AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರುತೆರೆ ನಟನ ಜತೆ ನಿಶ್ಚಿತಾರ್ಥ ಮಾಡಿಕೊಂಡ ಖ್ಯಾತ ಆ್ಯಂಕರ್; ವೈರಲ್ ಆಯ್ತು ಫೋಟೋ

ಈ ನಿಶ್ಚಿತಾರ್ಥ ತುಂಬಾನೇ ಗುಟ್ಟಾಗಿ ನಡೆದಿದೆ. ಕುಟುಂಬದ ಕೆಲವೇ ಕೆಲವು ಸದಸ್ಯರು ಹಾಗೂ ಗೆಳೆಯರು ಈ ಸಮಾರಂಭದಲ್ಲಿ ಭಾಗಿ ಆಗಿದ್ದರು. ಕೆಲ ದಿನಗಳಿಂದ ಈ ವಿಚಾರದ ಬಗ್ಗೆ ಸುದ್ದಿ ಹರಿದಾಡುತ್ತಲೇ ಇತ್ತು.

ಕಿರುತೆರೆ ನಟನ ಜತೆ ನಿಶ್ಚಿತಾರ್ಥ ಮಾಡಿಕೊಂಡ ಖ್ಯಾತ ಆ್ಯಂಕರ್; ವೈರಲ್ ಆಯ್ತು ಫೋಟೋ
ನವೀನ್​-ಕಣ್ಮಣಿ
TV9 Web
| Edited By: |

Updated on: Apr 17, 2022 | 9:25 AM

Share

ಕಿರುತೆರೆ ಲೋಕ (Tv Industry) ಈಗ ಹಿರಿತೆರೆ ಲೋಕದಷ್ಟೇ ದೊಡ್ಡದಾಗಿ ಬೆಳೆದು ನಿಂತಿದೆ. ಇಲ್ಲಿ ನಟಿಸುವ ಕಲಾವಿದರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರ ವೈಯಕ್ತಿಕ ಜೀವನದ ಬಗ್ಗೆ ತಿಳಿದುಕೊಳ್ಳುವ ಆಸಕ್ತಿ ಅಭಿಮಾನಿಗಳಿಗೆ ಇರುತ್ತದೆ. ಈಗ ತಮಿಳಿನ ಕಿರುತೆರೆ ನಟ ನವೀನ್ ಕುಮಾರ್ ಅವರ ನಿಶ್ಚಿತಾರ್ಥ (Engagment) ನೆರವೇರಿದೆ. ಖ್ಯಾತ ಟಿವಿ ಆ್ಯಂಕರ್ ಕಣ್ಮಣಿ ಶೇಖರ್ (Kanmani Sekhar) ಜತೆ ನವೀನ್ ಕುಮಾರ್ ಅವರು ಎಂಗೇಜ್​ಮೆಂಟ್ ಮಾಡಿಕೊಂಡಿದ್ದಾರೆ. ಈ ಫೋಟೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಫೋಟೋ ಸಾಕಷ್ಟು ವೈರಲ್ ಆಗುತ್ತಿದೆ. ಈ ಜೋಡಿಗಳಿಗೆ ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ.

ಈ ನಿಶ್ಚಿತಾರ್ಥ ತುಂಬಾನೇ ಗುಟ್ಟಾಗಿ ನಡೆದಿದೆ. ಕುಟುಂಬದ ಕೆಲವೇ ಕೆಲವು ಸದಸ್ಯರು ಹಾಗೂ ಗೆಳೆಯರು ಈ ಸಮಾರಂಭದಲ್ಲಿ ಭಾಗಿ ಆಗಿದ್ದರು. ಕೆಲ ದಿನಗಳಿಂದ ಈ ವಿಚಾರದ ಬಗ್ಗೆ ಸುದ್ದಿ ಹರಿದಾಡುತ್ತಲೇ ಇತ್ತು. ಆದರೆ, ಇದನ್ನು ಅವರು ಖಚಿತ ಮಾಡಿರಲಿಲ್ಲ. ಈಗ ಪೋಟೋ ಹಂಚಿಕೊಳ್ಳುವ ಮೂಲಕ ಎಂಗೇಜ್​ಮೆಂಟ್ ವಿಚಾರವನ್ನು ಖಚಿತಪಡಿಸಿದ್ದಾರೆ.

ಕಣ್ಮಣಿ ಅವರು ಎಂಗೇಜ್​ಮೆಂಟ್ ಫೋಟೋವನ್ನು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದಾರೆ. ಕಣ್ಮಣಿ ಅವರು ಕೆಂಪು ಸೀರೆ ಉಟ್ಟಿದ್ದಾರೆ. ನವೀನ್ ಕುಮಾರ್ ಅವರು ಬಿಳಿ ಶರ್ಟ್ ತೊಟ್ಟು, ಅದಕ್ಕೆ ಬೂದು ಬಣ್ಣದ ಪ್ಯಾಂಟ್ ಧರಿಸಿದ್ದಾರೆ. ಇಬ್ಬರೂ ಸಖತ್ ಖುಷಿಯಿಂದ ಫೋಟೋಗೆ ಪೋಸ್​ ನೀಡಿದ್ದಾರೆ.

View this post on Instagram

A post shared by Kanmani Sekar (@imkanmani)

ಈ ಫೋಟೋಗೆ ಕಣ್ಮಣಿ ಅವರು ‘ಖುಷಿಯಿಂದ ನಿಶ್ಚಿತಾರ್ಥ ಮಾಡಿಕೊಂಡೆ’ ಎನ್ನುವ ಅಡಿಬರಹ ಬರೆದು, ರೆಡ್ ಹಾರ್ಟ್ ಹಾಗೂ ಉಂಗುರದ ಎಮೋಜಿ ಹಾಕಿದ್ದಾರೆ. ಈ ಫೋಟೋ ಲಕ್ಷಕ್ಕೂ ಅಧಿಕ ಲೈಕ್ಸ್ ಪಡೆದಿದೆ. ಕಣ್ಮಣಿ ಎಂಗೇಜ್​ಮೆಂಟ್ ಮಾಡಿಕೊಳ್ಳುತ್ತಿರುವ ರೀಲ್ಸ್​ಅನ್ನು ಕೂಡ ಪೋಸ್ಟ್ ಮಾಡಿದ್ದಾರೆ. ಇದು ಅವರ ಅಭಿಮಾನಿಗಳ ವಲಯದಲ್ಲಿ ವೈರಲ್ ಆಗಿದೆ. ಈ ಜೋಡಿಗೆ ಸೆಲೆಬ್ರಿಟಿಗಳು, ಅಭಿಮಾನಿಗಳು ಶುಭ ಕೋರುತ್ತಿದ್ದಾರೆ.

ಕಣ್ಮಣಿ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಸುಮಾರು 5 ಲಕ್ಷ ಹಿಂಬಾಲಕರಿದ್ದಾರೆ. ಅವರ ಅಭಿಮಾನಿ ಬಳಗ ಹಿರಿದಾಗುತ್ತಲೇ ಇದೆ. ‘ಇಧಯಥೈ ತಿರುಡಥೆ’ ಧಾರಾವಾಹಿ ಮೂಲಕ ನವೀನ್ ಜನಪ್ರಿಯತೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಉಕ್ರೇನ್​ನಲ್ಲಿ ಸಿಲುಕಿದ್ದಾರೆ ಕಿರುತೆರೆ ನಟಿ?; ಸ್ಪಷ್ಟನೆ ನೀಡಿದ ಪ್ರಿಯಾ ಮೋಹನ್  

Sanjay Dutt: ಸತತ 2-3 ಗಂಟೆ ಕಣ್ಣೀರು ಹಾಕಿದ್ದ ‘ಕೆಜಿಎಫ್ 2’ ಅಧೀರ; ಕಾರಣವೇನು?

Follow Us
Video: ಟೆಕ್ ಸ್ಯಾವಿ ಮಂಗನ ಸೆಲ್ಫೀ ಕ್ರೇಜ್! ವಿಡಿಯೋ ವೈರಲ್
Video: ಟೆಕ್ ಸ್ಯಾವಿ ಮಂಗನ ಸೆಲ್ಫೀ ಕ್ರೇಜ್! ವಿಡಿಯೋ ವೈರಲ್
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು