AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಟ್ಟೆ ಬದಲಿಸುವಾಗ..’; ನಿರ್ಮಾಪಕನ ಹೆಸರೂ ಹೇಳಿ ತಮಗಾದ ಕಿರುಕುಳ ವಿವರಿಸಿದ ಕಿರುತೆರೆ ನಟಿ

‘ನನಗೆ ಇನ್ನಷ್ಟು ಹಾನಿ ಆಗಬಹುದು ಎನ್ನುವ ಕಾರಣಕ್ಕೆ ಕುಟುಂಬದವರು ಈ ಬಗ್ಗೆ ಪೋಸ್ಟ್ ಮಾಡೋದು ಬೇಡ ಎಂದರು. ನಾನೇಕೆ ಹೆದರಬೇಕು? ನ್ಯಾಯ ಪಡೆಯೋದು ನನ್ನ ಹಕ್ಕು’ ಎಂದು ಕುಂದನ್ ಸಿಂಗ್ ಅವರನ್ನು ಟ್ಯಾಗ್ ಮಾಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

‘ಬಟ್ಟೆ ಬದಲಿಸುವಾಗ..’; ನಿರ್ಮಾಪಕನ ಹೆಸರೂ ಹೇಳಿ ತಮಗಾದ ಕಿರುಕುಳ ವಿವರಿಸಿದ ಕಿರುತೆರೆ ನಟಿ
ರಾಜೇಶ್ ದುಗ್ಗುಮನೆ
|

Updated on: Apr 27, 2024 | 1:12 PM

Share

ನಿರ್ಮಾಪಕರಿಂದ ತಮಗಾದ ಕೆಟ್ಟ ಅನುಭವಗಳ ಬಗ್ಗೆ ನಟಿಯರು ಆಗಾಗ ಹೇಳಿಕೊಳ್ಳುತ್ತಲೇ ಇರುತ್ತಾರೆ. ಈಗ ಹಿಂದಿ ಕಿರುತೆರೆ ನಟಿ ಕೃಷ್ಣಾ ಮುಖರ್ಜಿ ಅವರು ನಿರ್ಮಾಪಕರಿಂದ ಆದ ಕೆಟ್ಟ ಅನುಭವ ವಿವರಿಸಿದ್ದಾರೆ. ‘ಯೇ ಹೇ ಮೊಹಾಬತೇ’ (Yeh Hai Mohabbatein) ಧಾರಾವಾಹಿ ಮೂಲಕ ಫೇಮಸ್ ಆದ ಅವರಿಗೆ ಈಗ ದೊಡ್ಡ ಮಟ್ಟದ ಕಿರುಕುಳ ಆಗಿದೆ. ಜೊತೆಗೆ ಧಾರಾವಾಹಿಯಲ್ಲಿ ನಟಿಸಿದ್ದಕ್ಕೆ ಅವರಿಗೆ ಹಣ ಕೂಡ ಸಿಕ್ಕಿಲ್ಲ. ಇದರಿಂದ ಅವರು ಬೇಸರ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ.

‘ಶುಭ ಶಗುನ್’ ಹೆಸರಿನ ಧಾರಾವಾಹಿಯಲ್ಲಿ ಕೃಷ್ಣಾ ನಟಿಸುತ್ತಿದ್ದರು. ಇದರಿಂದ ಅವರು ಹೊರ ಬಂದಿದ್ದಾರೆ. ಇದಕ್ಕೆ ಕಾರಣ ಧಾರಾವಾಹಿ ನಿರ್ಮಾಪಕ ಕುಂದನ್ ಸಿಂಗ್ ಅವರು ನೀಡಿದ ಕಿರುಕುಳ. ‘ಇದನ್ನು ಬರೆಯುವಾಗ ನನ್ನ ಕೈಗಳು ನಡುಗುತ್ತಿವೆ. ಆದರೂ ನಾನು ಬರೆಯಲೇಬೇಕು. ನಾನು ಇವರಿಂದ ಖಿನ್ನತೆಗೆ ಒಳಗಾಗಿದ್ದೇನೆ. ನಾವು ನಮ್ಮ ಭಾವನೆಗಳನ್ನು ಹಿಡಿದಿಟ್ಟು, ನಮ್ಮ ಒಳ್ಳೆಯ ಜೀವನವನ್ನು ಮಾತ್ರ ಸೋಶಿಯಲ್ ಮೀಡಿಯಾದಲ್ಲಿ ತೋರಿಸುತ್ತೇವೆ. ಆದರೆ, ಇದು ರಿಯಾಲಿಟಿ’ ಎಂದು ಅವರು ಬರೆದುಕೊಂಡಿದ್ದಾರೆ.

‘ನನಗೆ ಇನ್ನಷ್ಟು ಹಾನಿ ಆಗಬಹುದು ಎನ್ನುವ ಕಾರಣಕ್ಕೆ ಕುಟುಂಬದವರು ಈ ಬಗ್ಗೆ ಪೋಸ್ಟ್ ಮಾಡೋದು ಬೇಡ ಎಂದರು. ನಾನೇಕೆ ಹೆದರಬೇಕು? ನ್ಯಾಯ ಪಡೆಯೋದು ನನ್ನ ಹಕ್ಕು’ ಎಂದು ಕುಂದನ್ ಸಿಂಗ್ ಅವರನ್ನು ಟ್ಯಾಗ್ ಮಾಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಕಳೆದ ಒಂದೂವರೆ ವರ್ಷ ನನಗೆ ಸುಲಭದ್ದಾಗಿರಲಿಲ್ಲ. ನಾನು ಖಿನ್ನತೆಗೆ ಒಳಗಾಗಿದ್ದೇನೆ. ನಾನು ಒಂಟಿಯಾಗಿದ್ದಾಗ ಅಳುತ್ತಿದ್ದೇನೆ. ದಂಗಲ್ ಟಿವಿಗಾಗಿ ಶುಭ್ ಶಗುನ್ ಧಾರಾವಾಹಿ ಒಪ್ಪಿಕೊಂಡಾಗಿನಿಂದ ಈ ಸಮಸ್ಯೆ ಆಗುತ್ತಿದೆ. ನನ್ನ ಜೀವನದಲ್ಲಿ ಮಾಡಿದ ಅತಿ ಕೆಟ್ಟ ನಿರ್ಧಾರ. ನನಗೆ ಅದನ್ನು ಮಾಡಬೇಕು ಎಂದಿರಲಿಲ್ಲ. ಬೇರೆಯವರ ಮಾತನ್ನು ಕೇಳಿ ಕಾಂಟ್ರ್ಯಾಕ್ಟ್ ಸಹಿ ಮಾಡಿದೆ’ ಎಂದು ಹೇಳಿಕೊಂಡಿದ್ದಾರೆ ಅವರು.

ಇದನ್ನೂ ಓದಿ: ಟಿಆರ್​ಪಿಯಲ್ಲಿ ಮತ್ತೆ ಮೊದಲ ಸ್ಥಾನಕ್ಕೇರಿದ ‘ಪುಟ್ಟಕ್ಕನ ಮಕ್ಕಳು’; ಟಾಪ್ ಐದು ಧಾರಾವಾಹಿಗಳಿವು 

‘ಪ್ರೊಡಕ್ಷನ್ ಹೌಸ್ ಹಾಗೂ ನಿರ್ಮಾಪಕ ಕುಂದನ್ ಸಿಂಗ್ ಅವರು ನನಗೆ ಕಿರುಕುಳ ನೀಡಿದ್ದಾರೆ. ನನಗೆ ಅಂದು ಅನಾರೋಗ್ಯ ಆಗಿತ್ತು. ಜೊತೆಗೆ ಅವರು ಸಂಭಾವನೆಯನ್ನೂ ಕೊಡುತ್ತಿರಲಿಲ್ಲ. ಹೀಗಾಗಿ ನಾನು ಶೂಟ್ ಮಾಡಲ್ಲ ಎಂದೆ. ಇದಕ್ಕಾಗಿ ಅವರು ಮೇಕಪ್​ ರೂಂನಲ್ಲಿ ನನ್ನನ್ನು ಲಾಕ್ ಮಾಡಿದ್ದರು. ನಾನು ಬಟ್ಟೆ ಬದಲಿಸುವಾಗ ಬಾಗಿಲು ಮುರಿಯುವ ರೀತಿಯಲ್ಲಿ ಬಾಗಿಲು ಬಡಿಯುತ್ತಿದ್ದರು’ ಎಂದು ದುಃಖ ತೋಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ
ಬಯಲಾಯ್ತು ಕಲಬುರಗಿ ಆರ್​ಟಿಒ ಕಚೇರಿ ಬ್ರಹ್ಮಾಂಡ ಭ್ರಷ್ಟಾಚಾರ
ಬಯಲಾಯ್ತು ಕಲಬುರಗಿ ಆರ್​ಟಿಒ ಕಚೇರಿ ಬ್ರಹ್ಮಾಂಡ ಭ್ರಷ್ಟಾಚಾರ
‘ಧುರಂಧರ್​ಗಿಂತ ಸೀಕ್ವೆಲ್ ಇನ್ನೂ ಪವರ್​​ಫುಲ್; ಯಾಮಿ ಗೌತಮ್
‘ಧುರಂಧರ್​ಗಿಂತ ಸೀಕ್ವೆಲ್ ಇನ್ನೂ ಪವರ್​​ಫುಲ್; ಯಾಮಿ ಗೌತಮ್
Video: ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು
ದತ್ತಪೀಠದಲ್ಲಿ ಹೊಸ ವಿವಾದ: ಕಲಮೆ ತಯ್ಯಬಾಗೆ ಹಿಂದೂ ಸಂಘಟನೆಗಳ ಆಕ್ರೋಶ
ದತ್ತಪೀಠದಲ್ಲಿ ಹೊಸ ವಿವಾದ: ಕಲಮೆ ತಯ್ಯಬಾಗೆ ಹಿಂದೂ ಸಂಘಟನೆಗಳ ಆಕ್ರೋಶ