AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರುತೆರೆ ನಟನ ಜತೆ ನಿಶ್ಚಿತಾರ್ಥ ಮಾಡಿಕೊಂಡ ಖ್ಯಾತ ಆ್ಯಂಕರ್; ವೈರಲ್ ಆಯ್ತು ಫೋಟೋ

ಈ ನಿಶ್ಚಿತಾರ್ಥ ತುಂಬಾನೇ ಗುಟ್ಟಾಗಿ ನಡೆದಿದೆ. ಕುಟುಂಬದ ಕೆಲವೇ ಕೆಲವು ಸದಸ್ಯರು ಹಾಗೂ ಗೆಳೆಯರು ಈ ಸಮಾರಂಭದಲ್ಲಿ ಭಾಗಿ ಆಗಿದ್ದರು. ಕೆಲ ದಿನಗಳಿಂದ ಈ ವಿಚಾರದ ಬಗ್ಗೆ ಸುದ್ದಿ ಹರಿದಾಡುತ್ತಲೇ ಇತ್ತು.

ಕಿರುತೆರೆ ನಟನ ಜತೆ ನಿಶ್ಚಿತಾರ್ಥ ಮಾಡಿಕೊಂಡ ಖ್ಯಾತ ಆ್ಯಂಕರ್; ವೈರಲ್ ಆಯ್ತು ಫೋಟೋ
ನವೀನ್​-ಕಣ್ಮಣಿ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Apr 17, 2022 | 9:25 AM

Share

ಕಿರುತೆರೆ ಲೋಕ (Tv Industry) ಈಗ ಹಿರಿತೆರೆ ಲೋಕದಷ್ಟೇ ದೊಡ್ಡದಾಗಿ ಬೆಳೆದು ನಿಂತಿದೆ. ಇಲ್ಲಿ ನಟಿಸುವ ಕಲಾವಿದರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರ ವೈಯಕ್ತಿಕ ಜೀವನದ ಬಗ್ಗೆ ತಿಳಿದುಕೊಳ್ಳುವ ಆಸಕ್ತಿ ಅಭಿಮಾನಿಗಳಿಗೆ ಇರುತ್ತದೆ. ಈಗ ತಮಿಳಿನ ಕಿರುತೆರೆ ನಟ ನವೀನ್ ಕುಮಾರ್ ಅವರ ನಿಶ್ಚಿತಾರ್ಥ (Engagment) ನೆರವೇರಿದೆ. ಖ್ಯಾತ ಟಿವಿ ಆ್ಯಂಕರ್ ಕಣ್ಮಣಿ ಶೇಖರ್ (Kanmani Sekhar) ಜತೆ ನವೀನ್ ಕುಮಾರ್ ಅವರು ಎಂಗೇಜ್​ಮೆಂಟ್ ಮಾಡಿಕೊಂಡಿದ್ದಾರೆ. ಈ ಫೋಟೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಫೋಟೋ ಸಾಕಷ್ಟು ವೈರಲ್ ಆಗುತ್ತಿದೆ. ಈ ಜೋಡಿಗಳಿಗೆ ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ.

ಈ ನಿಶ್ಚಿತಾರ್ಥ ತುಂಬಾನೇ ಗುಟ್ಟಾಗಿ ನಡೆದಿದೆ. ಕುಟುಂಬದ ಕೆಲವೇ ಕೆಲವು ಸದಸ್ಯರು ಹಾಗೂ ಗೆಳೆಯರು ಈ ಸಮಾರಂಭದಲ್ಲಿ ಭಾಗಿ ಆಗಿದ್ದರು. ಕೆಲ ದಿನಗಳಿಂದ ಈ ವಿಚಾರದ ಬಗ್ಗೆ ಸುದ್ದಿ ಹರಿದಾಡುತ್ತಲೇ ಇತ್ತು. ಆದರೆ, ಇದನ್ನು ಅವರು ಖಚಿತ ಮಾಡಿರಲಿಲ್ಲ. ಈಗ ಪೋಟೋ ಹಂಚಿಕೊಳ್ಳುವ ಮೂಲಕ ಎಂಗೇಜ್​ಮೆಂಟ್ ವಿಚಾರವನ್ನು ಖಚಿತಪಡಿಸಿದ್ದಾರೆ.

ಕಣ್ಮಣಿ ಅವರು ಎಂಗೇಜ್​ಮೆಂಟ್ ಫೋಟೋವನ್ನು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದಾರೆ. ಕಣ್ಮಣಿ ಅವರು ಕೆಂಪು ಸೀರೆ ಉಟ್ಟಿದ್ದಾರೆ. ನವೀನ್ ಕುಮಾರ್ ಅವರು ಬಿಳಿ ಶರ್ಟ್ ತೊಟ್ಟು, ಅದಕ್ಕೆ ಬೂದು ಬಣ್ಣದ ಪ್ಯಾಂಟ್ ಧರಿಸಿದ್ದಾರೆ. ಇಬ್ಬರೂ ಸಖತ್ ಖುಷಿಯಿಂದ ಫೋಟೋಗೆ ಪೋಸ್​ ನೀಡಿದ್ದಾರೆ.

View this post on Instagram

A post shared by Kanmani Sekar (@imkanmani)

ಈ ಫೋಟೋಗೆ ಕಣ್ಮಣಿ ಅವರು ‘ಖುಷಿಯಿಂದ ನಿಶ್ಚಿತಾರ್ಥ ಮಾಡಿಕೊಂಡೆ’ ಎನ್ನುವ ಅಡಿಬರಹ ಬರೆದು, ರೆಡ್ ಹಾರ್ಟ್ ಹಾಗೂ ಉಂಗುರದ ಎಮೋಜಿ ಹಾಕಿದ್ದಾರೆ. ಈ ಫೋಟೋ ಲಕ್ಷಕ್ಕೂ ಅಧಿಕ ಲೈಕ್ಸ್ ಪಡೆದಿದೆ. ಕಣ್ಮಣಿ ಎಂಗೇಜ್​ಮೆಂಟ್ ಮಾಡಿಕೊಳ್ಳುತ್ತಿರುವ ರೀಲ್ಸ್​ಅನ್ನು ಕೂಡ ಪೋಸ್ಟ್ ಮಾಡಿದ್ದಾರೆ. ಇದು ಅವರ ಅಭಿಮಾನಿಗಳ ವಲಯದಲ್ಲಿ ವೈರಲ್ ಆಗಿದೆ. ಈ ಜೋಡಿಗೆ ಸೆಲೆಬ್ರಿಟಿಗಳು, ಅಭಿಮಾನಿಗಳು ಶುಭ ಕೋರುತ್ತಿದ್ದಾರೆ.

ಕಣ್ಮಣಿ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಸುಮಾರು 5 ಲಕ್ಷ ಹಿಂಬಾಲಕರಿದ್ದಾರೆ. ಅವರ ಅಭಿಮಾನಿ ಬಳಗ ಹಿರಿದಾಗುತ್ತಲೇ ಇದೆ. ‘ಇಧಯಥೈ ತಿರುಡಥೆ’ ಧಾರಾವಾಹಿ ಮೂಲಕ ನವೀನ್ ಜನಪ್ರಿಯತೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಉಕ್ರೇನ್​ನಲ್ಲಿ ಸಿಲುಕಿದ್ದಾರೆ ಕಿರುತೆರೆ ನಟಿ?; ಸ್ಪಷ್ಟನೆ ನೀಡಿದ ಪ್ರಿಯಾ ಮೋಹನ್  

Sanjay Dutt: ಸತತ 2-3 ಗಂಟೆ ಕಣ್ಣೀರು ಹಾಕಿದ್ದ ‘ಕೆಜಿಎಫ್ 2’ ಅಧೀರ; ಕಾರಣವೇನು?

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ