AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತ ಬಾಲಕಿಗೆ ಕಿರುಕುಳ; ಪೋಕ್ಸೋ ಕಾಯ್ದೆಯಡಿ ಕಿರುತೆರೆ ನಟ ಅರೆಸ್ಟ್

ಹಿಂದಿ ಕಿರುತೆರೆಯ ಜನಪ್ರಿಯ ನಟ ರೋಹಿತ್ ಚಂದೇಲ್ ಅಪ್ರಾಪ್ತ ಬಾಲಕಿಗೆ ಕಿರುಕುಳ ಹಾಗೂ ಹಲ್ಲೆ ನಡೆಸಿದ ಆರೋಪದಡಿ ಮುಂಬೈ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ. 16 ವರ್ಷದ ಬಾಲಕಿಯನ್ನು ಹಿಂಬಾಲಿಸಿ, ಬೇರೆ ಬೇರೆ ನಂಬರ್‌ಗಳಿಂದ ಕರೆ ಮಾಡಿ ಮಾನಸಿಕ ಕಿರುಕುಳ ನೀಡಿದ ಗಂಭೀರ ಆರೋಪ ನಟನ ಮೇಲಿದೆ. ಸದ್ಯ ನ್ಯಾಯಾಲಯವು ಆರೋಪಿ ರೋಹಿತ್‌ನನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದು, ತನಿಖೆ ಚುರುಕುಗೊಂಡಿದೆ.

ಅಪ್ರಾಪ್ತ ಬಾಲಕಿಗೆ ಕಿರುಕುಳ; ಪೋಕ್ಸೋ ಕಾಯ್ದೆಯಡಿ ಕಿರುತೆರೆ ನಟ ಅರೆಸ್ಟ್
ರೋಹಿತ್
ರಾಜೇಶ್ ದುಗ್ಗುಮನೆ
|

Updated on: Jul 13, 2026 | 9:33 AM

Share

ಮುಖ್ಯಾಂಶಗಳು

  • 16ರ ಅಪ್ರಾಪ್ತೆಗೆ ನಟನಿಂದ ನಿರಂತರ ಫೋನ್ ಕಾಲ್ಸ್
  • ಮುಂಬೈ ಪೊಲೀಸರಿಂದ ನಟ ರೋಹಿತ್ ಚಂದೇಲ್ ಅರೆಸ್ಟ್
  • ಬಾಲಕಿಯ ಬೆನ್ನಟ್ಟಿದ 'ಪಾಂಡ್ಯ ಸ್ಟೋರ್' ಖ್ಯಾತಿಯ ನಟ

ಹಿಂದಿ ಕಿರುತೆರೆಯ ಪ್ರಸಿದ್ಧ ನಟ ರೋಹಿತ್ ಚಂದೇಲ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. 16 ವರ್ಷದ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪ ಇವರ ಮೇಲಿದೆ. ಬಾಲಕಿಯನ್ನು ಹಿಂಬಾಲಿಸುವುದು ಮತ್ತು ಹಲ್ಲೆ ನಡೆಸಿದ ಆರೋಪದಡಿ ಈ ಕ್ರಮ ಕೈಗೊಳ್ಳಲಾಗಿದೆ. ನಟನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಪೊಲೀಸ್ ಕಸ್ಟಡಿಗೆ ನಟ

ರೋಹಿತ್ ಚಂದೇಲ್ ಅವರಿಗೆ ಈಗ 29 ವರ್ಷ ವಯಸ್ಸು. ಇವರು ‘ಪಾಂಡ್ಯ ಸ್ಟೋರ್’ ಮತ್ತು ‘ಕಾಶಿಬಾಯಿ ಬಾಜೀರಾವ್ ಬಲ್ಲಾಳ್’ ಧಾರಾವಾಹಿಗಳ ಮೂಲಕ ಪ್ರಸಿದ್ಧರಾಗಿದ್ದಾರೆ. ಪಂತ್ ನಗರ ಪೊಲೀಸರು ಇವರನ್ನು ದಹಿಸರ್‌ನಲ್ಲಿರುವ ಮನೆಯಿಂದ ಬಂಧಿಸಿದ್ದಾರೆ. ನಂತರ ಅವರನ್ನು ವಿಶೇಷ ಪೋಕ್ಸೋ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಸದ್ಯ ನ್ಯಾಯಾಲಯವು ನಟನನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ದೂರಿನಲ್ಲಿ ಏನಿದೆ?

ನಟ ರೋಹಿತ್ ತಮ್ಮ ವೈಯಕ್ತಿಕ ನಂಬರ್‌ನಿಂದ ಬಾಲಕಿಗೆ ಪದೇ ಪದೇ ಫೋನ್ ಮಾಡುತ್ತಿದ್ದರು. ಬೇರೆ ಬೇರೆ ನಂಬರ್‌ಗಳಿಂದಲೂ ಕರೆ ಮಾಡಿ ಕಿರುಕುಳ ನೀಡುತ್ತಿದ್ದರು. ಇದರಿಂದ ಬಾಲಕಿ ತೀವ್ರ ಮಾನಸಿಕ ಅಸಮಾಧಾನಕ್ಕೆ ಒಳಗಾಗಿದ್ದಳು. ಜುಲೈ 5 ರಂದು ಮುಂಬೈನ ಉಪನಗರದಲ್ಲಿ ಬಾಲಕಿಯಿದ್ದ ಜಾಗಕ್ಕೆ ನಟ ಬಂದಿದ್ದನು. ಆಕೆಯನ್ನು ಹಿಂಬಾಲಿಸಿ ಗಲಾಟೆ ಮಾಡಿದ್ದನು. ಅಲ್ಲದೆ ಬಾಲಕಿಗೆ ಬೈದು ಕೈಯಿಂದ ಹಲ್ಲೆ ನಡೆಸಿದ್ದನು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಅಂದು ಮುದ್ದು ಕಂದಮ್ಮ, ಇಂದು ಕಿರುತೆರೆ ಸುಂದರಿ: ಧೂಳೆಬ್ಬಿಸಿದ ಭವ್ಯಾ ಗೌಡ ಬಾಲ್ಯದ ಫೋಟೋ

ಭಾರತೀಯ ನ್ಯಾಯ ಸಂಹಿತೆಯಡಿ ಕೇಸ್

ಪೊಲೀಸ್ ಅಧಿಕಾರಿಗಳು ಅರೆಸ್ಟ್ ಖಚಿತಪಡಿಸಿದ್ದಾರೆ. ನಟ ಮತ್ತು ಬಾಲಕಿಗೆ ಮೊದಲೇ ಪರಿಚಯ ಇತ್ತು ಎಂದು ಪೊಲೀಸರು ಹೇಳಿದ್ದಾರೆ. ಸದ್ಯ ಪೊಲೀಸರು ಈ ಇಡೀ ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ