AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಟ್ಟೆ ಬದಲಿಸುವಾಗ..’; ನಿರ್ಮಾಪಕನ ಹೆಸರೂ ಹೇಳಿ ತಮಗಾದ ಕಿರುಕುಳ ವಿವರಿಸಿದ ಕಿರುತೆರೆ ನಟಿ

‘ನನಗೆ ಇನ್ನಷ್ಟು ಹಾನಿ ಆಗಬಹುದು ಎನ್ನುವ ಕಾರಣಕ್ಕೆ ಕುಟುಂಬದವರು ಈ ಬಗ್ಗೆ ಪೋಸ್ಟ್ ಮಾಡೋದು ಬೇಡ ಎಂದರು. ನಾನೇಕೆ ಹೆದರಬೇಕು? ನ್ಯಾಯ ಪಡೆಯೋದು ನನ್ನ ಹಕ್ಕು’ ಎಂದು ಕುಂದನ್ ಸಿಂಗ್ ಅವರನ್ನು ಟ್ಯಾಗ್ ಮಾಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

‘ಬಟ್ಟೆ ಬದಲಿಸುವಾಗ..’; ನಿರ್ಮಾಪಕನ ಹೆಸರೂ ಹೇಳಿ ತಮಗಾದ ಕಿರುಕುಳ ವಿವರಿಸಿದ ಕಿರುತೆರೆ ನಟಿ
ರಾಜೇಶ್ ದುಗ್ಗುಮನೆ
|

Updated on: Apr 27, 2024 | 1:12 PM

Share

ನಿರ್ಮಾಪಕರಿಂದ ತಮಗಾದ ಕೆಟ್ಟ ಅನುಭವಗಳ ಬಗ್ಗೆ ನಟಿಯರು ಆಗಾಗ ಹೇಳಿಕೊಳ್ಳುತ್ತಲೇ ಇರುತ್ತಾರೆ. ಈಗ ಹಿಂದಿ ಕಿರುತೆರೆ ನಟಿ ಕೃಷ್ಣಾ ಮುಖರ್ಜಿ ಅವರು ನಿರ್ಮಾಪಕರಿಂದ ಆದ ಕೆಟ್ಟ ಅನುಭವ ವಿವರಿಸಿದ್ದಾರೆ. ‘ಯೇ ಹೇ ಮೊಹಾಬತೇ’ (Yeh Hai Mohabbatein) ಧಾರಾವಾಹಿ ಮೂಲಕ ಫೇಮಸ್ ಆದ ಅವರಿಗೆ ಈಗ ದೊಡ್ಡ ಮಟ್ಟದ ಕಿರುಕುಳ ಆಗಿದೆ. ಜೊತೆಗೆ ಧಾರಾವಾಹಿಯಲ್ಲಿ ನಟಿಸಿದ್ದಕ್ಕೆ ಅವರಿಗೆ ಹಣ ಕೂಡ ಸಿಕ್ಕಿಲ್ಲ. ಇದರಿಂದ ಅವರು ಬೇಸರ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ.

‘ಶುಭ ಶಗುನ್’ ಹೆಸರಿನ ಧಾರಾವಾಹಿಯಲ್ಲಿ ಕೃಷ್ಣಾ ನಟಿಸುತ್ತಿದ್ದರು. ಇದರಿಂದ ಅವರು ಹೊರ ಬಂದಿದ್ದಾರೆ. ಇದಕ್ಕೆ ಕಾರಣ ಧಾರಾವಾಹಿ ನಿರ್ಮಾಪಕ ಕುಂದನ್ ಸಿಂಗ್ ಅವರು ನೀಡಿದ ಕಿರುಕುಳ. ‘ಇದನ್ನು ಬರೆಯುವಾಗ ನನ್ನ ಕೈಗಳು ನಡುಗುತ್ತಿವೆ. ಆದರೂ ನಾನು ಬರೆಯಲೇಬೇಕು. ನಾನು ಇವರಿಂದ ಖಿನ್ನತೆಗೆ ಒಳಗಾಗಿದ್ದೇನೆ. ನಾವು ನಮ್ಮ ಭಾವನೆಗಳನ್ನು ಹಿಡಿದಿಟ್ಟು, ನಮ್ಮ ಒಳ್ಳೆಯ ಜೀವನವನ್ನು ಮಾತ್ರ ಸೋಶಿಯಲ್ ಮೀಡಿಯಾದಲ್ಲಿ ತೋರಿಸುತ್ತೇವೆ. ಆದರೆ, ಇದು ರಿಯಾಲಿಟಿ’ ಎಂದು ಅವರು ಬರೆದುಕೊಂಡಿದ್ದಾರೆ.

‘ನನಗೆ ಇನ್ನಷ್ಟು ಹಾನಿ ಆಗಬಹುದು ಎನ್ನುವ ಕಾರಣಕ್ಕೆ ಕುಟುಂಬದವರು ಈ ಬಗ್ಗೆ ಪೋಸ್ಟ್ ಮಾಡೋದು ಬೇಡ ಎಂದರು. ನಾನೇಕೆ ಹೆದರಬೇಕು? ನ್ಯಾಯ ಪಡೆಯೋದು ನನ್ನ ಹಕ್ಕು’ ಎಂದು ಕುಂದನ್ ಸಿಂಗ್ ಅವರನ್ನು ಟ್ಯಾಗ್ ಮಾಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಕಳೆದ ಒಂದೂವರೆ ವರ್ಷ ನನಗೆ ಸುಲಭದ್ದಾಗಿರಲಿಲ್ಲ. ನಾನು ಖಿನ್ನತೆಗೆ ಒಳಗಾಗಿದ್ದೇನೆ. ನಾನು ಒಂಟಿಯಾಗಿದ್ದಾಗ ಅಳುತ್ತಿದ್ದೇನೆ. ದಂಗಲ್ ಟಿವಿಗಾಗಿ ಶುಭ್ ಶಗುನ್ ಧಾರಾವಾಹಿ ಒಪ್ಪಿಕೊಂಡಾಗಿನಿಂದ ಈ ಸಮಸ್ಯೆ ಆಗುತ್ತಿದೆ. ನನ್ನ ಜೀವನದಲ್ಲಿ ಮಾಡಿದ ಅತಿ ಕೆಟ್ಟ ನಿರ್ಧಾರ. ನನಗೆ ಅದನ್ನು ಮಾಡಬೇಕು ಎಂದಿರಲಿಲ್ಲ. ಬೇರೆಯವರ ಮಾತನ್ನು ಕೇಳಿ ಕಾಂಟ್ರ್ಯಾಕ್ಟ್ ಸಹಿ ಮಾಡಿದೆ’ ಎಂದು ಹೇಳಿಕೊಂಡಿದ್ದಾರೆ ಅವರು.

ಇದನ್ನೂ ಓದಿ: ಟಿಆರ್​ಪಿಯಲ್ಲಿ ಮತ್ತೆ ಮೊದಲ ಸ್ಥಾನಕ್ಕೇರಿದ ‘ಪುಟ್ಟಕ್ಕನ ಮಕ್ಕಳು’; ಟಾಪ್ ಐದು ಧಾರಾವಾಹಿಗಳಿವು 

‘ಪ್ರೊಡಕ್ಷನ್ ಹೌಸ್ ಹಾಗೂ ನಿರ್ಮಾಪಕ ಕುಂದನ್ ಸಿಂಗ್ ಅವರು ನನಗೆ ಕಿರುಕುಳ ನೀಡಿದ್ದಾರೆ. ನನಗೆ ಅಂದು ಅನಾರೋಗ್ಯ ಆಗಿತ್ತು. ಜೊತೆಗೆ ಅವರು ಸಂಭಾವನೆಯನ್ನೂ ಕೊಡುತ್ತಿರಲಿಲ್ಲ. ಹೀಗಾಗಿ ನಾನು ಶೂಟ್ ಮಾಡಲ್ಲ ಎಂದೆ. ಇದಕ್ಕಾಗಿ ಅವರು ಮೇಕಪ್​ ರೂಂನಲ್ಲಿ ನನ್ನನ್ನು ಲಾಕ್ ಮಾಡಿದ್ದರು. ನಾನು ಬಟ್ಟೆ ಬದಲಿಸುವಾಗ ಬಾಗಿಲು ಮುರಿಯುವ ರೀತಿಯಲ್ಲಿ ಬಾಗಿಲು ಬಡಿಯುತ್ತಿದ್ದರು’ ಎಂದು ದುಃಖ ತೋಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು