AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tunisha Sharma: ಶೀಜಾನ್​ ಖಾನ್​ ಜತೆಗಿನ ಲವ್​​ ಬಳಿಕ ಹಿಜಾಬ್​ ಧರಿಸುತ್ತಿದ್ದ ತುನಿಶಾ ಶರ್ಮಾ; ಬಾಯ್ಬಿಟ್ಟ ಸಂಬಂಧಿ

Tunisha Sharma Case | Sheezan Khan: ತುನಿಶಾ ಶರ್ಮಾ ಮಾತ್ರವಲ್ಲದೇ ಮತ್ತೋರ್ವ ಹುಡುಗಿಯ ಜೊತೆಗೂ ಶೀಜಾನ್​ ಖಾನ್​ ಸಂಪರ್ಕದಲ್ಲಿ ಇದ್ದರು. ಆಕೆಯ ಜೊತೆಗಿನ ವಾಟ್ಸಾಪ್​ ಸಂದೇಶವನ್ನು ಡಿಲೀಟ್​ ಮಾಡಿದ್ದಾರೆ ಎಂಬುದು ತಿಳಿದುಬಂದಿದೆ.

Tunisha Sharma: ಶೀಜಾನ್​ ಖಾನ್​ ಜತೆಗಿನ ಲವ್​​ ಬಳಿಕ ಹಿಜಾಬ್​ ಧರಿಸುತ್ತಿದ್ದ ತುನಿಶಾ ಶರ್ಮಾ; ಬಾಯ್ಬಿಟ್ಟ ಸಂಬಂಧಿ
ತುನಿಶಾ ಶರ್ಮಾ, ಶೀಜಾನ್ ಖಾನ್
TV9 Web
| Edited By: |

Updated on:Dec 28, 2022 | 7:28 PM

Share

ಹಿಂದಿ ಕಿರುತೆರೆಯ ಖ್ಯಾತ ನಟಿ ತುನಿಶಾ ಶರ್ಮಾ (Tunisha Sharma) ಅವರ ನಿಧನದಿಂದ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಸಖತ್​ ನೋವಾಗಿದೆ. ಮಂಗಳವಾರ (ಡಿ.27) ಅವರ ಅಂತ್ಯಕ್ರಿಯೆ ನಡೆಯಿತು. ತುನಿಶಾ ಶರ್ಮಾ ಆತ್ಮಹತ್ಯೆ ಮಾಡಿಕೊಂಡಿದ್ದು ಯಾಕೆ ಎಂಬ ಬಗ್ಗೆ ಈಗ ತನಿಖೆ ಜಾರಿಯಲ್ಲಿದೆ. ಮಾಜಿ ಬಾಯ್​ಫ್ರೆಂಡ್​ ಶೀಜಾನ್​ ಖಾನ್ (Sheezan Khan) ಅವರನ್ನು ಪೊಲೀಸರು ಬಂಧಿಸಿದ್ದು, ಹಲವು ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ತುನಿಶಾ ಶರ್ಮಾ ಮತ್ತು ಶೀಜಾನ್​ ಖಾನ್​ ನಡುವೆ ಪ್ರೀತಿ ಚಿಗುರಿತ್ತು. ಆ ಬಳಿಕ ತುನಿಶಾ ಅವರು ಹಿಜಾಬ್​ (Hijab) ಧರಿಸಲು ಆರಂಭಿಸಿದ್ದರು ಎಂಬುದನ್ನು ಅವರ ಸಂಬಂಧಿಯೊಬ್ಬರು ಬಾಯ್ಬಿಟ್ಟಿದ್ದಾರೆ.

‘ಅಲಿಬಾಬಾ’ ಧಾರಾವಾಹಿಯಲ್ಲಿ ತುನಿಶಾ ಶರ್ಮಾ ಮತ್ತು ಶೀಜಾನ್​ ಖಾನ್​ ಅವರು ಒಟ್ಟಾಗಿ ನಟಿಸುತ್ತಿದ್ದರು. ಆ ಕಾರಣದಿಂದ ಇಬ್ಬರ ನಡುವೆ ಸಲುಗೆ ಬೆಳೆದಿತ್ತು. ನಂತರ ಅದು ಪ್ರೀತಿಗೆ ತಿರುಗಿತ್ತು. ಬೇರೆ ಬೇರೆ ಧರ್ಮಕ್ಕೆ ಸೇರಿದ ಇವರು ಪರಸ್ಪರ ಪ್ರೀತಿಸಲು ಆರಂಭಿಸಿದ್ದರು. ಈ ನಡುವೆ ಶೀಜಾನ್​ ಖಾನ್​ ಅವರಿಗೆ ಬೇರೆ ಹುಡುಗಿಯ ಜೊತೆಗೂ ಸಂಬಂಧ ಬೆಳೆದಿತ್ತು ಎನ್ನಲಾಗಿದ್ದು, ಈ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ.

ಶೀಜಾನ್​ ಖಾನ್​ ಮತ್ತು ತುನಿಶಾ ಶರ್ಮಾ ನಡುವೆ ಇತ್ತೀಚಿನ ದಿನಗಳಲ್ಲಿ ವೈಮನಸ್ಸು ಮೂಡಿತ್ತು. ಅವರು ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ 15 ದಿನಗಳ ಹಿಂದೆ ಬ್ರೇಕಪ್​ ಆಗಿತ್ತು. ಆ ಬಳಿಕ ತುನಿಶಾ ಶರ್ಮಾ ಖಿನ್ನತೆಗೆ ಜಾರಿದ್ದರು ಎಂದು ಹೇಳಲಾಗುತ್ತಿದೆ. ಎಲ್ಲ ಆಯಾಮದಿಂದಲೂ ತನಿಖೆ ಮಾಡಲಾಗುತ್ತಿದೆ. ತುನಿಶಾ ಶರ್ಮಾ ಆತ್ಮಹತ್ಯೆ ಮಾಡಿಕೊಳ್ಳಲು ನಿಜಕ್ಕೂ ಕಾರಣ ಆಗಿದ್ದು ಏನು ಎಂಬುದನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ.

ಇದನ್ನೂ ಓದಿ
Image
Tunisha Sharma Funeral: ತುನಿಶಾ ಶರ್ಮಾ ಅಂತ್ಯಕ್ರಿಯೆ: ಅಗಲಿದ ನಟಿಗೆ ಅಂತಿಮ ನಮನ ಸಲ್ಲಿಸಿದ ಕಿರುತೆರೆ ಸೆಲೆಬ್ರಿಟಿಗಳು
Image
Tunisha Sharma: ಶ್ರದ್ಧಾ ವಾಕರ್​ ಕೊಲೆ ಕೇಸ್​ ಪ್ರಭಾವದಿಂದ ತುನಿಶಾ ಶರ್ಮಾ, ಶೀಜಾನ್​ ಖಾನ್​ ನಡುವೆ ನಡೆದಿತ್ತು ಬ್ರೇಕಪ್​
Image
Tunisha Sharma: ಬ್ರೇಕಪ್​ ಆಗಿ 15 ದಿನಕ್ಕೆ ನಟಿ ತುನಿಶಾ ಶರ್ಮಾ ಆತ್ಮಹತ್ಯೆ; ಪ್ರಿಯಕರ ಶೀಜಾನ್​ ಖಾನ್​ ಬಂಧನ
Image
Tunisha Sharma’s Death: ನಟಿ ತುನಿಶಾ ಶರ್ಮಾ ಆತ್ಮಹತ್ಯೆಗೆ ಲವ್​​ ಜಿಹಾದ್​​ ಕಾರಣವೇ ಎಂಬುದು ತನಿಖೆಯಾಗಬೇಕು: ಬಿಜೆಪಿ ಶಾಸಕ

ಇದನ್ನೂ ಓದಿ: Tunisha Sharma Funeral: ತುನಿಶಾ ಶರ್ಮಾ ಅಂತ್ಯಕ್ರಿಯೆ: ಅಗಲಿದ ನಟಿಗೆ ಅಂತಿಮ ನಮನ ಸಲ್ಲಿಸಿದ ಕಿರುತೆರೆ ಸೆಲೆಬ್ರಿಟಿಗಳು

ತುನಿಶಾ ಶರ್ಮಾ ಅಲ್ಲದೇ ಮತ್ತೋರ್ವ ಹುಡುಗಿಯ ಜೊತೆಗೂ ಶೀಜಾನ್​ ಖಾನ್​ ಸಂಪರ್ಕದಲ್ಲಿ ಇದ್ದರು. ಆಕೆಯ ಜೊತೆಗಿನ ವಾಟ್ಸಾಪ್​ ಸಂದೇಶವನ್ನು ಡಿಲೀಟ್​ ಮಾಡಿದ್ದಾರೆ ಎಂಬುದು ತಿಳಿದುಬಂದಿದೆ. ಡಿಲೀಟ್​ ಆದ ಮೆಸೇಜ್​ಗಳನ್ನು ಮರಳಿ ಪಡೆಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಆ ಸೀಕ್ರೆಟ್​ ಗರ್ಲ್​ಫ್ರೆಂಡ್​ ಯಾರು ಎಂಬುದು ಗೊತ್ತಾದ ಬಳಿಕ ಅವರನ್ನು ಕೂಡ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ದಟ್ಟವಾಗಿದೆ.

ಇದನ್ನೂ ಓದಿ: Tunisha Sharma: ಪಂಚಭೂತಗಳಲ್ಲಿ ಲೀನವಾದ ತುನಿಶಾ ಶರ್ಮಾ; ಇಲ್ಲಿದೆ ಅಂತ್ಯಕ್ರಿಯೆಯ ಫೋಟೋ ಗ್ಯಾಲರಿ..

ವಿಚಾರಣೆ ವೇಳೆ ಶೀಜಾನ್​ ಖಾನ್​ ಅವರು ತಮ್ಮ ಹೇಳಿಕೆಗಳನ್ನು ಬದಲಿಸುತ್ತಿದ್ದಾರೆ ಎಂದು ಕೂಡ ವರದಿ ಆಗಿದೆ. ತಮ್ಮಿಬ್ಬರ ಧರ್ಮ ಬೇರೆ ಬೇರೆ ಆಗಿದ್ದರಿಂದ ಬ್ರೇಕಪ್​ ಮಾಡಿಕೊಂಡೆವು ಎಂದು ಅವರು ಹೇಳಿದ್ದಾರೆ ಎನ್ನಲಾಗಿತ್ತು. ಈಗ ಇನ್ನೂ ಹಲವು ವಿವರಗಳು ಹೊರಬರುತ್ತಿವೆ. ಒಟ್ಟಿನಲ್ಲಿ ತುನಿಶಾ ಶರ್ಮಾ ಸಾವಿಗೆ ನ್ಯಾಯ ಸಿಗಬೇಕು ಎಂದು ಕುಟುಂಬದವರು ಮತ್ತು ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:27 pm, Wed, 28 December 22

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!