AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Veena Kapoor: ಆಸ್ತಿಗಾಗಿ ಹಿರಿಯ ನಟಿಯನ್ನು ಹೊಡೆದು ಕೊಂದ ಮಗ; ಮೃತದೇಹ ನದಿಗೆ ಎಸೆದಿದ್ದು ತನಿಖೆ ವೇಳೆ ಬಹಿರಂಗ

Veena Kapoor Death: ಹತ್ಯೆ ವಿಚಾರವನ್ನು ಸಚಿನ್​ ಕಪೂರ್​ ಬಾಯಿ ಬಿಟ್ಟಿದ್ದಾನೆ. 12 ಕೋಟಿ ರೂಪಾಯಿ ಮೌಲ್ಯದ ಫ್ಲಾಟ್​ ಕುರಿತಾಗಿ ಅಮ್ಮನ ಜೊತೆ ಜಗಳ ಆರಂಭ ಆಯಿತು ಎಂದು ಆತ ಹೇಳಿದ್ದಾನೆ.

Veena Kapoor: ಆಸ್ತಿಗಾಗಿ ಹಿರಿಯ ನಟಿಯನ್ನು ಹೊಡೆದು ಕೊಂದ ಮಗ; ಮೃತದೇಹ ನದಿಗೆ ಎಸೆದಿದ್ದು ತನಿಖೆ ವೇಳೆ ಬಹಿರಂಗ
ವೀಣಾ ಕಪೂರ್
TV9 Web
| Edited By: |

Updated on:Dec 11, 2022 | 12:57 PM

Share

ಮುಂಬೈನಲ್ಲಿ ಈ ಭೀಕರ ಘಟನೆ ನಡೆದಿದೆ. ಆಸ್ತಿಗಾಗಿ ಹಿರಿಯ ನಟಿ ವೀಣಾ ಕಪೂರ್ (Actress Veena Kapoor) ಅವರನ್ನು ಸ್ವಂತ ಮಗನೇ ಕೊಲೆ ಮಾಡಿರುವ ವಿಷಯ ಬೆಳಕಿಗೆ ಬಂದಿದೆ. ಹಿಂದಿ ಸೀರಿಯಲ್​ ಹಾಗೂ ಸಿನಿಮಾಗಳಲ್ಲಿ ನಟಿಸಿ ವೀಣಾ ಕಪೂರ್​ ಜನಪ್ರಿಯತೆ ಪಡೆದಿದ್ದರು. ಅವರಿಗೆ 74 ವರ್ಷ ವಯಸ್ಸಾಗಿತ್ತು. ಅವರು ಸ್ವಂತ ಮಗನಿಂದಲೇ ಹತ್ಯೆಗೀಡಾದ (Veena Kapoor Death) ಸುದ್ದಿ ಕೇಳಿ ಹಿಂದಿ ಕಿರುತೆರೆ ಮಂದಿ ಬೆಚ್ಚಿ ಬಿದ್ದಿದ್ದಾರೆ. ಘಟನೆ ಕುರಿತಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಗ ಸಚಿನ್​ ಕಪೂರ್​ (Sachin Kapoor) ಹಾಗೂ ವೀಣಾ ಕಪೂರ್​ ನಡುವೆ ವಾಗ್ವಾದ ಏರ್ಪಟ್ಟಿತ್ತು. ಈ ವೇಳೆ ಪರಿಸ್ಥಿತಿ ಕೈ ಮೀರಿ ತಾಯಿಯ ಹತ್ಯೆ ಮಾಡಿರುವುದಾಗಿ ಸಚಿನ್​ ಕಪೂರ್​ ಒಪ್ಪಿಕೊಂಡಿದ್ದಾನೆ ಎಂದು ವರದಿ ಆಗಿದೆ.

12 ಕೋಟಿ ರೂಪಾಯಿ ಆಸ್ತಿಗಾಗಿ ಜಗಳ:

ವೀಣಾ ಕಪೂರ್​ ಅವರು ನಾಪತ್ತೆ ಆಗಿದ್ದಾರೆ ಎಂದು ಕಲ್ಪತರು ಸೊಸೈಟಿಯ ಭದ್ರತಾ ಸಿಬ್ಬಂದಿಗಳು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ವಿಚಾರಣೆ ನಡೆಸಿದಾಗ ಹತ್ಯೆ ವಿಚಾರವನ್ನು ಸಚಿನ್​ ಕಪೂರ್​ ಬಾಯಿ ಬಿಟ್ಟಿದ್ದಾನೆ. 12 ಕೋಟಿ ರೂಪಾಯಿ ಮೌಲ್ಯದ ಫ್ಲಾಟ್​ ಕುರಿತಾಗಿ ಅಮ್ಮನ ಜೊತೆ ಜಗಳ ಆರಂಭ ಆಯಿತು ಎಂದು ಆತ ಹೇಳಿದ್ದಾನೆ.

ಇದನ್ನೂ ಓದಿ
Image
ಕೊಲೆ ಆರೋಪದಲ್ಲಿ ಜೈಲು ಸೇರಿದ್ದ ಮಗ ಅಮಾಯಕನೆಂದು ನಿರೂಪಿಸಲು ತಾಯಿ ತಾನೇ ತನಿಖೆ ನಡೆಸಿ ‘ಕೊಲೆಯಾದವಳನ್ನು’ ಪತ್ತೆಮಾಡಿದಳು!
Image
ನವಲಗುಂದ: ಬೈಕ್​ನಿಂದ ಇಳಿಯುವಾಗ ಕಾಲು ತಗುಲಿದ್ದಕ್ಕೆ ಬರ್ಬರ ಕೊಲೆ; ಆರೋಪಿಗಳು ಅಂದರ್​
Image
Shocking News: ಹಿಂದಿ ಸೀರಿಯಲ್​ ನೋಡಿ ಆತ್ಮಹತ್ಯೆಯ ನಾಟಕವಾಡಿದ ಯುವತಿ; ಆಮೇಲೆ ಬಯಲಾಯ್ತು ಕೊಲೆ ರಹಸ್ಯ!
Image
ಶ್ರದ್ಧಾ ಕೊಲೆ ಕೃತ್ಯ ಬಗ್ಗೆ ಕೇಳಿ ಆಘಾತಕ್ಕೊಳಗಾದೆ ಎಂದು ಪೊಲೀಸರಿಗೆ ಹೇಳಿದ ಅಫ್ತಾಬ್​​ನ ಗರ್ಲ್​​​ಫ್ರೆಂಡ್

ನದಿಗೆ ಶವ ಎಸೆದ ಹಂತಕ:

ವೀಣಾ ಕಪೂರ್​ ಮತ್ತು ಸಚಿನ್​ ಕಪೂರ್​ ನಡುವೆ ಮಾತಿನ ಚಕಮಕಿ ನಡೆದಿತ್ತು. ಸಿಟ್ಟಿನಲ್ಲಿ ಬೇಸ್​ಬಾಲ್​ ಬ್ಯಾಟ್​ನಿಂದ ತಲೆಗೆ ಹೊಡೆದ ಪರಿಣಾಮ ವೀಣಾ ಅವರು ಕೊನೆಯುಸಿರು ಎಳೆದರು. ಬಳಿಕ ಅವರ ಶವನನ್ನು ರಾಯಘಡ ಜಿಲ್ಲೆಯ ನದಿಯೊಂದರಲ್ಲಿ ಎಸೆದು ಬಂದಿದ್ದನ್ನು ಸಚಿನ ಕಪೂರ್​ ಒಪ್ಪಿಕೊಂಡಿದ್ದಾನೆ ಎಂದು ವರದಿ ಆಗಿದೆ.

ಇದನ್ನೂ ಓದಿ: Shocking News: ಹಿಂದಿ ಸೀರಿಯಲ್​ ನೋಡಿ ಆತ್ಮಹತ್ಯೆಯ ನಾಟಕವಾಡಿದ ಯುವತಿ; ಆಮೇಲೆ ಬಯಲಾಯ್ತು ಕೊಲೆ ರಹಸ್ಯ!

ವೀಣಾ ಕಪೂರ್​ ಅವರ ಇನ್ನೋರ್ವ ಪುತ್ರ ಅಮೆರಿಕದಲ್ಲಿ ವಾಸವಾಗಿದ್ದಾರೆ. ಸದ್ಯ ಸಚಿನ್​ ವಿರುದ್ಧ ಐಪಿಸಿ ಸೆಕ್ಷನ್​ 302, 201, 31ರ ಅಡಿಯಲ್ಲಿ ಕೇಸ್​ ದಾಖಲಿಸಲಾಗಿದ್ದು, ವಿಚಾರಣೆ ಪ್ರಗತಿಯಲ್ಲಿದೆ. ಟಿವಿ ನಟಿ ನೀಲೂ ಕೊಹ್ಲಿ ಅವರು ವೀಣಾ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಹಿರಿಯ ನಟಿಯ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ: ಕುಡಿಯಲು ಹಣ ಕೊಡಲಿಲ್ಲವೆಂದು ಪತ್ನಿಯನ್ನು ಅಮಾನುಷವಾಗಿ ಹತ್ಯೆಗೈದ ಪತಿ: ತಂದೆ ಕೃತ್ಯಕ್ಕೆ ಕೈಜೋಡಿಸಿದ ಪಾಪಿ ಮಗ

‘ನಾನು ಮತ್ತು ವೀಣಾ ಅವರು 5 ವರ್ಷ ಜೊತೆಯಾಗಿ ಕೆಲಸ ಮಾಡಿದ್ದೆವು. ಆದರೆ ಕೊರೊನಾ ಬಳಿಕ ನಮ್ಮ ಸಂಪರ್ಕ ತಪ್ಪಿತು. ನಾನು ನನ್ನ ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆದೆ. ಅವರು ನಿಧನರಾಗಿದ್ದಾರೆ ಎಂಬುದನ್ನು ನಂಬಲು ಸಾಧ್ಯವಾಗುತ್ತಿಲ್ಲ’ ಎಂದು ನೀಲೂ ಕೊಹ್ಲಿ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:57 pm, Sun, 11 December 22

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ