AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹಳ್ಳಿ ಪವರ್​​’ನಲ್ಲಿ ಮೊದಲ ವಾರವೇ ಇಬ್ಬರು ಎಲಿಮಿನೇಟ್; ಸ್ಟ್ರಾಂಗ್ ಸ್ಪರ್ಧಿಯೂ ಔಟ್

Halli Power Elimination: ಹಳ್ಳಿ ಪವರ್ ರಿಯಾಲಿಟಿ ಶೋನಲ್ಲಿ ಎರಡು ಎಲಿಮಿನೇಷನ್ ನಡೆದಿದೆ. ಈ ಶೋನಲ್ಲಿ ಭಿನ್ನವಾಗಿ ಎಲಿಮಿನೇಷನ್ ಪ್ರಕ್ರಿಯೆ ನಡೆಸಲಾಗುತ್ತಿದೆ. ಸಾಮಾನ್ಯವಾಗಿ ರಿಯಾಲಿಟಿ ಶೋಗಳಲ್ಲಿ ಜನರಿಗೆ ವೋಟ್ ಮಾಡುವ ಅವಕಾಶ ಇರುತ್ತದೆ. ಆದರೆ, ‘ಹಳ್ಳಿ ಪವರ್’ನಲ್ಲಿ ಆ ರೀತಿಯ ಆಯ್ಕೆ ಇಲ್ಲ.

‘ಹಳ್ಳಿ ಪವರ್​​’ನಲ್ಲಿ ಮೊದಲ ವಾರವೇ ಇಬ್ಬರು ಎಲಿಮಿನೇಟ್; ಸ್ಟ್ರಾಂಗ್ ಸ್ಪರ್ಧಿಯೂ ಔಟ್
ಹಳ್ಳಿ ಪವರ್
ರಾಜೇಶ್ ದುಗ್ಗುಮನೆ
|

Updated on: Sep 08, 2025 | 7:27 AM

Share

‘ಹಳ್ಳಿ ಪವರ್’ (Halli Power) ರಿಯಾಲಿಟಿ ಶೋ ಜೀ ಪವರ್​ನಲ್ಲಿ ಪ್ರಸಾರ ಕಾಣುತ್ತಿದೆ. ಈ ಶೋಗೆ ಒಟ್ಟು 12 ಸ್ಪರ್ಧಿಗಳು ಆಗಮಿಸಿದ್ದರು. ಅಚ್ಚರಿ ಎಂಬಂತೆ ಮೊದಲ ವಾರವೇ ಇಬ್ಬರು ಎಲಿಮಿನೇಟ್ ಆಗಿದ್ದಾರೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಇಬ್ಬರ ಪೈಕಿ ಒಬ್ಬರು ಸ್ಟ್ರಾಂಗ್ ಎನಿಸಿಕೊಂಡಿದ್ದರು. ಆದಾಗ್ಯೂ ಅವರು ಹೊರ ಹೋಗಿರೋದು ಬೇಸರದ ವಿಚಾರ. ಈ ಶೋನಲ್ಲಿ ಭಿನ್ನವಾಗಿ ಎಲಿಮಿನೇಷನ್ ಪ್ರಕ್ರಿಯೆ ನಡೆಸಲಾಗುತ್ತಿದೆ.

ಸಾಮಾನ್ಯವಾಗಿ ರಿಯಾಲಿಟಿ ಶೋಗಳಲ್ಲಿ ಜನರಿಗೆ ವೋಟ್ ಮಾಡುವ ಅವಕಾಶ ಇರುತ್ತದೆ. ಆದರೆ, ‘ಹಳ್ಳಿ ಪವರ್’ನಲ್ಲಿ ಆ ರೀತಿಯ ಆಯ್ಕೆ ಇಲ್ಲ. ಆಟ ಆಡಿ ಉತ್ತಮ ಅಂಕ ಗಳಿಸಬೇಕು, ಜೊತೆಗೆ ಸ್ಪರ್ಧಿಗಳೇ ವೋಟ್ ಮಾಡಬೇಕು. ಇವೆರಡನ್ನು ಆಧರಿಸಿ ಎಲಿಮಿನೇಷನ್ ನಡೆಸಲಾಗುತ್ತದೆ. ಈ ವೇಳೆ ಯುಕ್ತಾ ಎಲಿಮಿನೇಟ್ ಆಗಿದ್ದಾರೆ.

ಈ ವಾರ ಡೇಂಜರ್ ಜೋನ್​ನಲ್ಲಿ ಯುಕ್ತಾ, ಚಿನ್ಮಯಿ ಹಾಗೂ ಆ್ಯಶ್ ಮೆಲೋಸ್ ಸ್ಕೈಲರ್ ಇದ್ದರು. ಈ ಪೈಕಿ ಆ್ಯಶ್ ಮೊದಲು ಸೇವ್ ಆದರು. ಆ ಬಳಿಕ ಬಹುತೇಕ ಸ್ಪರ್ಧಿಗಳು ಯುಕ್ತಾ ಅವರ ಹೆಸರನ್ನು ತೆಗೆದುಕೊಂಡು ಹೊರ ಹೋಗಬೇಕು ಎಂದರು. ‘ಅವರು ಡಲ್​ ಆಗಿದ್ದಾರೆ. ತಮ್ಮ ಸಾಮರ್ಥ್ಯವನ್ನು ಸರಿಯಾಗಿ ತೋರಿಸುತ್ತಿಲ್ಲ’ ಎಂದು ಅನೇಕ ಸ್ಪರ್ಧಿಗಳು ಹೇಳಿದರು. ಇದರ ಆಧಾರದ ಮೇಲೆ ಯುಕ್ತಾ ಎಲಿಮಿನೇಟ್ ಆದರು.

ಇದನ್ನೂ ಓದಿ
Image
‘ಸು ಫ್ರಮ್ ಸೋ’ ಒಟಿಟಿ ದಿನಾಂಕ ರಿವೀಲ್; 45ನೇ ದಿನವೂ ಅಬ್ಬರದ ಕಲೆಕ್ಷನ್
Image
ಸೂರ್ಯವಂಶಿ ನಟ ನಿಧನ; ವಾಯು ಪಡೆಯಲ್ಲಿ ಸೇವೆ ಸಲ್ಲಿಸಿ ಚಿತ್ರರಂಗಕ್ಕೆ ಎಂಟ್ರಿ
Image
SIIMA 2025 Telugu: ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣಗೆ ಅವಾರ್ಡ್
Image
ಸೈಮಾ 2025: ಸುದೀಪ್ ಅತ್ಯುತ್ತಮ ನಟ, ಸಂಪೂರ್ಣ ವಿನ್ನರ್ ಪಟ್ಟಿ

ಇದನ್ನೂ ಓದಿ: ‘ವಿಜಯಣ್ಣನ ಹೆಸರು ಉಳಿಸಿದೆ’; ‘ಹಳ್ಳಿ ಪವರ್​​’ನಲ್ಲಿ ಮಿಂಚುತ್ತಿರುವ ‘ಭೀಮ’ ಕಲಾವಿದೆ ಆ್ಯಶ್

ಇನ್ನು, ಕುಸ್ತಿ ಸ್ಪರ್ಧೆ ವೇಳೆ ಪ್ರ್ಯಾಕ್ಟಿಸ್ ಮಾಡುವಾಗ ಕಾವ್ಯಾ ಅವರ ಕಾಲಿಗೆ ಪೆಟ್ಟಾಗಿತ್ತು. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೊಗಲಾಯಿತು. ಅವರು ಒಂದು ದಿನ ಬಿಟ್ಟು ಮರಳಿ ಬಂದರು. ಈ ವೇಳೆ ಅವರ ಕಾಲಿಗೆ ದೊಡ್ಡದಾದ ಪ್ಲಾಸ್ಟರ್ ಇತ್ತು. ವೈದ್ಯರು ಈಗಾಗಲೇ ಅವರಿಗೆ ಐದು ವಾರ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಹೀಗಾಗಿ, ಅವರು ಕೂಡ ಔಟ್ ಆಗಿದ್ದಾರೆ. ಕಾವ್ಯಾ ಸ್ಟ್ರಾಂಗ್ ಸ್ಪರ್ಧಿ ಎನಿಸಿಕೊಂಡಿದ್ದರು. ಮುಂದಿನ ದಿನಗಳಲ್ಲಿ ಅವರನ್ನು ಮತ್ತೆ ಕರೆಸಿಕೊಳ್ಳೋದಾಗಿ ನಿರೂಪಕ ಅಕುಲ್ ಬಾಲಾಜಿ ಭರವಸೆ ನೀಡಿದರು. ಆದರೆ, ಅದು ಎಷ್ಟರ ಮಟ್ಟಿಗೆ ನಿಜ ಆಗುತ್ತದೆ ಅನ್ನೋದು ಗೊತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು