Veena Kapoor: ಆಸ್ತಿಗಾಗಿ ಹಿರಿಯ ನಟಿಯನ್ನು ಹೊಡೆದು ಕೊಂದ ಮಗ; ಮೃತದೇಹ ನದಿಗೆ ಎಸೆದಿದ್ದು ತನಿಖೆ ವೇಳೆ ಬಹಿರಂಗ

Veena Kapoor Death: ಹತ್ಯೆ ವಿಚಾರವನ್ನು ಸಚಿನ್​ ಕಪೂರ್​ ಬಾಯಿ ಬಿಟ್ಟಿದ್ದಾನೆ. 12 ಕೋಟಿ ರೂಪಾಯಿ ಮೌಲ್ಯದ ಫ್ಲಾಟ್​ ಕುರಿತಾಗಿ ಅಮ್ಮನ ಜೊತೆ ಜಗಳ ಆರಂಭ ಆಯಿತು ಎಂದು ಆತ ಹೇಳಿದ್ದಾನೆ.

Veena Kapoor: ಆಸ್ತಿಗಾಗಿ ಹಿರಿಯ ನಟಿಯನ್ನು ಹೊಡೆದು ಕೊಂದ ಮಗ; ಮೃತದೇಹ ನದಿಗೆ ಎಸೆದಿದ್ದು ತನಿಖೆ ವೇಳೆ ಬಹಿರಂಗ
ವೀಣಾ ಕಪೂರ್
Follow us
| Updated By: ಮದನ್​ ಕುಮಾರ್​

Updated on:Dec 11, 2022 | 12:57 PM

ಮುಂಬೈನಲ್ಲಿ ಈ ಭೀಕರ ಘಟನೆ ನಡೆದಿದೆ. ಆಸ್ತಿಗಾಗಿ ಹಿರಿಯ ನಟಿ ವೀಣಾ ಕಪೂರ್ (Actress Veena Kapoor) ಅವರನ್ನು ಸ್ವಂತ ಮಗನೇ ಕೊಲೆ ಮಾಡಿರುವ ವಿಷಯ ಬೆಳಕಿಗೆ ಬಂದಿದೆ. ಹಿಂದಿ ಸೀರಿಯಲ್​ ಹಾಗೂ ಸಿನಿಮಾಗಳಲ್ಲಿ ನಟಿಸಿ ವೀಣಾ ಕಪೂರ್​ ಜನಪ್ರಿಯತೆ ಪಡೆದಿದ್ದರು. ಅವರಿಗೆ 74 ವರ್ಷ ವಯಸ್ಸಾಗಿತ್ತು. ಅವರು ಸ್ವಂತ ಮಗನಿಂದಲೇ ಹತ್ಯೆಗೀಡಾದ (Veena Kapoor Death) ಸುದ್ದಿ ಕೇಳಿ ಹಿಂದಿ ಕಿರುತೆರೆ ಮಂದಿ ಬೆಚ್ಚಿ ಬಿದ್ದಿದ್ದಾರೆ. ಘಟನೆ ಕುರಿತಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಗ ಸಚಿನ್​ ಕಪೂರ್​ (Sachin Kapoor) ಹಾಗೂ ವೀಣಾ ಕಪೂರ್​ ನಡುವೆ ವಾಗ್ವಾದ ಏರ್ಪಟ್ಟಿತ್ತು. ಈ ವೇಳೆ ಪರಿಸ್ಥಿತಿ ಕೈ ಮೀರಿ ತಾಯಿಯ ಹತ್ಯೆ ಮಾಡಿರುವುದಾಗಿ ಸಚಿನ್​ ಕಪೂರ್​ ಒಪ್ಪಿಕೊಂಡಿದ್ದಾನೆ ಎಂದು ವರದಿ ಆಗಿದೆ.

12 ಕೋಟಿ ರೂಪಾಯಿ ಆಸ್ತಿಗಾಗಿ ಜಗಳ:

ವೀಣಾ ಕಪೂರ್​ ಅವರು ನಾಪತ್ತೆ ಆಗಿದ್ದಾರೆ ಎಂದು ಕಲ್ಪತರು ಸೊಸೈಟಿಯ ಭದ್ರತಾ ಸಿಬ್ಬಂದಿಗಳು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ವಿಚಾರಣೆ ನಡೆಸಿದಾಗ ಹತ್ಯೆ ವಿಚಾರವನ್ನು ಸಚಿನ್​ ಕಪೂರ್​ ಬಾಯಿ ಬಿಟ್ಟಿದ್ದಾನೆ. 12 ಕೋಟಿ ರೂಪಾಯಿ ಮೌಲ್ಯದ ಫ್ಲಾಟ್​ ಕುರಿತಾಗಿ ಅಮ್ಮನ ಜೊತೆ ಜಗಳ ಆರಂಭ ಆಯಿತು ಎಂದು ಆತ ಹೇಳಿದ್ದಾನೆ.

ಇದನ್ನೂ ಓದಿ
Image
ಕೊಲೆ ಆರೋಪದಲ್ಲಿ ಜೈಲು ಸೇರಿದ್ದ ಮಗ ಅಮಾಯಕನೆಂದು ನಿರೂಪಿಸಲು ತಾಯಿ ತಾನೇ ತನಿಖೆ ನಡೆಸಿ ‘ಕೊಲೆಯಾದವಳನ್ನು’ ಪತ್ತೆಮಾಡಿದಳು!
Image
ನವಲಗುಂದ: ಬೈಕ್​ನಿಂದ ಇಳಿಯುವಾಗ ಕಾಲು ತಗುಲಿದ್ದಕ್ಕೆ ಬರ್ಬರ ಕೊಲೆ; ಆರೋಪಿಗಳು ಅಂದರ್​
Image
Shocking News: ಹಿಂದಿ ಸೀರಿಯಲ್​ ನೋಡಿ ಆತ್ಮಹತ್ಯೆಯ ನಾಟಕವಾಡಿದ ಯುವತಿ; ಆಮೇಲೆ ಬಯಲಾಯ್ತು ಕೊಲೆ ರಹಸ್ಯ!
Image
ಶ್ರದ್ಧಾ ಕೊಲೆ ಕೃತ್ಯ ಬಗ್ಗೆ ಕೇಳಿ ಆಘಾತಕ್ಕೊಳಗಾದೆ ಎಂದು ಪೊಲೀಸರಿಗೆ ಹೇಳಿದ ಅಫ್ತಾಬ್​​ನ ಗರ್ಲ್​​​ಫ್ರೆಂಡ್

ನದಿಗೆ ಶವ ಎಸೆದ ಹಂತಕ:

ವೀಣಾ ಕಪೂರ್​ ಮತ್ತು ಸಚಿನ್​ ಕಪೂರ್​ ನಡುವೆ ಮಾತಿನ ಚಕಮಕಿ ನಡೆದಿತ್ತು. ಸಿಟ್ಟಿನಲ್ಲಿ ಬೇಸ್​ಬಾಲ್​ ಬ್ಯಾಟ್​ನಿಂದ ತಲೆಗೆ ಹೊಡೆದ ಪರಿಣಾಮ ವೀಣಾ ಅವರು ಕೊನೆಯುಸಿರು ಎಳೆದರು. ಬಳಿಕ ಅವರ ಶವನನ್ನು ರಾಯಘಡ ಜಿಲ್ಲೆಯ ನದಿಯೊಂದರಲ್ಲಿ ಎಸೆದು ಬಂದಿದ್ದನ್ನು ಸಚಿನ ಕಪೂರ್​ ಒಪ್ಪಿಕೊಂಡಿದ್ದಾನೆ ಎಂದು ವರದಿ ಆಗಿದೆ.

ಇದನ್ನೂ ಓದಿ: Shocking News: ಹಿಂದಿ ಸೀರಿಯಲ್​ ನೋಡಿ ಆತ್ಮಹತ್ಯೆಯ ನಾಟಕವಾಡಿದ ಯುವತಿ; ಆಮೇಲೆ ಬಯಲಾಯ್ತು ಕೊಲೆ ರಹಸ್ಯ!

ವೀಣಾ ಕಪೂರ್​ ಅವರ ಇನ್ನೋರ್ವ ಪುತ್ರ ಅಮೆರಿಕದಲ್ಲಿ ವಾಸವಾಗಿದ್ದಾರೆ. ಸದ್ಯ ಸಚಿನ್​ ವಿರುದ್ಧ ಐಪಿಸಿ ಸೆಕ್ಷನ್​ 302, 201, 31ರ ಅಡಿಯಲ್ಲಿ ಕೇಸ್​ ದಾಖಲಿಸಲಾಗಿದ್ದು, ವಿಚಾರಣೆ ಪ್ರಗತಿಯಲ್ಲಿದೆ. ಟಿವಿ ನಟಿ ನೀಲೂ ಕೊಹ್ಲಿ ಅವರು ವೀಣಾ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಹಿರಿಯ ನಟಿಯ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ: ಕುಡಿಯಲು ಹಣ ಕೊಡಲಿಲ್ಲವೆಂದು ಪತ್ನಿಯನ್ನು ಅಮಾನುಷವಾಗಿ ಹತ್ಯೆಗೈದ ಪತಿ: ತಂದೆ ಕೃತ್ಯಕ್ಕೆ ಕೈಜೋಡಿಸಿದ ಪಾಪಿ ಮಗ

‘ನಾನು ಮತ್ತು ವೀಣಾ ಅವರು 5 ವರ್ಷ ಜೊತೆಯಾಗಿ ಕೆಲಸ ಮಾಡಿದ್ದೆವು. ಆದರೆ ಕೊರೊನಾ ಬಳಿಕ ನಮ್ಮ ಸಂಪರ್ಕ ತಪ್ಪಿತು. ನಾನು ನನ್ನ ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆದೆ. ಅವರು ನಿಧನರಾಗಿದ್ದಾರೆ ಎಂಬುದನ್ನು ನಂಬಲು ಸಾಧ್ಯವಾಗುತ್ತಿಲ್ಲ’ ಎಂದು ನೀಲೂ ಕೊಹ್ಲಿ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:57 pm, Sun, 11 December 22

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ