಚಾರಣೆ ವೇಳೆ ಪೊಲೀಸರ ಎದುರು ಅವರು ಕೆಲವು ಮುಖ್ಯ ವಿಷಯಗಳನ್ನು ಬಾಯ್ಬಿಟ್ಟಿದ್ದಾರೆ.

Tunisha Sharma: ಶ್ರದ್ಧಾ ವಾಕರ್​ ಕೊಲೆ ಕೇಸ್​ ಪ್ರಭಾವದಿಂದ ತುನಿಶಾ ಶರ್ಮಾ, ಶೀಜಾನ್​ ಖಾನ್​ ನಡುವೆ ನಡೆದಿತ್ತು ಬ್ರೇಕಪ್​
ಅಫ್ತಾಬ್​ ಪೂನಾವಾಲಾ-ಶ್ರದ್ಧಾ ವಾಕರ್, ತುನಿಶಾ ಶರ್ಮಾ-ಶೀಜಾನ್​ ಖಾನ್​
TV9 Web
| Edited By: |

Updated on: Dec 26, 2022 | 3:45 PM

Share

ಹಿಂದಿ ಕಿರುತೆರೆಯ ಖ್ಯಾತ ನಟಿ ತುನಿಶಾ ಶರ್ಮಾ (Tunisha Sharma) ಅವರು ಆತ್ಮಹತ್ಯೆ ಮಾಡಿಕೊಂಡ ಬಳಿಕ ಅವರ ಮಾಜಿ ಪ್ರಿಯಕರ ಶೀಜಾನ್​ ಖಾನ್​ (Sheezan Khan) ಅವರನ್ನು ಪೊಲೀಸರು ಬಂಧಿಸಿದ್ದಾರೆ. 4 ದಿನಗಳ ಕಾಲ ಪೊಲೀಸರ ಕಸ್ಟಡಿಗೆ ಅವರನ್ನು ಒಪ್ಪಿಸಲಾಗಿದೆ. ಹೈ ಪ್ರೊಫೈಲ್​ ಕೇಸ್​ ಆದ್ದರಿಂದ ಎಲ್ಲರ ಗಮನ ಈ ಪ್ರಕರಣದ ಮೇಲಿದೆ. ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ತುನಿಶಾ ಶರ್ಮಾ ಅವರು ಡಿ.24ರಂದು ನೇಣಿಗೆ ಶರಣಾದರು. ಅದಕ್ಕೂ 15 ದಿನಗಳ ಮುನ್ನ ಶೀಜಾನ್​ ಖಾನ್​ ಜೊತೆ ಅವರ ಬ್ರೇಕಪ್​ ಆಗಿತ್ತು. ಅದಕ್ಕೆ ಕಾರಣ ಆಗಿದ್ದು ದೆಹಲಿಯಲ್ಲಿ ನಡೆದ ಶ್ರದ್ಧಾ ವಾಕರ್​ ಕೊಲೆ ಪ್ರಕರಣ (Shraddha Walker Murder Case) ಎಂಬ ವಿಚಾರ ಈಗ ಬಯಲಾಗಿದೆ. ತನಿಖೆ ವೇಳೆ ಶೀಜಾನ್​ ಖಾನ್​ ಈ ವಿಷಯ ಬಾಯಿಬಿಟ್ಟಿದ್ದಾರೆ.

ಬಣ್ಣದ ಲೋಕದಲ್ಲಿ ಸಾಧನೆ ಮಾಡಬೇಕು ಎಂದು ತುನಿಶಾ ಶರ್ಮಾ ಕನಸು ಕಂಡಿದ್ದರು. ಅದರಂತೆ ಅವರಿಗೆ ಧಾರಾವಾಹಿ ಕ್ಷೇತ್ರದಲ್ಲಿ ಸಾಕಷ್ಟು ಜನಪ್ರಿಯತೆ ಸಿಕ್ಕಿತ್ತು. 20ರ ವಯಸ್ಸಿನಲ್ಲೇ ಅವರು ತುಂಬ ಫೇಮಸ್​ ಆಗಿದ್ದರು. ಹಿಂದಿಯ ‘ಅಲಿಬಾಬಾ’ ಧಾರಾವಾಹಿಯಲ್ಲಿ ಶೀಜಾನ್​ ಖಾನ್​ ಮತ್ತು ತುನಿಶಾ ಶರ್ಮಾ ಅವರು ಜೊತೆಯಾಗಿ ನಟಿಸುತ್ತಿದ್ದರು. ಇಬ್ಬರ ನಡುವೆ ಸಾಕಷ್ಟು ಆಪ್ತತೆ ಬೆಳೆದಿತ್ತು. ಪರಸ್ಪರ ಪ್ರೀತಿಸುತ್ತಿದ್ದ ಅವರು ಕೆಲವು ವಿಡಿಯೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಆದರೆ ಇತ್ತೀಚೆನ ದಿನಗಳಲ್ಲಿ ಇಬ್ಬರು ದೂರಾಗುವ ನಿರ್ಧಾರಕ್ಕೆ ಬಂದರು.

ತನ್ನ ಜೊತೆ ಲಿವ್​-ಇನ್​-ರಿಲೇಷನ್​ಶಿಪ್​ನಲ್ಲಿ ಇದ್ದ ಶ್ರದ್ಧಾ ವಾಕರ್​ ಅವರನ್ನು ಅಫ್ತಾಬ್​ ಪೂನಾವಾಲ ಭೀಕರವಾಗಿ ಕೊಲೆ ಮಾಡಿದ ಸುದ್ದಿ ಮಾಧ್ಯಮಗಳಲ್ಲಿ ಹಗಲು-ರಾತ್ರಿ ಬಿತ್ತರವಾಗಿತ್ತು. ಇದರಿಂದ ಶೀಜಾನ್​ ಖಾನ್​ ವಿಚಲಿತರಾದರು. ಶ್ರದ್ಧಾ ವಾಕರ್​ ಮತ್ತು ಅಫ್ತಾಬ್​ ಪೂನಾವಾಲಾ ರೀತಿಯೇ ಶೀಜಾನ್​ ಖಾನ್​ ಮತ್ತು ತುನಿಶಾ ಶರ್ಮಾ ಅವರು ಕೂಡ ಬೇರೆ ಬೇರೆ ಧರ್ಮಕ್ಕೆ ಸೇರಿದವರಾದ್ದರಿಂದ ಬ್ರೇಕಪ್​ ಮಾಡಿಕೊಳ್ಳುವುದೇ ಒಳಿತು ಎಂಬ ನಿರ್ಧಾರವನ್ನು ಶೀಜಾನ್​ ತೆಗೆದುಕೊಂಡರು. ಇಬ್ಬರ ನಡುವೆ ವಯಸ್ಸಿನ ಅಂತರ ಇದ್ದಿದ್ದು ಕೂಡ ಬ್ರೇಕಪ್​ಗೆ ಕಾರಣ ಆಗಿತ್ತು. ಈ ವಿಚಾರವನ್ನು ಪೊಲೀಸರ ಎದುರು ಶೀಜಾನ್​ ಹೇಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ
Image
Tunisha Sharma: ಬ್ರೇಕಪ್​ ಆಗಿ 15 ದಿನಕ್ಕೆ ನಟಿ ತುನಿಶಾ ಶರ್ಮಾ ಆತ್ಮಹತ್ಯೆ; ಪ್ರಿಯಕರ ಶೀಜಾನ್​ ಖಾನ್​ ಬಂಧನ
Image
Tunisha Sharma’s Death: ನಟಿ ತುನಿಶಾ ಶರ್ಮಾ ಆತ್ಮಹತ್ಯೆಗೆ ಲವ್​​ ಜಿಹಾದ್​​ ಕಾರಣವೇ ಎಂಬುದು ತನಿಖೆಯಾಗಬೇಕು: ಬಿಜೆಪಿ ಶಾಸಕ
Image
Shraddha Murder Case: ಶ್ರದ್ಧಾಳನ್ನು ಕೊಲೆ ಮಾಡಿರುವುದಾಗಿ ಅಫ್ತಾಬ್ ಒಪ್ಪಿಕೊಂಡರೂ ನ್ಯಾಯಾಲಯವು ಸಾಕ್ಷ್ಯ ಎಂದು ಪರಿಗಣಿಸುತ್ತಿಲ್ಲ ಏಕೆ?
Image
New Delhi: CCTVಯಲ್ಲಿ ಸೆರೆಯಾಗಿದೆ ಆಫ್ತಾಬ್‌ ಶ್ರದ್ಧಾಳ ಬಾಡಿ ತುಣುಕು ಬಾಕ್ಸ್‌ನಲ್ಲಿಟ್ಟುಕೊಂಡು ಹೋಗೋ ದೃಶ್ಯ

ಇದನ್ನೂ ಓದಿ: 20ನೇ ವಯಸ್ಸಿಗೆ ನಟಿ ತುನಿಶಾ ಶರ್ಮಾ ಆತ್ಮಹತ್ಯೆ

ಶೀಜಾನ್​ ಖಾನ್​ ಜೊತೆಗಿನ ಬ್ರೇಕಪ್​ ಬಳಿಕ ತುನಿಶಾ ಶರ್ಮಾ ಅವರು ಖಿನ್ನತೆಗೆ ಒಳಗಾಗಿದ್ದರು. ‘ಕೆಲವೇ ದಿನಗಳ ಹಿಂದೆ ಆಕೆ ಒಮ್ಮೆ ಆತ್ಮಹತ್ಯೆಗೆ ಪ್ರಯತ್ನಪಟ್ಟಿದ್ದಳು. ಆಗ ನಾನು ಕಾಪಾಡಿದ್ದೆ. ಮಗಳನ್ನು ಸರಿಯಾಗಿ ನೋಡಿಕೊಳ್ಳುವಂತೆ ಅವಳ ತಾಯಿಗೆ ತಿಳಿಸಿದ್ದೆ’ ಎಂದು ಕೂಡ ಶೀಜಾನ್​ ಖಾನ್​ ಹೇಳಿದ್ದಾರೆ.

ಇದನ್ನೂ ಓದಿ: Tunisha Sharma’s Death: ನಟಿ ತುನಿಶಾ ಶರ್ಮಾ ಆತ್ಮಹತ್ಯೆಗೆ ಲವ್​​ ಜಿಹಾದ್​​ ಕಾರಣವೇ ಎಂಬುದು ತನಿಖೆಯಾಗಬೇಕು: ಬಿಜೆಪಿ ಶಾಸಕ

ತುನಿಶಾ ಶರ್ಮಾ ಅವರ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಅವರ ದೇಹದ ಮೇಲೆ ಯಾವುದೇ ಗಾಯದ ಕಲೆಗಳು ಕಂಡುಬಂದಿಲ್ಲ. ನೇಣು ಬಿಗಿದುಕೊಂಡಿದ್ದರಿಂದಲೇ ಅವರ ಪ್ರಾಣ ಹೋಗಿದೆ ಎಂಬುದು ತಿಳಿದುಬಂದಿದೆ. ತುನಿಶಾ ಶರ್ಮಾ ಪ್ರೆಗ್ನೆಂಟ್​ ಆಗಿದ್ದಿರಬಹುದೇ ಎಂಬ ಅನುಮಾನ ಕೂಡ ವ್ಯಕ್ತವಾಗಿತ್ತು. ಈ ಬಗ್ಗೆ ಪೊಲೀಸರು ಪ್ರತಿಕ್ರಿಯಿಸಿದ್ದು, ನಟಿ ಪ್ರೆಗ್ನೆಂಟ್​ ಆಗಿರಲಿಲ್ಲ ಎಂದು ತಿಳಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್