ಕವಿತಾ-ಚಂದನ್​ಗೆ ಮುದ್ದಾದ ಮಗು ಜನನ

ಕವಿತಾ ಗೌಡ ಮತ್ತು ಚಂದನ್ ಗೌಡ ಪೋಷಕರಾಗಿದ್ದಾರೆ. ಮುದ್ದಾದ ಮಗುವನ್ನು ಕುಟುಂಬಕ್ಕೆ ಸ್ವಾಗತಿಸಿದ್ದಾರೆ. ಕಿರುತರೆಯ ಈ ಜೋಡಿ 2021 ರಲ್ಲಿ ವಿವಾಹವಾಗಿದ್ದರು.

ಕವಿತಾ-ಚಂದನ್​ಗೆ ಮುದ್ದಾದ ಮಗು ಜನನ
Follow us
|

Updated on:Sep 18, 2024 | 10:37 PM

ಕಿರುತೆರೆ ಸೆಲೆಬ್ರಿಟಿ ದಂಪತಿ ಕವಿತಾ ಹಾಗೂ ಚಂದನ್ ಅವರು ಪೋಷಕರಾಗಿದ್ದಾರೆ. ವಿಷ್ಣುವರ್ಧನ್, ಉಪೇಂದ್ರ, ನಟಿ ಶ್ರುತಿ ಅಂಥಹಾ ಸ್ಯಾಂಡಲ್​ವುಡ್ ಸೆಲೆಬ್ರೆಟಿಗಳು ಜನಿಸಿರುವ ಸೆಪ್ಟೆಂಬರ್ 18ರಂದೇ ಅವರ ಮೊದಲ ಮಗು ಜನನವಾಗಿದೆ. ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ನಟ ಚಂದನ್. ವಿಡಿಯೋನಲ್ಲಿ ಮಗುವಿನ ಕಾಲನ್ನು ಚಂದನ್ ಹಿಡಿದುಕೊಂಡಿದ್ದಾರೆ. ‘ನನ್ನ ಮುದ್ದು ಕಂದಮ್ಮ ಧರೆಗಿಳಿದಿದ್ದಾನೆ’ ಎಂದು ವಿಡಿಯೋಕ್ಕೆ ಕ್ಯಾಪ್ಷನ್ ನೀಡಿದ್ದಾರೆ. ಅಂದಹಾಗೆ ಈ ತಾರಾ ಜೋಡಿಗೆ ಗಂಡು ಮಗು ಜನನಾಗಿವೆ.

‘ಲಕ್ಷ್ಮಿ ಬಾರಮ್ಮ’ ಧಾರಾವಾಹಿಯಿಂದ ಈ ಜೋಡಿ ಜನಪ್ರಿಯವಾಗಿತ್ತು. ಕೆಲ ವರ್ಷಗಳ ಹಿಂದೆ ಕವಿತಾ ಹಾಗೂ ಚಂದನ್ ವಿವಾಹವಾಗಿದ್ದರು. ಕೆಲ ತಿಂಗಳ ಹಿಂದಷ್ಟೆ ತಾವು ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ವಿಷಯ ಹಂಚಿಕೊಂಡಿದ್ದರು. ಕೆಲ ದಿನಗಳ ಹಿಂದೆ ಕವಿತಾ ಗೌಡ ಅವರಿಗೆ ಅದ್ಧೂರಿಯಾಗಿ ಸೀಮಂತ ಶಾಸ್ತ್ರ ಸಹ ಮಾಡಲಾಗಿತ್ತು. ಇದೀಗ ಮೊದಲ ಬಾರಿಗೆ ಈ ಜೋಡಿ ಪೋಷಕರಾಗಿದ್ದಾರೆ. ಚಂದನ್ ಹಂಚಿಕೊಂಡಿರುವ ಮಗುವಿನ ವಿಡಿಯೋಕ್ಕೆ ಹಲವಾರು ಮಂದಿ ಲೈಕ್ ಒತ್ತಿದ್ದು, ಜೋಡಿಗೆ ಶುಭಾಶಯ ಹೇಳಿದ್ದಾರೆ.

ಇದನ್ನೂ ಓದಿ:ಹೇಗಿತ್ತು ನೋಡಿ ನಟಿ ಕವಿತಾ ಗೌಡ ಸೀಮಂತ ಶಾಸ್ತ್ರ; ಇಲ್ಲಿವೆ ಸುಂದರ ಫೋಟೋಗಳು

ಇತ್ತೀಚೆಗೆ ನಡೆದಿದ್ದ ಕವಿತಾರ ಸೀಮಂತ ಶಾಸ್ತ್ರದಲ್ಲಿ ನಟಿ ಶ್ರುತಿ ಸೇರಿದಂತೆ ಹಲವಾರು ಸಿನಿಮಾ ಮತ್ತು ಕಿರುತೆರೆ ತಾರೆಯರು ಭಾಗಿಯಾಗಿದ್ದರು. ನಟಿ ನಮ್ರತಾ ಗೌಡ, ನಟಿ ತನಿಷಾ ಕುಪ್ಪಂಡ ಇನ್ನೂ ಹಲವಾರು ಮಂದಿ ಭಾಗಿಯಾಗಿದ್ದರು. ಈಗಲೂ ಸಹ ಮಗುವಾದ ಬಳಿಕ ಹಲವಾರು ಕಿರುತೆರೆ ತಾರೆಯರು ಈ ಜೋಡಿಗೆ ಶುಭಾಶಯ ಕೋರುತ್ತಿದ್ದಾರೆ. ಅಭಿಮಾನಿಗಳು ಸಹ ಶುಭಾಶಯಗಳನ್ನು ಕೋರುತ್ತಿದ್ದಾರೆ.

ಈ ಜೋಡಿ ಕೋವಿಡ್ ಸಮಯದಲ್ಲಿ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. 2021 ರ ಮೇ ತಿಂಗಳಲ್ಲಿ ಮದುವೆಯಾದರು. ಇದೇ ವರ್ಷದ ಮೇ ತಿಂಗಳಲ್ಲಿ ಮಗುವಿನ ಆಗಮನದ ನಿರೀಕ್ಷೆಯಲ್ಲಿರುವ ವಿಷಯ ಹಂಚಿಕೊಂಡಿದ್ದರು. ಇಂದು ಮಗುವಿನ ಆಗಮನ ಆಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:39 pm, Wed, 18 September 24

ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ