AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತ ಬಾಲಕಿಗೆ ಕಿರುಕುಳ; ಪೋಕ್ಸೋ ಕಾಯ್ದೆಯಡಿ ಕಿರುತೆರೆ ನಟ ಅರೆಸ್ಟ್

ಹಿಂದಿ ಕಿರುತೆರೆಯ ಜನಪ್ರಿಯ ನಟ ರೋಹಿತ್ ಚಂದೇಲ್ ಅಪ್ರಾಪ್ತ ಬಾಲಕಿಗೆ ಕಿರುಕುಳ ಹಾಗೂ ಹಲ್ಲೆ ನಡೆಸಿದ ಆರೋಪದಡಿ ಮುಂಬೈ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ. 16 ವರ್ಷದ ಬಾಲಕಿಯನ್ನು ಹಿಂಬಾಲಿಸಿ, ಬೇರೆ ಬೇರೆ ನಂಬರ್‌ಗಳಿಂದ ಕರೆ ಮಾಡಿ ಮಾನಸಿಕ ಕಿರುಕುಳ ನೀಡಿದ ಗಂಭೀರ ಆರೋಪ ನಟನ ಮೇಲಿದೆ. ಸದ್ಯ ನ್ಯಾಯಾಲಯವು ಆರೋಪಿ ರೋಹಿತ್‌ನನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದು, ತನಿಖೆ ಚುರುಕುಗೊಂಡಿದೆ.

ಅಪ್ರಾಪ್ತ ಬಾಲಕಿಗೆ ಕಿರುಕುಳ; ಪೋಕ್ಸೋ ಕಾಯ್ದೆಯಡಿ ಕಿರುತೆರೆ ನಟ ಅರೆಸ್ಟ್
ರೋಹಿತ್
ರಾಜೇಶ್ ದುಗ್ಗುಮನೆ
|

Updated on: Jul 13, 2026 | 9:33 AM

Share

ಮುಖ್ಯಾಂಶಗಳು

  • 16ರ ಅಪ್ರಾಪ್ತೆಗೆ ನಟನಿಂದ ನಿರಂತರ ಫೋನ್ ಕಾಲ್ಸ್
  • ಮುಂಬೈ ಪೊಲೀಸರಿಂದ ನಟ ರೋಹಿತ್ ಚಂದೇಲ್ ಅರೆಸ್ಟ್
  • ಬಾಲಕಿಯ ಬೆನ್ನಟ್ಟಿದ 'ಪಾಂಡ್ಯ ಸ್ಟೋರ್' ಖ್ಯಾತಿಯ ನಟ

ಹಿಂದಿ ಕಿರುತೆರೆಯ ಪ್ರಸಿದ್ಧ ನಟ ರೋಹಿತ್ ಚಂದೇಲ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. 16 ವರ್ಷದ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪ ಇವರ ಮೇಲಿದೆ. ಬಾಲಕಿಯನ್ನು ಹಿಂಬಾಲಿಸುವುದು ಮತ್ತು ಹಲ್ಲೆ ನಡೆಸಿದ ಆರೋಪದಡಿ ಈ ಕ್ರಮ ಕೈಗೊಳ್ಳಲಾಗಿದೆ. ನಟನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಪೊಲೀಸ್ ಕಸ್ಟಡಿಗೆ ನಟ

ರೋಹಿತ್ ಚಂದೇಲ್ ಅವರಿಗೆ ಈಗ 29 ವರ್ಷ ವಯಸ್ಸು. ಇವರು ‘ಪಾಂಡ್ಯ ಸ್ಟೋರ್’ ಮತ್ತು ‘ಕಾಶಿಬಾಯಿ ಬಾಜೀರಾವ್ ಬಲ್ಲಾಳ್’ ಧಾರಾವಾಹಿಗಳ ಮೂಲಕ ಪ್ರಸಿದ್ಧರಾಗಿದ್ದಾರೆ. ಪಂತ್ ನಗರ ಪೊಲೀಸರು ಇವರನ್ನು ದಹಿಸರ್‌ನಲ್ಲಿರುವ ಮನೆಯಿಂದ ಬಂಧಿಸಿದ್ದಾರೆ. ನಂತರ ಅವರನ್ನು ವಿಶೇಷ ಪೋಕ್ಸೋ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಸದ್ಯ ನ್ಯಾಯಾಲಯವು ನಟನನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ದೂರಿನಲ್ಲಿ ಏನಿದೆ?

ನಟ ರೋಹಿತ್ ತಮ್ಮ ವೈಯಕ್ತಿಕ ನಂಬರ್‌ನಿಂದ ಬಾಲಕಿಗೆ ಪದೇ ಪದೇ ಫೋನ್ ಮಾಡುತ್ತಿದ್ದರು. ಬೇರೆ ಬೇರೆ ನಂಬರ್‌ಗಳಿಂದಲೂ ಕರೆ ಮಾಡಿ ಕಿರುಕುಳ ನೀಡುತ್ತಿದ್ದರು. ಇದರಿಂದ ಬಾಲಕಿ ತೀವ್ರ ಮಾನಸಿಕ ಅಸಮಾಧಾನಕ್ಕೆ ಒಳಗಾಗಿದ್ದಳು. ಜುಲೈ 5 ರಂದು ಮುಂಬೈನ ಉಪನಗರದಲ್ಲಿ ಬಾಲಕಿಯಿದ್ದ ಜಾಗಕ್ಕೆ ನಟ ಬಂದಿದ್ದನು. ಆಕೆಯನ್ನು ಹಿಂಬಾಲಿಸಿ ಗಲಾಟೆ ಮಾಡಿದ್ದನು. ಅಲ್ಲದೆ ಬಾಲಕಿಗೆ ಬೈದು ಕೈಯಿಂದ ಹಲ್ಲೆ ನಡೆಸಿದ್ದನು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಅಂದು ಮುದ್ದು ಕಂದಮ್ಮ, ಇಂದು ಕಿರುತೆರೆ ಸುಂದರಿ: ಧೂಳೆಬ್ಬಿಸಿದ ಭವ್ಯಾ ಗೌಡ ಬಾಲ್ಯದ ಫೋಟೋ

ಭಾರತೀಯ ನ್ಯಾಯ ಸಂಹಿತೆಯಡಿ ಕೇಸ್

ಪೊಲೀಸ್ ಅಧಿಕಾರಿಗಳು ಅರೆಸ್ಟ್ ಖಚಿತಪಡಿಸಿದ್ದಾರೆ. ನಟ ಮತ್ತು ಬಾಲಕಿಗೆ ಮೊದಲೇ ಪರಿಚಯ ಇತ್ತು ಎಂದು ಪೊಲೀಸರು ಹೇಳಿದ್ದಾರೆ. ಸದ್ಯ ಪೊಲೀಸರು ಈ ಇಡೀ ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ