AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tunisha Sharma: ಬ್ರೇಕಪ್​ ಆಗಿ 15 ದಿನಕ್ಕೆ ನಟಿ ತುನಿಶಾ ಶರ್ಮಾ ಆತ್ಮಹತ್ಯೆ; ಪ್ರಿಯಕರ ಶೀಜಾನ್​ ಖಾನ್​ ಬಂಧನ

Tunisha Sharma Boyfriend | Sheezan Khan Arrest: ನಟಿ ತುನಿಶಾ ಶರ್ಮಾ ಪ್ರೆಗ್ನೆಂಟ್​ ಆಗಿದ್ದಿರಬಹುದೇ ಎಂಬ ಅನುಮಾನ ವ್ಯಕ್ತವಾಗಿತ್ತು. ಮರಣೋತ್ತರ ವರದಿ ಬಂದಿದ್ದು, ಈ ಬಗ್ಗೆ ಪೊಲೀಸರು ಪ್ರತಿಕ್ರಿಯೆ ನೀಡಿದ್ದಾರೆ.

Tunisha Sharma: ಬ್ರೇಕಪ್​ ಆಗಿ 15 ದಿನಕ್ಕೆ ನಟಿ ತುನಿಶಾ ಶರ್ಮಾ ಆತ್ಮಹತ್ಯೆ; ಪ್ರಿಯಕರ ಶೀಜಾನ್​ ಖಾನ್​ ಬಂಧನ
ತುನಿಶಾ ಶರ್ಮಾ, ಶೀಜಾನ್ ಖಾನ್
TV9 Web
| Updated By: ಮದನ್​ ಕುಮಾರ್​|

Updated on: Dec 25, 2022 | 7:54 PM

Share

ನಟಿ ತುನಿಶಾ ಶರ್ಮಾ ಅವರ ನಿಧನದಿಂದ (Tunisha Sharma Death) ಹಿಂದಿ ಕಿರುತೆರೆ ಲೋಕಕ್ಕೆ ಆಘಾತ ಆಗಿದೆ. ಕೇವಲ 20ರ ಪ್ರಾಯದಲ್ಲಿ ತುನಿಶಾ ಶರ್ಮಾ ಅವರು ಸಾವಿಗೆ ಶರಣಾಗಿರುವುದು ವಿಷಾದದ ಸಂಗತಿ. ಬಣ್ಣದ ಲೋಕದಲ್ಲಿ ಸಾಧನೆ ಮಾಡಬೇಕು ಎಂದು ಕನಸು ಕಂಡಿದ್ದ ಅವರು ಧಾರಾವಾಹಿ ಚಿತ್ರೀಕರಣದ ಸ್ಟುಡಿಯೋದಲ್ಲೇ ಡಿ.24ರಂದು ಆತ್ಮಹತ್ಯೆ (Tunisha Sharma Suicide) ಮಾಡಿಕೊಂಡರು. ಶಾಕಿಂಗ್​ ವಿಚಾರ ಏನೆಂದರೆ, ಕೇವಲ 15 ದಿನಗಳ ಹಿಂದೆ ಪ್ರಿಯಕರ ಶೀಜಾನ್​ ಖಾನ್​ ಜೊತೆ ಅವರು ಬ್ರೇಕಪ್​ ಮಾಡಿಕೊಂಡಿದ್ದರು. ಈ ಪ್ರಕರಣದ ಕುರಿತಂತೆ ತುನಿಶಾ ಶರ್ಮಾ ಅವರ ತಾಯಿ ದೂರು ನೀಡಿದ್ದಾರೆ. ಅದರ ಅನ್ವಯ ಶೀಜಾನ್​ ಖಾನ್​ (Sheezan Khan) ಅವರನ್ನು ಅರೆಸ್ಟ್​ ಮಾಡಲಾಗಿದ್ದು, 4 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ಒಪ್ಪಿಸಲಾಗಿದೆ.

ಹಿಂದಿಯ ‘ಅಲಿಬಾಬಾ’ ಧಾರಾವಾಹಿಯಲ್ಲಿ ಶೀಜಾನ್​ ಖಾನ್​ ಮತ್ತು ತುನಿಶಾ ಶರ್ಮಾ ಅವರು ಜೊತೆಯಾಗಿ ನಟಿಸುತ್ತಿದ್ದರು. ಇಬ್ಬರ ನಡುವೆ ಸಾಕಷ್ಟು ಆಪ್ತತೆ ಬೆಳೆದಿತ್ತು. ಪರಸ್ಪರ ಪ್ರೀತಿಸುತ್ತಿದ್ದ ಅವರು ಕೆಲವು ವಿಡಿಯೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಆದರೆ ಇತ್ತೀಚೆಗೆ ಇಬ್ಬರ ನಡುವೆ ಬ್ರೇಕಪ್​ ಆಗಿತ್ತು ಎಂಬ ವಿಚಾರ ಈಗ ಬಹಿರಂಗ ಆಗಿದೆ. ಶೀಜಾನ್​ ಖಾನ್​ ಜೊತೆಗಿನ ಬ್ರೇಕಪ್​ ಬಳಿಕ ತುನಿಶಾ ಶರ್ಮಾ ಅವರು ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪದ ಮೇಲೆ ಶೀಜಾನ್​ ಖಾನ್​ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Tunisha Sharma’s Death: ನಟಿ ತುನಿಶಾ ಶರ್ಮಾ ಆತ್ಮಹತ್ಯೆಗೆ ಲವ್​​ ಜಿಹಾದ್​​ ಕಾರಣವೇ ಎಂಬುದು ತನಿಖೆಯಾಗಬೇಕು: ಬಿಜೆಪಿ ಶಾಸಕ

ಇದನ್ನೂ ಓದಿ
Image
ಆತ್ಮಹತ್ಯೆ ಮಾಡಿಕೊಂಡ ಮಲಯಾಳಂ ನಟ; ನೇಣು ಬಿಗಿದ ಸ್ಥಿತಿಯಲ್ಲಿ ಪ್ರಸಾದ್ ಶವ ಪತ್ತೆ
Image
18ನೇ ವಯಸ್ಸಿಗೆ ಮದುವೆ, ನಿರಂತರ ಕಿರುಕುಳ; ಕಿಟಕಿ ಸರಳಿಗೆ ನೇಣು ಬಿಗಿದುಕೊಂಡು ಯುವನಟಿಯ ಆತ್ಮಹತ್ಯೆ
Image
ಆತ್ಮಹತ್ಯೆ ಮಾಡಿಕೊಂಡ ಆಸ್ಕರ್​ ಪುರಸ್ಕೃತ ನಟಿಯ ಮಗ; ರೆಜೀನಾ ಕಿಂಗ್​ ಬಾಳಿನಲ್ಲಿ ಆವರಿಸಿತು ಕತ್ತಲು
Image
ಸ್ಯಾಂಡಲ್​ವುಡ್​ ನಟಿ ಸವಿ ಮಾದಪ್ಪ ಆತ್ಮಹತ್ಯೆ; ಡೆತ್​ನೋಟ್​ ಬರೆದಿಟ್ಟು ನೇಣಿಗೆ ಶರಣು

ಭಾನುವಾರ (ಡಿ.25) ಬೆಳಗ್ಗೆ ತುನಿಶಾ ಶರ್ಮಾ ಅವರ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಅವರ ದೇಹದ ಮೇಲೆ ಯಾವುದೇ ಗಾಯದ ಕಲೆಗಳು ಕಂಡುಬಂದಿಲ್ಲ. ನೇಣು ಬಿಗಿದುಕೊಂಡಿದ್ದರಿಂದಲೇ ಅವರ ಪ್ರಾಣ ಹೋಗಿದೆ ಎಂಬುದು ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದೆ. ತುನಿಶಾ ಶರ್ಮಾ ಪ್ರೆಗ್ನೆಂಟ್​ ಆಗಿದ್ದಿರಬಹುದೇ ಎಂಬ ಅನುಮಾನ ಕೂಡ ವ್ಯಕ್ತವಾಗಿತ್ತು. ಈ ಬಗ್ಗೆ ಪೊಲೀಸರು ಪ್ರತಿಕ್ರಿಯಿಸಿದ್ದು, ನಟಿ ಪ್ರೆಗ್ನೆಂಟ್​ ಆಗಿರಲಿಲ್ಲ ಎಂದು ತಿಳಿಸಿದ್ದಾರೆ. ಇನ್ನುಳಿದ ವಿವರಗಳನ್ನು ತಿಳಿಯಲು ಸದ್ಯ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Tunisha Sharma: ಧಾರಾವಾಹಿಯ ಶೂಟಿಂಗ್​ ಸೆಟ್​ನಲ್ಲೇ ಆತ್ಮಹತ್ಯೆ ಮಾಡಿಕೊಂಡ ಕಿರುತೆರೆ ನಟಿ

ಸೋಮವಾರ (ಡಿ.26) ತುನಿಶಾ ಶರ್ಮಾ ಅವರ ಪಾರ್ಥೀವ ಶರೀರವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗುವುದು. ಈ ನಡುವೆ ಕೆಲವರು ಲವ್​ ಜಿಹಾದ್​ ಅನುಮಾನವನ್ನೂ ವ್ಯಕ್ತಪಡಿಸಿದ್ದಾರೆ. ಆದರೆ ಈ ಬಗ್ಗೆ ತನಿಖೆ ಬಳಿಕವೇ ಸತ್ಯ ಹೊರಬರಬೇಕಿದೆ. ಪ್ರಿಯಕರ ಶೀಜಾನ್​ ಖಾನ್​ ಅವರಿಗೆ ಪೊಲೀಸರು ಹಲವು ಪ್ರಶ್ನೆಗಳನ್ನು ಕೇಳುತ್ತಿದ್ದಾರೆ.

ತುನಿಶಾ ಶರ್ಮಾ ನಿಧನಕ್ಕೆ ಕಿರುತೆರೆ ಲೋಕದ ಅನೇಕರು ಸಂತಾಪ ಸೂಚಿಸಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳು ಕಂಬಿನಿ ಮಿಡಿಯುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಶ್ರದ್ಧಾಂಜಲಿ ಸಂದೇಶಗಳು ಹರಿದುಬರುತ್ತಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು