AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​​ಬಾಸ್ ವಿರುದ್ಧ ಪ್ರತಿಭಟನೆ, ಶೋ ನಿಲ್ಲಿಸುವಂತೆ ಒತ್ತಾಯ

Bigg Boss Tamil: ಹಲವು ಭಾಷೆಗಳಲ್ಲಿ ಬಿಗ್​​ಬಾಸ್ ಶೋ ಅತ್ಯುತ್ತಮ ಟಿಆರ್​​ಪಿ ಅನ್ನೇ ಗಳಿಸುತ್ತಿದೆ. ಸಲ್ಮಾನ್ ಖಾನ್, ಸುದೀಪ್, ಮೋಹನ್​​ಲಾಲ್, ವಿಜಯ್ ಸೇತುಪತಿ, ನಾಗಾರ್ಜುನ ಇನ್ನೂ ಕೆಲವು ಖ್ಯಾತ ನಾಮ ನಟರುಗಳು ಶೋನ ನಿರೂಪಣೆ ಮಾಡುತ್ತಿದ್ದಾರೆ. ಯಶಸ್ಸಿನ ಜೊತೆಗೆ ಕೆಲ ವಿವಾದಗಳು ಸಹ ಬಿಗ್​​ಬಾಸ್ ಶೋ ಅನ್ನು ಸುತ್ತಿಕೊಂಡಿವೆ. ಆಗಾಗ್ಗೆ ಶೋನ ಬಗ್ಗೆ ಅಪಸ್ವರಗಳು ಕೇಳಿ ಬರುತ್ತಲೇ ಇರುತ್ತವೆ. ಇದೀಗ ರಾಜಕೀಯ ಪಕ್ಷವೊಂದು ಬಿಗ್​​ಬಾಸ್ ಶೋ ವಿರುದ್ಧ ಪ್ರತಿಭಟನೆ ನಡೆಸಿದೆ.

ಬಿಗ್​​ಬಾಸ್ ವಿರುದ್ಧ ಪ್ರತಿಭಟನೆ, ಶೋ ನಿಲ್ಲಿಸುವಂತೆ ಒತ್ತಾಯ
Bigg Boss Tamil
ಮಂಜುನಾಥ ಸಿ.
|

Updated on: Nov 11, 2025 | 6:02 PM

Share

ಬಿಗ್​​ಬಾಸ್ (Bigg Boss) ರಿಯಾಲಿಟಿ ಶೋ, ಭಾರತದ ಬಲು ಜನಪ್ರಿಯ ರಿಯಾಲಿಟಿ ಶೋ. ಭಾರತದ ಹಲವು ಭಾಷೆಗಳಲ್ಲಿ ಬಿಗ್​​ಬಾಸ್ ಶೋ ಪ್ರಸಾರ ಆಗುತ್ತಿದೆ. ಹಲವು ಭಾಷೆಗಳಲ್ಲಿ ಬಿಗ್​​ಬಾಸ್ ಶೋ ಅತ್ಯುತ್ತಮ ಟಿಆರ್​​ಪಿ ಅನ್ನೇ ಗಳಿಸುತ್ತಿದೆ. ಸಲ್ಮಾನ್ ಖಾನ್, ಸುದೀಪ್, ಮೋಹನ್​​ಲಾಲ್, ವಿಜಯ್ ಸೇತುಪತಿ, ನಾಗಾರ್ಜುನ ಇನ್ನೂ ಕೆಲವು ಖ್ಯಾತ ನಾಮ ನಟರುಗಳು ಶೋನ ನಿರೂಪಣೆ ಮಾಡುತ್ತಿದ್ದಾರೆ. ಯಶಸ್ಸಿನ ಜೊತೆಗೆ ಕೆಲ ವಿವಾದಗಳು ಸಹ ಬಿಗ್​​ಬಾಸ್ ಶೋ ಅನ್ನು ಸುತ್ತಿಕೊಂಡಿವೆ. ಆಗಾಗ್ಗೆ ಶೋನ ಬಗ್ಗೆ ಅಪಸ್ವರಗಳು ಕೇಳಿ ಬರುತ್ತಲೇ ಇರುತ್ತವೆ. ಇದೀಗ ರಾಜಕೀಯ ಪಕ್ಷವೊಂದು ಬಿಗ್​​ಬಾಸ್ ಶೋ ವಿರುದ್ಧ ಪ್ರತಿಭಟನೆ ನಡೆಸಿದೆ.

ಕನ್ನಡದಲ್ಲಿ ಪ್ರಸ್ತುತ ಬಿಗ್​​ಬಾಸ್ ಶೋ ನಡೆಯುತ್ತಿದೆ. ಇದರ ಜೊತೆಗೆ ನೆರೆಯ ತಮಿಳುನಾಡಿನಲ್ಲೂ ತಮಿಳು ಬಿಗ್​​ಬಾಸ್ ಶೋ ನಡೆಯುತ್ತಿದೆ. ಇದೀಗ ತಮಿಳು ಬಿಗ್​ಬಾಸ್ ಶೋ ಬಂದ್ ಮಾಡುವಂತೆ ಒತ್ತಾಯಿಸಿ ರಾಜಕೀಯ ಪಕ್ಷವಾದ ಟಿವಿಕೆ (ತಮಿಳಗ ವಳ್ಮುರಿಮೈ ಕಚ್ಚಿ) ಪ್ರತಿಭಟನೆ ನಡೆಸಿದೆ. ತಮಿಳುನಾಡಿನ ಆಡಳಿತ ಪಕ್ಷವಾದ ಡಿಎಂಕೆಯ ಮಿತ್ರ ಪಕ್ಷವಾಗಿದೆ ಈ ಟಿವಿಕೆ.

ಬಿಗ್​​ಬಾಸ್ ಶೋ, ತಮಿಳುನಾಡಿನ ಸಂಸ್ಕೃತಿ, ಸಂಪ್ರದಾಯಗಳನ್ನು ಹಾಳುಗೆಡವುತ್ತಿದೆ. ಈ ಶೋನಲ್ಲಿ ಕೌಟುಂಬಿಕ ಅಲ್ಲದ ದೃಶ್ಯಗಳನ್ನು, ಸಂಭಾಷಣೆಗಳನ್ನು ತೋರಿಸಲಾಗುತ್ತಿದೆ’ ಎಂದು ಆರೋಪಿಸಿ ಟಿವಿಕೆ ಸದಸ್ಯರು, ಮುಖಂಡರುಗಳು ಚೆನ್ನೈನಲ್ಲಿ, ತಮಿಳು ಬಿಗ್​ಬಾಸ್ ಶೋ ಸೆಟ್​ ಇರುವ ವೆಲ್ಸ್ ಫಿಲಂ ಸಿಟಿ ಬಳಿ ಪ್ರತಿಭಟನೆ ನಡೆಸಿದ್ದು, ನೂರಾರು ಸಂಖ್ಯೆಯಲ್ಲಿ ಪೊಲೀಸರು, ಸೆಟ್​​ನ ಬಳಿ ಹಾಜರಿದ್ದು, ರಕ್ಷಣೆ ಒದಗಿಸಿದ್ದಾರೆ.

ಇದನ್ನೂ ಓದಿ:ಬಿಗ್​​ಬಾಸ್ ಗೆದ್ದ ಟಿವಿ ನಟಿ ಅನುಮೋಲ್, ಸಿಕ್ಕ ಬಹುಮಾನವೆಷ್ಟು?

ಟಿವಿಕೆ ಪಕ್ಷದ ಮುಖಂಡ, ಶಾಸಕರೂ ಆಗಿರುವ ವೇಲುಮುರುಗನ್ ಮಾತನಾಡಿ, ‘ಬಿಗ್​​ಬಾಸ್​​ನಲ್ಲಿ ಅಶ್ಲೀಲ ಸಂಭಾಷಣೆಗಳು, ಕೆಟ್ಟ ಆಂಗಿಕ ಅಭಿನಯ, ಮುತ್ತು ನೀಡುವ ದೃಶ್ಯಗಳು, ಬೆಡ್​ರೂಂ ದೃಶ್ಯಗಳನ್ನು ಪ್ರಸಾರ ಮಾಡಲಾಗುತ್ತಿದೆ. ಶೋನ ಆಯೋಕರು, ತಮಿಳು ಸಂಸ್ಕೃತಿ, ಸಂಪ್ರದಾಯಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ. ಈ ಶೋ ಎಲ್ಲ ವರ್ಗದ ಪ್ರೇಕ್ಷಕರಿಗೆ ಮಾಡಿದ್ದಲ್ಲ, ಇದು ಕೇವಲ ‘ವಯಸ್ಕರು ಮಾತ್ರ’ ಕಂಟೆಂಟ್ ಅನ್ನು ಹೊಂದಿದೆ. ಕೇವಲ ಹಣಕ್ಕಾಗಿ ಮಾಡಲಾಗುತ್ತಿರುವ ಶೋ ಇದಾಗಿದೆ’ ಎಂದಿದ್ದಾರೆ.

‘ಶೋನಲ್ಲಿ ಲೈಂಗಿಕತೆ ದೃಶ್ಯವನ್ನು ತೋರಿಸುವುದನ್ನು ಹೊರತುಪಡಿಸಿ ಇನ್ನೆಲ್ಲವನ್ನೂ ತೋರಿಸಲಾಗುತ್ತಿದೆ. ಅಷ್ಟು ಕಳಪೆ ದರ್ಜೆಯ ಕಂಟೆಂಟ್ ಅನ್ನು ಪ್ರಸಾರ ಮಾಡಲಾಗುತ್ತಿದೆ. ವಿಜಯ್ ಟಿವಿ, ಇಷ್ಟು ಕಳಪೆ ದರ್ಜೆಯ, ಅಶ್ಲೀಲವಾದ ಶೋ ಅನ್ನು ಪ್ರಸಾರ ಮಾಡಿ ಹಣ ಗಳಿಸಿಕೊಳ್ಳುವ ಅವಶ್ಯಕತೆ ಏನಿದೆ?’ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

‘ನಾನು ಈ ಬಗ್ಗೆ ಈಗಾಗಲೇ ವಿಧಾನಸಭೆ ಅಧ್ಯಕ್ಷ ಅಪ್ಪನ್ ಅವರಿಗೆ ಪತ್ರ ಬರೆದಿದ್ದು, ಶೋ ಮೇಲೆ ನಿಷೇಧ ಹೇರಬೇಕು ಎಂದು ಮನವಿ ಮಾಡಿದ್ದೇನೆ. ಒಂದೊಮ್ಮೆ ಸ್ಪೀಕರ್ ಅವರು ಈ ವಿಷಯದ ಚರ್ಚೆಗೆ ಅವಕಾಶ ಕೊಡಲಿಲ್ಲವೆಂದರೆ, ಅಥವಾ ಸಿಎಂ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರು ಈ ಶೋ ಅನ್ನು ನಿಷೇಧಿಸಲಿಲ್ಲವೆಂದರೆ ನಾವುಗಳು ಇನ್ನೂ ದೊಡ್ಡ ಪ್ರತಿಭಟನೆಯನ್ನು ಶೋ ವಿರುದ್ಧ ಮಾಡಲಿದ್ದೇವೆ’ ಎಂದು ವೇಲುಮುರುಗನ್ ಎಚ್ಚರಿಕೆ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?