AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tunisha Sharma Funeral: ತುನಿಶಾ ಶರ್ಮಾ ಅಂತ್ಯಕ್ರಿಯೆ: ಅಗಲಿದ ನಟಿಗೆ ಅಂತಿಮ ನಮನ ಸಲ್ಲಿಸಿದ ಕಿರುತೆರೆ ಸೆಲೆಬ್ರಿಟಿಗಳು

Tunisha Sharma Death: ತುನಿಶಾ ಶರ್ಮಾ ಅವರ ತಾಯಿ ಮತ್ತು ಸಹೋದರಿ ಅಂತಿಮ ವಿಧಿವಿಧಾನದಲ್ಲಿ ಭಾಗಿಯಾದರು. ಕಿರುತೆರೆಯ ಅನೇಕ ಸೆಲೆಬ್ರಿಟಿಗಳು ಅಂತಿಮ ದರ್ಶನ ಪಡೆದರು.

Tunisha Sharma Funeral: ತುನಿಶಾ ಶರ್ಮಾ ಅಂತ್ಯಕ್ರಿಯೆ: ಅಗಲಿದ ನಟಿಗೆ ಅಂತಿಮ ನಮನ ಸಲ್ಲಿಸಿದ ಕಿರುತೆರೆ ಸೆಲೆಬ್ರಿಟಿಗಳು
ತುನಿಶಾ ಶರ್ಮಾ ಅಂತ್ಯಕ್ರಿಯೆ
TV9 Web
| Edited By: |

Updated on: Dec 27, 2022 | 7:24 PM

Share

20ನೇ ವಯಸ್ಸಿಗೆ ಆತ್ಮಹತ್ಯೆ ಮಾಡಿಕೊಂಡ ಹಿಂದಿ ಕಿರುತೆರೆಯ ಜನಪ್ರಿಯ ನಟಿ ತುನಿಶಾ ಶರ್ಮಾ (Tunisha Sharma) ಅವರ ಅಂತ್ಯಕ್ರಿಯೆ ಇಂದು (ಡಿ.27) ನೆರವೇರಿದೆ. ತುನಿಶಾ ಶರ್ಮಾ ಅವರು ಡಿ.24ರಂದು ನೇಣಿಗೆ ಶರಣಾದರು. ಮರುದಿನ ಅವರ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಅವರ ಸಾವಿಗೆ (Tunisha Sharma Death) ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕುಟುಂಬದವರು, ಸ್ನೇಹಿತರು, ಅಭಿಮಾನಿಗಳು ಹಾಗೂ ಕಿರುತೆರೆ ಸೆಲೆಬ್ರಿಟಿಗಳ ಸಮ್ಮುಖದಲ್ಲಿ ತುನಿಶಾ ಶರ್ಮಾ ಅವರ ಅಂತ್ಯಕ್ರಿಯೆ (Tunisha Sharma Funeral) ನಡೆದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರೂ ಪ್ರಾರ್ಥಿಸಿದ್ದಾರೆ. ತುನಿಶಾ ಅವರ ಮಾಜಿ ಬಾಯ್​ಫ್ರೆಂಡ್​ ಶೀಜಾನ್​ ಖಾನ್​ ಈಗ ಪೊಲೀಸರ ವಶದಲ್ಲಿದ್ದಾರೆ. ಶೀಜಾನ್​ ಕುಟುಂಬದ ಸದಸ್ಯರು ಕೂಡ ಅಂತ್ಯಕ್ರಿಯೆಯಲ್ಲಿ ಭಾಗಿ ಆಗಿದ್ದಾರೆ.

ತುನಿಶಾ ಶರ್ಮಾ ಅವರ ಪಾರ್ಥೀವ ಶರೀರವನ್ನು ಭಾಯಂದರ್​ನಲ್ಲಿ ಇರುವ ನಿವಾಸಕ್ಕೆ ತರಲಾಯಿತು. ಬಳಿಕ ಮೀರಾ ರೋಡ್​ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು. ತುನಿಶಾ ಶರ್ಮಾ ಅವರ ತಾಯಿ ಮತ್ತು ಸಹೋದರಿ ಅಂತಿಮ ವಿಧಿವಿಧಾನದಲ್ಲಿ ಭಾಗಿಯಾದರು. ಕಿರುತೆರೆ ಸೆಲೆಬ್ರಿಟಿಗಳಾದ ಶಿವಿನ್​ ನರಂಗ್​, ವಿಶಾಲ್​ ಜೇತ್ವಾ, ಕನ್ವರ್​ ದಿಲೋನ್​, ಅಶ್ನೂರ್​ ಕೌರ್​ ಸೇರಿದಂತೆ ಅನೇಕರು ಅಂತಿಮ ದರ್ಶನ ಪಡೆದರು.

ಇದನ್ನೂ ಓದಿ: Tunisha Sharma: ಶ್ರದ್ಧಾ ವಾಕರ್​ ಕೊಲೆ ಕೇಸ್​ ಪ್ರಭಾವದಿಂದ ತುನಿಶಾ ಶರ್ಮಾ, ಶೀಜಾನ್​ ಖಾನ್​ ನಡುವೆ ನಡೆದಿತ್ತು ಬ್ರೇಕಪ್​

ಇದನ್ನೂ ಓದಿ
Image
Tunisha Sharma: ಶ್ರದ್ಧಾ ವಾಕರ್​ ಕೊಲೆ ಕೇಸ್​ ಪ್ರಭಾವದಿಂದ ತುನಿಶಾ ಶರ್ಮಾ, ಶೀಜಾನ್​ ಖಾನ್​ ನಡುವೆ ನಡೆದಿತ್ತು ಬ್ರೇಕಪ್​
Image
Tunisha Sharma: ಬ್ರೇಕಪ್​ ಆಗಿ 15 ದಿನಕ್ಕೆ ನಟಿ ತುನಿಶಾ ಶರ್ಮಾ ಆತ್ಮಹತ್ಯೆ; ಪ್ರಿಯಕರ ಶೀಜಾನ್​ ಖಾನ್​ ಬಂಧನ
Image
Tunisha Sharma’s Death: ನಟಿ ತುನಿಶಾ ಶರ್ಮಾ ಆತ್ಮಹತ್ಯೆಗೆ ಲವ್​​ ಜಿಹಾದ್​​ ಕಾರಣವೇ ಎಂಬುದು ತನಿಖೆಯಾಗಬೇಕು: ಬಿಜೆಪಿ ಶಾಸಕ

ಹಿಂದಿಯ ‘ಅಲಿಬಾಬಾ’ ಸೀರಿಯಲ್​ನಲ್ಲಿ ತುನಿಶಾ ಶರ್ಮಾ ಅವರು ಮುಖ್ಯ ಭೂಮಿಕೆ ನಿಭಾಯಿಸುತ್ತಿದ್ದರು. ಅದೇ ಧಾರಾವಾಹಿಯ ಶೂಟಿಂಗ್​ ನಡೆಯುತ್ತಿದ್ದ ಸ್ಟೂಡಿಯೋದಲ್ಲಿ ತುನಿಶಾ ನೇಣಿಗೆ ಶರಣಾಗಿರುವುದು ತೀವ್ರ ನೋವಿನ ಸಂಗತಿ. ಅವರ ನಿಧನದಿಂದ ಇಡೀ ಕಿರುತೆರೆ ಲೋಕಕ್ಕೆ ಆಘಾತ ಆಗಿದೆ.

ಇದನ್ನೂ ಓದಿ: Tunisha Sharma: ಬ್ರೇಕಪ್​ ಆಗಿ 15 ದಿನಕ್ಕೆ ನಟಿ ತುನಿಶಾ ಶರ್ಮಾ ಆತ್ಮಹತ್ಯೆ; ಪ್ರಿಯಕರ ಶೀಜಾನ್​ ಖಾನ್​ ಬಂಧನ

‘ಅಲಿಬಾಬಾ’ ಧಾರಾವಾಹಿಯಲ್ಲಿ ಶೀಜಾನ್​ ಖಾನ್​ ಮತ್ತು ತುನಿಶಾ ಶರ್ಮಾ ಅವರು ಜೊತೆಯಾಗಿ ನಟಿಸುತ್ತಿದ್ದರು. ಇಬ್ಬರ ನಡುವೆ ಸಾಕಷ್ಟು ಆಪ್ತತೆ ಬೆಳೆದಿತ್ತು. ಪರಸ್ಪರ ಪ್ರೀತಿಸುತ್ತಿದ್ದ ಅವರು ಕೆಲವು ವಿಡಿಯೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಇಬ್ಬರು ದೂರಾಗುವ ನಿರ್ಧಾರಕ್ಕೆ ಬಂದರು. ತುನಿಶಾ ಶರ್ಮಾ ನಿಧನರಾಗುವುದಕ್ಕೂ 15 ದಿನಗಳ ಹಿಂದೆ ಶೀಜಾನ್​ ಖಾನ್​ ಬ್ರೇಕಪ್​ ಮಾಡಿಕೊಂಡಿದ್ದರು.

ಬ್ರೇಕಪ್​ ಬಳಿಕ ತುನಿಶಾ ಶರ್ಮಾ ಅವರು ಖಿನ್ನತೆಗೆ ಒಳಗಾಗಿದ್ದರು. ಪ್ರೇಮ ವೈಫಲ್ಯದ ಕಾರಣದಿಂದಲೇ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಆತ್ಮಹತ್ಯೆಗೆ ಪ್ರೇರಣೆ ನೀಡಿದ್ದಾರೆ ಎಂದು ಮಾಜಿ ಬಾಯ್​ಫ್ರೆಂಡ್​ ಶೀಜಾನ್​ ಖಾನ್​ ವಿರುದ್ಧ ತುನಿಶಾ ಶರ್ಮಾ ಕುಟುಂಬದವರು ದೂರು ನೀಡಿದ್ದಾರೆ. ಅದರ ಅನ್ವಯ ಶೀಜಾನ್​ ಅವರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಯುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!